Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪರಾರಿಯಾಗಲು ಯತ್ನಿಸಿದ ಗರುಡ ಗ್ಯಾಂಗಿನ ಇಸಾಕ್​ಗೆ ಗುಂಡೇಟು ಕೊಟ್ಟು ಹಿಡಿದ ಪೊಲೀಸ್ರು

ನಟೋರಿಯಸ್ ಗರುಡ ಗ್ಯಾಂಗ್ ಸದಸ್ಯ ಇಸಾಕ್ ಮೇಲೆ ಮಣಿಪಾಲ​ ಪೊಲೀಸರು ಫೈರಿಂಗ್ ಮಾಡಿರುವಂತಹ ಘಟನೆ ಉಡುಪಿ ತಾಲೂಕಿನ ಹಿರಿಯಡ್ಕದಲ್ಲಿ ನಡೆದಿದೆ. ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸುವಾಗ ಇನ್ಸ್​​ಪೆಕ್ಟರ್ ದೇವರಾಜ್​ರಿಂದ ಫೈರಿಂಗ್ ಮಾಡಿದ್ದು, ಸದ್ಯ ಇಸಾಕ್​​ನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಮಾ.4ರಂದು ಬಂಧಿಸಲು ಹೋದಾಗ ಎಸ್ಕೇಪ್ ಆಗಿದ್ದ.

ಪರಾರಿಯಾಗಲು ಯತ್ನಿಸಿದ ಗರುಡ ಗ್ಯಾಂಗಿನ ಇಸಾಕ್​ಗೆ ಗುಂಡೇಟು ಕೊಟ್ಟು ಹಿಡಿದ ಪೊಲೀಸ್ರು
ಪರಾರಿಯಾಗಲು ಯತ್ನಿಸಿದ ಗರುಡ ಗ್ಯಾಂಗಿನ ಇಸಾಕ್​ಗೆ ಗುಂಡೇಟು ಕೊಟ್ಟು ಹಿಡಿದ ಪೊಲೀಸ್ರು
Follow us
ಪ್ರಜ್ವಲ್ ಅಮೀನ್​, ಉಡುಪಿ
| Updated By: ಗಂಗಾಧರ​ ಬ. ಸಾಬೋಜಿ

Updated on: Mar 12, 2025 | 9:04 PM

ಉಡುಪಿ, ಮಾರ್ಚ್​​ 12: ಪೊಲೀಸರಿಗೆ ಚೆಳ್ಳೆಹಣ್ಣು ತಿನ್ನಿಸಿ ಪರಾರಿಯಾಗಲು ಯತ್ನಿಸಿದ್ದ ನಟೋರಿಯಸ್ ಗರುಡ ಗ್ಯಾಂಗ್ (Garud Gang) ಸದಸ್ಯ ಇಸಾಕ್​ ಮೇಲೆ ಪೊಲೀಸರು ಫೈರಿಂಗ್ (shootout) ಮಾಡಿರುವಂತಹ ಘಟನೆ ಉಡುಪಿ ತಾಲೂಕಿನ ಹಿರಿಯಡ್ಕದಲ್ಲಿ ನಡೆದಿದೆ. ಮಣಿಪಾಲ ಇನ್ಸ್​​ಪೆಕ್ಟರ್ ದೇವರಾಜ್​ ಫೈರಿಂಗ್ ಮಾಡಿದ್ದಾರೆ. ಸದ್ಯ ಗಾಯಗೊಂಡ ಇಸಾಕ್​​ನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

ನಟೋರಿಯಸ್ ಗರುಡ ಗ್ಯಾಂಗ್​​ನ ಮೋಸ್ಟ್ ವಾಂಟೆಡ್ ಕ್ರಿಮಿನಲ್​​ ಇಸಾಕ್​ನನ್ನು ದರೋಡೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ನೆಲಮಂಗಲ ಪೊಲೀಸರು ಬೇಟೆ ಆಡಿದ್ದರು. ಮಾ. 4 ರಂದು ಬಂಧಿಸಲು ಬಂದ ಪೊಲೀಸರಿಗೆ ಚೆಳ್ಳೆಹಣ್ಣು ತಿನ್ನಿಸಿ ತನ್ನ ಜೀಪ್​​ನಲ್ಲಿ ಹಲವು ವಾಹನಗಳಿಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ.

ಇದನ್ನೂ ಓದಿ: ಮಣಿಪಾಲ: ಸಿನಿಮಾ ಸ್ಟೈಲ್​ನಲ್ಲಿ ಪೊಲೀಸರ ರೋಚಕ ಚೇಸಿಂಗ್, ಗರುಡ ಗ್ಯಾಂಗ್​ನ ಕ್ರಿಮಿನಲ್ ಅರೆಸ್ಟ್

ಇದನ್ನೂ ಓದಿ
Image
ಬಾಗಲಕೋಟೆ: ಕುರಿ ಕಳ್ಳತನ ಮಾಡಲು ಬಂದು ಕುರಿಗಾಯಿಯನ್ನೇ ಕೊಂದರು
Image
ಬಾಲಕಿಯನ್ನು ಪುಸಲಾಯಿಸಿ ಗರ್ಭಿಣಿ ಮಾಡಿದ 2 ಮಕ್ಕಳ ತಂದೆ ಅರೆಸ್ಟ್
Image
ಸಿನಿಮಾ ನೋಡಿ ಕೊಲೆ ಮಾಡಿದವ ಪ್ರತಿಯತಮೆ ಸಂಪರ್ಕಕ್ಕೆ ಬಂದ ಮೇಲೆ ಅರೆಸ್ಟಾದ
Image
ಸಿನಿಮಾ ಸ್ಟೈಲ್​ನಲ್ಲಿ ಪೊಲೀಸ್ ಚೇಸಿಂಗ್, ಗರುಡ ಗ್ಯಾಂಗ್​ನ ಕ್ರಿಮಿನಲ್ ಬಂಧನ

ಮಣಿಪಾಲದ ಮಣ್ಣಪಳ್ಳದ ನಿರ್ಜನ ಪ್ರದೇಶದಲ್ಲಿ ಜೀಪ್ ನಿಲ್ಲಿಸಿ ಪರಾರಿಯಾಗಿದ್ದ. ಇದೀಗ 8 ದಿನಗಳ ಬಳಿಕ ಪೊಲೀಸರಿಗೆ ಇಸಾಕ್ ಪತ್ತೆಯಾಗಿದ್ದ. ಹೀಗಾಗಿ ಬಂಧಿಸಲು ಯತ್ನಿಸಿದಾಗ ಮತ್ತೆ ಪರಾರಿಯಾಗಲು ಯತ್ನಿಸಿದ್ದು, ಈ ವೇಳೆ ಶೂಟ್ ಮಾಡಿ ಆರೋಪಿಯನ್ನ ಬಂಧಿಸಲಾಗಿದೆ.

ಪೊಲೀಸರ ರೋಚಕ ಚೆಸಿಂಗ್

ಇಸಾಕ್ ಬೆನ್ನು ಬಿದ್ದಿದ್ದ ಬೆಂಗಳೂರಿನ ನೆಲಮಂಗಲ ಠಾಣೆ ಪೊಲೀಸರು ಆರೋಪಿ ಜಾಡು ಹಿಡಿದು ಉಡುಪಿಯ ಮಣಿಪಾಲಕ್ಕೆ ಬಂದಿದ್ದರು. ಈ ವೇಳೆ ಕಾರಿನಲ್ಲಿ ಯುವತಿಯೋರ್ವಳೊಂದಿಗೆ ಜಾಲಿ ಜಾಲಿ ಮಾಡಲು ಮಣಿಪಾಲಕ್ಕೆ ಬಂದಿದ್ದ ಇಸಾಕ್​​ ಎಂಬ ನಟೋರಿಯಸ್ ಕ್ರಿಮಿನಲ್ ಪೊಲೀಸರನ್ನ ಕಂಡ ಕೂಡಲೇ ತನ್ನ ಕಾರಿನಲ್ಲಿ ಎಸ್ಕೇಪ್ ಆಗೋದಕ್ಕೆ ಯತ್ನಿಸಿದ್ದ. ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ರಸ್ತೆಯಲ್ಲಿ ಸ್ಪೀಡ್ ಆಗಿ ಗಾಡಿ ಚಲಾಯಿಸಿ ನಾಲ್ಕು ಕಾರು ಹಾಗೂ ಒಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಪರಾರಿಯಾಗಲು ಯತ್ನಿಸಿದ್ದ.

ಈ ವೇಳೆ ನೆಲಮಂಗಲ ಪೊಲೀಸರು ಮಣಿಪಾಲ ಪೊಲೀಸರಿಗೆ ಮಾಹಿತಿ ನೀಡುತ್ತಾರೆ. ಕೂಡಲೇ ಕಾರ್ಯಪ್ರವೃತ್ತರಾದ ಮಣಿಪಾಲ ಪೊಲೀಸ್ ಇನ್ಸ್ಪೆಕ್ಟರ್ ದೇವರಾಜ್ ನೇತೃತ್ವದ ತಂಡ ಆರೋಪಿಯನ್ನ ಸಾಹಸಮಯವಾಗಿ ಚೇಸ್ ಮಾಡಿ ಮಣಿಪಾಲದ ಮಣ್ಣಪಳ್ಳದ ಬಳಿ ಕಾರಿನೊಂದಿಗೆ ಸೆರೆ ಹಿಡಿದಿದ್ದಾರೆ. ಒಂದಿಷ್ಟು ಸೆಕೆಂಡ್ ಲೇಟ್ ಆಗಿದ್ರೆ, ಈ ಕ್ರಿಮಿನಲ್ ಮಿಸ್ ಆಗ್ತಿದ್ದ! ಆದರೆ ಮಣಿಪಾಲ ಪೊಲೀಸ್ ಇನ್ಸ್ಪೆಕ್ಟರ್ ದೇವರಾಜ್ ಅವರ ತ್ವರಿತ ಕಾರ್ಯಾಚರಣೆ ಫಲ ನೀಡಿದೆ.

ಇದನ್ನೂ ಓದಿ: ಉಡುಪಿಯಲ್ಲಿ ದುಬೈ ದೇಶದ ಕಾರುಗಳ ಓಡಾಟ: ಫೋಟೋಸ್​ ನೋಡಿ

ಗರುಡ ಗ್ಯಾಂಗ್, ಈ ಹೆಸರು ಕೇಳಿದರೆ ಉಡುಪಿ-ಮಂಗಳೂರು ಬೆಲ್ಟ್ನಲ್ಲಿ ಯಾರಿಗೂ ನಿದ್ದೆ ಹೋಗಲ್ಲ. ಕಳ್ಳತನ, ಮಾದಕವಸ್ತು ಗ್ಯಾಂಗ್, ಮರ್ಡರ್ ಕೇಸ್​​ಗಳಲ್ಲಿ ತೊಡಗಿಸಿಕೊಂಡಿರೋ ಈ ಗ್ಯಾಂಗ್ನ ಹಿಂದೆ ಇರೋದು ಇಸ್ಸಾಕ್ ತರದ ಕ್ರಿಮಿನಲ್ಸ್. ಇವರ ಸ್ಟೈಲ್​​ನಲ್ಲಿಯೇ ಪೊಲೀಸರಿಗೆ ಚೆಳ್ಳೆ ಹಣ್ಣು ತಿನ್ನಿಸಿ ಸಲೀಸಾಗಿ ಎಸ್ಕೇಪ್ ಆಗೋದು. ಆದರೆ ಮಣಿಪಾಲ ಪೊಲೀಸರ ಮುಂದೆ ಈ ಆಟ ನಡೆದಿಲ್ಲ ಈ ಸಲ ಸಿಕ್ಕಿಬಿದ್ದಿದ್ದ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

VIDEO: ರಾಕಿ ಭಾಯ್ ಸ್ಟೈಲ್​ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್​ಗೆ ಕನ್ನಡಿಗನ ಎಂಟ್
VIDEO: ರಾಕಿ ಭಾಯ್ ಸ್ಟೈಲ್​ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್​ಗೆ ಕನ್ನಡಿಗನ ಎಂಟ್
ಹತ್ತಿರದ ಸಂಬಂಧಿಯೊಬ್ಬರ ಸಾವಿನ ಕಾರಣ ಪರಮೇಶ್ವರ್ ಭಾಗಿಯಾಗಿರಲಿಲ್ಲ: ಪಾಟೀಲ್
ಹತ್ತಿರದ ಸಂಬಂಧಿಯೊಬ್ಬರ ಸಾವಿನ ಕಾರಣ ಪರಮೇಶ್ವರ್ ಭಾಗಿಯಾಗಿರಲಿಲ್ಲ: ಪಾಟೀಲ್
ಕಾರಿನ ಮೇಲೆ ಬಿದ್ದ ಲಾರಿ: ಭಯಾನಕ ಅಪಘಾತ ಡ್ರೋನ್ ಕ್ಯಾಮರಾದಲ್ಲಿ ಕಂಡಿದ್ದು
ಕಾರಿನ ಮೇಲೆ ಬಿದ್ದ ಲಾರಿ: ಭಯಾನಕ ಅಪಘಾತ ಡ್ರೋನ್ ಕ್ಯಾಮರಾದಲ್ಲಿ ಕಂಡಿದ್ದು
ಕಳ್ಳತನ ಮಾಡಿದ ಬಳಿಕ ತಮ್ಮ ಕಾರನ್ನೇ ಬೆಂಕಿಹಚ್ಚಿ ಸುಟ್ಟುಬಿಡುವ ಖದೀಮರು
ಕಳ್ಳತನ ಮಾಡಿದ ಬಳಿಕ ತಮ್ಮ ಕಾರನ್ನೇ ಬೆಂಕಿಹಚ್ಚಿ ಸುಟ್ಟುಬಿಡುವ ಖದೀಮರು
ದರ್ಶನ್ ನಟನೆಯ ‘ಡೆವಿಲ್’ ಚಿತ್ರಕ್ಕೆ ಮೈಸೂರಿನಲ್ಲಿ ಕೊನೆಯ ದಿನದ ಶೂಟಿಂಗ್
ದರ್ಶನ್ ನಟನೆಯ ‘ಡೆವಿಲ್’ ಚಿತ್ರಕ್ಕೆ ಮೈಸೂರಿನಲ್ಲಿ ಕೊನೆಯ ದಿನದ ಶೂಟಿಂಗ್
ಅಪಘಾತದಲ್ಲಿ ಜಖಂಗೊಂಡ ಕಾರಲ್ಲಿ ಮಲಗಿದ್ದರೂ ಚಾಲಕ ಅಪಾಯದಿಂದ ಪಾರು
ಅಪಘಾತದಲ್ಲಿ ಜಖಂಗೊಂಡ ಕಾರಲ್ಲಿ ಮಲಗಿದ್ದರೂ ಚಾಲಕ ಅಪಾಯದಿಂದ ಪಾರು
IPL 2025: ಐಪಿಎಲ್ ಆರಂಭಕ್ಕೂ ಮುನ್ನ ಹಲವು ಆಟಗಾರರು ಗಾಯಾಳು
IPL 2025: ಐಪಿಎಲ್ ಆರಂಭಕ್ಕೂ ಮುನ್ನ ಹಲವು ಆಟಗಾರರು ಗಾಯಾಳು
ಕ್ಯಾಂಟರ್ ಚಾಲಕ ಪಾನಮತ್ತನಾಗಿದ್ದ, ಅಪಘಾತದಲ್ಲಿ ಆಟೋರಿಕ್ಷಾವೊಂದು ಅಪ್ಪಚ್ಚಿ
ಕ್ಯಾಂಟರ್ ಚಾಲಕ ಪಾನಮತ್ತನಾಗಿದ್ದ, ಅಪಘಾತದಲ್ಲಿ ಆಟೋರಿಕ್ಷಾವೊಂದು ಅಪ್ಪಚ್ಚಿ
ಪ್ರವಾಸಿಗರ ಗಮನಕ್ಕೆ: ಚಂದ್ರದ್ರೋಣ ಪರ್ವತದ ಪ್ರವಾಸಿ ತಾಣಗಳಿಗೆ ನಿರ್ಬಂಭ
ಪ್ರವಾಸಿಗರ ಗಮನಕ್ಕೆ: ಚಂದ್ರದ್ರೋಣ ಪರ್ವತದ ಪ್ರವಾಸಿ ತಾಣಗಳಿಗೆ ನಿರ್ಬಂಭ
Daily Devotional: ಬ್ರಹ್ಮ ಮುಹೂರ್ತದ ಮಹತ್ವ ತಿಳಿಯಿರಿ
Daily Devotional: ಬ್ರಹ್ಮ ಮುಹೂರ್ತದ ಮಹತ್ವ ತಿಳಿಯಿರಿ