AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೆಹರು ತನ್ನನ್ನು ಹಿಂದೂ ಎಂದು ಕರೆಯದಂತೆ ಹೇಳಿದ್ದರು; ಇವತ್ತಿಗೂ ಕಾಂಗ್ರೆಸ್ಸಿನಲ್ಲಿ ಅದೇ ಪರಂಪರೆ ಮುಂದುವರೆದಿದೆ -ಸಚಿವ ಸುನಿಲ್ ಕುಮಾರ್

ಕನ್ನಡ ಸಂಸ್ಕೃತಿ ಸಚಿವರಾಗಿದ್ದ ಬಿ.ಟಿ.ಲಲಿತಾ ನಾಯಕ್ ದೈವಾರಾಧಕರಿಗೆ ಮಾಸಾಶನ ವಿರೋಧಿಸಿದ್ದರು. ದೇವಸ್ಥಾನದಲ್ಲಿ ತೀರ್ಥ ತೆಗೆದುಕೊಳ್ಳಬೇಡಿ ಎನ್ನುತ್ತಾರೆ. ಇದು ನಿಮ್ಮ ಮಾನಸಿಕತೆಯನ್ನು ತೋರಿಸುತ್ತದೆ ಎಂದು ಸಚಿವ ಸುನಿಲ್ ಕುಮಾರ್ ಮಾರ್ಮಿಕವಾಗಿ ಹೇಳಿದರು.

ನೆಹರು ತನ್ನನ್ನು ಹಿಂದೂ ಎಂದು ಕರೆಯದಂತೆ ಹೇಳಿದ್ದರು; ಇವತ್ತಿಗೂ ಕಾಂಗ್ರೆಸ್ಸಿನಲ್ಲಿ ಅದೇ ಪರಂಪರೆ ಮುಂದುವರೆದಿದೆ -ಸಚಿವ ಸುನಿಲ್ ಕುಮಾರ್
ನೆಹರು ತನ್ನನ್ನು ಹಿಂದೂ ಎಂದು ಕರೆಯಬಾರದೆಂದು ಹೇಳಿದ್ದರು, ಕಾಂಗ್ರೆಸ್ಸಿನಲ್ಲಿ ನೆಹರು ಪರಂಪರೆ ಇವತ್ತಿಗೂ ಮುಂದುವರೆದಿದೆ -ಸಚಿವ ಸುನಿಲ್ ಕುಮಾರ್
TV9 Web
| Updated By: ಸಾಧು ಶ್ರೀನಾಥ್​|

Updated on:Nov 08, 2022 | 1:35 PM

Share

ಉಡುಪಿ: ದೆಗುಲ ನಗರದಲ್ಲಿ ಸ್ವಾಭಿಮಾನಿ ಹಿಂದೂ ಅಭಿಮಾನ ಇಂದಿನಿಂದ ಆರಂಭವಾಗಿದೆ. ಈ ಸಂದರ್ಭದಲ್ಲಿ ಮಾತನಾಡಿದ ಇಂಧನ ಮತ್ತು ಕನ್ನಡ ಸಂಸ್ಕೃತಿ ಸಚಿವ ವಿ. ಸುನಿಲ್ ಕುಮಾರ್ ಅವರು ಜಾರಕಿಹೊಳಿ ಹೇಳಿಕೆಗೆ ಕಾಂಗ್ರೆಸ್ ಕ್ಷಮೆ ಯಾಚಿಸಲೇಬೇಕು. ಕಾಂಗ್ರೆಸ್‌ ನ ಕಾರ್ಯಾಧ್ಯಕ್ಷನಾಗಿ ಜಾರಕಿಹೋಳಿ ಹೇಳಿಕೆ ಕೊಟ್ಟಿದಾರೆ. ಹಿಂದೂ ಪದ ಅಶ್ಲೀಲ ಎಂದು ಸತೀಶ್ ಜಾರಕಿಹೊಳಿ ಹೇಳಿರೋದು ನಾಚಿಕೆಗೇಡು ಸಂಗತಿ. ಈ ಅಪಮಾನ ಸಹಿಸಿಕೊಳ್ಳಲು ಸಾಧ್ಯವಿಲ್ಲ. ಕಾಂಗ್ರೆಸ್ ಹುಟ್ಟಿನಿಂದ ಇವತ್ತಿನವರೆಗೆ ಹಿಂದು ಭಾರತೀಯತೆ ಮೇಲೆ ಹಲವು ಬಾರಿ ಅವಮಾನ ಮಾಡಿದೆ. ನೆಹರು ನನ್ನನ್ನು ಹಿಂದೂ ಎಂದು ಕರೆಯಬೇಡಿ ಎಂದು ಹೇಳಿದ್ದರು. ನೆಹರು ಹಾಕಿಕೊಟ್ಟ ಪರಂಪರೆ ಇವತ್ತಿಗೂ ಮುಂದುವರೆಯುತ್ತಾ ಬಂದಿದೆ. ಅವಕಾಶ ಸಿಕ್ಕಾಗಲೆಲ್ಲ ಹಿಂದುತ್ವ ಮತ್ತು ಭಾರತೀಯತೆ ಬಗ್ಗೆ ಕಾಂಗ್ರೆಸ್ ಅಪಮಾನ ಮಾಡುತ್ತಾ ಬಂದಿದೆ. ಕಾಂಗ್ರೆಸ್ ಹಿರಿಯ ನಾಯಕ ಶಿವರಾಜ್ ಪಾಟೀಲ್ ಭಗವದ್ಗೀತೆಯನ್ನು ಜಿಹಾದ್ ಗೆ ಹೋಲಿಸಿದ್ದರು. ಸಿದ್ದರಾಮಯ್ಯನವರಿಗೆ ತಿಲಕ ಕಂಡರೆ ಆಗುವುದಿಲ್ಲ ಎಂದು ಅವರೇ ಹೇಳಿದ್ದಾರೆ. ಸಾವರ್ಕರ್ ಬಗೆಗೂ ಸಿದ್ದರಾಮಯ್ಯ ಅಪಮಾನ ಮಾಡಿದ್ದಾರೆ. ಕಾಂಗ್ರೆಸ್ಸಿಗೆ ಹಿಂದೂಗಳನ್ನು ಕಂಡರೆ ಅಸಹನೆ. ಭಾರತೀಯತೆಯನ್ನು ಕಾಂಗ್ರೆಸ್ ಯಾವತ್ತೂ ಒಪ್ಪಿಲ್ಲ ಎಂದು ಹೇಳಿದರು.

ಹಿಂದುತ್ವಕ್ಕೆ ಧಕ್ಕೆಯಾದಾಗಲೆಲ್ಲ ನಾವು ಎದ್ದು ನಿಂತಿದ್ದೇವೆ. ಈ ವಿಚಾರವನ್ನು ನಾವು ಜನರ ಬಳಿ ತೆಗೆದುಕೊಂಡು ಹೋಗುತ್ತೇವೆ. ಈ ಹೇಳಿಕೆಯ ವಿರುದ್ಧ ರಾಜ್ಯಾದ್ಯಂತ ಪ್ರತಿಭಟನೆ ಮಾಡುತ್ತೇವೆ. ಭಾರತೀಯತೆ ಹಿಂದೂ ಜೀವನ ಪದ್ಧತಿಯನ್ನು ಒಪ್ಪದ ಕಾಂಗ್ರೆಸ್ ಸಮಾಜದ ಕ್ಷಮೆ ಕೇಳಬೇಕು. ಜಾರಕಿಹೊಳಿ ಶಾಲೆಗೆ ಸೇರುವಾಗ, ಚುನಾವಣೆಗೆ ಸ್ಪರ್ಧಿಸುವಾಗ ಹಿಂದೂ ಪರಿಶಿಷ್ಟ ಜಾತಿ ಎಂದು ಹೇಳಿದ್ದಿರೋ ಅಥವಾ ಅಶ್ಲೀಲ ಹಿಂದೂ ಎಂದು ಹೇಳಿ ಶಾಲೆಗೆ ಸೇರಿದ್ದೀರೋ? ಕಾಂಗ್ರೆಸ್ ಈ ಹೇಳಿಕೆಗೆ ಬಹಳ ದೊಡ್ಡ ಪ್ರಮಾಣದ ಬೆಲೆ ತರಬೇಕಾಗುತ್ತದೆ.

ಇಂದು ಬೆಳಿಗ್ಗೆ ನಾನೇ ಟ್ವೀಟ್ ಮಾಡಿದ್ದೇನೆ. ಹಿಂದುತ್ವಕ್ಕೆ ದೊಡ್ಡ ಪ್ರಮಾಣದಲ್ಲಿ ಕಾಂಗ್ರೆಸ್ ಅಪಮಾನ ಮಾಡಿದೆ. ಈ ನಡೆಯ ವಿರುದ್ಧ ಯುವಕರು ರಸ್ತೆಗೆ ಬರಬೇಕು. ಸಾಮಾಜಿಕ ಜಾಲತಾಣಗಳಲ್ಲಿ ಯುವಕರು ಇದನ್ನು ಖಂಡಿಸಬೇಕು. ನಾನು ಸ್ವಾಭಿಮಾನಿ ಹಿಂದೂ. ಹಿಂದುತ್ವಕ್ಕೆ ಧಕ್ಕೆಯಾದಾಗ ಸೆಟೆದು ನಿಲ್ಲುತ್ತೇನೆ. ದೇಶದ ಅಸ್ಮಿತೆಗೆ ಧಕ್ಕೆಯಾದಾಗ ಹೋರಾಟ ಮಾಡುತ್ತೇನೆ ಎಂಬುದನ್ನು ತೋರಿಸಿಕೊಡಬೇಕು. ರಸ್ತೆಗೂ ಬನ್ನಿ, ಸಾಮಾಜಿಕ ಜಾಲತಾಣಗಳಲ್ಲೂ ಕಾಂಗ್ರೆಸ್ ನಡೆಯನ್ನು ಖಂಡಿಸಿ. ಕನ್ನಡ ಸಂಸ್ಕೃತಿ ಸಚಿವರಾಗಿದ್ದ ಬಿ.ಟಿ.ಲಲಿತಾ ನಾಯಕ್ ದೈವಾರಾಧಕರಿಗೆ ಮಾಸಾಶನ ವಿರೋಧಿಸಿದ್ದರು. ದೇವಸ್ಥಾನದಲ್ಲಿ ತೀರ್ಥ ತೆಗೆದುಕೊಳ್ಳಬೇಡಿ ಎನ್ನುತ್ತಾರೆ. ಇದು ನಿಮ್ಮ ಮಾನಸಿಕತೆಯನ್ನು ತೋರಿಸುತ್ತದೆ. ದೈವ ನರ್ತಕ ರಿಗೆ ಮಾಸಾಶನ ಕೊಟ್ಟಾಗ ಸಮಾಜ ಅದನ್ನು ಸ್ವಾಗತಿಸಿದೆ ಎಂದು ಸಚಿವ ಸುನಿಲ್ ಕುಮಾರ್ ಮಾರ್ಮಿಕವಾಗಿ ಹೇಳಿದರು.

Published On - 1:31 pm, Tue, 8 November 22

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?