AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಲ್ಲೂರು ಮೂಕಾಂಬಿಕಾ ದೇವಾಲಯದ ಪಕ್ಕದಲ್ಲೇ ರಾಷ್ಟ್ರೀಯ ಹೆದ್ದಾರಿ ಪ್ರಶ್ನಿಸಿ ಹೈಕೋರ್ಟ್​ಗೆ ಪಿಐಎಲ್

Kollur Mookambika Temple: ಕೊಲ್ಲೂರು ಮೂಕಾಂಬಿಕಾ ದೇವಾಲಯದ ಅತಿ ಸಮೀಪದಲ್ಲೇ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಮಾಡುವುದು, ಅದಕ್ಕಾಗಿ ಭೂಸ್ವಾಧೀನ ಮಾಡುವುದನ್ನು ಪ್ರಶ್ನಿಸಿ ಕರ್ನಾಟಕ ಹೈಕೋರ್ಟ್​​ನಲ್ಲಿ ಅರ್ಜಿ ಸಲ್ಲಿಸಲಾಗಿದೆ. ಈ ಕುರಿತು ವಿಚಾರಣೆ ನಡೆಸಿರುವ ಹೈಕೋರ್ಟ್, ಸದ್ಯದ ಮಟ್ಟಿಗೆ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಹೈಕೋರ್ಟ್ ಆದೇಶ ನೀಡಿದೆ.

ಕೊಲ್ಲೂರು ಮೂಕಾಂಬಿಕಾ ದೇವಾಲಯದ ಪಕ್ಕದಲ್ಲೇ ರಾಷ್ಟ್ರೀಯ ಹೆದ್ದಾರಿ ಪ್ರಶ್ನಿಸಿ ಹೈಕೋರ್ಟ್​ಗೆ ಪಿಐಎಲ್
ಹೈಕೋರ್ಟ್ & ಕೊಲ್ಲೂರು ಮೂಕಾಂಬಿಕಾ ದೇವಾಲಯ
Ramesha M
| Updated By: Ganapathi Sharma|

Updated on: Feb 21, 2024 | 1:59 PM

Share

ಬೆಂಗಳೂರು, ಫೆಬ್ರವರಿ 21: ಕರ್ನಾಟಕದ ಪ್ರಸಿದ್ಧ ಯಾತ್ರಾ ಸ್ಥಳಗಳಲ್ಲಿ ಒಂದಾಗಿರುವ ಕೊಲ್ಲೂರು ಮೂಕಾಂಬಿಕಾ ದೇವಾಲಯದ (Kollur Mookambika Temple) ಪಕ್ಕದಲ್ಲೇ ರಾಷ್ಟ್ರೀಯ ಹೆದ್ದಾರಿಗೆ (National Highway) ಭೂಸ್ವಾಧೀನ ಪ್ರಶ್ನಿಸಿ ಕರ್ನಾಟಕ ಹೈಕೋರ್ಟ್​ಗೆ (Karnataka High Court) ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ. ದೇವಾಲಯದ ಗೋಡೆಯ 3 ಅಡಿ ಪಕ್ಕದಲ್ಲೇ ಹೆದ್ದಾರಿಗೆ ಭೂಸ್ವಾಧೀನಕ್ಕೆ ಸೂಚಿಸಲಾಗಿದೆ. ಇದನ್ನು ಪ್ರಶ್ನಿಸಿ ಕೊಲ್ಲೂರಿನ ಗುರುಪ್ರಸಾದ್ ಎಂಬುವರು ಪಿಐಎಲ್ ಸಲ್ಲಿಸಿದ್ದಾರೆ.

ಸಾರ್ವಜನಿಕ ಹಿತಾಸಕ್ತಿಯ ಅರ್ಜಿಯನ್ನು ಸಿಜೆ ಪಿ.ಎಸ್. ದಿನೇಶ್ ಕುಮಾರ್, ನ್ಯಾ. ಟಿ.ಜಿ. ಶಿವಶಂಕರೇಗೌಡರಿದ್ದ ವಿಚಾರಣೆಗೆ ಕೈಗೆತ್ತಿಕೊಂಡಿದ್ದು, ಸದ್ಯ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಆದೇಶ ನೀಡಿದೆ.

ಯೋಜನೆಯೆ ಪ್ರಕಾರ ಕಾಮಗಾರಿ ನಡೆದರೆ, ದೇವಾಲಯದ ಗೋಡೆಯ 3 ಅಡಿ ಪಕ್ಕದಲ್ಲೇ ಹೆದ್ದಾರಿ ನಿರ್ಮಾಣವಾಗಲಿದೆ. ಹೆದ್ದಾರಿಯಲ್ಲಿ ಪ್ರತಿದಿನ ಅಂದಾಜು ಹದಿನೈದು ಸಾವಿರ ವಾಹನಗಳು ಹಾದುಹೋಗಲಿವೆ. ಇದರಿಂದ ಸಾವಿರಾರು ವರ್ಷಗಳ ಹಳೆಯ ದೇಗುಲಕ್ಕೆ ಅಪಾಯವಿದೆ ಎಂದು ಅರ್ಜಿದಾರರ ಪರ ವಕೀಲ ವೆಂಕಟೇಶ ದಳವಾಯಿ ವಾದ ಮಂಡನೆ ಮಾಡಿದೆ.

ಅರ್ಜಿದಾರರ ಪರ ವಾದವನ್ನು ಆಲಿಸಿದ ನ್ಯಾಯಪೀಠ, ಹೆದ್ದಾರಿ ಪ್ರಾಧಿಕಾರಕ್ಕೆ ನೋಟಿಸ್ ನೀಡಿ ವಿವರಣೆ ಕೇಳಿದೆ. ಜತೆಗೆ, ಯಥಾಸ್ಥಿತಿ ಕಾಯ್ದುಕೊಳ್ಳಲು ಆದೇಶ ನೀಡಿದೆ.

ಉಡುಪಿ ಜಿಲ್ಲೆ, ಬೈಂದೂರು ತಾಲೂಕಿನಲ್ಲಿರುವ ದೇಗುಲ

ಕೊಲ್ಲೂರು ಮೂಕಾಂಬಿಕಾ ದೇವಸ್ಥಾನವು ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರಿನಲ್ಲಿದೆ. ಇದು ಮಾತೃ ದೇವತೆಗೆ ಸಂಬಂಧಿಸಿದ ಹಿಂದೂ ದೇವಾಲಯ. ಇದು ಕೊಡಚಾದ್ರಿ ಬೆಟ್ಟಗಳ ತಪ್ಪಲಿನಲ್ಲಿ ಸೌಪರ್ಣಿಕಾ ನದಿಯ ದಕ್ಷಿಣ ದಡದಲ್ಲಿದೆ. ಗೋಕರ್ಣ ಮತ್ತು ಕನ್ಯಾಕುಮಾರಿ ನಡುವಿನ ಭೂಮಿಯಲ್ಲಿ ನೆಲೆಗೊಂಡಿದ್ದು, ಋಷಿ ಪರಶುರಾಮರಿಂದ ಪ್ರತಿಷ್ಠಾಪಿಸಲ್ಪಟ್ಟದ್ದು ಎಂಬ ನಂಬಿಕೆ ಇದೆ. ದೇಗುಲದಲ್ಲಿ ಮೂಕಾಂಬಿಕಾ ದೇವಿಯ ನಾಲ್ಕು ಕೈಗಳ ಪಂಚಲೋಹದ ವಿಗ್ರಹವನ್ನು ಸ್ಥಾಪಿಸಲಾಗಿದೆ.

ಇದನ್ನೂ ಓದಿ: 10 ವರ್ಷಗಳಿಂದ ಮತ ಹಾಕಿದ ನಮಗಾಗಿ ನೀವು ಮಾಡಿದ್ದೇನು? ಶೋಭಾ ಕರಂದ್ಲಾಜೆಗೆ ಮೀನುಗಾರರು ಕ್ಲಾಸ್

ದೇವಾಲಯದಲ್ಲಿ ಗಣಪತಿ, ಶಿವ, ವಿಷ್ಣು, ಹನುಮಂತ, ಸುಬ್ರಹ್ಮಣ್ಯ, ವೀರಭದ್ರ ಮತ್ತು ನಾಗದೇವತೆಗಳ ಗುಡಿಗಳಿವೆ. ಫಾಲ್ಗುಣ ಮಾಸದ ರಥೋತ್ಸವ ಮತ್ತು ನವರಾತ್ರಿ ಈ ದೇವಾಲಯದ ಪ್ರಮುಖ ಹಬ್ಬಗಳಾಗಿವೆ.

ಮೂಕಾಂಬಿಕಾ ದೇವಸ್ಥಾನದ ಹೆಸರಿನಲ್ಲಿ ನಕಲಿ ಟ್ರಸ್ಟ್‌!

ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ಹೆಸರಿನಲ್ಲಿ ನಕಲಿ ಟ್ರಸ್ಟ್‌ ಸ್ಥಾಪಿಸಲಾಗಿದ್ದು, ಸಾಮಾಜಿಕ ಜಾಲತಾಣಗಳ ಮೂಲಕ ಭಕ್ತರಿಗೆ ನಕಲಿ ಲಿಂಕ್‌ಗಳನ್ನು ಹರಿಬಿಟ್ಟು ವಂಚನೆ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಬೆಂಗಳೂರಿನ ಇಬ್ಬರು ನಿವಾಸಿಗಳು ಇದೀಗ ನಕಲಿ ಟ್ರಸ್ಟ್ ವಿರುದ್ಧ ಕ್ರಮ ಕೋರಿ ಕೊಲ್ಲೂರು ಪೊಲೀಸರಿಗೆ ಮನವಿ ಮಾಡಿರುವ ಬಗ್ಗೆ ಮಾಧ್ಯಮವೊಂದು ವರದಿ ಮಾಡಿದೆ. ಕೇರಳದ ಎರ್ನಾಕುಲಂನಲ್ಲಿ ನಕಲಿ ಟ್ರಸ್ಟ್ ರಚನೆಯಾಗಿದೆ ಎನ್ನಲಾಗಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ