AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧಾರ್ಮಿಕ ನೆಲೆಯಲ್ಲಿ 13 ವರ್ಷ ದಾಟಿದರೆ ಪ್ರೌಢ ಎಂದು ಅರ್ಥ: ಹೈಕೋರ್ಟ್ ತೀರ್ಪು ಸ್ವಾಗತಿಸಿದ ಪೇಜಾವರ ಶ್ರೀ

ಧಾರ್ಮಿಕ ನೆಲೆಯಲ್ಲಿ ಹದಿಮೂರು ವರ್ಷ ದಾಟಿದ್ರೆ ಪ್ರೌಢ ಅಂತ ಅರ್ಥ. ಶಿರೂರು ಮಠಕ್ಕೆ ನೇಮಕವಾದ ವ್ಯಕ್ತಿಗೆ ಹದಿಮೂರು ವರ್ಷ ಆಗಿದೆ. ಹೀಗಾಗಿ ಧಾರ್ಮಿಕ ನೆಲೆಯಲ್ಲಿ ಇದು ಬಾಲ್ಯ ಸನ್ಯಾಸ ಅಂತ ಆಗುದಿಲ್ಲ ಎಂದು ಉಡುಪಿಯಲ್ಲಿ ಪೇಜಾವರ ಮಠದ ವಿಶ್ವಪ್ರಸನ್ನ ಸ್ವಾಮೀಜಿ ಹೇಳಿದ್ದಾರೆ.

ಧಾರ್ಮಿಕ ನೆಲೆಯಲ್ಲಿ 13 ವರ್ಷ ದಾಟಿದರೆ ಪ್ರೌಢ ಎಂದು ಅರ್ಥ: ಹೈಕೋರ್ಟ್ ತೀರ್ಪು ಸ್ವಾಗತಿಸಿದ ಪೇಜಾವರ ಶ್ರೀ
ಪೇಜಾವರ ಶ್ರೀ
TV9 Web
| Edited By: |

Updated on: Sep 29, 2021 | 6:17 PM

Share

ಉಡುಪಿ: ಇಲ್ಲಿನ ಅಷ್ಟಮಠಗಳಲ್ಲಿ ಒಂದಾದ ಶೀರೂರು ಮಠದ ನೂತನ ಪೀಠಾಧಿಪತಿ ನೇಮಕ, ಪೀಠಾಧಿಕಾರಿ ಆಯ್ಕೆ ವಿರುದ್ಧ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್) ಹೈಕೋರ್ಟ್ ವಜಾಗೊಳಿಸಿದೆ. ಪೇಜಾವರ ತೀರ್ಥರು ಹೈಕೋರ್ಟ್ ತೀರ್ಪನ್ನು ಸ್ವಾಗತಿಸಿದ್ದಾರೆ. ಧಾರ್ಮಿಕ ಗ್ರಂಥದಲ್ಲಿ ಪ್ರೌಢತೆ ವಯಸ್ಸನ್ನು ಹದಿಮೂರರ ಬಳಿಕ ಅಂತ ಗುರುತಿಸಲಾಗಿದೆ. ಹದಿಮೂರರ ಬಳಿಕ ಪ್ರೌಢ ಅಂತ ಮಹಾಭಾರತದಲ್ಲೇ ಉಲ್ಲೇಖ ಇದೆ. ಮೊದಲು ಎಂಟು ವರ್ಷದವರೆಗೆ ಬಾಲ್ಯ ಅಂತ ಇತ್ತು. ನಂತರ ಅಣಿಮಾಂಡವ್ಯ ಖುಷಿಗಳು ಅದನ್ನು 13 ವರ್ಷಕ್ಕೆ ವಿಸ್ತಾರ ಮಾಡಿದ್ರು. ಹೀಗಾಗಿ ಧಾರ್ಮಿಕ ನೆಲೆಯಲ್ಲಿ ಹದಿಮೂರು ವರ್ಷ ದಾಟಿದ್ರೆ ಪ್ರೌಢ ಅಂತ ಅರ್ಥ. ಶಿರೂರು ಮಠಕ್ಕೆ ನೇಮಕವಾದ ವ್ಯಕ್ತಿಗೆ ಹದಿಮೂರು ವರ್ಷ ಆಗಿದೆ. ಹೀಗಾಗಿ ಧಾರ್ಮಿಕ ನೆಲೆಯಲ್ಲಿ ಇದು ಬಾಲ್ಯ ಸನ್ಯಾಸ ಅಂತ ಆಗುದಿಲ್ಲ ಎಂದು ಉಡುಪಿಯಲ್ಲಿ ಪೇಜಾವರ ಮಠದ ವಿಶ್ವಪ್ರಸನ್ನ ಸ್ವಾಮೀಜಿ ಹೇಳಿದ್ದಾರೆ.

ಶೀರೂರು ಮಠಕ್ಕೆ 16 ವರ್ಷ ವಯಸ್ಸಿನ ಅನಿರುದ್ಧ ಸರಳತ್ತಾಯ ಎಂಬವರನ್ನು (ಪ್ರಸ್ತುತ ವೇದವರ್ಧನ ತೀರ್ಥ) ಪೀಠಾಧಿಪತಿಯಾಗಿ ನೇಮಿಸಿದ್ದನ್ನು ಪಿಐಎಲ್ ಮೂಲಕ ಪ್ರಶ್ನಿಸಲಾಗಿತ್ತು. ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್​ನ ವಿಭಾಗೀಯ ಪೀಠ ತಿರಸ್ಕರಿಸಿದೆ. ನ್ಯಾ. ಸತೀಶ್ ಚಂದ್ರ ಶರ್ಮ ಹಾಗೂ ಸಚಿನ್ ಶಂಕರ್ ಮಗದುಮ್ ಅವರು ಅರ್ಜಿ ತಿರಸ್ಕಾರ ಮಾಡಿ ತೀರ್ಪು ನೀಡಿದ್ದಾರೆ.

ಬೌದ್ಧ ಮತ್ತು ಇತರ ಧರ್ಮಗಳಲ್ಲಿ ಸಣ್ಣ ವಯಸ್ಸಿನವರು ಭಿಕ್ಕುಗಳಾಗಿದ್ದಾರೆ. ಯಾವ ವಯಸ್ಸಿನಲ್ಲಿ ಸನ್ಯಾಸ ಅಥವಾ ಭಿಕ್ಷೆ ನೀಡಬೇಕು ಎಂಬ ಬಗ್ಗೆ ಯಾವುದೇ ನಿಯಮಗಳಿಲ್ಲ ಎಂದು ಹೇಳಿದ್ದಾರೆ. ಧಾರ್ಮಿಕ ಪೀಠಗಳಿಗೆ ಪೀಠಾಧಿಪತಿಯಾಗಿ ಅಪ್ರಾಪ್ತರನ್ನು ನೇಮಿಸುವುದಕ್ಕೆ ನಿರ್ಬಂಧ ಹಾಕಲಾಗದು. ಅದು ಪರಂಪರೆ. ಹಾಗಾಗಿ ತಾನು ಆ ವಿಷಯದಲ್ಲಿ ಮಧ್ಯೆ ಪ್ರವೇಶಿಸುವುದಿಲ್ಲ ಎಂದು ಹೈಕೋರ್ಟ್ ನ್ಯಾಯಪೀಠ ಹೇಳಿದೆ.

800 ವರ್ಷಗಳಿಂದ ಅಷ್ಟ ಮಠಗಳಲ್ಲಿ ಪರಂಪರೆ ಜಾರಿಯಲ್ಲಿದೆ. ಈ ಪರಂಪರೆಯಲ್ಲಿ ಹೈಕೋರ್ಟ್ ಮಧ್ಯ ಪ್ರವೇಶಿಸುವುದಿಲ್ಲ ಎಂದು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಸತೀಶ್‌ಚಂದ್ರ ಶರ್ಮಾ ಮತ್ತು ನ್ಯಾ. ಸಚಿನ್‌ ಮಗದುಮ್ ಅವರಿದ್ದ ಪೀಠ ಮೇಲಿನ ತೀರ್ಪು ನೀಡಿತು. ಶಿರೂರು ಮಠಕ್ಕೆ ಅನಿರುದ್ಧ ಸರಳತ್ತಾಯರನ್ನು ನೇಮಕ ಮಾಡಲಾಗಿತ್ತು. ಸೋದೆ ವಾದಿರಾಜ ಮಠದಿಂದ ಪೀಠಾಧಿಪತಿ ನೇಮಕವಾಗಿತ್ತು.

ಇದನ್ನೂ ಓದಿ: ಪೀಠಾಧಿಪತಿಯಾಗಿ ಅಪ್ರಾಪ್ತರ ನೇಮಕ ಊರ್ಜಿತ, ಈ ಪರಂಪರೆಯಲ್ಲಿ ಮಧ್ಯೆ ಪ್ರವೇಶಿಸುವುದಿಲ್ಲ: ಹೈಕೋರ್ಟ್

ಇದನ್ನೂ ಓದಿ: ಶಿರೂರು ಮಠಕ್ಕೆ ನೂತನ ಯತಿಯಾಗಿ ಅಪ್ರಾಪ್ತರ ನೇಮಕಕ್ಕೆ ಆಕ್ಷೇಪ; ಹೈಕೋರ್ಟ್​ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲು

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್