AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಡುಪಿಯಲ್ಲಿ ಕೊರೊನಾ ಪಾಸಿಟಿವಿಟಿ ರೇಟ್ ಇಳಿಕೆ; ಇಂದಿನಿಂದ ಶಾಲೆ ಆರಂಭ

ವಿದ್ಯಾರ್ಥಿಗಳು ಮಾಸ್ಕ್ ಧರಿಸಿ, ಬೆಂಚಿನಲ್ಲಿ ಇಬ್ಬರೇ ಕುಳಿತು ಪಾಠ ಕೇಳುತ್ತಿದ್ದಾರೆ. ವ್ಯಾಕ್ಸಿನ್ ಪಡೆದ ಪೋಷಕರ ಮಕ್ಕಳಿಗೆ ಮಾತ್ರ ಶಾಲಾ ಪ್ರವೇಶಕ್ಕೆ ಅನುಮತಿ ನೀಡಲಾಗಿದೆ.

ಉಡುಪಿಯಲ್ಲಿ ಕೊರೊನಾ ಪಾಸಿಟಿವಿಟಿ ರೇಟ್ ಇಳಿಕೆ; ಇಂದಿನಿಂದ ಶಾಲೆ ಆರಂಭ
ಇಂದಿನಿಂದ 9ರಿಂದ 11ನೇ ತರಗತಿಗಳು ಆರಂಭ
TV9 Web
| Edited By: |

Updated on: Sep 01, 2021 | 11:23 AM

Share

ಉಡುಪಿ: ಇಂದಿನಿಂದ (ಸೆಪ್ಟೆಂಬರ್ 1) ಜಿಲ್ಲೆಯಾದ್ಯಂತ 9ನೇ ತರಗತಿಯಿಂದ ಪ್ರಥಮ ಪಿಯು ತರಗತಿಗಳು ಆರಂಭವಾಗುತ್ತಿವೆ. ಹತ್ತು ದಿನ ವಿಳಂಬವಾಗಿ ತರಗತಿಗಳು ಪ್ರಾರಂಭವಾಗುತ್ತಿವೆ. ರಾಜ್ಯದ್ಯಂತ ಆಗಸ್ಟ್ 23ಕ್ಕೆ 9ನೇ ತರಗತಿಯಿಂದ 11ನೇ ತರಗತಿಗಳು ಆರಂಭವಾಗಿತ್ತು. ಪಾಸಿಟಿವಿಟಿ ರೇಟ್ ಹೆಚ್ಚಿದ್ದರಿಂದ ಉಡುಪಿಯಲ್ಲಿ ಶಾಲೆ ತೆರೆದಿರಲಿಲ್ಲ. ಸದ್ಯ ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವಿಟಿ ರೇಟ್ (Positivity Rate) ಇಳಿಕೆಯಾಗಿದೆ. ಹಾಗಾಗಿ ತರಗತಿಗಳನ್ನು ತೆರೆಯಲು ಜಿಲ್ಲಾಡಳಿತ ಅನುಮತಿ ನೀಡಿದೆ.

ವಿದ್ಯಾರ್ಥಿಗಳು ಮಾಸ್ಕ್ ಧರಿಸಿ, ಬೆಂಚಿನಲ್ಲಿ ಇಬ್ಬರೇ ಕುಳಿತು ಪಾಠ ಕೇಳುತ್ತಿದ್ದಾರೆ. ವ್ಯಾಕ್ಸಿನ್ ಪಡೆದ ಪೋಷಕರ ಮಕ್ಕಳಿಗೆ ಮಾತ್ರ ಶಾಲಾ ಪ್ರವೇಶಕ್ಕೆ ಅನುಮತಿ ನೀಡಲಾಗಿದೆ.

ಸೆಪ್ಟೆಂಬರ್ 6ರಿಂದ ಶಾಲೆ ಆರಂಭ 1ರಿಂದ 8ನೇ ತರಗತಿಗಳನ್ನು ಆರಂಭಿಸುವ ಕುರಿತು ಮಹತ್ವದ ನಿರ್ಧಾರವನ್ನು ಆಗಸ್ಟ್ 30ರಂದು ನಡೆದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸಭೆ ತೆಗೆದುಕೊಂಡಿದೆ. 6- 8 ನೇ ತರಗತಿವರೆಗೆ ಶಾಲೆ ಆರಂಭಕ್ಕೆ ಸೆಪ್ಟೆಂಬರ್ 6ರಿಂದ ನಿಯಮಾನುಸಾರ ಅವಕಾಶ ಕಲ್ಪಿಸಲು ಸಭೆಯಲ್ಲಿ ನಿರ್ಣಯಿಸಲಾಗಿದೆ. ಕೊವಿಡ್ ಪಾಸಿಟಿವಿಟಿ ದರ ಶೇಕಡಾಗಿಂತ 2ಕ್ಕಿಂತ ಕಡಿಮೆ ಇರುವ ತಾಲೂಕುಗಳಲ್ಲಿ ಮಾತ್ರವಷ್ಟೇ ಶಾಲೆಗಳನ್ನು ಆರಂಭಿಸಲು ನಿರ್ಣಯಿಸಲಾಗಿದೆ ಎಂದು ಸಚಿವ ಆರ್.ಅಶೋಕ್ ತಿಳಿಸಿದ್ದಾರೆ.

ಪಾಸಿಟಿವಿಟಿ ರೇಟ್ ಶೇ.2ಕ್ಕಿಂತ ಕಡಿಮೆ ತಾಲೂಕುಗಳಲ್ಲಿ ಶಾಲೆ ಆರಂಭಿಸಲಾಗುವುದು. ವಾರದಲ್ಲಿ 5 ದಿನ (ಸೋಮವಾರದಿಂದ ಶುಕ್ರವಾರದವರೆಗೆ) ಶಾಲೆ ತೆರೆಯುವುದಕ್ಕೆ ಸರ್ಕಾರ ಅನುಮತಿ ನೀಡಿದೆ. ಉಳಿದ 2 ದಿನ (ಶನಿವಾರ, ಭಾನುವಾರ) ಶಾಲೆ ಸ್ವಚ್ಛಗೊಳಿಸಲು ಅವಕಾಶವಿರುತ್ತದೆ. ದಿನ ಬಿಟ್ಟು ದಿನ ಮಕ್ಕಳು ಶಾಲೆಗೆ ಹಾಜರಾಗಲು ಅನುಮತಿ ನೀಡಲಾಗಿದೆ. ಅಂದರೆ, ದಿನ ಬಿಟ್ಟು ದಿನ ಮಕ್ಕಳು ಶಾಲೆಗೆ ಹಾಜರಾಗಬಹುದು ಎಂದು ಸರ್ಕಾರ ನಿರ್ಧರಿಸಿದೆ.

ಇದನ್ನೂ ಓದಿ

ಬೆಂಗಳೂರಿನಲ್ಲಿ ರಾಜ್ ಕುಮಾರ್, ಶಂಕರ್ ನಾಗ್, ವಿಷ್ಣುವರ್ಧನ್ ಸೇರಿದಂತೆ ಮಹಾನ್ ನಾಯಕರ ಪುತ್ಥಳಿಗಳು ಶೀಘ್ರದಲ್ಲೇ ತೆರವು

ಸುದೀಪ್ ಹುಟ್ಟು ಹಬ್ಬಕ್ಕೆ ವಿಶೇಷ ಗಿಫ್ಟ್; ಇ-ಬುಕ್ ಹಾಗೂ ಆಡಿಯೊ ರೂಪದಲ್ಲಿ ಬಿಡುಗಡೆಯಾಗಲಿದೆ ಕಿಚ್ಚನ ಬದುಕಿನ ಕತೆ

(Nine to first pu offline class restart from today in udupi)

ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?