AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Udupi News: ಮಣಿಪಾಲದಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಮನೆ ಮೇಲೆ ಪೊಲೀಸರ ದಾಳಿ; 5 ಮಂದಿ ಯುವತಿಯರ ರಕ್ಷಣೆ

ಉಡುಪಿ ತಾಲೂಕಿನ ಶಿವಳ್ಳಿ ಗ್ರಾಮದ ವಿದ್ಯಾರತ್ನ ನಗರದ ಭವಾನಿ ಎಂಬ ಹೆಸರಿನ ಮನೆಯಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಇಬ್ಬರನ್ನು ಮಣಿಪಾಲ ಪೊಲೀಸರು(Manipal Police) ಬಂಧಿಸಿದ್ದು, ಐವರು ಯುವತಿಯರ ರಕ್ಷಣೆ ಮಾಡಿದ್ದಾರೆ.

Udupi News: ಮಣಿಪಾಲದಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಮನೆ ಮೇಲೆ ಪೊಲೀಸರ ದಾಳಿ; 5 ಮಂದಿ ಯುವತಿಯರ ರಕ್ಷಣೆ
ಮಣಿಪಾಲದಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಮನೆ ಮೇಲೆ ಪೊಲೀಸರ ದಾಳಿ
Follow us
ಪ್ರಜ್ವಲ್ ಅಮೀನ್​, ಉಡುಪಿ
| Updated By: ಕಿರಣ್ ಹನುಮಂತ್​ ಮಾದಾರ್

Updated on:Jul 22, 2023 | 3:16 PM

ಉಡುಪಿ, ಜು.22: ತಾಲೂಕಿನ ಶಿವಳ್ಳಿ ಗ್ರಾಮದ ವಿದ್ಯಾರತ್ನ ನಗರದ ಭವಾನಿ ಎಂಬ ಹೆಸರಿನ ಮನೆಯಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಖಚಿತ ಮಾಹಿತಿ ಮೇರೆಗೆ ಮಣಿಪಾಲ ಪೊಲೀಸರು(Manipal Police) ದಾಳಿ ಮಾಡಿದ್ದರು. ಈ ವೇಳೆ ಅನೈತಿಕ ಚಟುವಟಿಕೆಯಲ್ಲಿ ತೊಡಗಿದ್ದ 5 ಮಂದಿ ಯುವತಿಯರನ್ನು ರಕ್ಷಣೆ ಮಾಡಲಾಗಿದ್ದು, ಈ ದಂಧೆ ನಡೆಸುತ್ತಿದ್ದ ಅಬ್ದುಲ್‌ ಸಲಾಮತ್‌, ಚಂದ್ರಹಾಸ ಎಂಬುವವರನ್ನು ವಶಕ್ಕೆ ಪಡೆಯಲಾಗಿದೆ. ಇನ್ನು ರಕ್ಷಣೆ ಮಾಡಲ್ಪಟ್ಟ 3 ಜನ ಬೆಂಗಳೂರು ಮೂಲದವರಾಗಿದ್ದು, ಇನ್ನಿಬ್ಬರು ಮಹಾರಾಷ್ಟ್ರದ ನಾಸಿಕ್‌ ಹಾಗೂ ಮುಂಬೈ ವಾಸಿಗಳಾಗಿದ್ದಾರೆ. ಈ ದಂಧೆಗೆ ಬಳಸಿದ 4 ಮೊಬೈಲ್‌ ಫೋನ್‌, 1 ಕಾರು , 2 ಮೋಟಾರ್‌ ಸೈಕಲ್‌ ಹಾಗೂ 10 ಸಾವಿರ ರೂಪಾಯಿಯನ್ನು ಜಪ್ತಿ ಮಾಡಲಾಗಿದ್ದು, ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹೈಟೆಕ್ ಸ್ಪಾ ಕೇಂದ್ರಗಳಲ್ಲಿ ವೇಶ್ಯಾವಾಟಿಕೆ

ಇನ್ನು ಕಳೆದ ತಿಂಗಳು ಶಿವಮೊಗ್ಗ ನಗರದ ಹೈಟೆಕ್ ಸ್ಪಾ ಕೇಂದ್ರಗಳಲ್ಲಿ ವೇಶ್ಯಾವಾಟಿಕೆ ನಡೆಯುತ್ತಿರುವುದು ಬೆಳಕಿಗೆ ಬಂದಿತ್ತು. ಹೌದು ನಗರದ ಸ್ಪಾಗಳಲ್ಲಿ ವೇಶ್ಯಾವಾಟಿಕೆ ನಡೆಯುತ್ತಿರುವ ಮಾಹಿತಿ ಮೇರೆಗೆ ಶಿವಮೊಗ್ಗ ಮಹಿಳಾ ಪೊಲೀಸರು ದಾಳಿ ನಡೆಸಿ, 6 ಯುವತಿಯರನ್ನ ರಕ್ಷಣೆ ಮಾಡಿದ್ದರು. ಬಳಿಕ ಅವರನ್ನ ಮಹಿಳಾ ಸಾಂತ್ವಾನ ಕೇಂದ್ರಕ್ಕೆ ಸೇರಿಸಲಾಗಿತ್ತು. ಹಲವು ವರ್ಷಗಳಿಂದ ನಗರದಲ್ಲಿ ತಲೆಎತ್ತುತ್ತಿರುವ ಹೈಟೇಕ್​ ಸಲೂನ್​, ಸ್ಪಾ ಗಳಲ್ಲಿ ಇದೀಗ ಇಂತಹ ದಂಧೆಗಳನ್ನು ನಡೆಸಲಾಗುತ್ತಿದ್ದು, ಯುವತಿಯರನ್ನ ಬಳಸಿಕೊಳ್ಳಲಾಗುತ್ತದೆ. ಇದೀಗ ಶಿವಮೊಗ್ಗ ಬಳಿಕ, ಉಡುಪಿಯಲ್ಲೂ ವೇಶ್ಯಾವಾಟಿಕೆ ಬೆಳಕಿಗೆ ಬಂದಿದ್ದು, ಈ ಕುರಿತು ಪೊಲೀಸರು ಕಠಿಣ ಕ್ರಮ ಕೈಗೊಳ್ಳಬೇಕಾಗಿದೆ.

ಇದನ್ನೂ ಓದಿ:Bengaluru News: ಯುವತಿಯರನ್ನು ವೇಶ್ಯಾವಾಟಿಕೆ ದೂಡಿದ್ದ ಆರೋಪಿಗಳ ಬಂಧನ: 26 ಯುವತಿಯರ ರಕ್ಷಣೆ

ಏಕಾಏಕಿ ಬ್ರೇಕ್ ಹಾಕಿದ ಬಸ್; ಹಿಂಬದಿಯಿಂದ ಗುದ್ದಿದ ಬೊಲೆರೋ ಪಿಕಪ್

ಉತ್ತರ ಕನ್ನಡ: ಜಿಲ್ಲೆ ಕಾರವಾರ ತಾಲೂಕಿನ ಅರಗಾದಲ್ಲಿ ಹುಬ್ಬಳ್ಳಿಯಿಂದ ಮಡಗಾಂವ್​ಗೆ ಹೊರಟಿದ್ದ ಸರ್ಕಾರಿ ಬಸ್ ಏಕಾಏಕಿ ಬ್ರೇಕ್ ಹಾಕಿದ ಪರಿಣಾಮ, ಹಿಂಬದಿಯಿಂದ ಬರುತ್ತಿದ್ದ ಬೊಲೆರೋ ಪಿಕ್ಅಪ್ ವಾಹನ ಬಸ್​ಗೆ ಗುದ್ದಿದೆ. ಬೊಲೆರೋ ಚಾಲಕ ಫಾರೂಕ್ ಹಾನಗಲ್ (25) ಎಂಬಾತನಿಗೆ ಗಾಯಗಳಾಗಿದ್ದು, ಆತನನ್ನ ಆಸ್ಪತ್ರೆಗೆ ಸೇರಿಸಲಾಗಿದೆ. ಇನ್ನು ಅಪಘಾತದಲ್ಲಿ ಬೊಲೆರೋ ವಾಹನದ ಮುಂಭಾಗ ಸಂಪೂರ್ಣ ಜಖಂ ಆದರೆ, ಬಸ್​ನ ಹಿಂಬದಿಯ ಒಂದು ಭಾಗ ಜಖಂ ಆಗಿದೆ. ಕೂಡಲೇ ಪೊಲೀಸರು ವಾಹನವನ್ನ ಪಕ್ಕಕ್ಕೆ ಇರಿಸಿ, ಸಂಚಾರ ಸುಗಮಗೊಳಿಸಿದ್ದಾರೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 3:14 pm, Sat, 22 July 23

ಶಿವಣ್ಣ, ದರ್ಶನ್ ಅವರನ್ನು ನಿಂದಿಸಿದ್ದು ನಿಜವೇ? ಮನು ಹೇಳಿದ್ದೇನು?
ಶಿವಣ್ಣ, ದರ್ಶನ್ ಅವರನ್ನು ನಿಂದಿಸಿದ್ದು ನಿಜವೇ? ಮನು ಹೇಳಿದ್ದೇನು?
ಕಪ್​ಗೆ ಮುತ್ತಿಡಲು ಶಿವಕುಮಾರ್ ಆರ್​ಸಿಬಿ ತಂಡದ ಆಟಗಾರನೇ? ಭಾಸ್ಕರ್ ರಾವ್
ಕಪ್​ಗೆ ಮುತ್ತಿಡಲು ಶಿವಕುಮಾರ್ ಆರ್​ಸಿಬಿ ತಂಡದ ಆಟಗಾರನೇ? ಭಾಸ್ಕರ್ ರಾವ್
ನನ್ನ ಆರೋಗ್ಯ ಚೆನ್ನಾಗಿದೆ, ಅದನ್ನು ದೇವರು ನೋಡ್ಕೋತಾನೆ: ಕುಮಾರಸ್ವಾಮಿ
ನನ್ನ ಆರೋಗ್ಯ ಚೆನ್ನಾಗಿದೆ, ಅದನ್ನು ದೇವರು ನೋಡ್ಕೋತಾನೆ: ಕುಮಾರಸ್ವಾಮಿ
ವಿರಾಟ್ ಕೊಹ್ಲಿ ಏನು ದೇವರಾ: ಮೃತ ಪ್ರಜ್ವಲ್ ತಾಯಿ ಆಕ್ರೋಶದ ಮಾತು
ವಿರಾಟ್ ಕೊಹ್ಲಿ ಏನು ದೇವರಾ: ಮೃತ ಪ್ರಜ್ವಲ್ ತಾಯಿ ಆಕ್ರೋಶದ ಮಾತು
ಸರ್ಕಾರದಿಂದ ನೆರವು ಸಿಕ್ಕಿಲ್ಲ, ಅಧಿಕಾರಿಗಳು ಮನಗೆ ಬಂದಿಲ್ಲ:ಶಿವಲಿಂಗನ ತಾಯಿ
ಸರ್ಕಾರದಿಂದ ನೆರವು ಸಿಕ್ಕಿಲ್ಲ, ಅಧಿಕಾರಿಗಳು ಮನಗೆ ಬಂದಿಲ್ಲ:ಶಿವಲಿಂಗನ ತಾಯಿ
ಕಾಶ್ಮೀರದ ಮೊದಲ ವಂದೇ ಭಾರತ್ ರೈಲು ಅಂಜಿ ಸೇತುವೆ ದಾಟಿದ ಅದ್ಭುತ ವಿಡಿಯೋ
ಕಾಶ್ಮೀರದ ಮೊದಲ ವಂದೇ ಭಾರತ್ ರೈಲು ಅಂಜಿ ಸೇತುವೆ ದಾಟಿದ ಅದ್ಭುತ ವಿಡಿಯೋ
ನಾನು ಪುನಃ ಜೈಲಿಗೆ ಹೋಗುವುದನ್ನು ನೋಡಲು ಬಹಳ ಜನ ಕಾಯುತ್ತಿದ್ದರು: ಕುಲಕರ್ಣಿ
ನಾನು ಪುನಃ ಜೈಲಿಗೆ ಹೋಗುವುದನ್ನು ನೋಡಲು ಬಹಳ ಜನ ಕಾಯುತ್ತಿದ್ದರು: ಕುಲಕರ್ಣಿ
ಕೇದಾರನಾಥಕ್ಕೆ ಹೋಗುವಾಗ ರಸ್ತೆಯಲ್ಲೇ ಲ್ಯಾಂಡ್ ಆದ ಹೆಲಿಕಾಪ್ಟರ್
ಕೇದಾರನಾಥಕ್ಕೆ ಹೋಗುವಾಗ ರಸ್ತೆಯಲ್ಲೇ ಲ್ಯಾಂಡ್ ಆದ ಹೆಲಿಕಾಪ್ಟರ್
ಮೃತಪ್ರೇಮಿಯನ್ನು ಮಾತಾಡುವ ನೆಪದಲ್ಲಿ ತೋಟದ ಮನೆಗೆ ಕರೆಸಲಾಗಿತ್ತು
ಮೃತಪ್ರೇಮಿಯನ್ನು ಮಾತಾಡುವ ನೆಪದಲ್ಲಿ ತೋಟದ ಮನೆಗೆ ಕರೆಸಲಾಗಿತ್ತು
ಆಟಗಾರರೊಂದಿಗೆ ತಮ್ಮ ಮಕ್ಕಳ ಫೋಟೋಗಾಗಿ ನಮ್ಮ ಮಕ್ಕಳ ಬಲಿ ಪಡೆದರು: ಲಕ್ಷ್ಮಣ
ಆಟಗಾರರೊಂದಿಗೆ ತಮ್ಮ ಮಕ್ಕಳ ಫೋಟೋಗಾಗಿ ನಮ್ಮ ಮಕ್ಕಳ ಬಲಿ ಪಡೆದರು: ಲಕ್ಷ್ಮಣ