AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖಾಸಗಿ ಬಸ್ ಟಿಕೆಟ್ ದರ ಹೆಚ್ಚಳ ತೀರ್ಮಾನ: ಪ್ರಯಾಣಿಕರಿಗೆ ಮತ್ತೊಂದು ಶಾಕ್

Private Bus Ticket Price hike; ರಾಜ್ಯದ ಜನತೆ ಇದೀಗ ಮತ್ತೊಂದು ದರ ಏರಿಕೆಯ ಭಾರ ಹೊರಲು ಸಿದ್ಧವಾಗಬೇಕಿದೆ. ಬೆಲೆ ಏರಿಕೆ ಜಮಾನದಲ್ಲಿ ಇದೀಗ ಮತ್ತೊಂದು ಹೊಡೆತ ಬೀಳಲಿದೆ. ಕರ್ನಾಟಕದಾದ್ಯಂತ ಖಾಸಗಿ ಬಸ್ ಟಿಕೆಟ್ ದರ ಏರಿಕೆ ಮಾಡಲು ಖಾಸಗಿ ಬಸ್ ಮಾಲೀಕರ ಒಕ್ಕೂಟ ತೀರ್ಮಾನಿಸಿದೆ. ಈ ಕುರಿತ ಮಾಹಿತಿ ಇಲ್ಲಿದೆ.

ಖಾಸಗಿ ಬಸ್ ಟಿಕೆಟ್ ದರ ಹೆಚ್ಚಳ ತೀರ್ಮಾನ: ಪ್ರಯಾಣಿಕರಿಗೆ ಮತ್ತೊಂದು ಶಾಕ್
ಸಾಂದರ್ಭಿಕ ಚಿತ್ರ
Follow us
ಪ್ರಜ್ವಲ್ ಅಮೀನ್​, ಉಡುಪಿ
| Updated By: Ganapathi Sharma

Updated on: Apr 08, 2025 | 7:37 AM

ಉಡುಪಿ, ಏಪ್ರಿಲ್ 8: ಸರಣಿ ಬೆಲೆ ಏರಿಕೆಗಳಿಂದ (Price Hike) ತತ್ತರಿಸಿರುವ ಕರ್ನಾಟಕ ಜನತೆಗೆ ಶೀಘ್ರದಲ್ಲೇ ಮತ್ತೊಂದು ಶಾಕ್ ಎದುರಾಗಲಿದೆ. ಇತ್ತೀಚೆಗಷ್ಟೇ ಕೆಎಸ್​ಆರ್​​ಟಿಸಿ (KSRTC Ticket price) ಬಸ್​ಗಳ ಪ್ರಯಾಣ ದರ ಪರಿಷ್ಕರಣೆ ಮಾಡಲಾಗಿತ್ತು. ಇದೀಗ ಖಾಸಗಿ ಬಸ್ ಸರದಿ. ರಾಜ್ಯದಾದ್ಯಂತ ಖಾಸಗಿ ಬಸ್​ಗಳ ಟಿಕೆಟ್ ದರ (Private Bus Ticket Price) ಹೆಚ್ಚಳ ಮಾಡಲು ಖಾಸಗಿ ಬಸ್ ಮಾಲೀಕರ ಒಕ್ಕೂಟ ನಿರ್ಧರಿಸಿದೆ. ಈ ಬಗ್ಗೆ ಮುಂದಿನ ವಾರವೇ ಅಧಿಕೃತ ಪ್ರಕಟಣೆ ಪ್ರಕಟವಾಗುವ ಸಾಧ್ಯತೆ ಇದೆ.

ಹಾಲು, ಕರೆಂಟು, ಮೆಟ್ರೋ, ಸರ್ಕಾರಿ ಬಸ್ ಟಿಕೆಟದ ದರ ಹೀಗೆ ಎಲ್ಲವೂ ಏರಿಕೆಯಾಗಿದ್ದು, ಈ ಬಗ್ಗೆ ಜನ ಬೀದಿಗಿಳಿದು ಹೋರಾಡುತ್ತಿರುವಾಗಲೇ, ಸದ್ದಿಲ್ಲದೆ ಖಾಸಗಿ ಬಸ್ ಮಾಲೀಕರು ಟಿಕೆಟ್ ದರ ಏರಿಸಲು ನಿರ್ಧರಿಸಿದ್ದಾರೆ. ಡೀಸೆಲ್ ದರ ಏರಿಕೆ ಹಾಗೂ ಟೋಲ್ ದರ ಹೆಚ್ಚಳ ಹಿನ್ನೆಲೆಯಲ್ಲಿ, ಸರ್ಕಾರದ ತೀರ್ಮಾನಕ್ಕೆ ಕಾಯದೆ ತಾವೇ ದರ ಏರಿಸಲು ನಿರ್ಧರಿಸಿದ್ದಾರೆ.

ಖಾಸಗಿ ಬಸ್ ಟಿಕೆಟ್ ದರ ಏರಿಕೆ ಬಗ್ಗೆ ಬಸ್ ಮಾಲೀಕರ ಸಂಘ ಹೇಳೋದೇನು?

ಇತ್ತೀಚಿನ ವರ್ಷಗಳಲ್ಲಿ ಪ್ರತಿ ಲೀಟರ್ ಡೀಸೆಲ್​ ದರ ಸುಮಾರು ಐದು ರೂಪಾಯಿ ಏರಿಕೆಯಾಗಿದೆ. ಟೋಲ್ ದರ ಕೂಡ ಹೆಚ್ಚಾಗಿದೆ. ದರ ಏರಿಸದಿದ್ದರೆ ಖಾಸಗಿ ಬಸ್ ಉದ್ಯಮ ಸ್ಥಗಿತಗೊಳ್ಳುತ್ತದೆ. ಪ್ರತಿ ಬಸ್​ ನಿರ್ವಹಣೆಗೆ ಸದ್ಯ 18 ರಿಂದ 20 ಸಾವಿರ ರೂಪಾಯಿ ಹೆಚ್ಚುವರಿ ಖರ್ಚು ಬರುತ್ತಿದೆ. ಹಾಗಾಗಿ ದರ ಏರಿಸುವುದು ಅನಿವಾರ್ಯ ಎಂದು ಬಸ್ ಮಾಲೀಕರ ಸಂಘದ ರಾಜ್ಯ ಪ್ರಮುಖರು ಹೇಳಿದ್ದಾರೆ ಎಂದು ಸಂಘದ ಕಾರ್ಯದರ್ಶಿ ಕುಯಿಲಾಡಿ ಸುರೇಶ್ ನಾಯ್ಕ ತಿಳಿಸಿದ್ದಾರೆ.

ಇದನ್ನೂ ಓದಿ
Image
ಎಲ್​​​ಪಿಜಿ ಸಿಲಿಂಡರ್ ಬೆಲೆ 50 ರೂ ಹೆಚ್ಚಳ
Image
ಪೆಟ್ರೋಲ್, ಡೀಸಲ್ ಮೇಲೆ ಅಬಕಾರಿ ಸುಂಕ 2 ರೂ ಹೆಚ್ಚಳ
Image
Tomato Price: ಏಕಾಏಕಿ ಟೊಮೆಟೊ ದರ ಕುಸಿತ: ಕಂಗಾಲಾದ ಗದಗ ರೈತರು
Image
ಹಾಲು ಉತ್ಪಾದಕರ ಆಕ್ರೋಶಕ್ಕೆ ಮಣಿದ ಹಾಲು ಒಕ್ಕೂಟ: ಲೀಟರ್​ ಹಾಲಿನ ದರ ಏರಿಕೆ

ಎಷ್ಟು ಹೆಚ್ಚಾಗಲಿದೆ ಖಾಸಗಿ ಬಸ್ ಟಿಕೆಟ್ ದರ?

ಬೇರೆ ಬೇರೆ ಕಾರಣಗಳಿಂದಾಗಿ ಈವರೆಗೆ ಟಿಕೆಟ್ ದರ ಹೆಚ್ಚಳ ಮಾಡಿರಲಿಲ್ಲ. ಸಾರಿಗೆ ಸಚಿವರಿಗೆ ಈ ಬಗ್ಗೆ ಮನವಿ ಕೊಟ್ಟಿದ್ದೆವು. ಅವರು ಪರಿಶೀಲನೆ ಮಾಡುತ್ತೇವೆ ಎಂದು ಹೇಳಿದ್ದಾರೆ. ಆದರೆ ಅವರು ತಕ್ಷಣ ತೀರ್ಮಾನ ತೆಗೆದುಕೊಳ್ಳುವಂತೆ ಕಂಡು ಬರುತ್ತಿಲ್ಲ. ನಮಗೆ ಬಸ್ ಓಡಿಸಲು ಸಾಧ್ಯವಾಗುತ್ತಿಲ್ಲ. ಒಂದೆರಡು ಬಸ್ ಇದ್ದವರು ಸಂಚಾರ ಸ್ಥಗಿತಗೊಳಿಸಿದ್ದಾರೆ. ದೊಡ್ಡ ದೊಡ್ಡ ಕಂಪನಿಗಳು ನಷ್ಟದಲ್ಲಿವೆ. ಡೀಸೆಲ್ ದರ ಏರಿಕೆಯಾದಾಗ ಸೆಸ್ ಹಾಕಲು ನಮಗೆ ಅವಕಾಶ ಇದೆ. ಇದೇ ಆಧಾರದಲ್ಲಿ ಪ್ರತಿ ಟಿಕೆಟಿಗೆ 1 ರೂ.ನಿಂದ 3 ರೂ. ವರೆಗೆ ಏರಿಕೆ ಆಗಬಹುದು. ಹತ್ತು ದಿನದ ಒಳಗೆ ಸಭೆ ಕರೆದು ರಾಜ್ಯವಾಪಿ ದರ ಏರಿಕೆ ಜಾರಿ ಮಾಡುತ್ತೇವೆ ಎಂದು ಕುಯಿಲಾಡಿ ಸುರೇಶ್ ನಾಯ್ಕ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಪೆಟ್ರೋಲ್, ಡೀಸಲ್ ಮೇಲಿನ ಅಬಕಾರಿ ಸುಂಕ 2 ರೂ ಹೆಚ್ಚಳ; ಆದರೆ ಬೆಲೆ ಏರಿಕೆ ಇರಲ್ಲ

ರಾಜ್ಯದ 17 ಜಿಲ್ಲೆಗಳಲ್ಲಿ ಒಟ್ಟು 8,000 ಖಾಸಗಿ ಬಸ್ಸುಗಳಿವೆ. ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಆರಂಭವಾದ ನಂತರ ಖಾಸಗಿ ಬಸ್ಸು ಉದ್ಯಮ ನಷ್ಟದಲ್ಲಿದೆ. ಪ್ರಯಾಣಿಕರು ಇಲ್ಲ ಎಂಬ ಕಾರಣಕ್ಕೆ ಬಸ್ ರದ್ದು ಮಾಡುವಂತಿಲ್ಲ, ಹಾಗಾಗಿ ದರ ಏರಿಕೆ ಅನಿವಾರ್ಯ ವಾಗಿದೆ ಎಂದು ಅವರು ಹೇಳಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪಾಟ್ನಾದಲ್ಲಿ ಪ್ರಧಾನಿ ನರೇಂದ್ರ ಮೋದಿ ಬೃಹತ್ ರೋಡ್ ಶೋ
ಪಾಟ್ನಾದಲ್ಲಿ ಪ್ರಧಾನಿ ನರೇಂದ್ರ ಮೋದಿ ಬೃಹತ್ ರೋಡ್ ಶೋ
ಆರ್​ಸಿಬಿ ವೇಗಿಗಳ ವಿಕೆಟ್ ಬೇಟೆ ಹೇಗಿದೆ ನೀವೇ ನೋಡಿ
ಆರ್​ಸಿಬಿ ವೇಗಿಗಳ ವಿಕೆಟ್ ಬೇಟೆ ಹೇಗಿದೆ ನೀವೇ ನೋಡಿ
ಕನ್ನಡದ ಬಗ್ಗೆ ಕಮಲ್ ಹಾಸನ್​ ಹೇಳಿದ್ದು ಸರಿಯೇ? ನಟಿ ಜಯಮಾಲಾ ಪ್ರತಿಕ್ರಿಯೆ
ಕನ್ನಡದ ಬಗ್ಗೆ ಕಮಲ್ ಹಾಸನ್​ ಹೇಳಿದ್ದು ಸರಿಯೇ? ನಟಿ ಜಯಮಾಲಾ ಪ್ರತಿಕ್ರಿಯೆ
ಕಾಂಗ್ರೆಸ್​ಗೆ ಬಿಗ್ ಶಾಕ್: ಮುಸ್ಲಿಂ ಮುಖಂಡರಿಂದ ಸಾಮೂಹಿಕ ರಾಜೀನಾಮೆ
ಕಾಂಗ್ರೆಸ್​ಗೆ ಬಿಗ್ ಶಾಕ್: ಮುಸ್ಲಿಂ ಮುಖಂಡರಿಂದ ಸಾಮೂಹಿಕ ರಾಜೀನಾಮೆ
ಕ್ಯಾಬಿನೆಟ್​ಗೆ ಕಮ್ಯೂನಲ್ ವೈರಸ್ ಮೆತ್ತಿಕೊಂಡಿದೆ, ಚಿಕಿತ್ಸೆ ಬೇಕು: ರವಿ
ಕ್ಯಾಬಿನೆಟ್​ಗೆ ಕಮ್ಯೂನಲ್ ವೈರಸ್ ಮೆತ್ತಿಕೊಂಡಿದೆ, ಚಿಕಿತ್ಸೆ ಬೇಕು: ರವಿ
ಕರ್ನಾಟಕದಲ್ಲಿ ಇನ್ನೂ 3 ದಿನ ಭಾರೀ ಮಳೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​
ಕರ್ನಾಟಕದಲ್ಲಿ ಇನ್ನೂ 3 ದಿನ ಭಾರೀ ಮಳೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​
ನಾಳೆಯೇ ಚುನಾವಣೆ ಘೋಷಿಸಿ; ಮೋದಿಗೆ ಮಮತಾ ಬ್ಯಾನರ್ಜಿ ಬಹಿರಂಗ ಸವಾಲು
ನಾಳೆಯೇ ಚುನಾವಣೆ ಘೋಷಿಸಿ; ಮೋದಿಗೆ ಮಮತಾ ಬ್ಯಾನರ್ಜಿ ಬಹಿರಂಗ ಸವಾಲು
ಕಮಲ್ ಹಾಸನ್ ಕ್ಷಮೆ ಕೇಳಿದ್ರೆ ಮಾತ್ರ ಸಿನಿಮಾ ಬಿಡುಗಡೆ: ಸಾ.ರಾ. ಗೋವಿಂದು
ಕಮಲ್ ಹಾಸನ್ ಕ್ಷಮೆ ಕೇಳಿದ್ರೆ ಮಾತ್ರ ಸಿನಿಮಾ ಬಿಡುಗಡೆ: ಸಾ.ರಾ. ಗೋವಿಂದು
ಬಂಟ್ವಾಳ್ ರಹಿಮಾನ್ ಹತ್ಯೆ: ರಣಾಂಗಣವಾದ ಮುಸ್ಲಿಂ ಮುಖಂಡರ ಸಭೆ
ಬಂಟ್ವಾಳ್ ರಹಿಮಾನ್ ಹತ್ಯೆ: ರಣಾಂಗಣವಾದ ಮುಸ್ಲಿಂ ಮುಖಂಡರ ಸಭೆ
ದಲಿತರ ಮಾರಣವಾಗುತ್ತಿದ್ದರೂ ದಲಿತ ನಾಯಕರು ಸುಮ್ಮನಿದ್ದಾರೆ: ಚಲವಾದಿ
ದಲಿತರ ಮಾರಣವಾಗುತ್ತಿದ್ದರೂ ದಲಿತ ನಾಯಕರು ಸುಮ್ಮನಿದ್ದಾರೆ: ಚಲವಾದಿ