AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಡುಪಿ ಕೃಷ್ಣ ಮಠ ರಥ ಬೀದಿಯಲ್ಲಿ ಪ್ರಿ ವೆಡ್ಡಿಂಗ್, ಪೋಸ್ಟ್ ವೆಡ್ಡಿಂಗ್ ಫೋಟೊಶೂಟ್ ನಿಷೇಧ

ವೆಡ್ಡಿಂಗ್ ಫೋಟೋಗ್ರಾಫಿ, ಅದರಲ್ಲೂ ಪ್ರಿ ವೆಡ್ಡಿಂಗ್ ಹಾಗೂ ಪೋಸ್ಟ್ ವೆಡ್ಡಿಂಗ್ ಫೋಟೋಶೂಟ್ ಕ್ರೇಜ್ ಇತ್ತೀಚಿನ ದಿನಗಳಲ್ಲಿ ಹೆಚ್ಚಾಗುತ್ತಿದೆ. ಸಮಯ, ಸಂದರ್ಭ, ಸ್ಥಳದ ಪರಿವೆ ಇಲ್ಲದೆ ಜೋಡಿಗಳು ಫೋಟೋ ಶೂಟ್‌ನಲ್ಲಿ ನಿರತವಾಗಿರುವುದು ಅಲ್ಲಲ್ಲಿ ಕಾಣಿಸುತ್ತಿವೆ. ಇದೀಗ ಉಡುಪಿ ಕೃಷ್ಣ ಮಠದ ರಥ ಬೀದಿಯಲ್ಲಿ ಇಂಥ ಚಟುವಟಿಕೆಗಳಿಗೆ ನಿಷೇಧ ಹೇರಲಾಗಿದೆ.

Follow us
ಪ್ರಜ್ವಲ್ ಅಮೀನ್​, ಉಡುಪಿ
| Updated By: Ganapathi Sharma

Updated on:Apr 10, 2025 | 10:33 AM

ಉಡುಪಿ, ಏಪ್ರಿಲ್ 10: ಪ್ರಿ ವೆಡ್ಡಿಂಗ್ ಹಾಗೂ ಪೋಸ್ಟ್ ವೆಡ್ಡಿಂಗ್ ಫೋಟೋಶೂಟ್ (Wedding Photoshoot) ವಿಚಾರದಲ್ಲಿ ಉಡುಪಿ ಶ್ರೀ ಕೃಷ್ಣ ಮಠ (Udupi Sri Krishna Matha) ಮಹತ್ವದ ನಿರ್ಧಾರ ಕೈಗೊಂಡಿದೆ. ಕೃಷ್ಣ ಮಠದ ರಥ ಬೀದಿಯ ಆವರಣದಲ್ಲಿ ಪ್ರಿ ವೆಡ್ಡಿಂಗ್ ಹಾಗು ಪೋಸ್ಟ್ ವೆಡ್ಡಿಂಗ್ ಫೋಟೋಶೂಟ್ ನಿಷೇಧಿಸಿ ಪರ್ಯಾಯ ಪುತ್ತಿಗೆ ಮಠ (Puttige Mutt) ನಿರ್ಧಾರ ಪ್ರಕಟಿಸಿದೆ. ಬೆಳ್ಳಂಬೆಳಗ್ಗೆ ಹಾಗೂ ಸ್ವಾಮೀಜಿಗಳ ಓಡಾಟದ ವೇಳೆ ಮುಜುಗರದ ಸನ್ನಿವೇಶದ ಸೃಷ್ಟಿಯಾಗುವುದನ್ನು ತಪ್ಪಿಸುವುದಕ್ಕಾಗಿ ಮಠವು ಈ ಕ್ರಮ ಕೈಗೊಂಡಿದೆ.

ಕೃಷ್ಣ ಮಠದ ರಥಬೀದಿ ಪಾರಂಪರಿಕ ಕಟ್ಟಡಗಳು ಇರುವ ಜಾಗ. ಪ್ರಿ ವೆಡ್ಡಿಂಗ್ ಹಾಗೂ ಪೋಸ್ಟ್ ವೆಡ್ಡಿಂಗ್ ಫೋಟೋಶೂಟ್​​ ಹೆಸರಿನಲ್ಲಿ ಬೆಳ್ಳಂಬೆಳ್ಳಗ್ಗೆ ಮಠದ ಆವರಣದಲ್ಲಿ ಅಸಭ್ಯ ವರ್ತನೆ ಕಾಣಿಸುತ್ತಿದೆ. ಫೋಟೋಶೂಟ್ ನೆಪದಲ್ಲಿ ರಥಬೀದಿಯಲ್ಲಿ ಪ್ರೇಮ ಸಲ್ಲಾಪ ನಡೆಯುತ್ತಿದೆ. ಕೇರಳ ಬೆಂಗಳೂರು ಕಡೆಯಿಂದ ಬರುವ ಫೋಟೋಗ್ರಾಫರ್ಸ್ ಹಾವಳಿ ಹೆಚ್ಚಾಗಿದೆ. ಹೀಗಾಗಿ ಈ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಮಠದ ಅಧಿಕಾರಿಗಳು ತಿಳಿಸಿದ್ದಾರೆ.

ಅಷ್ಟಮಠಾಧೀಶರು ಓಡಾಡುವ ರಥಬೀದಿ ಇದಾಗಿದೆ. ನೂರಾರು ವರ್ಷಗಳಿಂದ ಯತಿಗಳು, ದಾಸರು ನಡೆದಾಡಿದ ಬೀದಿ ಇದಾಗಿದೆ. ಇದಕ್ಕೆ ಪಾವಿತ್ರ್ಯವಿದೆ. ಪ್ರತಿ ದಿನ ರಥ ಬೀದಿಯಲ್ಲಿ ಉತ್ಸವ ನಡೆಯುತ್ತದೆ. ಅಷ್ಟೇ ಅಲ್ಲದೆ ಇದು, ಅಷ್ಟಮಠಗಳು ಇರುವ ರಥಬೀದಿಯಾಗಿದೆ. ಇಲ್ಲಿ ಜೋಡಿಹಕ್ಕಿಗಳು ಸರಸ ಸಲ್ಲಾಪ ನಡೆಸುವುದು ಸರಿಯಲ್ಲ. ಹಾಗೆ ಮಾಡುವುದರಿಂದ ಧಾರ್ಮಿಕ ವಾತಾವರಣಕ್ಕೆ ಅಡ್ಡಿ ಆಗುತ್ತದೆ. ಹೀಗಾಗಿ ಮುಜುಗರದ ಸನ್ನಿವೇಶ ತಪ್ಪಿಸಲು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಮಠ ತಿಳಿಸಿದೆ.

ಇದನ್ನೂ ಓದಿ
Image
ರೈಲ್ವೆ ಗೇಟ್​ ಬೋರ್ಡ್​ಗೆ ಮಸಿ ಬಳಿದ ಕನ್ನಡ ಪರ ಹೋರಾಟಗಾರರು, ವಿಡಿಯೋ ವೈರಲ್
Image
ವಾಹನ ಪಾರ್ಕ್ ಮಾಡಿ ಮೆಟ್ರೋದಲ್ಲಿ ಸಂಚರಿಸುವವರಿಗೆ ಸಿಗಲಿದೆ ಡಿಸ್ಕೌಂಟ್
Image
ರಜೆಯೆಂದು ಮನೆಗೆ ಬೀಗ ಹಾಕಿ ಊರು, ಪ್ರವಾಸ ಹೋಗೋ ಮುನ್ನ ಪೊಲೀಸರ ಸಲಹೆ ಗಮನಿಸಿ
Image
ಬೆಂಗಳೂರು ಮೈಸೂರು ರೈಲು ಪ್ರಯಾಣಿಕರಿಗೆ ಸಂಕಷ್ಟ

ಇದನ್ನೂ ಓದಿ: ಉಡುಪಿ ಲವ್ ಜಿಹಾದ್ ಪ್ರಕರಣಕ್ಕೆ ಟ್ವಿಸ್ಟ್: ನನ್ನನ್ನು ಯಾರೂ ಅಪಹರಿಸಿಲ್ಲ ಎಂದ ಯುವತಿ

ಒಂದು ಕಡೆ ಧಾರ್ಮಿಕತೆ ಆಚರಣೆ ನಡೆಯುವ ಸ್ಥಳ ಇದಾಗಿದೆ. ಮತ್ತೊಂದು ಕಡೆ ವಿವಿಧ ಊರುಗಳಿಂದ ಬರುವ ಫೋಟೋಗ್ರಾಫರ್‌ಗಳು, ಜೋಡಿಗಳು ವೆಡ್ಡಿಂಗ್ ಫೋಟೋಶೂಟ್ ಹೆಸರಿನಲ್ಲಿ ಸಲ್ಲಾಪ ಮಾಡುತ್ತಾರೆ. ಇದೊಂತರ ವಿರೋಧಭಾಸವಾಗಿ ಕಾಣಿಸುತ್ತಿದೆ. ಒಂದೆಡೆ ಧಾರ್ಮಿಕ ಪ್ರಜ್ಞೆ ವೃದ್ಧಿಸುತ್ತಿದ್ದರೆ, ಮತ್ತೊಂದೆಡೆ ಅದಕ್ಕೆ ತದ್ವಿರುದ್ಧವಾದ ವಾತಾವರಣಕ್ಕೆ ಅವಕಾಶ ಮಾಡಿಕೊಟ್ಟಂತಾಗುತ್ತದೆ. ಹೆಚ್ಚಾಗಿ ಕಠಿಣ ಕ್ರಮ ಕೈಗೊಳ್ಳಲೇ ಬೇಕಾಯಿತು ಎಂದು ಮಠದ ಅಧಿಕಾರಿಗಳು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:07 am, Thu, 10 April 25

ವೇಗದ ಶತಕ ಸಿಡಿಸಿ ಹೆಡ್ ದಾಖಲೆ ಮುರಿದ ಕ್ಲಾಸೆನ್
ವೇಗದ ಶತಕ ಸಿಡಿಸಿ ಹೆಡ್ ದಾಖಲೆ ಮುರಿದ ಕ್ಲಾಸೆನ್
ಸೋಪಿಗೆ ತಮನ್ನಾ ಭಾಟಿಯಾ ಏಕೆ ಬೇಡ, ಸ್ಪಷ್ಟ ಕಾರಣ ನೀಡಿದ ಸಂಸದ ಯದುವೀರ್
ಸೋಪಿಗೆ ತಮನ್ನಾ ಭಾಟಿಯಾ ಏಕೆ ಬೇಡ, ಸ್ಪಷ್ಟ ಕಾರಣ ನೀಡಿದ ಸಂಸದ ಯದುವೀರ್
ಆಡ್ತೀನಿ, ಆಡಲ್ಲ.. ಯಾವುದನ್ನು ಖಚಿತವಾಗಿ ಹೇಳಲಾರೆ ಎಂದ ಧೋನಿ
ಆಡ್ತೀನಿ, ಆಡಲ್ಲ.. ಯಾವುದನ್ನು ಖಚಿತವಾಗಿ ಹೇಳಲಾರೆ ಎಂದ ಧೋನಿ
ತಮ್ಮ ಅಭಿಮಾನಿ ಕುಟುಂಬಕ್ಕೆ 5 ಲಕ್ಷ ರೂ. ಸಹಾಯ ಮಾಡಿದ ಸಚಿವ ಜಮೀರ್
ತಮ್ಮ ಅಭಿಮಾನಿ ಕುಟುಂಬಕ್ಕೆ 5 ಲಕ್ಷ ರೂ. ಸಹಾಯ ಮಾಡಿದ ಸಚಿವ ಜಮೀರ್
ಸುದೀಪ್ ಕೈಗೆ ಗಾಯ, ಕಿಚ್ಚನ ಕೈಗೆ ಏನಾಯ್ತು? ಅಭಿಮಾನಿಗಳ ಪ್ರಶ್ನೆ
ಸುದೀಪ್ ಕೈಗೆ ಗಾಯ, ಕಿಚ್ಚನ ಕೈಗೆ ಏನಾಯ್ತು? ಅಭಿಮಾನಿಗಳ ಪ್ರಶ್ನೆ
ಬೆಂಗಳೂರು-ಮಂಗಳೂರು ರಸ್ತೆಯಲ್ಲಿ ಟ್ರಾಫಿಕ್ ಜಾಮ್​: ಬದಲಿ ಮಾರ್ಗ ಸೂಚನೆ
ಬೆಂಗಳೂರು-ಮಂಗಳೂರು ರಸ್ತೆಯಲ್ಲಿ ಟ್ರಾಫಿಕ್ ಜಾಮ್​: ಬದಲಿ ಮಾರ್ಗ ಸೂಚನೆ
ಅಯೋಧ್ಯೆಯಲ್ಲಿ ಶ್ರೀರಾಮನ ದರ್ಶನ ಪಡೆದ ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ
ಅಯೋಧ್ಯೆಯಲ್ಲಿ ಶ್ರೀರಾಮನ ದರ್ಶನ ಪಡೆದ ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ
ಚಿಕ್ಕಮಗಳೂರಿನಲ್ಲಿ ಮಳೆಗೆ ಸಾಲು ಸಾಲು ಅವಾಂತರ:ನದಿಗೆ ಬಿದ್ದ 2 ಕಾರುಗಳು
ಚಿಕ್ಕಮಗಳೂರಿನಲ್ಲಿ ಮಳೆಗೆ ಸಾಲು ಸಾಲು ಅವಾಂತರ:ನದಿಗೆ ಬಿದ್ದ 2 ಕಾರುಗಳು
ಕೂದಲು ಹಿಡಿದು ತಾಯಿಯನ್ನು ಮನಬಂದಂತೆ ಥಳಿಸಿದ ಸಾಕು ಮಗ
ಕೂದಲು ಹಿಡಿದು ತಾಯಿಯನ್ನು ಮನಬಂದಂತೆ ಥಳಿಸಿದ ಸಾಕು ಮಗ
ಮಡೆನೂರು ಮನು ವಿವಾದದಲ್ಲಿ ಅಪ್ಪಣ್ಣ ಹೆಸರು ಕೇಳಿಬಂದಿದ್ದಕ್ಕೆ ನಟನ ಸ್ಪಷ್ಟನೆ
ಮಡೆನೂರು ಮನು ವಿವಾದದಲ್ಲಿ ಅಪ್ಪಣ್ಣ ಹೆಸರು ಕೇಳಿಬಂದಿದ್ದಕ್ಕೆ ನಟನ ಸ್ಪಷ್ಟನೆ