AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಡುಪಿ: ಮಲ್ಪೆ ಬೀಚ್​​ ದಡಕ್ಕೆ ತೇಲಿಬಂದ ನೂಡಲ್ ಮಾದರಿಯ ವಸ್ತು, ಹೆಚ್ಚಿನ ಅಧ್ಯಯನಕ್ಕಾಗಿ ಗೋವಾಕ್ಕೆ ರವಾನೆ

ಉಡುಪಿ ಜಿಲ್ಲೆಯ ಕಡಲತೀರದ ಜನರು ಸುಮಾರು ಒಂದು ವಾರದಿಂದ ದಡಕ್ಕೆ ತೇಲಿ ಬರುತ್ತಿರುವ ನೂಡಲ್ಸ್ ಮಾದರಿಯ ವಸ್ತುಗಳನ್ನು ನೋಡಿ ಅಚ್ಚರಿಗೊಂಡಿದ್ದಾರೆ. ಹೀಗೆ ತೇಲಿಬಂದ ವಸ್ತುಗಳು ಸುಮಾರು 15 ಕಿ.ಮೀ ಉದ್ದಕ್ಕೂ ವ್ಯಾಪಿಸಿದೆ.

Follow us
Rakesh Nayak Manchi
|

Updated on: Jun 23, 2023 | 10:28 AM

ಉಡುಪಿ: ಜಿಲ್ಲೆಯ ಮಲ್ಪೆ (Malpe) ಕಡಲತೀರಕ್ಕೆ ನೂಡಲ್ಸ್ ಮಾದರಿಯ ವಸ್ತುಗಳು ತೇಲಿಬರುತ್ತಿರುವುದನ್ನು ನೋಡಿದ ಜನರ ಅಚ್ಚರಿಗೊಂಡಿದ್ದಾರೆ. ಹೀಗೆ ತೇಲಿ ಬರುತ್ತಿವೆ ವಸ್ತುಗಳು ಸುಮಾರು 15 ಕಿ.ಮೀ ಉದ್ದಕ್ಕೂ ವ್ಯಾಪಿಸಿದೆ. ಈ ವಸ್ತುವು ಮನುಷ್ಯರಿಗೆ ಅಥವಾ ಪ್ರಾಣಿಗಳಿಗೆ ಯಾವುದೇ ಹಾನಿಯಿಲ್ಲ ಎಂದು ಉಡುಪಿ (Udupi) ಮೀನುಗಾರಿಕಾ ಜಂಟಿ ನಿರ್ದೇಶಕ ವಿವೇಕ್ ಹೇಳಿದ್ದಾರೆ.

ನೂಡಲ್ಸ್ ಮಾದರಿಯ ವಸ್ತುಗಳು ಪತ್ತೆಯಾಗಿರುವ ಸ್ಥಳಕ್ಕೆ ಭೇಟಿ ನೀಡಿದ ಮಂಗಳೂರಿನ ಮೀನುಗಾರಿಕಾ ಕಾಲೇಜು ಮತ್ತು ಮಂಗಳೂರಿನ ಕೇಂದ್ರೀಯ ಸಾಗರ ಮೀನುಗಾರಿಕಾ ಸಂಶೋಧನಾ ಸಂಸ್ಥೆಯ ವಿಜ್ಞಾನಿಗಳ ತಂಡವು ಪರಿಶೀಲನೆ ನಡೆಸಿತು. ಸಮುದ್ರ ಜೀವಿಗಳ ಚಿಪ್ಪುಗಳದ್ದಾಗಿರಬಹುದು ಎಂದು ಮೀನುಗಾರಿಕಾ ಮಹಾವಿದ್ಯಾಲಯದ ಪ್ರಾಧ್ಯಾಪಕ ಶಿವಕುಮಾರ್ ಮಗದ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇತ್ತೀಚಿನ ಬಿಪರ್‌ಜೋಯ್ ಚಂಡಮಾರುತದ ಹುಳುಗಳು ಸ್ಥಳಾಂತಗೊಂಡಿರಬಹುದು ಎಂದು ಅವರು ಹೇಳಿದ್ದಾಗಿ ಸುದ್ದಿ ಸಂಸ್ಥೆ ದಿ ಹಿಂದು ವರದಿ ಮಾಡಿದೆ.

ಇದನ್ನೂ ಓದಿ: shakti scheme: ಆಟೋ-ಟೆಂಪೋಗಳಿಗೆ ಕುಸಿದ ಬೇಡಿಕೆ, ಚಾಲಕರ ದಾರುಣ ಸ್ಥಿತಿ, 6ನೇ ಗ್ಯಾರಂಟಿಯಾಗಿ ವಿಷದ ಬಾಟಲಿ ನೀಡಲು ಆಗ್ರಹ

ಈ ವಸ್ತುವು ಪೋಷಕಾಂಶಗಳಿಂದ ಸಮೃದ್ಧವಾಗಿದೆ ಮತ್ತು ಗುಂಡಿಗಳಲ್ಲಿ ಹೂಳುವ ಮೂಲಕ ಗೊಬ್ಬರವಾಗಿ ಪರಿವರ್ತಿಸಬಹುದು. ಇದರಿಂದ ಯಾವುದೇ ತೊಂದರೆ ಇಲ್ಲ. ಇದರ ಹೊರತಾಗಿ, ಅವುಗಳನ್ನು ಮತ್ತೆ ಸಮುದ್ರಕ್ಕೆ ತಳ್ಳಬಹುದು. ನಂತರ ಅವು ಸಮುದ್ರ ಜೀವಿಗಳಿಗೆ ಆಹಾರವಾಗುತ್ತವೆ ಎಂದು ಹೇಳಿದ್ದಾರೆ.

ಉಡುಪಿ ಮೀನುಗಾರಿಕಾ ಜಂಟಿ ನಿರ್ದೇಶಕ ವಿವೇಕ್ ಮಾತನಾಡಿ, ಒಂದು ವಾರದಿಂದ ಜಿಲ್ಲೆಯ ಕಡಲತೀರದ ಸುಮಾರು 15 ಕಿ.ಮೀ ಉದ್ದಕ್ಕೂ ಈ ವಸ್ತುಗಳು ಕಾಣಿಸಿಕೊಂಡಿವೆ. ಪ್ರತಿದಿನ, ಹೆಚ್ಚಿನ ವಸ್ತುಗಳು ತೀರಕ್ಕೆ ಕೊಚ್ಚಿಕೊಂಡು ಬರುತ್ತಿವೆ. ಮೀನುಗಾರರು ಮತ್ತು ತೀರಕ್ಕೆ ಹತ್ತಿರವಿರುವ ಜನರು ಇದರ ಬಗ್ಗೆ ಚಿಂತಿಸಬೇಕಾಗಿಲ್ಲ ಎಂದು ಹೇಳಿದರು.

ಹೆಚ್ಚಿನ ಅಧ್ಯಯನ ಮತ್ತು ಸಂಶೋಧನೆಗಾಗಿ ವಸ್ತುಗಳನ್ನು ಗೋವಾದ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಓಷಿಯಾನೋಗ್ರಫಿ, ಕೊಚ್ಚಿಯಲ್ಲಿರುವ ಸೆಂಟ್ರಲ್ ಇನ್‌ಸ್ಟಿಟ್ಯೂಟ್ ಆಫ್ ಫಿಶರೀಸ್ ಟೆಕ್ನಾಲಜಿ ಮತ್ತು ಕೊಚ್ಚಿಯ ಸೆಂಟ್ರಲ್ ಮೆರೈನ್ ಫಿಶರೀಸ್ ರಿಸರ್ಚ್ ಇನ್‌ಸ್ಟಿಟ್ಯೂಟ್‌ಗೆ ಕಳುಹಿಸಲಾಗುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಶಿವಣ್ಣ, ದರ್ಶನ್ ಅವರನ್ನು ನಿಂದಿಸಿದ್ದು ನಿಜವೇ? ಮನು ಹೇಳಿದ್ದೇನು?
ಶಿವಣ್ಣ, ದರ್ಶನ್ ಅವರನ್ನು ನಿಂದಿಸಿದ್ದು ನಿಜವೇ? ಮನು ಹೇಳಿದ್ದೇನು?
ಕಪ್​ಗೆ ಮುತ್ತಿಡಲು ಶಿವಕುಮಾರ್ ಆರ್​ಸಿಬಿ ತಂಡದ ಆಟಗಾರನೇ? ಭಾಸ್ಕರ್ ರಾವ್
ಕಪ್​ಗೆ ಮುತ್ತಿಡಲು ಶಿವಕುಮಾರ್ ಆರ್​ಸಿಬಿ ತಂಡದ ಆಟಗಾರನೇ? ಭಾಸ್ಕರ್ ರಾವ್
ನನ್ನ ಆರೋಗ್ಯ ಚೆನ್ನಾಗಿದೆ, ಅದನ್ನು ದೇವರು ನೋಡ್ಕೋತಾನೆ: ಕುಮಾರಸ್ವಾಮಿ
ನನ್ನ ಆರೋಗ್ಯ ಚೆನ್ನಾಗಿದೆ, ಅದನ್ನು ದೇವರು ನೋಡ್ಕೋತಾನೆ: ಕುಮಾರಸ್ವಾಮಿ
ವಿರಾಟ್ ಕೊಹ್ಲಿ ಏನು ದೇವರಾ: ಮೃತ ಪ್ರಜ್ವಲ್ ತಾಯಿ ಆಕ್ರೋಶದ ಮಾತು
ವಿರಾಟ್ ಕೊಹ್ಲಿ ಏನು ದೇವರಾ: ಮೃತ ಪ್ರಜ್ವಲ್ ತಾಯಿ ಆಕ್ರೋಶದ ಮಾತು
ಸರ್ಕಾರದಿಂದ ನೆರವು ಸಿಕ್ಕಿಲ್ಲ, ಅಧಿಕಾರಿಗಳು ಮನಗೆ ಬಂದಿಲ್ಲ:ಶಿವಲಿಂಗನ ತಾಯಿ
ಸರ್ಕಾರದಿಂದ ನೆರವು ಸಿಕ್ಕಿಲ್ಲ, ಅಧಿಕಾರಿಗಳು ಮನಗೆ ಬಂದಿಲ್ಲ:ಶಿವಲಿಂಗನ ತಾಯಿ
ಕಾಶ್ಮೀರದ ಮೊದಲ ವಂದೇ ಭಾರತ್ ರೈಲು ಅಂಜಿ ಸೇತುವೆ ದಾಟಿದ ಅದ್ಭುತ ವಿಡಿಯೋ
ಕಾಶ್ಮೀರದ ಮೊದಲ ವಂದೇ ಭಾರತ್ ರೈಲು ಅಂಜಿ ಸೇತುವೆ ದಾಟಿದ ಅದ್ಭುತ ವಿಡಿಯೋ
ನಾನು ಪುನಃ ಜೈಲಿಗೆ ಹೋಗುವುದನ್ನು ನೋಡಲು ಬಹಳ ಜನ ಕಾಯುತ್ತಿದ್ದರು: ಕುಲಕರ್ಣಿ
ನಾನು ಪುನಃ ಜೈಲಿಗೆ ಹೋಗುವುದನ್ನು ನೋಡಲು ಬಹಳ ಜನ ಕಾಯುತ್ತಿದ್ದರು: ಕುಲಕರ್ಣಿ
ಕೇದಾರನಾಥಕ್ಕೆ ಹೋಗುವಾಗ ರಸ್ತೆಯಲ್ಲೇ ಲ್ಯಾಂಡ್ ಆದ ಹೆಲಿಕಾಪ್ಟರ್
ಕೇದಾರನಾಥಕ್ಕೆ ಹೋಗುವಾಗ ರಸ್ತೆಯಲ್ಲೇ ಲ್ಯಾಂಡ್ ಆದ ಹೆಲಿಕಾಪ್ಟರ್
ಮೃತಪ್ರೇಮಿಯನ್ನು ಮಾತಾಡುವ ನೆಪದಲ್ಲಿ ತೋಟದ ಮನೆಗೆ ಕರೆಸಲಾಗಿತ್ತು
ಮೃತಪ್ರೇಮಿಯನ್ನು ಮಾತಾಡುವ ನೆಪದಲ್ಲಿ ತೋಟದ ಮನೆಗೆ ಕರೆಸಲಾಗಿತ್ತು
ಆಟಗಾರರೊಂದಿಗೆ ತಮ್ಮ ಮಕ್ಕಳ ಫೋಟೋಗಾಗಿ ನಮ್ಮ ಮಕ್ಕಳ ಬಲಿ ಪಡೆದರು: ಲಕ್ಷ್ಮಣ
ಆಟಗಾರರೊಂದಿಗೆ ತಮ್ಮ ಮಕ್ಕಳ ಫೋಟೋಗಾಗಿ ನಮ್ಮ ಮಕ್ಕಳ ಬಲಿ ಪಡೆದರು: ಲಕ್ಷ್ಮಣ