AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನವರಾತ್ರಿ: ಸಾಲು ಸಾಲು ರಜೆ: ಮಲ್ಪೆ ಬೀಚ್, ಸೈಂಟ್ ಮೇರಿಸ್ ಐಲ್ಯಾಂಡ್​​ನಲ್ಲಿ ಜನವೋ ಜನ

ನವರಾತ್ರಿಯ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಧಾರ್ಮಿಕ ಕ್ಷೇತ್ರ ಕರಾವಳಿಯ ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಾಗಿದ್ದು, ಮಲ್ಪೆ ಬೀಚ್​ಗೆ ಹೊರ ಜಿಲ್ಲೆ ಪ್ರವಾಸಿಗರು ಆಗಮಿಸುತ್ತಿದ್ದಾರೆ. ಸರಣಿ ರಜೆಯಿಂದಾಗಿ ಬೆಂಗಳೂರು, ಮೈಸೂರು ಕಡೆಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸಿದ್ದು ನೀರಿಗಿಳಿದು ಮೋಜು ಮಸ್ತಿಯಲ್ಲಿ ತೊಡಗಿದ್ದಾರೆ.

ಪ್ರಜ್ವಲ್ ಅಮೀನ್​, ಉಡುಪಿ
| Edited By: |

Updated on: Oct 22, 2023 | 6:12 PM

Share

ಉಡುಪಿ, ಅಕ್ಟೋಬರ್​​​​ 22: ಜಿಲ್ಲೆಯ ಪ್ರಮುಖ ಪ್ರವಾಸಿ ತಾಣ ಮಲ್ಪೆ ಬೀಚ್ ಇದೀಗ ಪ್ರವಾಸಿಗರಿಗೆ ತೆರೆದುಕೊಂಡಿದೆ. ಸದ್ಯ ನವರಾತ್ರಿ (Navratri) ಹಿನ್ನಲೆಯಲ್ಲಿ ಸಾಲು ಸಾಲು ರಜೆ ಇರುವ ಕಾರಣ ರಾಜ್ಯದ ನಾನಾ ಭಾಗದಿಂದ ಪ್ರವಾಸಿಗರು ಉಡುಪಿಗೆ ಆಗಮಿಸಿ ಮಲ್ಪೆ ಬೀಚ್​ನ ಮಜಾ ಅನುಭವಿಸುತ್ತಿದ್ದಾರೆ. ಮಳೆಗಾಲದ ನಂತರ ಮೊದಲ ಬಾರಿಗೆ ಸೈಯಿಂಟ್ ಮೇರಿಸ್ ಬೀಚ್ ಕೂಡ ಪ್ರವಾಸಿಗರ ಪ್ರವೇಶಕ್ಕೆ ತೆರವಾಗಿರುವುದು ಪ್ರವಾಸಿಗರ ಆಕರ್ಷಣೆಗೆ ಕಾರಣವಾಗಿದೆ.

ಹೌದು ಉಡುಪಿ ಜಿಲ್ಲೆಯ ಪ್ರಮುಖ ಪ್ರವಾಸಿ ತಾಣಗಳಲ್ಲಿ ಮಲ್ಪೆ ಬೀಚ್ ಕೂಡ ಒಂದು. ವರ್ಷವು ಇಲ್ಲಿ ಲಕ್ಷಾಂತರ ಜನ ಪ್ರವಾಸಿಗರು ಭೇಟಿ ನೀಡಿದ ಸಮುದ್ರದ ಮಜಾ ಅನುಭವಿಸುತ್ತಾರೆ. ಈ ಮೊದಲು ಮಳೆಗಾಲದಲ್ಲಿ ಸಮುದ್ರಕ್ಕೆ ಇಳಿಯದಂತೆ ಬಲೆಯ ತಡೆಬೇಲೆ ಹಾಕಲಾಗಿತ್ತು, ಸದ್ಯ ವಿಳಂಬವಾದರು ಕೂಡ ಜಿಲ್ಲಾಡಳಿತ ತಡೆ ಬೇಲಿ ತೆರವುಗೊಳಿಸಿ ಪ್ರವಾಸಿಗರಿಗೆ ಮುಕ್ತವಾಗಿಸಿದೆ.

ಇದನ್ನೂ ಓದಿ: ಇತರ ಶೋಷಿತ ಸಮುದಾಯಗಳ ಜನರಿಗೂ ನನ್ನಂಥ ಅವಕಾಶ ಸಿಗಬೇಕು: ಮಣಿಕಂಠ, ಗಣರಾಜ್ಯೋತ್ಸವ ಕಾರ್ಯಕ್ರಮಕ್ಕೆ ಪ್ರಧಾನಿ ಮೋದಿಯಿಂದ ಆಹ್ವಾನಿತ ಚಮ್ಮಾರ

ಸಾಮಾನ್ಯವಾಗಿ ಮಳೆಗಾಲದಲ್ಲಿ ಕಡಲ ಅಬ್ಬರದ ಹಿನ್ನೆಲೆಯಲ್ಲಿ ಪ್ರವಾಸಿಗರು ನೀರಿಗೆ ಇಳಿಯದಂತೆ ಪ್ರತಿವರ್ಷ ಮೇ 15ರಿಂದ ಸೆ. 15ರವರೆಗೆ ಬೀಚ್‌ನ ಉದ್ದಕ್ಕೂ ಫಿಶ್ ನೆಟ್ ತಡೆಬೇಲಿಯನ್ನು ಕಟ್ಟಿ ಮುನ್ನೆಚ್ಚರಿಕೆ ವಹಿಸಲಾಗುತ್ತದೆ. ಈಗ ಬೀಚ್ ವಾಟರ್ ಸ್ಪೋರ್ಟ್ ಮತ್ತೆ ಆರಂಭಗೊಂಡಿದ್ದು, ಬೋಟಿಂಗ್, ಬನಾನಾ ರಾಪಿಂಗ್, ಬಂಪಿ ರೈಡ್, ಝರ್ಜಿಂಗ್, ಪವರ್ ಬೈಕ್‌, ಕ್ರಿಕೆಟ್ ಮೊದಲಾದವುಗಳು ಆರಂಭಗೊಂಡಿದ್ದು ಪ್ರವಾಸಿಗರನ್ನು ಸೆಳೆಯುತ್ತಿದೆ.

ಇದನ್ನೂ ಓದಿ: ಕಾರ್ಕಳದ ಪರಶುರಾಮ ಪ್ರತಿಮೆ ವಿವಾದ; ಕಾಂಗ್ರೆಸ್, ಬಿಜೆಪಿ ವಿರುದ್ಧ ಪ್ರಕರಣ ದಾಖಲು

ನವರಾತ್ರಿಯ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಧಾರ್ಮಿಕ ಕ್ಷೇತ್ರ ಕರಾವಳಿಯ ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಾಗಿದ್ದು, ಮಲ್ಪೆ ಬೀಚ್​ಗೆ ಹೊರ ಜಿಲ್ಲೆ ಪ್ರವಾಸಿಗರು ಆಗಮಿಸುತ್ತಿದ್ದಾರೆ. ವೀಕೆಂಡ್​ಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮನದಿಂದಾಗಿ ಬೀಚ್​ನಲ್ಲಿ ಜನಸಂದಣಿ ಹೆಚ್ಚಾಗಿದೆ. ಸರಣಿ ರಜೆಯಿಂದಾಗಿ ಬೆಂಗಳೂರು, ಮೈಸೂರು ಕಡೆಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸಿದ್ದು ನೀರಿಗಿಳಿದು ಮೋಜು ಮಸ್ತಿಯಲ್ಲಿ ತೊಡಗಿದ್ದಾರೆ. ಇದರ ಜೊತೆಗೆ ಪ್ರವಾಸಿಗರ ಸ್ವರ್ಗವೆಂದೇ ಖ್ಯಾತಿ ಪಡೆದ ಮಲ್ಪೆ ಸಮೀಪದ ನಡುಗುಡ್ಡೆ ಸೈಂಟ್ ಮೇರೀಸ್ ಐಲ್ಯಾಂಡ್ ಪ್ರವೇಶಕ್ಕೆ ಇದೀಗ ಅವಕಾಶ ನೀಡಲಾಗಿದೆ. ಇದು ಪ್ರವಾಸಿಗರ ಪ್ರಮುಖ ಆಕರ್ಷಣೆಯಾಗಿದ್ದು ರಾಜ್ಯದ ನಾನಾ ಭಾಗದಿಂದ ಪ್ರವಾಸಿಗರು ಮಲ್ಪೆ ಆಗಮಿಸಿ ರಜೆಯ ಮಜಾ ಅನುಭವಿಸುತ್ತಿದ್ದಾರೆ.

ಮಲ್ಪೆ ಬೀಚ್ ಮತ್ತು ಸೈಂಟ್ ಮೇರೀಸ್ ಐ ಲ್ಯಾಂಡ್ ಪ್ರವಾಸಿಗರಿಗೆ ತೆರವುವಾಗಿರುವುದು ಸಾಲು ಸಾಲು ರಜೆ ಬಂದಿರುವ ಹಿನ್ನಲೆಯಲ್ಲಿ ಉಡುಪಿಯಲ್ಲಿ ಜನ ಜಂಗುಳಿ ಕಂಡುಬಂದಿದೆ. ಹಬ್ಬದ ಜೊತೆಗೆ ರಜೆಯ ಇರುವ ಹಿನ್ನಲೆಯಲ್ಲಿ ಪ್ರವಾಸಿಗರು ರಜೆಯ ಮಜಾ ಅನುಭವಿಸುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Prajwal Amin
Prajwal Amin

ಪ್ರಜ್ವಲ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪಡೆದಿರುತ್ತಾರೆ. ಉಡುಪಿ ಜಿಲ್ಲೆಯ ಸ್ಥಳೀಯ ಖಾಸಗಿ ಸುದ್ದಿವಾಹಿನಿಯ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ ಇವರು ಬಳಿಕ ಪ್ರಜಾವಾಣಿಯ ವರದಿಗಾರನಾಗಿ ಕೆಲಸ ಮಾಡಿರುತ್ತಾರೆ. ನಂತರ 6 ವರ್ಷ ಟಿ.ವಿ 5ನ ದಕ್ಷಿಣ ಕನ್ನಡ ಜಿಲ್ಲಾ ವರದಿಗಾರನಾಗಿ ನಂತರ ದಿಗ್ವಿಜಯ ನ್ಯೂಸ್ ನ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ವರದಿಗಾರನಾಗಿ ಕಾರ್ಯನಿರ್ವಾಹಸಿದ್ದಾರೆ. ಕಳೆದ ಹನ್ನೊಂದು ತಿಂಗಳಿನಿಂದ ಟಿ.ವಿ 9 ಸಂಸ್ಥೆಯಲ್ಲಿ ಉಡುಪಿ ಜಿಲ್ಲಾ ವರದಿಗಾರನಾಗಿ ಕಾರ್ಯನಿರ್ವಾಹಿಸುತ್ತಿದ್ದಾರೆ.

Read More
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?