AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಡುಪಿ: ಮುಸಲ್ಮಾನ ವರ್ತಕರು, ಕ್ರೈಸ್ತ ಧರ್ಮಗುರುಗಳಿಂದ ಪೇಜಾವರಶ್ರೀ ಭೇಟಿ; ಶಾಂತಿ, ಸಹಬಾಳ್ವೆ ಸಂಬಂಧ ಮಾತುಕತೆ

ಒಂದು ಸಮಿತಿ ರಚನೆ ಮಾಡುವಂತೆ ಸೂಚನೆಯನ್ನು ಸ್ವಾಮೀಜಿ ಕೊಟ್ಟಿದ್ದಾರೆ. ಪರಿಹಾರ ರೂಪಿಸುವ ಭರವಸೆಯನ್ನು ಸ್ವಾಮೀಜಿ ಕೊಟ್ಟಿದ್ದಾರೆ ಎಂದು ಮಾತುಕತೆ ಬಳಿಕ ಉಡುಪಿ ಬಳಕೆದಾರರ ವೇದಿಕೆಯ ಗೌರವಾಧ್ಯಕ್ಷ ಅಬೂಬಕ್ಕರ್ ಆತ್ರಾಡಿ ಹೇಳಿದ್ದಾರೆ.

ಉಡುಪಿ: ಮುಸಲ್ಮಾನ ವರ್ತಕರು, ಕ್ರೈಸ್ತ ಧರ್ಮಗುರುಗಳಿಂದ ಪೇಜಾವರಶ್ರೀ ಭೇಟಿ; ಶಾಂತಿ, ಸಹಬಾಳ್ವೆ ಸಂಬಂಧ ಮಾತುಕತೆ
ಮುಸಲ್ಮಾನ ವರ್ತಕರು, ಕ್ರೈಸ್ತ ಧರ್ಮಗುರುಗಳಿಂದ ಪೇಜಾವರಶ್ರೀ ಭೇಟಿ
TV9 Web
| Edited By: |

Updated on:Mar 30, 2022 | 2:26 PM

Share

ಉಡುಪಿ: ನಗರದಲ್ಲಿ ಮುಸಲ್ಮಾನ ವ್ಯಾಪಾರಿಗಳಿಗೆ ವ್ಯಾಪಾರ ಬಹಿಷ್ಕಾರ ವಿಚಾರಕ್ಕೆ ಸಂಬಂಧಿಸಿ ಮುಸಲ್ಮಾನ ವರ್ತಕರು ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥ ಸ್ವಾಮೀಜಿಯನ್ನು ಭೇಟಿ ಮಾಡಿದ್ದಾರೆ. ಜಾತ್ರೆ ವ್ಯಾಪಾರ ಮಾಡಲು ಅವಕಾಶ ನೀಡುವಂತೆ ಮನವಿ ಮಾಡಿಕೊಂಡಿದ್ದಾರೆ. ಪೇಜಾವರ ಮಠದ ಶ್ರೀ ರಾಮ ವಿಠಲ ಸಭಾಭವನದಲ್ಲಿ ಭೇಟಿಯಾಗಿ, ಬೀದಿಬದಿ ಜಾತ್ರೆ ವ್ಯಾಪಾರಿಗಳಿಗೆ ಸಮಸ್ಯೆಯಾಗಿದೆ. ದೇವಸ್ಥಾನಗಳಲ್ಲಿ ವ್ಯಾಪಾರಕ್ಕೆ ಅವಕಾಶ ಮಾಡಿಕೊಡಿ ಎಂದು ವಿಶ್ವಪ್ರಸನ್ನ ತೀರ್ಥ ಶ್ರೀಪಾದರಿಗೆ ಮುಸಲ್ಮಾನ ವ್ಯಾಪಾರಿಗಳು ಮನವಿ ಮಾಡಿದ್ದಾರೆ. ಉಡುಪಿ ಜಿಲ್ಲಾ ಸೌಹಾರ್ದ ಸಮಿತಿಯಿಂದ ಪೇಜಾವಶ್ರೀ ಭೇಟಿ ಮಾಡಲಾಗಿದೆ. ಅಬೂಬಕ್ಕರ್ ಆತ್ರಾಡಿ ನೇತೃತ್ವದ ಮುಸಲ್ಮಾನ ವ್ಯಾಪಾರಿಗಳ ಮಾತುಕತೆ ನಡೆಸಿದೆ.

ಉಡುಪಿಯಲ್ಲಿ ಮುಸಲ್ಮಾನ ವರ್ತಕರಿಗೆ ವ್ಯಾಪಾರ ಬಹಿಷ್ಕಾರ ವಿಚಾರವಾಗಿ ಕ್ರೈಸ್ತ ಧರ್ಮಗುರು ಫಾ. ಚಾಲ್ಸ್ ಪೇಜಾವರ ಶ್ರೀಗಳನ್ನು ಭೇಟಿ ಮಾಡಿದ್ದಾರೆ. ನಾವೆಲ್ಲರೂ ಮನುಷ್ಯತ್ವದ ತತ್ವದಲ್ಲಿ ಬಾಳುವವರು. ಹೊಂದಾಣಿಕೆಯಿಂದ ನಡೆದುಕೊಂಡು ಹೋದರೆ ಮಾತ್ರ ಸಮಾಜದಲ್ಲಿ ಶಾಂತಿ ನೆಲೆಸಲು ಸಾಧ್ಯ. ಸಮಾಜದಲ್ಲಿ ಕೆಲವರು ಅಲ್ಲಲ್ಲಿ ತಪ್ಪುಗಳನ್ನು ಮಾಡುತ್ತಾರೆ. ಒಬ್ಬರಿಬ್ಬರು ಮಾಡಿದ ತಪ್ಪಿನಿಂದ ಹಲವರಿಗೆ ಸಮಸ್ಯೆಗಳು ಆಗುತ್ತದೆ. ತಪ್ಪು- ಒಪ್ಪುಗಳನ್ನು ಸರಿ ಮಾಡಿ ಮುಂದೆ ಹೋದರೆ ಶಾಂತಿ ಸಹಬಾಳ್ವೆ ಸಾಧ್ಯ. ಧರ್ಮ ಎಲ್ಲರಿಗೂ ಬೇಕು ಧರ್ಮಕ್ಕಾಗಿ ಮನುಷ್ಯತ್ವವನ್ನು ಬೇರ್ಪಡಿಸುವುದು ಸರಿಯಲ್ಲ. ಮನುಷ್ಯತ್ವ ಮತ್ತು ದೈವತ್ವ ಜೊತೆ ಜೊತೆಯಾಗಿ ಹೋದರೆ ಮಾತ್ರ ಜೀವಿಸಲು ಸಾಧ್ಯ. ಮನುಷ್ಯತ್ವವನ್ನು ಎತ್ತಿಟ್ಟುಕೊಂಡು ದೈವತ್ವವನ್ನು ಬಳಸಿಕೊಂಡು ಜೊತೆ ನಡೆದರೆ ಸಹಬಾಳ್ವೆ ಎಂದು ಉಡುಪಿಯ ಶೋಕಮಾತಾ ಇಗರ್ಜಿಯ ಧರ್ಮಗುರು ಫಾ. ಚಾರ್ಲ್ಸ್ ಹೇಳಿಕೆ ನೀಡಿದ್ದಾರೆ.

ಸಮಾಜದಲ್ಲಿ ಶಾಂತಿ ಸಹಬಾಳ್ವೆ ನೆಲಸಲು ಯಾರ ಮಧ್ಯಸ್ಥಿಕೆಯು ಬೇಡ: ಶ್ರೀ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ

ಮುಸಲ್ಮಾನರು ಮತ್ತು ಕ್ರೈಸ್ತ ಮುಖಂಡರು ವ್ಯಾಪಾರದ ಬಗ್ಗೆ ಮನವಿ ಸಲ್ಲಿಸಿದ್ದಾರೆ. ಶಾಂತಿ- ಸಾಮರಸ್ಯ, ಸೌಹಾರ್ದ, ನೆಮ್ಮದಿ ಅವಶ್ಯವಾಗಿ ಬೇಕು. ಒಂದು ಗುಂಪಿನಿಂದ ಸಾಮರಸ್ಯ ಸಾಧ್ಯವಿಲ್ಲ. ಹಿಂದೂ ಸಮಾಜ ಬಹಳ ಕಾಲದಿಂದ ನೋವನ್ನು ಉಂಡಿದೆ. ಹಲವು ಅಹಿತಕರ ಘಟನೆಗಳಿಂದ ಹಿಂದೂ ಸಮಾಜ ಬಹಳ ನೋವಿನಲ್ಲಿದೆ. ನಾಲ್ಕು ಮಂದಿ ಧಾರ್ಮಿಕ ಮುಖಂಡರು ಕುಳಿತು ಮಾತನಾಡುವುದರಿಂದ ಸಮಸ್ಯೆ ಬಗೆಹರಿಸಲು ಸಾಧ್ಯವಿಲ್ಲ. ತಳಮಟ್ಟದಲ್ಲಿ ಇದಕ್ಕೆ ಪರಿಹಾರ ಆಗಬೇಕಾಗಿದೆ. ನಿರಂತರವಾಗಿ ಅನ್ಯಾಯವಾದಾಗ ಬೇಸರ ನೋವು ಸ್ಫೋಟವಾಗುತ್ತದೆ. ಹಿಂದೂ ಸಮಾಜ ನೋವು ಉಂಡು ಉಂಡು ಬೇಸರವಾಗಿ ಇಂದು ಸ್ಫೋಟಗೊಂಡಿದೆ ಎಂದು ಮಾತುಕತೆಯ ಬಳಿಕ ಶ್ರೀ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಹೇಳಿದ್ದಾರೆ.

ಈ ಬೆಳವಣಿಗೆಗೆ ಕಾರಣ ಏನು ಎಂಬುದು ಒಂದೇ ವೇದಿಕೆಯಲ್ಲಿ ಕುಳಿತು ಚರ್ಚೆ ಮಾಡಬೇಕು. ಹಿಂದೂ ಸಮಾಜಕ್ಕೆ ನೋವಾಗುವ ಯಾವುದೇ ಘಟನೆಗಳು ನಡೆಯದಿದ್ದರೆ ಸಾಮರಸ್ಯ ಬೆಳೆಯಬಹುದು. ವಿಧವೆ ಮಹಿಳೆಯ ಕೊಟ್ಟಿಗೆಯಲ್ಲಿದ್ದ ಎಲ್ಲಾ ಹಸುಗಳನ್ನು ಕಳ್ಳತನ ಮಾಡಲಾಗಿದೆ. ಆ ಮಹಿಳೆ ಬೀದಿಗೆ ಬೀಳುವ ವಾತಾವರಣ ನಿರ್ಮಾಣವಾಗಿದೆ. ಇಂತಹ ಅನೇಕ ಘಟನೆಗಳು ಸಮಾಜದಲ್ಲಿ ನಡೆದು ನೋವು ಮಡುಗಟ್ಟಿದೆ. ನಾವು ಕೂಡ ಇಂತಹ ಹಲವಾರು ನೋವನ್ನು ಅನುಭವಿಸಿದ್ದೇವೆ. ನಾವು ಶಾಂತಿ ಸಹಬಾಳ್ವೆಯಿಂದ ಇರೋಣ ಎಂದು ಬಾಯಲ್ಲಿ ಹೇಳಿದರೆ ಅದು ಸಾಧ್ಯವಿಲ್ಲ. ಸಮಾಜದಲ್ಲಿ ಶಾಂತಿ ಸಹಬಾಳ್ವೆ ನೆಲಸಲು ಯಾರ ಮಧ್ಯಸ್ಥಿಕೆಯು ಬೇಡ ಎಂದು ಉಡುಪಿಯಲ್ಲಿ ಪೇಜಾವರ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ತಿಳಿಸಿದ್ದಾರೆ.

ಪರಿಹಾರ ರೂಪಿಸುವ ಭರವಸೆಯನ್ನು ಸ್ವಾಮೀಜಿ ಕೊಟ್ಟಿದ್ದಾರೆ: ಅಬೂಬಕ್ಕರ್ ಆತ್ರಾಡಿ

ಸಮಾಜದಲ್ಲಿ ಶಾಂತಿ ಸಹಬಾಳ್ವೆ ನೆಲೆಸಲು ಸ್ವಾಮೀಜಿಗಳನ್ನು ಭೇಟಿ ಮಾಡಿದ್ದೇವೆ. ಮುಸಲ್ಮಾನ ಸಮುದಾಯ ಕೂಡಾ ಶಾಂತಿಯನ್ನು ಬಯಸುತ್ತದೆ. ಒಬ್ಬರು- ಇಬ್ಬರು ಮಾಡುವ ತಪ್ಪಿಗೆ ಇಡೀ ಸಮಾಜವನ್ನು ದ್ವೇಷಿಸುವುದು ಸೂಕ್ತವಲ್ಲ. ನಾವೆಲ್ಲರೂ ಒಂದೇ ತಾಯಿಯ ಮಕ್ಕಳ ಹಾಗೆ ಸಹಬಾಳ್ವೆಯಿಂದ ಬಾಳಬೇಕು. ಹಿಂದೆ ಆದ ಘಟನೆಗಳನ್ನು ಮರೆತು ಸಹಬಾಳ್ವೆಯಿಂದ ಬಾಳೋಣ. ನಾವೆಲ್ಲರೂ ಸಹಬಾಳ್ವೆಯಿಂದ ಬದುಕೋಣ ಎಂದು ಕಳಕಳಿಯಿಂದ ವಿನಂತಿ ಮಾಡುತ್ತೇನೆ. ಒಂದು ಸಮಿತಿ ರಚನೆ ಮಾಡುವಂತೆ ಸೂಚನೆಯನ್ನು ಸ್ವಾಮೀಜಿ ಕೊಟ್ಟಿದ್ದಾರೆ. ಪರಿಹಾರ ರೂಪಿಸುವ ಭರವಸೆಯನ್ನು ಸ್ವಾಮೀಜಿ ಕೊಟ್ಟಿದ್ದಾರೆ ಎಂದು ಮಾತುಕತೆ ಬಳಿಕ ಉಡುಪಿ ಬಳಕೆದಾರರ ವೇದಿಕೆಯ ಗೌರವಾಧ್ಯಕ್ಷ ಅಬೂಬಕ್ಕರ್ ಆತ್ರಾಡಿ ಹೇಳಿದ್ದಾರೆ.

ಮುಸಲ್ಮಾನ ಸಮುದಾಯದ ಒಳಗೆ ನಾವು ಯಾವುದೇ ಮೀಟಿಂಗ್ ಮಾಡಿಲ್ಲ. ಚರ್ಚೆ ಹಲವು ದಾರಿಗಳಲ್ಲಿ ಸಾಗಿ ಇಂದು ಈ ಪರಿಸ್ಥಿತಿ ನಿರ್ಮಾಣವಾಗಿದೆ. ಮನಸ್ಸಿಗೆ ಬಂದ ಹಾಗೆ ಹೇಳಿಕೆಗಳನ್ನು ಕೊಟ್ಟು ಸಮಾಜದಲ್ಲಿ ಶಾಂತಿ ಕದಡುತ್ತದೆ. ಮಾತಿನಲ್ಲಿ ಪ್ರೀತಿ ತೋರಿದರೆ ಸಮಾಜದ ಶಾಂತಿ ಕದಡುವುದಿಲ್ಲ. ಒಂದು ಕೈಯಿಂದ ಸಾಮರಸ್ಯದ ಚಪ್ಪಾಳೆ ಹೊಡೆಯಲು ಸಾಧ್ಯವಿಲ್ಲ ಎಂದು ಅಬೂಬಕ್ಕರ್ ಆತ್ರಾಡಿ ತಿಳಿಸಿದ್ದಾರೆ.

ಇದನ್ನೂ ಓದಿ: ಕರ್ನಾಟಕದಲ್ಲಿ ಕಾನೂನು, ಸುವ್ಯವಸ್ಥೆಗೆ ಧಕ್ಕೆ ಆಗಿಲ್ಲ; ನಾವು ಶಾಂತಿ, ಭದ್ರತೆ, ಅಭಿವೃದ್ಧಿ ಸಿದ್ಧಾಂತ ನಂಬುತ್ತೇವೆ: ಸಿಎಂ ಬೊಮ್ಮಾಯಿ

ಇದನ್ನೂ ಓದಿ: ವಿಧಾನಸಭೆ: ಶಾಂತಿಯ ತೋಟವನ್ನು ಹಾಳು ಮಾಡಬೇಡಿ, ಕನ್ನಡಿಗರೇ ದಾರಿ ತಪ್ಪಬೇಡಿ: ಹೆಚ್​ಡಿ ಕುಮಾರಸ್ವಾಮಿ ಮನವಿ

Published On - 2:20 pm, Wed, 30 March 22

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?