AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಡುಪಿಯ ಕೃಷ್ಣ ಮಠದ ಪರ್ಯಾಯ ಮಹೋತ್ಸವ; ದ್ವೈವಾರ್ಷಿಕ ಪೂಜಾಧಿಕಾರ ವಹಿಸಿಕೊಂಡ ಕೃಷ್ಣಾಪುರ ಶ್ರೀ

Udupi Paryaya: ಕೃಷ್ಣ ಮಠದ ಗರ್ಭಗುಡಿ ಬಳಿ ಅದಮಾರು ಈಶಪ್ರಿಯ ತೀರ್ಥರು, ಕೃಷ್ಣಾಪುರ ಶ್ರೀಗಳಿಗೆ ದ್ವೈವಾರ್ಷಿಕ ಪೂಜಾಧಿಕಾರ ಹಸ್ತಾಂತರಿಸಿದ್ದಾರೆ. ಕೃಷ್ಣಾಪುರ ವಿದ್ಯಾಸಾಗರ ಶ್ರೀಗಳು ಸರ್ವಜ್ಞ ಪೀಠಾರೋಹಣ ಮಾಡಿದ್ದಾರೆ.

ಉಡುಪಿಯ ಕೃಷ್ಣ ಮಠದ ಪರ್ಯಾಯ ಮಹೋತ್ಸವ; ದ್ವೈವಾರ್ಷಿಕ ಪೂಜಾಧಿಕಾರ ವಹಿಸಿಕೊಂಡ ಕೃಷ್ಣಾಪುರ ಶ್ರೀ
ಉಡುಪಿಯ ಕೃಷ್ಣ ಮಠ
TV9 Web
| Edited By: |

Updated on: Jan 18, 2022 | 10:14 AM

Share

ಉಡುಪಿ: ಉಡುಪಿಯ ಕೃಷ್ಣ ಮಠದ ಪರ್ಯಾಯ ಮಹೋತ್ಸವ ಹಿನ್ನೆಲೆ ಕೃಷ್ಣಾಪುರ ವಿದ್ಯಾಸಾಗರ ಶ್ರೀಗಳಿಂದ ಸರ್ವಜ್ಞ ಪೀಠಾರೋಹಣ ನೆರವೇರಿದೆ. ಕೃಷ್ಣಾಪುರ ಶ್ರೀ ದ್ವೈವಾರ್ಷಿಕ ಪೂಜಾಧಿಕಾರ ವಹಿಸಿಕೊಂಡಿದ್ದಾರೆ. ಅದಮಾರು ಈಶಪ್ರಿಯ ತೀರ್ಥರು ಅಧಿಕಾರ ಹಸ್ತಾಂತರಿಸಿದ್ದಾರೆ. ಕೃಷ್ಣ ಮಠದ ಗರ್ಭಗುಡಿ ಬಳಿ ಅಧಿಕಾರ ಹಸ್ತಾಂತರ ಪ್ರಕ್ರಿಯೆ ನಡೆದಿದೆ.

ಕೃಷ್ಣ ಮಠದ ಗರ್ಭಗುಡಿ ಬಳಿ ಅದಮಾರು ಈಶಪ್ರಿಯ ತೀರ್ಥರು, ಕೃಷ್ಣಾಪುರ ಶ್ರೀಗಳಿಗೆ ದ್ವೈವಾರ್ಷಿಕ ಪೂಜಾಧಿಕಾರ ಹಸ್ತಾಂತರಿಸಿದ್ದಾರೆ. ಕೃಷ್ಣಾಪುರ ವಿದ್ಯಾಸಾಗರ ಶ್ರೀಗಳು ಸರ್ವಜ್ಞ ಪೀಠಾರೋಹಣ ಮಾಡಿದ್ದಾರೆ. ಅಕ್ಷಯಪಾತ್ರೆ, ಅನ್ನದ ಸಟ್ಟುಗ ಹಸ್ತಾಂತರಿಸಿದ್ದಾರೆ. ಅನ್ನಬ್ರಹ್ಮನ ಕ್ಷೇತ್ರದಲ್ಲಿ ಮುಂದೆ ವಿದ್ಯಾಸಾಗರ ತೀರ್ಥ ಸ್ವಾಮೀಜಿ ಪರ್ಯಾಯ ನಡೆಯಲಿದೆ.

ಇನ್ನು ಕೊರೊನಾ ಹಿನ್ನೆಲೆಯಲ್ಲಿ ಸರಳವಾಗಿ ಪರ್ಯಾಯ ಆಚರಣೆ ಮಾಡಲಾಗುತ್ತಿದ್ದು ಸಾಂಪ್ರದಾಯಿಕ ಆಚರಣೆಗಳಿಗೆ ಮಾತ್ರ ಮಹೋತ್ಸವ ಸೀಮಿತವಾಗಿದೆ. ರಾತ್ರಿ ಜೋಡುಕಟ್ಟೆಯಿಂದ ಪರ್ಯಾಯ ಮೆರವಣಿಗೆ ಆರಂಭಗೊಂಡಿದ್ದು ಕೊರೊನಾ ರೂಲ್ಸ್ ಪ್ರಕಾರ ಮೆರವಣಿಗೆಗೆ ನಡೀತು. ಸೀಮಿತ ಟ್ಯಾಬ್ಲೋ, ಕಲಾತಂಡಗಳು ಮೆರವಣಿಗೆಯಲ್ಲಿ ಭಾಗಿಯಾಗಿದ್ವು. ಉಡುಪಿ ಜಿಲ್ಲಾಡಳಿತ ಸಾರ್ವಜನಿಕರಿಗೆ ನಿರ್ಬಂಧ ಹೇರಿದೆ. ಟ್ಯಾಬ್ಲೋ ಪಲ್ಲಕ್ಕಿಯಲ್ಲಿ ಅಷ್ಟಮಠಾಧೀಶರ ಮೆರವಣಿಗೆ ನಡೆಯುತ್ತಿದೆ. ಕೊರೊನಾ ಹಿನ್ನೆಲೆ ಮಾನವ ಹೊರುವ ಪಲ್ಲಕ್ಕಿ ರದ್ದುಗೊಳಿಸಲಾಗಿದೆ.

ಈ ಬಾರಿ 50ಕ್ಕೂ ಅಧಿಕ ಟ್ಯಾಬ್ಲೋ ರದ್ದು ಮಾಡಲಾಗಿದೆ. ಕೇವಲ ಏಳು ಟ್ಯಾಬ್ಲೋ, ಚಂಡೆ, ಶಂಖ, ಡೋಲು, ಪಂಚವಾದ್ಯಗಳಿಗೆ ಮಾತ್ರ ಅವಕಾಶ ನೀಡಲಾಗಿದೆ. ಅಷ್ಟಮಠಾಧೀಶರು ಮೆರವಣಿಗೆಯಲ್ಲಿ ಸಾಗಿ ಬಂದು ದ್ವೈವಾರ್ಷಿಕ ಪೂಜಾಧಿಕಾರದಲ್ಲಿ ಭಾಗಿಯಾದ್ರು. ಪರ್ಯಾಯ ಪೀಠ ಏರಲಿರುವ ಕೃಷ್ಣಾಪುರ ಶ್ರೀ ಮೆರವಣಿಗೆಯ ಮುಂಚೂಣಿಯಲ್ಲಿ ಸಾಗಿಬಂದ್ರು. ಫಲಿಮಾರು, ಪೇಜಾವರ, ಕಾಣಿಯೂರು, ಸೋದೆ, ಶಿರೂರು ಶ್ರೀಗಳು ಭಾಗಿಯಾಗಿದ್ರು.

udupi paryaya

ಜೋಡುಕಟ್ಟೆಯಿಂದ ಪರ್ಯಾಯ ಮೆರವಣಿಗೆ

ಇದನ್ನೂ ಓದಿ: ಸ್ತಬ್ಧಚಿತ್ರಗಳ ಆಯ್ಕೆ ಕೆಲಸ ನಮ್ಮದಲ್ಲ, ಇಂಥ ಪತ್ರ ಬರೆಯುವುದು ಸರಿಯಲ್ಲ; ಮಮತಾ ಬ್ಯಾನರ್ಜಿ, ಸ್ಟಾಲಿನ್​ ಪತ್ರಕ್ಕೆ ಕೇಂದ್ರದ ಖಡಕ್​ ಪ್ರಕಟಣೆ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!