AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಡುಪಿಯ ಕೃಷ್ಣ ಮಠದ ಪರ್ಯಾಯ ಮಹೋತ್ಸವ; ದ್ವೈವಾರ್ಷಿಕ ಪೂಜಾಧಿಕಾರ ವಹಿಸಿಕೊಂಡ ಕೃಷ್ಣಾಪುರ ಶ್ರೀ

Udupi Paryaya: ಕೃಷ್ಣ ಮಠದ ಗರ್ಭಗುಡಿ ಬಳಿ ಅದಮಾರು ಈಶಪ್ರಿಯ ತೀರ್ಥರು, ಕೃಷ್ಣಾಪುರ ಶ್ರೀಗಳಿಗೆ ದ್ವೈವಾರ್ಷಿಕ ಪೂಜಾಧಿಕಾರ ಹಸ್ತಾಂತರಿಸಿದ್ದಾರೆ. ಕೃಷ್ಣಾಪುರ ವಿದ್ಯಾಸಾಗರ ಶ್ರೀಗಳು ಸರ್ವಜ್ಞ ಪೀಠಾರೋಹಣ ಮಾಡಿದ್ದಾರೆ.

ಉಡುಪಿಯ ಕೃಷ್ಣ ಮಠದ ಪರ್ಯಾಯ ಮಹೋತ್ಸವ; ದ್ವೈವಾರ್ಷಿಕ ಪೂಜಾಧಿಕಾರ ವಹಿಸಿಕೊಂಡ ಕೃಷ್ಣಾಪುರ ಶ್ರೀ
ಉಡುಪಿಯ ಕೃಷ್ಣ ಮಠ
TV9 Web
| Edited By: |

Updated on: Jan 18, 2022 | 10:14 AM

Share

ಉಡುಪಿ: ಉಡುಪಿಯ ಕೃಷ್ಣ ಮಠದ ಪರ್ಯಾಯ ಮಹೋತ್ಸವ ಹಿನ್ನೆಲೆ ಕೃಷ್ಣಾಪುರ ವಿದ್ಯಾಸಾಗರ ಶ್ರೀಗಳಿಂದ ಸರ್ವಜ್ಞ ಪೀಠಾರೋಹಣ ನೆರವೇರಿದೆ. ಕೃಷ್ಣಾಪುರ ಶ್ರೀ ದ್ವೈವಾರ್ಷಿಕ ಪೂಜಾಧಿಕಾರ ವಹಿಸಿಕೊಂಡಿದ್ದಾರೆ. ಅದಮಾರು ಈಶಪ್ರಿಯ ತೀರ್ಥರು ಅಧಿಕಾರ ಹಸ್ತಾಂತರಿಸಿದ್ದಾರೆ. ಕೃಷ್ಣ ಮಠದ ಗರ್ಭಗುಡಿ ಬಳಿ ಅಧಿಕಾರ ಹಸ್ತಾಂತರ ಪ್ರಕ್ರಿಯೆ ನಡೆದಿದೆ.

ಕೃಷ್ಣ ಮಠದ ಗರ್ಭಗುಡಿ ಬಳಿ ಅದಮಾರು ಈಶಪ್ರಿಯ ತೀರ್ಥರು, ಕೃಷ್ಣಾಪುರ ಶ್ರೀಗಳಿಗೆ ದ್ವೈವಾರ್ಷಿಕ ಪೂಜಾಧಿಕಾರ ಹಸ್ತಾಂತರಿಸಿದ್ದಾರೆ. ಕೃಷ್ಣಾಪುರ ವಿದ್ಯಾಸಾಗರ ಶ್ರೀಗಳು ಸರ್ವಜ್ಞ ಪೀಠಾರೋಹಣ ಮಾಡಿದ್ದಾರೆ. ಅಕ್ಷಯಪಾತ್ರೆ, ಅನ್ನದ ಸಟ್ಟುಗ ಹಸ್ತಾಂತರಿಸಿದ್ದಾರೆ. ಅನ್ನಬ್ರಹ್ಮನ ಕ್ಷೇತ್ರದಲ್ಲಿ ಮುಂದೆ ವಿದ್ಯಾಸಾಗರ ತೀರ್ಥ ಸ್ವಾಮೀಜಿ ಪರ್ಯಾಯ ನಡೆಯಲಿದೆ.

ಇನ್ನು ಕೊರೊನಾ ಹಿನ್ನೆಲೆಯಲ್ಲಿ ಸರಳವಾಗಿ ಪರ್ಯಾಯ ಆಚರಣೆ ಮಾಡಲಾಗುತ್ತಿದ್ದು ಸಾಂಪ್ರದಾಯಿಕ ಆಚರಣೆಗಳಿಗೆ ಮಾತ್ರ ಮಹೋತ್ಸವ ಸೀಮಿತವಾಗಿದೆ. ರಾತ್ರಿ ಜೋಡುಕಟ್ಟೆಯಿಂದ ಪರ್ಯಾಯ ಮೆರವಣಿಗೆ ಆರಂಭಗೊಂಡಿದ್ದು ಕೊರೊನಾ ರೂಲ್ಸ್ ಪ್ರಕಾರ ಮೆರವಣಿಗೆಗೆ ನಡೀತು. ಸೀಮಿತ ಟ್ಯಾಬ್ಲೋ, ಕಲಾತಂಡಗಳು ಮೆರವಣಿಗೆಯಲ್ಲಿ ಭಾಗಿಯಾಗಿದ್ವು. ಉಡುಪಿ ಜಿಲ್ಲಾಡಳಿತ ಸಾರ್ವಜನಿಕರಿಗೆ ನಿರ್ಬಂಧ ಹೇರಿದೆ. ಟ್ಯಾಬ್ಲೋ ಪಲ್ಲಕ್ಕಿಯಲ್ಲಿ ಅಷ್ಟಮಠಾಧೀಶರ ಮೆರವಣಿಗೆ ನಡೆಯುತ್ತಿದೆ. ಕೊರೊನಾ ಹಿನ್ನೆಲೆ ಮಾನವ ಹೊರುವ ಪಲ್ಲಕ್ಕಿ ರದ್ದುಗೊಳಿಸಲಾಗಿದೆ.

ಈ ಬಾರಿ 50ಕ್ಕೂ ಅಧಿಕ ಟ್ಯಾಬ್ಲೋ ರದ್ದು ಮಾಡಲಾಗಿದೆ. ಕೇವಲ ಏಳು ಟ್ಯಾಬ್ಲೋ, ಚಂಡೆ, ಶಂಖ, ಡೋಲು, ಪಂಚವಾದ್ಯಗಳಿಗೆ ಮಾತ್ರ ಅವಕಾಶ ನೀಡಲಾಗಿದೆ. ಅಷ್ಟಮಠಾಧೀಶರು ಮೆರವಣಿಗೆಯಲ್ಲಿ ಸಾಗಿ ಬಂದು ದ್ವೈವಾರ್ಷಿಕ ಪೂಜಾಧಿಕಾರದಲ್ಲಿ ಭಾಗಿಯಾದ್ರು. ಪರ್ಯಾಯ ಪೀಠ ಏರಲಿರುವ ಕೃಷ್ಣಾಪುರ ಶ್ರೀ ಮೆರವಣಿಗೆಯ ಮುಂಚೂಣಿಯಲ್ಲಿ ಸಾಗಿಬಂದ್ರು. ಫಲಿಮಾರು, ಪೇಜಾವರ, ಕಾಣಿಯೂರು, ಸೋದೆ, ಶಿರೂರು ಶ್ರೀಗಳು ಭಾಗಿಯಾಗಿದ್ರು.

udupi paryaya

ಜೋಡುಕಟ್ಟೆಯಿಂದ ಪರ್ಯಾಯ ಮೆರವಣಿಗೆ

ಇದನ್ನೂ ಓದಿ: ಸ್ತಬ್ಧಚಿತ್ರಗಳ ಆಯ್ಕೆ ಕೆಲಸ ನಮ್ಮದಲ್ಲ, ಇಂಥ ಪತ್ರ ಬರೆಯುವುದು ಸರಿಯಲ್ಲ; ಮಮತಾ ಬ್ಯಾನರ್ಜಿ, ಸ್ಟಾಲಿನ್​ ಪತ್ರಕ್ಕೆ ಕೇಂದ್ರದ ಖಡಕ್​ ಪ್ರಕಟಣೆ

ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್