AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರುದ್ರಭೂಮಿ ಜಾಗವನ್ನು ಕಬಳಿಸಿದ ಖದೀಮರು, ಕಂಡು ಕಾಣದಂತೆ ಕುಳಿತ ಅಧಿಕಾರಿಗಳು, ಶಾಸಕರು

ಉಡುಪಿ ಜಿಲ್ಲೆಯ ಬೈಂದೂರು ತಾಲೂಕು ವ್ಯಾಪ್ತಿಯ ಕಾಲ್ತೋಡು ಗ್ರಾಮದ ರುದ್ರಭೂಮಿಯನ್ನು ಕಬಳಿಸಿದ ಖದೀಮರು, ಕಂಡು ಕಾಣದಂತೆ ಕಣ್ಣು ಮುಚ್ಚಿ ಕುಳಿತ ಅಧಿಕಾರಿಗಳು ಮತ್ತು ಶಾಸಕರು

ರುದ್ರಭೂಮಿ ಜಾಗವನ್ನು ಕಬಳಿಸಿದ ಖದೀಮರು, ಕಂಡು ಕಾಣದಂತೆ ಕುಳಿತ ಅಧಿಕಾರಿಗಳು, ಶಾಸಕರು
ಕಾಲ್ತೋಡು ಗ್ರಾಮದ ರುದ್ರಭೂಮಿ ಕಬಳಿಕೆ
TV9 Web
| Edited By: ವಿವೇಕ ಬಿರಾದಾರ|

Updated on: Oct 24, 2022 | 8:58 PM

Share

ಉಡುಪಿ (Udupi) ಜಿಲ್ಲೆಯ ಅತ್ಯಂತ ಹಿಂದುಳಿದ ಕ್ಷೇತ್ರವಾದ ಬೈಂದೂರು (Baindur) ತಾಲೂಕು ವ್ಯಾಪ್ತಿಯ ಕಾಲ್ತೋಡು ಗ್ರಾಮದ ಜನರಿಗೆ ಸತ್ತ ಮೇಲೆ ಮುಕ್ತಿ‌ ಇಲ್ಲ. ಗ್ರಾಮದ 25-30 ಮನೆಗಳಿಗಾಗಿ ರುದ್ರಭೂಮಿ ಜಾಗ ಮೀಸಲಿರಿಸಿದ್ದು, ಸದ್ಯ ಆ ಜಾಗವು ಉಳ್ಳವರು ಕಬಳಿಕೆ ಮಾಡಿದ್ದಾರೆ. ಬೈಂದೂರು ತಾಲೂಕು ವ್ಯಾಪ್ತಿಯ ಕಾಲ್ತೋಡು ಗ್ರಾಮದ ಯಡೇರಿ ಜನತಾ ಸರ್ವೇ ನಂಬರ್ 293/* ರಲ್ಲಿ 0.50 ಎಕರೆ ಸ್ಥಳವು 1998 ರಂದು ಮಾನ್ಯ ಸಹಾಯಕ ಕಮೀಷನರ್ ಆದೇಶದಂತೆ ಹಿಂದೂ ರುದ್ರಭೂಮಿಗೆ ಕಾಯ್ದಿರಿಸಲಾಗಿತ್ತು. ಸದ್ಯ ಅದೇ ಜಾಗವನ್ನು ಖಾಸಗಿಯವರು ಒತ್ತುವರಿ ಮಾಡಿಕೊಂಡಿರುವುದು ಗ್ರಾಮದ ಜನರ ಸಮಸ್ಯೆಗೆ ಕಾರಣವಾಗಿದೆ. ಈ ಕುರಿತು ಸ್ಥಳೀಯರು ಈಗಾಗಲೇ ಜಿಲ್ಲಾಧಿಕಾರಿಗಳಿಗೆ, ತಹಸೀಲ್ದಾರರಿಗೆ, ಗ್ರಾಮ ಪಂಚಾಯತ್ ಕಾಲ್ತೋಡು ಇವರಿಗೆ ಮನವಿ ನೀಡಿದ್ದಾರೆ. ಆದರೆ ಹಣಬಲ, ರಾಜಕೀಯ ಬಲ, ತೋಳ್ಬಲ ಇರುವ ವ್ಯಕ್ತಿಗಳು ಜಾಗ ಕಬಳಿಕೆಯಲ್ಲಿ ಶಾಮೀಲಾಗಿದ್ದು, ಯಾವ ಅಧಿಕಾರಿಗಳು ಕೂಡ ಸ್ಥಳೀಯರ ಸಮಸ್ಯೆಗೆ ಕ್ಯಾರೆ ಅನ್ನುತ್ತಿಲ್ಲಾ.

ಯಡೇರಿ ಜನತಾ ಕಾಲೋನಿಯಲ್ಲಿ 25-30 ಮನೆಗಳಿದ್ದು, ಕೇವಲ 5 ಸೆಂಟ್ಸ್ ಜಾಗದಲ್ಲಿ ಮನೆ ಕಟ್ಟಿಕೊಂಡಿದ್ದಾರೆ. ಇಲ್ಲಿನ ಸ್ಥಳೀಯರು ಮೃತಪಟ್ಟರೆ, ಮೃತದೇಹವನ್ನು ಅಂತ್ಯ ಸಂಸ್ಕಾರ ಮಾಡಲು ಅಂಗೈ ಅಷ್ಟು ಜಾಗವು ಇಲ್ಲವಾಗಿದೆ. ಕಳೆದ ಬಾರಿ ನಡೆದ ಗ್ರಾಮ ಸಭೆಯಲ್ಲಿ ಈ ಕುರಿತು ಚರ್ಚೆ ಮಾಡುತ್ತಿದ್ದಾಗ, ಕೆಲವು ಪುಡಾರಿಗಳು ರಾಜಕಾರಣಿಗಳೊಂದಿಗೆ ಗ್ರಾಮ ಸಭೆಗೆ ನುಗ್ಗಿ ಗಲಾಟೆ ಮಾಡಿದ್ದಾರೆ. ಅಲ್ಲದೇ ಜನತಾ ಕಾಲೋನಿಯ ಮಹಿಳೆಯರಿಗೆ ಗ್ರಾಮ ಸಭೆಯಲ್ಲಿ ಬೆದರಿಕೆಯೊಡ್ಡಿರುವ ಪ್ರಸಂಗ ಕೂಡ ನಡೆದಿತ್ತು ಎನ್ನುತ್ತಾರೆ ಸ್ಥಳೀಯರು. ಇದಷ್ಟೇ ಅಲ್ಲದೇ ಹೊರಗಿನಿಂದ ಜನ ಕರೆಯಿಸಿ ನಮಗೆ ರುದ್ರ ಭೂಮಿ ಬೇಡ ಎನ್ನುವ ಹೇಳಿಕೆಯನ್ನು ಹೇಳಿಸುವ ‌ಮೂಲಕ ರುದ್ರಭೂಮಿ ಬೇಡಿಕೆಗೆ ತಣ್ಣೀರು ಎರೆಚುತ್ತಿದ್ದಾರೆ ಎನ್ನುತ್ತಾರೆ ಸ್ಥಳೀಯರು.

ಒಟ್ಟಾರೆಯಾಗಿ ಇಲ್ಲಿನ‌ ಜನರ ಹಲವು ವರ್ಷಗಳ ಬೇಡಿಕೆಗೆ ಇದುವರೆಗೆ ಕವಡೆ ಕಾಸಿನ ಕಿಮ್ಮತ್ತು ಇಲ್ಲವಾಗಿದೆ. ಬಡವರಾಗಿ ಹುಟ್ಟಿದ್ದು ತಪ್ಪೇ ಎನ್ನುವ ಸ್ಥಳೀಯರು, ಮನೆಯವರು ಮೃತಪಟ್ಟರೆ ಶವ ಸಂಸ್ಕಾರಕ್ಕೆ ಜಾಗ ಹುಡುಕುವ ಸ್ಥಿತಿ ಮುಂದುವರೆದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ