AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಡುಪಿ: ಮಂಕಿ ಕ್ಯಾಪ್ ಹಾಕಿಕೊಂಡು, ಕೋವಿ ಹಿಡಿದು ಬಂದಿದ್ದರು ಸರ್, ನಕ್ಸಲರ ಚಲನವಲನ ಕಂಡ ಗ್ರಾಮಸ್ಥ

ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಸಮೀಪದ ಉದಯನಗರದಲ್ಲಿ ನಕ್ಸಲರು ಓಡಾಡಿದ ಬಗ್ಗೆ ಗ್ರಾಮಸ್ಥನೋರ್ವ ಟಿವಿ9ಗೆ ಮಾಹಿತಿ ನೀಡಿದ್ದಾರೆ. ಗ್ರಾಮಸ್ಥನಿಂದ ಮಾಹಿತಿ ಪಡೆದ ನಕ್ಸಲ್ ನಿಗ್ರಹ ಪಡೆ ಕಾರ್ಯಾಚರಣೆಗೆ ಇಳಿದಿದೆ. ದಶಕಗಳಿಂದ ಶಾಂತವಾಗಿದ್ದ ನಕ್ಸಲ್​ ಚಟುವಟಿಕೆ ಮತ್ತೆ ಆರಂಭವಾಯಿತೆ ಎಂಬ ಪ್ರಶ್ನೆ ಉದ್ಭವಾಗಿದೆ.

ಉಡುಪಿ: ಮಂಕಿ ಕ್ಯಾಪ್ ಹಾಕಿಕೊಂಡು, ಕೋವಿ ಹಿಡಿದು ಬಂದಿದ್ದರು ಸರ್, ನಕ್ಸಲರ ಚಲನವಲನ ಕಂಡ ಗ್ರಾಮಸ್ಥ
ಪ್ರತ್ಯಕ್ಷದರ್ಶಿಗಳ ವಿಚಾರಣೆ
ಪ್ರಜ್ವಲ್ ಅಮೀನ್​, ಉಡುಪಿ
| Edited By: |

Updated on: Feb 10, 2024 | 1:25 PM

Share

ಉಡುಪಿ, ಫೆಬ್ರವರಿ 10: ನಕ್ಸಲ್ (Naxal)​ ಚಟುವಟಿಕೆ ರಾಜ್ಯದಲ್ಲಿ ಮತ್ತೆ ಶುರುವಾಗಿದೆ ಎಂಬ ಅನುಮಾನ ಶುರುವಾಗಿದೆ. ಉಡುಪಿ (Udupi) ಜಿಲ್ಲೆಯ ಬೈಂದೂರು (Baindur) ತಾಲೂಕಿನ ಕೊಲ್ಲೂರು ಭಾಗದಲ್ಲಿ ನಕ್ಸಲರು ಕಾಣಿಸಿಕೊಳ್ಳುತ್ತಿದ್ದು, ಗ್ರಾಮದಲ್ಲಿ ಆತಂಕ ಮನೆ ಮಾಡಿದೆ. ನಕ್ಸಲರು ಕೊಲ್ಲೂರು ಸಮೀಪದ ಉದಯನಗರದಲ್ಲಿ ಕಾಣಿಸಿಕೊಂಡಿದ್ದ ಬಗ್ಗೆ ಪ್ರತ್ಯಕ್ಷ ದರ್ಶಿಯ ಮಾಹಿತಿ ಆಧರಿಸಿ ನಕ್ಸಲ್ ನಿಗ್ರಹ ಪಡೆ (ANF) ತಂಡ ಕಾರ್ಯಚರಣೆ ನಡೆಸಿದೆ. ಉದಯನಗರದಲ್ಲಿ ನಕ್ಸಲರ ಓಡಾಟವನ್ನು ಕಂಡ ಸ್ಥಳೀಯ ಶಾಜು ಟಿವಿ9 ಡಿಜಿಟಲ್​ನೊಂದಿಗೆ ಮಾತನಾಡಿ, ಐವರು ನಕ್ಸಲರು ಎರಡು ದಿನಗಳ ಹಿಂದೆ ತಡರಾತ್ರಿ 2.30 ಗಂಟೆಗೆ ಮನೆ ಹತ್ತಿರದಲ್ಲಿ ಹಾದು ಹೋಗಿದರು. ಮಂಕಿ ಕ್ಯಾಪ್, ಬ್ಯಾಗ್ ಹಾಕಿಕೊಂಡಿದ್ದರು. ಇಬ್ಬರ ಬಳಿ ಕೋವಿ ಇರುವುದನ್ನು ಕಂಡಿದ್ದೇನೆ. ನಾಯಿ ಬೊಗಳಿದ್ದರಿಂದ ಮನೆ ಒಳಗಡೆಯಿಂದ ನೋಡಿದೆ. ಬೆಳಗ್ಗೆ ಎದ್ದವನೆ ಎಎನ್ಎಫ್ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದೇನೆ ಎಂದು ತಿಳಿಸಿದರು.

ನಕ್ಸಲ್ ಹುತಾತ್ಮ ದಿನ ಆಚರಣೆ

ಉಡುಪಿಯ ಹೆಬ್ರಿ ಮೂಲದ ವಿಕ್ರಮ್ ಗೌಡ ನೇತೃತ್ವದ ನಕ್ಸಲರ ತಂಡ ಬೈಂದೂರು ತಾಲೂಕಿನ ಕೊಲ್ಲೂರು, ಮುದೂರು, ಜಡ್ಕಲ್‌, ಬೆಳ್ಕಲ್‌ ಗ್ರಾಮ ಸುತ್ತಮುತ್ತ ಓಡಾಡಿರುವ ಶಂಕೆ ಮೂಡಿದೆ.ಈ ತಂಡ ಕೇರಳದಿಂದ ಉಡುಪಿ ಜಿಲ್ಲೆಯ ಬೈಂದೂರುಗೆ ಆಗಮಿಸಿರುವ ಅನುಮಾನ ವ್ಯಕ್ತವಾಗಿದೆ. ಹೀಗೆ ಬಂದ ನಕ್ಸಲರು ಪೊಲೀಸರ ಎನ್ಕೌಂಟರ್​​ನಲ್ಲಿ ಮೃತಪಟ್ಟ ನಕ್ಸಲ್​ ಸಾಕೇತ್​​​ನ ನೆನಪಿಗಾಗಿ ನಕ್ಸಲ್​ ಹುತಾತ್ಮ ದಿನಾಚರಣೆ ಆಚರಿಸಲು ಮುಂದಾಗಿದ್ದಾರೆ.

ಇದನ್ನೂ ಓದಿ: ಉಡುಪಿ ಜಿಲ್ಲೆಯಲ್ಲಿ ಮತ್ತೆ ಆಕ್ಟಿವ್​ ಆದ ನಕ್ಸಲ್​ ಚಟುವಟಿಕೆ ! ಗ್ರಾಮಸ್ಥರಿಗೆ ಪೊಲೀಸರ ಸೂಚನೆ

2005ರ ಫೆಬ್ರವರಿ 5 ರಂದು ಕಳಸ ತಾಲೂಕಿನ ಮೆಣಸಿನ ಹಾಡ್ಯದಲ್ಲಿ ರಾತ್ರಿ ಪೊಲೀಸರ ಎನ್ಕೌಂಟರ್​​ನಲ್ಲಿ ನಕ್ಸಲ್​ ಸಾಕೇತ್ ​​ಸಾವಿಗೀಡಾಗಿದ್ದನು. ಸಾಕೇತ್ ರಾಜನ್ ಸಾವಿಗೆ ರೆಡ್ ಸಲ್ಯೂಟ್ ದಿನ ಆಚರಿಸಲು ನಕ್ಸಲರು ತಯಾರಿ ನಡೆಸಿದ್ದಾರೆ ಎನ್ನಲಾಗಿದೆ. ಸಾಕೇತ್ ನೆನಪಿಗಾಗಿ ನಕ್ಸಲರು ಪ್ರತಿ ವರ್ಷ ನಕ್ಸಲ್ ಹುತಾತ್ಮ ದಿನಾಚರಣೆ ಆಚರಿಸುತ್ತಾರೆ.

1990 ರಿಂದ 2012ರ ವರೆಗು ಉತ್ತುಂಗದಲ್ಲಿದ್ದ ನಕ್ಸಲ್​ ಚಟುವಟಿಕೆ

1990 ರಿಂದ 2012ರ ವರೆಗು ರಾಜ್ಯದಲ್ಲಿ ನಕ್ಸಲ್ ಚಟುವಟಿಕೆ ಉತ್ತುಂಗದಲ್ಲಿತ್ತು. ಸುಮಾರು 40 ರಿಂದ 45 ಸಕ್ರಿಯ ಸಶಸ್ತ್ರ ನಕ್ಸಲರು ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಬೀದರ್, ರಾಯಚೂರು, ಬಳ್ಳಾರಿ ಮತ್ತು ತುಮಕೂರು ಜಿಲ್ಲೆಗಳಲ್ಲಿ ಪ್ರದೇಶಗಳಲ್ಲಿ ಆಶ್ರಯ ಪಡೆದಿದ್ದರು.

2005 ಮತ್ತು 2012 ರ ನಡುವೆ, ಎಎನ್​ಎಫ್​​ ಅಧಿಕಾರಿಗಳ 11 ಎನ್‌ಕೌಂಟರ್‌ಗಳಲ್ಲಿ 19 ನಕ್ಸಲರು ಮೃತಪಟ್ಟಿದ್ದರು. ಈ ಕಾರ್ಯಾಚರಣೆಯಲ್ಲಿ ಮೂವರು ಅಧಿಕಾರಿಗಳು ಹುತಾತ್ಮರಾಗಿದ್ದರು. 2005 ರಲ್ಲಿ ತುಮಕೂರಿನಲ್ಲಿ ನಕ್ಸಲರು ನಡೆಸಿದ ದಾಳಿಯಲ್ಲಿ ಕರ್ನಾಟಕ ರಾಜ್ಯ ಮೀಸಲು ಪೊಲೀಸ್​ ಪಡೆಯ ಎಂಟು ಜನ ಸಿಬ್ಬಂದಿಗಳು ಮೃತಪಟ್ಟಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
Prajwal Amin
Prajwal Amin

ಪ್ರಜ್ವಲ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪಡೆದಿರುತ್ತಾರೆ. ಉಡುಪಿ ಜಿಲ್ಲೆಯ ಸ್ಥಳೀಯ ಖಾಸಗಿ ಸುದ್ದಿವಾಹಿನಿಯ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ ಇವರು ಬಳಿಕ ಪ್ರಜಾವಾಣಿಯ ವರದಿಗಾರನಾಗಿ ಕೆಲಸ ಮಾಡಿರುತ್ತಾರೆ. ನಂತರ 6 ವರ್ಷ ಟಿ.ವಿ 5ನ ದಕ್ಷಿಣ ಕನ್ನಡ ಜಿಲ್ಲಾ ವರದಿಗಾರನಾಗಿ ನಂತರ ದಿಗ್ವಿಜಯ ನ್ಯೂಸ್ ನ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ವರದಿಗಾರನಾಗಿ ಕಾರ್ಯನಿರ್ವಾಹಸಿದ್ದಾರೆ. ಕಳೆದ ಹನ್ನೊಂದು ತಿಂಗಳಿನಿಂದ ಟಿ.ವಿ 9 ಸಂಸ್ಥೆಯಲ್ಲಿ ಉಡುಪಿ ಜಿಲ್ಲಾ ವರದಿಗಾರನಾಗಿ ಕಾರ್ಯನಿರ್ವಾಹಿಸುತ್ತಿದ್ದಾರೆ.

Read More
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!