ಮತ್ತೆ ಆಕ್ಟಿವ್​ ಆದ ನಕ್ಸಲರು: ಉಡುಪಿ, ಚಿಕ್ಕಮಗಳೂರಿನಲ್ಲಿ 5 ದಿನ ಹೈ ಅಲರ್ಟ್​​

ಉಡುಪಿ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಕನ್ಸಲ್​ ಚಟುವಟಿಕೆ ಮತ್ತೆ ಆರಂಭವಾಯಿತಾ ಎಂಬ ಅನುಮಾನ ವ್ಯಕ್ತವಾಗಿದೆ. ನಕ್ಸಲರು ಬೈಂದೂರು ತಾಲೂಕಿನ ಕೊಲ್ಲೂರು, ಮುದೂರು, ಜಡ್ಕಲ್‌, ಬೆಳ್ಕಲ್​ ಗ್ರಾಮಗಳಿಗೆ ಭೇಟಿ ನೀಡಿರುವ ಶಂಕೆ ವ್ಯಕ್ತವಾಗಿದೆ. ನಕ್ಸಲರು ಹಲವು ಮನೆಗಳಿಗೆ ಕೂಡ ತೆರಳಿರುವ ಅನುಮಾನ ಕೂಡ ವ್ಯಕ್ತವಾಗಿದೆ.

ಮತ್ತೆ ಆಕ್ಟಿವ್​ ಆದ ನಕ್ಸಲರು: ಉಡುಪಿ, ಚಿಕ್ಕಮಗಳೂರಿನಲ್ಲಿ 5 ದಿನ ಹೈ ಅಲರ್ಟ್​​
ಸಾಕೇತ್ ನೆನಪಿಗಾಗಿ ನಕ್ಸಲ್ ಹುತಾತ್ಮ ದಿನಾಚರಣೆ (ನಕ್ಸಲರ ಚಲನವಲನ)
Follow us
| Updated By: ವಿವೇಕ ಬಿರಾದಾರ

Updated on: Feb 07, 2024 | 9:47 AM

ಉಡುಪಿ/ಚಿಕ್ಕಮಗಳೂರು, ಫೆಬ್ರವರಿ 07: ಮಲೆನಾಡು ಮತ್ತು ಕರಾವಳಿಯಲ್ಲಿ ಭಾಗದಲ್ಲಿ ನಕ್ಸಲರ (Naxal) ಚುಟುವಟಿಕೆ ಮತ್ತೆ ಶುರುವಾಗಿದೆ. ಈ ಹಿನ್ನೆಲೆಯಲ್ಲಿ ಉಡುಪಿ (Udupi) ಮತ್ತು ಚಿಕ್ಕಮಗಳೂರು (Chikkamagaluru) ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳ ಕಾಲ ಹೈಅಲರ್ಟ್ ಘೋಷಣೆ ಮಾಡಲಾಗಿದೆ. ನಕ್ಸಲ್ ನಿಗ್ರಹ ಪಡೆ (ANF) ಕೂಡ ಚುರುಕುಗೊಂಡಿದ್ದು, ತೀವ್ರ ಕಟ್ಟೆಚ್ಚರ ವಹಿಸುವಂತೆ ಸರ್ಕಾರ ಸೂಚನೆ ನೀಡಿದೆ. ನಕ್ಸಲರು ಕೇರಳದಿಂದ (Kerala) ಉಡುಪಿ ಜಿಲ್ಲೆಯ ಬೈಂದೂರುಗೆ ಆಗಮಿಸಿರುವ ಅನುಮಾನ ವ್ಯಕ್ತವಾಗಿದೆ.

ಉಡುಪಿಯ ಹೆಬ್ರಿ ಮೂಲದ ವಿಕ್ರಮ್ ಗೌಡ ನೇತೃತ್ವದ ನಕ್ಸಲರ ತಂಡ ಬೈಂದೂರು ತಾಲೂಕಿನ ಕೊಲ್ಲೂರು, ಮುದೂರು, ಜಡ್ಕಲ್‌, ಬೆಳ್ಕಲ್‌ ಗ್ರಾಮ ಸುತ್ತಮುತ್ತ ಓಡಾಡಿರುವ ಶಂಕೆ ಮೂಡಿದೆ. ವಿಕ್ರಮ್ ಗೌಡ ಸುಮಾರು 20 ವರ್ಷಗಳ ಹಿಂದೆ ನಕ್ಸಲೈಟ್ ಆಗಿದ್ದನು. ಕೇರಳದಲ್ಲಿ ಈತ ತನ್ನ ಚಟುವಟಿಕೆಗಳನ್ನು ನಡೆಸುತ್ತಿದ್ದನು. ಬಿ.ಜಿ ಕೃಷ್ಣಮೂರ್ತಿ ಬಳಿಕ ಕರ್ನಾಟಕದ ನಕ್ಸಲ್ ನಾಯಕತ್ವವನ್ನು ವಿಕ್ರಂ ಗೌಡ ವಹಿಸಿಕೊಂಡಿದ್ದಾನೆ. ಈತನ ತಂಡದ ಮೂವರು ಮೂವರು ಸಶಸ್ತ್ರಧಾರಿಯಾಗಿ ಬೈಂದೂರಿಗೆ ಆಗಮಿಸಿರುವ ಮಾಹಿತಿ ಲಭ್ಯವಾಗಿದೆ. ಈ ಮೂವರು ಗ್ರಾಮದ ಮನೆಗಳಿಗೂ ತೆರಳಿ ಹೋಗಿರುವುದಾಗಿ ಮಾಹಿತಿ ಸಿಕ್ಕಿದೆ. ನಕ್ಸಲರ ಓಡಾಟ ಮಾಹಿತಿ ಬೆನ್ನಲ್ಲೇ ಪೊಲೀಸರು ಅಲರ್ಟ್ ಆಗಿದ್ದು, ವರ್ಷಗಳ ನಂತರ ಮತ್ತೆ ಬೈಂದೂರಿನಲ್ಲಿ ಕೂಂಬಿಂಗ್ ಸಾಧ್ಯತೆ ಇದೆ.

ನಕ್ಸಲ್ ಹುತಾತ್ಮ ದಿನ ಆಚರಿಸಲು ತಯಾರಿ

2005ರ ಫೆಬ್ರವರಿ 5 ರಂದು ಕಳಸ ತಾಲೂಕಿನ ಮೆಣಸಿನ ಹಾಡ್ಯದಲ್ಲಿ ರಾತ್ರಿ ಪೊಲೀಸರ ಎನ್ಕೌಂಟರ್​​ನಲ್ಲಿ ಸಾಕೇತ್ ಎಂಬ ನಕ್ಸಲ್​​ ಸಾವಿಗೀಡಾಗಿದ್ದನು. ಸಾಕೇತ್ ರಾಜನ್ ಸಾವಿಗೆ ರೆಡ್ ಸಲ್ಯೂಟ್ ದಿನ ಆಚರಿಸಲು ನಕ್ಸಲರು ತಯಾರಿ ನಡೆಸಿದ್ದಾರೆ ಎನ್ನಲಾಗಿದೆ. ಸಾಕೇತ್ ನೆನಪಿಗಾಗಿ ನಕ್ಸಲರು ಪ್ರತಿ ವರ್ಷ ನಕ್ಸಲ್ ಹುತಾತ್ಮ ದಿನಾಚರಣೆ ಆಚರಿಸುತ್ತಾರೆ.

ಇದನ್ನೂ ಓದಿ:ಉಡುಪಿ ಜಿಲ್ಲೆಯಲ್ಲಿ ಮತ್ತೆ ಆಕ್ಟಿವ್​ ಆದ ನಕ್ಸಲ್​ ಚಟುವಟಿಕೆ ! ಗ್ರಾಮಸ್ಥರಿಗೆ ಪೊಲೀಸರ ಸೂಚನೆ

ನಕ್ಸಲರ ದಾಳಿ

ನವೆಂಬರ್ 17, 2003: ಉಡುಪಿ ಜಿಲ್ಲೆಯಲ್ಲಿ ನಕ್ಸಲೀಯರಾದ ಹಾಜಿಮಾ ಮತ್ತು ಪಾರ್ವತಿ ಪೊಲೀಸರ ಗುಂಡಿಗೆ ಬಲಿಯಾದರು.

ಫೆಬ್ರವರಿ 6, 2005: ಚಿಕ್ಕಮಗಳೂರಿನಲ್ಲಿ ರಾಜ್ಯ ನಕ್ಸಲ್ ನಿಗ್ರಹ ದಳದಿಂದ ನಕ್ಸಲ್ ನಾಯಕ ಸಾಕೇತ್ ರಾಜನ್ ಹತ್ಯೆ ಮಾಡಲಾಯಿತು.

ಮೇ 17, 2005: ಪೊಲೀಸ್ ಮಾಹಿತಿದಾರ ಎಂಬ ಕಾರಣಕ್ಕೆ ಆದಿವಾಸಿ ನಾಯಕ ಶೇಷಯ್ಯನನ್ನು ನಕ್ಸಲರು ಕೊಂದರು.

ಫೆಬ್ರವರಿ 10, 2005: ತುಮಕೂರಿನ ವೆಂಕಟಮ್ಮನಹಳ್ಳಿಯಲ್ಲಿ ನಕ್ಸಲರು 6 ಪೊಲೀಸರು ಮತ್ತು ಒಬ್ಬ ನಾಗರಿಕನನ್ನು ಕೊಂದರು. ಈ ದಾಳಿಯೇ ನಕ್ಸಲ್ ವಿರೋಧಿ ಪಡೆ ರಚನೆಗೆ ಕಾರಣವಾಗುತ್ತದೆ.

ನವೆಂಬರ್ 19, 2008: ಹೊರನಾಡು ಬಳಿ ಎನ್‌ಕೌಂಟರ್‌ನಲ್ಲಿ ಮೂವರು ನಕ್ಸಲರು ಮೃತಪಟ್ಟರು. ಈ ಕಾರ್ಯಾಚರಣೆಯಲ್ಲಿ ಓರ್ವ ಎಎನ್‌ಎಫ್ ಅಧಿಕಾರಿ ಕಮಾಂಡೊ ಹುತಾತ್ಮರಾದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಮಗನನ್ನು ನೋಡಲು ಜೈಲಿಗೆ ಬಂದ ರೇವಣ್ಣ ಮಾಧ್ಯಮದವರನ್ನು ಕಂಡು ಸಿಡುಕಿದರು!
ಮಗನನ್ನು ನೋಡಲು ಜೈಲಿಗೆ ಬಂದ ರೇವಣ್ಣ ಮಾಧ್ಯಮದವರನ್ನು ಕಂಡು ಸಿಡುಕಿದರು!
ಭೂಕುಸಿತದಲ್ಲಿ ಸಿಲುಕಿರುವ ಕಾರ್ಮಿಕನ ಕೈ ಗೋಚರ: ಸುರಂಗದ ಮೂಲಕ ಚಿಕಿತ್ಸೆ
ಭೂಕುಸಿತದಲ್ಲಿ ಸಿಲುಕಿರುವ ಕಾರ್ಮಿಕನ ಕೈ ಗೋಚರ: ಸುರಂಗದ ಮೂಲಕ ಚಿಕಿತ್ಸೆ
ಮುಡಾ ಹಗರಣ ಸಿಬಿಐ ತನಿಖೆಗೆ ನೀಡಬೇಕೆನ್ನುವ ನೈತಿಕತೆ ಬಿಜೆಪಿಗಿದೆಯಾ? ಸಿಎಂ
ಮುಡಾ ಹಗರಣ ಸಿಬಿಐ ತನಿಖೆಗೆ ನೀಡಬೇಕೆನ್ನುವ ನೈತಿಕತೆ ಬಿಜೆಪಿಗಿದೆಯಾ? ಸಿಎಂ
ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕಿ! ಪೋಷಕರಿಂದ ಶಾಲೆಗೆ ಬೀಗ
ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕಿ! ಪೋಷಕರಿಂದ ಶಾಲೆಗೆ ಬೀಗ