AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹನಿಮೂನ್​ಗೆ ಬೀಚ್‌ ಸ್ವಚ್ಛ ಮಾಡಿದ್ದ ಬೈಂದೂರಿನ ದಂಪತಿಗೆ ಗಣರಾಜ್ಯೋತ್ಸವಕ್ಕೆ ಆಹ್ವಾನ

ನವೆಂಬರ್ 2020ರಲ್ಲಿ ಮದುವೆಯಾದ ಬೈಂದೂರಿನ ಅನುದೀಪ್‌ ಮತ್ತು ಮಿನುಷಾ ಅವರು ಹನಿಮೂನ್‌ಗೆ ದೂರದ ಊರುಗಳಿಗೆ ತೆರಳುವ ಬದಲು ಸ್ಥಳೀಯ ಸೋಮೇಶ್ವರ ಬೀಚ್‌ ಸ್ವಚ್ಛಗೊಳಿಸಿ ಸುದ್ದಿಯಾಗಿದ್ದರು. ಈ ದಂಪತಿ ಕಾರ್ಯಕ್ಕೆ ಪ್ರಧಾನಿ ಮೋದಿಯವರು ಮೆಚ್ಚುಗೆ ಸೂಚಿಸಿದ್ದಾರೆ. ಇದೀಗ ಈ ದಂಪತಿಗೆ ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವಕ್ಕೆ ಆಹ್ವಾನ ಸಿಕ್ಕಿದೆ.

ಹನಿಮೂನ್​ಗೆ ಬೀಚ್‌ ಸ್ವಚ್ಛ ಮಾಡಿದ್ದ ಬೈಂದೂರಿನ ದಂಪತಿಗೆ ಗಣರಾಜ್ಯೋತ್ಸವಕ್ಕೆ ಆಹ್ವಾನ
ಅನುದೀಪ್‌ ಮತ್ತು ಮಿನುಷಾ
ಆಯೇಷಾ ಬಾನು
|

Updated on: Jan 25, 2024 | 12:06 PM

Share

ಕುಂದಾಪುರ, ಜ.25: ಮದುವೆಯಾದ ಬಳಿಕ ಹನಿಮೂನ್‌ಗೆ ಹೋಗಬೇಕಿದ್ದ ನವದಂಪತಿ (Couple) ತಮ್ಮೂರಿನ ಬೀಚ್‌ ಸ್ವಚ್ಛಗೊಳಿಸಿ ಮಾದರಿಯಾಗಿದ್ದರು. ಇವರ ಈ ಕಾರ್ಯಕ್ಕೆ ಮೆಚ್ಚಿದ ಪ್ರಧಾನಿ ನರೆಂಂದ್ರ ಮೋದಿಯವರು (Narendra Modi) ಮನ್‌ ಕಿ ಬಾತ್‌ನಲ್ಲಿ (Man ki Baat) ಉಲ್ಲೇಖಿ ಶ್ಲಾಘಿಸಿದ್ದರು. ಇದೀಗ ಈ ದಂಪತಿಗೆ ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವದಲ್ಲಿ (Republic Day Parade) ಭಾಗವಹಿಸುವ ಅಪರೂಪದ ಆಹ್ವಾನ ಸಿಕ್ಕಿದೆ.

ನವೆಂಬರ್ 2020ರಲ್ಲಿ ಮದುವೆಯಾದ ಬೈಂದೂರಿನ ಅನುದೀಪ್‌ ಮತ್ತು ಮಿನುಷಾ ಅವರು ಹನಿಮೂನ್‌ಗೆ ದೂರದ ಊರುಗಳಿಗೆ ತೆರಳುವ ಬದಲು ಸ್ಥಳೀಯ ಸೋಮೇಶ್ವರ ಬೀಚ್‌ ಸ್ವಚ್ಛಗೊಳಿಸಿ ಸುದ್ದಿಯಾಗಿದ್ದರು. ದಂಪತಿಯ ಈ ಕಾರ್ಯವು ಪ್ರಧಾನಿ ನರೇಂದ್ರ ಮೋದಿಯವರ ಗಮನ ಸೆಳೆದಿದೆ. ಹೀಗಾಗಿ ಅವರು ತಮ್ಮ ‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ದಂಪತಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಇದೀಗ ಅವರು ಗಣರಾಜ್ಯೋತ್ಸವದಲ್ಲಿ ಭಾಗವಹಿಸುವ ಸಲುವಾಗಿ ದೆಹಲಿಗೆ ತೆರಳಿದ್ದಾರೆ.

ಇದನ್ನೂ ಓದಿ:  ರಾಹುಲ್ ಗಾಂಧಿಯವರ ಭಾರತ್ ಜೋಡೋ ನ್ಯಾಯ ಯಾತ್ರೆಗೆ ಅಸ್ಸಾಂ ಸರ್ಕಾರ ಅಡ್ಡಿಯುಂಟು ಮಾಡುತ್ತಿದೆ: ಸಿದ್ದರಾಮಯ್ಯ

ಇನ್ನು ಈ ದಂಪತಿ ಜೊತೆಗೆ, ಗಣರಾಜ್ಯೋತ್ಸವದ ಪರೇಡ್‌ಗೆ ಮತ್ತೊಂದು ಗಮನಾರ್ಹ ಆಹ್ವಾನಿತರೆಂದರೆ ಮಣಿಕಂಠ ಅವರು. ಇವರು ಕುಂದಾಪುರದಲ್ಲಿ ಚಪ್ಪಲಿ ಮತ್ತು ಕೊಡೆ ರಿಪೇರಿ ಮಾಡುವ ಸಣ್ಣ ಗೂಡಂಗಡಿ ಇಟ್ಟುಕೊಂಡಿರುವ ಚಮ್ಮಾರ ವೃತ್ತಿಯ ವ್ಯಕ್ತಿ. ಮೂಲತಃ ಭದ್ರಾವತಿಯವರಾದ ಮಣಿಕಂಠ ಅವರು ಕಳೆದ ಹಲವಾರು ದಶಕಗಳಿಂದ ಕುಂದಾಪುರದ ಶಾಸ್ತ್ರಿ ಸರ್ಕಲ್‌ನಲ್ಲಿ ಪುಟ್ಟ ಅಂಗಡಿಯೊಂದನ್ನು ಇಟ್ಟುಕೊಂಡು ಜೀವನ ನಿರ್ವಹಣೆ ಮಾಡುತ್ತಿದ್ದಾರೆ. ಪ್ರಧಾನಮಂತ್ರಿ ಸ್ವನಿಧಿ ಸಾಲ ಪಡೆದು ಅಂಗಡಿಯನ್ನು ಅಭಿವೃದ್ಧಿಪಡಿಸಿ ಸಾಲದ ಕಂತುಗಳನ್ನು ಕ್ಲಪ್ತ ಸಮಯಕ್ಕೆ ಪಾವತಿಸಿ ಏಳಿಗೆಯನ್ನು ಕಂಡ ಅವರು ಪ್ರಧಾನಿ ಮೋದಿಯವರ ಗಮನ ಸೆಳೆದಿದ್ದರು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ