Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಡುಪಿಯ ಕೃಷ್ಣ ಮಠದ ಪರ್ಯಾಯ ಮಹೋತ್ಸವ; ದ್ವೈವಾರ್ಷಿಕ ಪೂಜಾಧಿಕಾರ ವಹಿಸಿಕೊಂಡ ಕೃಷ್ಣಾಪುರ ಶ್ರೀ

Udupi Paryaya: ಕೃಷ್ಣ ಮಠದ ಗರ್ಭಗುಡಿ ಬಳಿ ಅದಮಾರು ಈಶಪ್ರಿಯ ತೀರ್ಥರು, ಕೃಷ್ಣಾಪುರ ಶ್ರೀಗಳಿಗೆ ದ್ವೈವಾರ್ಷಿಕ ಪೂಜಾಧಿಕಾರ ಹಸ್ತಾಂತರಿಸಿದ್ದಾರೆ. ಕೃಷ್ಣಾಪುರ ವಿದ್ಯಾಸಾಗರ ಶ್ರೀಗಳು ಸರ್ವಜ್ಞ ಪೀಠಾರೋಹಣ ಮಾಡಿದ್ದಾರೆ.

ಉಡುಪಿಯ ಕೃಷ್ಣ ಮಠದ ಪರ್ಯಾಯ ಮಹೋತ್ಸವ; ದ್ವೈವಾರ್ಷಿಕ ಪೂಜಾಧಿಕಾರ ವಹಿಸಿಕೊಂಡ ಕೃಷ್ಣಾಪುರ ಶ್ರೀ
ಉಡುಪಿಯ ಕೃಷ್ಣ ಮಠ
Follow us
TV9 Web
| Updated By: ಆಯೇಷಾ ಬಾನು

Updated on: Jan 18, 2022 | 10:14 AM

ಉಡುಪಿ: ಉಡುಪಿಯ ಕೃಷ್ಣ ಮಠದ ಪರ್ಯಾಯ ಮಹೋತ್ಸವ ಹಿನ್ನೆಲೆ ಕೃಷ್ಣಾಪುರ ವಿದ್ಯಾಸಾಗರ ಶ್ರೀಗಳಿಂದ ಸರ್ವಜ್ಞ ಪೀಠಾರೋಹಣ ನೆರವೇರಿದೆ. ಕೃಷ್ಣಾಪುರ ಶ್ರೀ ದ್ವೈವಾರ್ಷಿಕ ಪೂಜಾಧಿಕಾರ ವಹಿಸಿಕೊಂಡಿದ್ದಾರೆ. ಅದಮಾರು ಈಶಪ್ರಿಯ ತೀರ್ಥರು ಅಧಿಕಾರ ಹಸ್ತಾಂತರಿಸಿದ್ದಾರೆ. ಕೃಷ್ಣ ಮಠದ ಗರ್ಭಗುಡಿ ಬಳಿ ಅಧಿಕಾರ ಹಸ್ತಾಂತರ ಪ್ರಕ್ರಿಯೆ ನಡೆದಿದೆ.

ಕೃಷ್ಣ ಮಠದ ಗರ್ಭಗುಡಿ ಬಳಿ ಅದಮಾರು ಈಶಪ್ರಿಯ ತೀರ್ಥರು, ಕೃಷ್ಣಾಪುರ ಶ್ರೀಗಳಿಗೆ ದ್ವೈವಾರ್ಷಿಕ ಪೂಜಾಧಿಕಾರ ಹಸ್ತಾಂತರಿಸಿದ್ದಾರೆ. ಕೃಷ್ಣಾಪುರ ವಿದ್ಯಾಸಾಗರ ಶ್ರೀಗಳು ಸರ್ವಜ್ಞ ಪೀಠಾರೋಹಣ ಮಾಡಿದ್ದಾರೆ. ಅಕ್ಷಯಪಾತ್ರೆ, ಅನ್ನದ ಸಟ್ಟುಗ ಹಸ್ತಾಂತರಿಸಿದ್ದಾರೆ. ಅನ್ನಬ್ರಹ್ಮನ ಕ್ಷೇತ್ರದಲ್ಲಿ ಮುಂದೆ ವಿದ್ಯಾಸಾಗರ ತೀರ್ಥ ಸ್ವಾಮೀಜಿ ಪರ್ಯಾಯ ನಡೆಯಲಿದೆ.

ಇನ್ನು ಕೊರೊನಾ ಹಿನ್ನೆಲೆಯಲ್ಲಿ ಸರಳವಾಗಿ ಪರ್ಯಾಯ ಆಚರಣೆ ಮಾಡಲಾಗುತ್ತಿದ್ದು ಸಾಂಪ್ರದಾಯಿಕ ಆಚರಣೆಗಳಿಗೆ ಮಾತ್ರ ಮಹೋತ್ಸವ ಸೀಮಿತವಾಗಿದೆ. ರಾತ್ರಿ ಜೋಡುಕಟ್ಟೆಯಿಂದ ಪರ್ಯಾಯ ಮೆರವಣಿಗೆ ಆರಂಭಗೊಂಡಿದ್ದು ಕೊರೊನಾ ರೂಲ್ಸ್ ಪ್ರಕಾರ ಮೆರವಣಿಗೆಗೆ ನಡೀತು. ಸೀಮಿತ ಟ್ಯಾಬ್ಲೋ, ಕಲಾತಂಡಗಳು ಮೆರವಣಿಗೆಯಲ್ಲಿ ಭಾಗಿಯಾಗಿದ್ವು. ಉಡುಪಿ ಜಿಲ್ಲಾಡಳಿತ ಸಾರ್ವಜನಿಕರಿಗೆ ನಿರ್ಬಂಧ ಹೇರಿದೆ. ಟ್ಯಾಬ್ಲೋ ಪಲ್ಲಕ್ಕಿಯಲ್ಲಿ ಅಷ್ಟಮಠಾಧೀಶರ ಮೆರವಣಿಗೆ ನಡೆಯುತ್ತಿದೆ. ಕೊರೊನಾ ಹಿನ್ನೆಲೆ ಮಾನವ ಹೊರುವ ಪಲ್ಲಕ್ಕಿ ರದ್ದುಗೊಳಿಸಲಾಗಿದೆ.

ಈ ಬಾರಿ 50ಕ್ಕೂ ಅಧಿಕ ಟ್ಯಾಬ್ಲೋ ರದ್ದು ಮಾಡಲಾಗಿದೆ. ಕೇವಲ ಏಳು ಟ್ಯಾಬ್ಲೋ, ಚಂಡೆ, ಶಂಖ, ಡೋಲು, ಪಂಚವಾದ್ಯಗಳಿಗೆ ಮಾತ್ರ ಅವಕಾಶ ನೀಡಲಾಗಿದೆ. ಅಷ್ಟಮಠಾಧೀಶರು ಮೆರವಣಿಗೆಯಲ್ಲಿ ಸಾಗಿ ಬಂದು ದ್ವೈವಾರ್ಷಿಕ ಪೂಜಾಧಿಕಾರದಲ್ಲಿ ಭಾಗಿಯಾದ್ರು. ಪರ್ಯಾಯ ಪೀಠ ಏರಲಿರುವ ಕೃಷ್ಣಾಪುರ ಶ್ರೀ ಮೆರವಣಿಗೆಯ ಮುಂಚೂಣಿಯಲ್ಲಿ ಸಾಗಿಬಂದ್ರು. ಫಲಿಮಾರು, ಪೇಜಾವರ, ಕಾಣಿಯೂರು, ಸೋದೆ, ಶಿರೂರು ಶ್ರೀಗಳು ಭಾಗಿಯಾಗಿದ್ರು.

udupi paryaya

ಜೋಡುಕಟ್ಟೆಯಿಂದ ಪರ್ಯಾಯ ಮೆರವಣಿಗೆ

ಇದನ್ನೂ ಓದಿ: ಸ್ತಬ್ಧಚಿತ್ರಗಳ ಆಯ್ಕೆ ಕೆಲಸ ನಮ್ಮದಲ್ಲ, ಇಂಥ ಪತ್ರ ಬರೆಯುವುದು ಸರಿಯಲ್ಲ; ಮಮತಾ ಬ್ಯಾನರ್ಜಿ, ಸ್ಟಾಲಿನ್​ ಪತ್ರಕ್ಕೆ ಕೇಂದ್ರದ ಖಡಕ್​ ಪ್ರಕಟಣೆ

‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ