AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

1990ರಲ್ಲೇ ಐವರು ಮಕ್ಕಳಿಂದ ಉಡುಪಿಯಲ್ಲಿ ನಿರ್ಮಾಣವಾಯ್ತು ರಾಮ ಮಂದಿರ: ಈಗ ಹೀಗಿದೆ ಗೊತ್ತಾ?

ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಸಾಲಿಗ್ರಾಮದ ವ್ಯಾಪ್ತಿಯಲ್ಲಿ ಮಕ್ಕಳು ಮನೆಯಿಂದ ರಾಮನ ಫೋಟೋ ತಂದು ಇಟ್ಟು ತೆಂಗಿನಗರಿಗಳನ್ನ ಬಳಸಿ ಮಂದಿರವನ್ನು ನಿರ್ಮಿಸುತ್ತಾರೆ. ಮನೆಯಿಂದ ತಂದ ಸಕ್ಕರೆಯನ್ನು ಪ್ರಸಾದ ರೂಪದಲ್ಲಿ ವಿತರಿಸುವ ಕೆಲಸವನ್ನು ಈ ಮಕ್ಕಳು ಮಾಡುತ್ತಾರೆ.

1990ರಲ್ಲೇ ಐವರು ಮಕ್ಕಳಿಂದ ಉಡುಪಿಯಲ್ಲಿ ನಿರ್ಮಾಣವಾಯ್ತು ರಾಮ ಮಂದಿರ: ಈಗ ಹೀಗಿದೆ ಗೊತ್ತಾ?
ರಾಮ ಮಂದಿರ ನಿರ್ಮಿಸಿದ ಐವರು ಮಕ್ಕಳು
Follow us
ಪ್ರಜ್ವಲ್ ಅಮೀನ್​, ಉಡುಪಿ
| Updated By: ಗಂಗಾಧರ​ ಬ. ಸಾಬೋಜಿ

Updated on: Jan 03, 2024 | 10:07 PM

ಉಡುಪಿ, ಜನವರಿ 03: ಕೋಟ್ಯಾಂತರ ಭಾರತೀಯರ ಕನಸಿನ ರಾಮಮಂದಿರ (Ram Mandir) ಲೋಕಾರ್ಪಣೆಗೆ ಕ್ಷಣಗಣನೆ ಆರಂಭ ವಾಗಿದೆ. ಅಯೋಧ್ಯೆಯಲ್ಲಿ ರಾಮ ವಿರಾಜಮಾನರಾಗೋದನ್ನು ನೋಡಲು ಕೋಟ್ಯಾಂತರ ರಾಮ ಭಕ್ತರು ಕಾತುರದಿಂದ ಕಾಯುತ್ತಿದ್ದಾರೆ. ಉಡುಪಿಯ ಈ ರಾಮಮಂದಿರದಲ್ಲೂ ರಾಮಲಲ್ಲಾ ಪ್ರತಿಷ್ಠಾಪನೆಯ ಸಂಭ್ರಮ ಮನೆ ಮಾಡಿದೆ. ಕರಸೇವೆಯ ದಿನದಂದೇ ಐದು ಜನ ಯುವಕರು ಇಲ್ಲಿ ಮಂದಿರ ನಿರ್ಮಾಣ ಮಾಡಿದ್ದು, ಇದೀಗ ಆಯೋಧ್ಯೆಯಲ್ಲಿ ರಾಮಮಂದಿರ ಆಗುತ್ತಲೇ ಆಗ ಪ್ರತಿಷ್ಠಾಪಿಸಿದ ಈ ಮಂದಿರದಲ್ಲೂ ಹಬ್ಬದ ವಾತವರಣ ನಿರ್ಮಾಣವಾಗಿದೆ.

ಎಂಬತ್ತರ ದಶಕದಲ್ಲಿ ಅಯೋಧ್ಯ ರಾಮ ಜನ್ಮ ಭೂಮಿಯಲ್ಲಿ ಶ್ರೀ ರಾಮನನ್ನ ಪ್ರತಿಷ್ಠಾಪನೆ ಮಾಡಬೇಕು ಎನ್ನುವ ಹೋರಾಟದ ಕಿಚ್ಚು ಹತ್ತಿತ್ತು. 90ರ ದಶಕದ ಪ್ರಾರಂಭದಲ್ಲಿ ಕರಾವಳಿಯಲ್ಲಿ ಶ್ರೀರಾಮ ಮಂದಿರದ ಹೋರಾಟ ಸ್ವರೂಪವನ್ನು ಪಡೆದುಕೊಳ್ಳುತ್ತಿದ್ದ ಕಾಲ. ಇಂತಹ ಸಂದರ್ಭದಲ್ಲಿ ಟಿವಿಯಲ್ಲಿ ಬರುತ್ತಿದ್ದ ರಾಮಾಯಣದ ಧಾರವಾಹಿಯನ್ನು ನೋಡಿ ಪ್ರೇರೆಪಿತರಾದ ಐದು ಜನ ಮಕ್ಕಳು ನಾವು ರಾಮಮಂದಿರವನ್ನು ನಿರ್ಮಿಸಬೇಕು ಎನ್ನುವ ಸಂಕಲ್ಪ ಮಾಡಿದ್ದರು.

ಇದನ್ನೂ ಓದಿ: ಸಿದ್ದರಾಮಯ್ಯರೊಳಗೂ ರಾಮನಿದ್ದಾನೆ: ಉಡುಪಿ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಸಾಲಿಗ್ರಾಮದ ವ್ಯಾಪ್ತಿಯಲ್ಲಿ ಮಕ್ಕಳು ಮನೆಯಿಂದ ರಾಮನ ಫೋಟೋ ತಂದು ಇಟ್ಟು ತೆಂಗಿನಗರಿಗಳನ್ನ ಬಳಸಿ ಮಂದಿರವನ್ನು ನಿರ್ಮಿಸುತ್ತಾರೆ. ಮನೆಯಿಂದ ತಂದ ಸಕ್ಕರೆಯನ್ನು ಪ್ರಸಾದ ರೂಪದಲ್ಲಿ ವಿತರಿಸುವ ಕೆಲಸವನ್ನು ಈ ಮಕ್ಕಳು ಮಾಡುತ್ತಾರೆ.

ಸದ್ಯದ ರಾಮ ಮಂದಿರ

1990ರಲ್ಲಿ ತೆಂಗಿನ ಗರಿಗಳನ್ನ ನಿರ್ಮಿಸಿ ಪ್ರಾರಂಭವಾದ ಈ ರಾಮಮಂದಿರ ಇಂದು ಪರಿಪೂರ್ಣ ಮಂದಿರವಾಗಿ ನಿರ್ಮಾಣವಾಗಿದೆ. ಮಕ್ಕಳ ಈ ರಾಮಮಂದಿರದ ಕನಸಿಗೆ ಊರಿನ ಹಿರಿಯರು ಸಹಕಾರ ನೀಡಿದ ಪರಿಣಾಮ ಎನ್ನುವಂತೆ ತೆಂಗಿನ ಗರಿಯಲ್ಲಿದ್ದ ಶ್ರೀರಾಮ ಮಂದಿರ ಈಗ ಹೊಸ ರೂಪ ಪಡೆದುಕೊಂಡು ಭಕ್ತರ ಇಷ್ಟಾರ್ಥಗಳನ್ನು ಈಡೇರಿಸುತ್ತಿದ್ದಾನೆ.

ಇದನ್ನೂ ಓದಿ: ಕರ್ನಾಟಕದ ಶಿಲ್ಪಿ ಅರುಣ್​ ಯೋಗಿರಾಜ್ ಕೆತ್ತಿರುವ ರಾಮಲಲ್ಲಾ ವಿಗ್ರಹ ಫೈನಲ್, ಮೂರ್ತಿ ಹೇಗಿದೆ ಗೊತ್ತಾ?

ಬಹುತೇಕ ಕಡೆಗಳಲ್ಲಿ ಶ್ರೀರಾಮ ಸೀತೆ ಲಕ್ಷ್ಮಣ ಹಾಗೂ ಆಂಜನೇಯನ ಸಮೇತವಾಗಿ ಶ್ರೀರಾಮ ಮಂದಿರ ನಿರ್ಮಾಣವಾಗಿರುವುದನ್ನು ನಾವು ನೋಡಬಹುದು. ಆದರೆ ಸಾಲಿಗ್ರಾಮದಲ್ಲಿ ಮಕ್ಕಳು ನಿರ್ಮಿಸಿದ ರಾಮ ಮಂದಿರದಲ್ಲಿ ಕೇವಲ ಕೋದಂಡರಾಮನನ್ನ ಮಾತ್ರ ನೋಡಬಹುದಾಗಿದೆ. ಇಲ್ಲಿ ಯಾವುದೇ ತಂತ್ತಿಯನ್ನು  ಕರೆಸಿ ವಿಗ್ರಹ ಪ್ರತಿಷ್ಠಾಪನೆ ಮಾಡದೆ ಮಕ್ಕಳೇ ಪ್ರತಿಷ್ಠಾಪನೆ ಮಾಡಿದ್ದಾರೆ. ಈ ಮಂದಿರದಲ್ಲಿ ಎಲ್ಲಾ ಜಾತಿಯವರು ಕೂಡ ಇಲ್ಲಿ ಪೂಜಿಸುವ ಅವಕಾಶವನ್ನು ನೀಡಲಾಗಿದ್ದು, ಇಂದಿಗೂ ರಾಮ ನವಮಿಯ ಸಂದರ್ಭ ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ.

ಮಕ್ಕಳು ನಿರ್ಮಿಸಿದ ಶ್ರೀರಾಮ ಮಂದಿರ, ಹೋರಾಟದ ಪ್ರತಿರೂಪ ಎನ್ನುವಂತೆ ನಿಂತಿದೆ. ಅಯೋಧ್ಯೆಯಲ್ಲಿ ರಾಮಮಂದಿರದ ಲೋಕಾರ್ಪಣೆ ಸಂದರ್ಭದಲ್ಲಿ ಇಲ್ಲಿ ವಿಶೇಷ ಸಂಭ್ರಮಾಚರಣೆಗಳನ್ನು ಆಯೋಜಿಸಿರುವುದು ಇಲ್ಲಿನ ರಾಮಭಕ್ತರ ಸಂತಸಕ್ಕೆ ಕಾರಣವಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಅಧಿಕಾರಕ್ಕಾಗಿ ಆಸೆಪಟ್ಟವನಲ್ಲ, 50 ವರ್ಷಗಳಿಂದ ರಾಜಕೀಯದಲ್ಲಿದ್ದೇವೆ: ಶಾಸಕ
ಅಧಿಕಾರಕ್ಕಾಗಿ ಆಸೆಪಟ್ಟವನಲ್ಲ, 50 ವರ್ಷಗಳಿಂದ ರಾಜಕೀಯದಲ್ಲಿದ್ದೇವೆ: ಶಾಸಕ
ವಿನಯ್ ರಾಜ್​ಕುಮಾರ್ ಹೃದಯದಲ್ಲಿ ಯಾರ ಹೆಸರಿದೆ? ಅವರೇ ಕೊಟ್ಟ ಉತ್ತರ
ವಿನಯ್ ರಾಜ್​ಕುಮಾರ್ ಹೃದಯದಲ್ಲಿ ಯಾರ ಹೆಸರಿದೆ? ಅವರೇ ಕೊಟ್ಟ ಉತ್ತರ
ದಸರಾ ಮಹೋತ್ಸವ-2025 ಹನ್ನೊಂದು ದಿನಗಳ ಕಾಲ ನಡೆಯಲಿದೆ: ಸಿದ್ದರಾಮಯ್ಯ
ದಸರಾ ಮಹೋತ್ಸವ-2025 ಹನ್ನೊಂದು ದಿನಗಳ ಕಾಲ ನಡೆಯಲಿದೆ: ಸಿದ್ದರಾಮಯ್ಯ
ಮಧುಗಿರಿ ಜಮೀನು ಒತ್ತುವರಿ ಪ್ರಕರಣ ತನಿಖೆಗೊಪ್ಪಿಸಲಾಗಿದೆ: ರಾಜಣ್ಣ
ಮಧುಗಿರಿ ಜಮೀನು ಒತ್ತುವರಿ ಪ್ರಕರಣ ತನಿಖೆಗೊಪ್ಪಿಸಲಾಗಿದೆ: ರಾಜಣ್ಣ
ವಿಶ್ವಪ್ರಸಿದ್ಧ ಜಗನ್ನಾಥ ರಥಯಾತ್ರೆಯಲ್ಲಿ ಪತ್ನಿ ಪ್ರೀತಿ ಜೊತೆ ಗೌತಮ್ ಅದಾನಿ
ವಿಶ್ವಪ್ರಸಿದ್ಧ ಜಗನ್ನಾಥ ರಥಯಾತ್ರೆಯಲ್ಲಿ ಪತ್ನಿ ಪ್ರೀತಿ ಜೊತೆ ಗೌತಮ್ ಅದಾನಿ
ರಾಜ್ಯಾಧ್ಯಕ್ಷನ ಬದಲಾವಣೆ ಬಗ್ಗೆಯೂ ವರಿಷ್ಠರು ಚರ್ಚಿಸಿಲ್ಲ: ಅಶೋಕ
ರಾಜ್ಯಾಧ್ಯಕ್ಷನ ಬದಲಾವಣೆ ಬಗ್ಗೆಯೂ ವರಿಷ್ಠರು ಚರ್ಚಿಸಿಲ್ಲ: ಅಶೋಕ
ಆಟೋ ಚಾಲಕ 37-ವರ್ಷ ವಯಸ್ಸಿನ ಗೋವಿಂದ ಇಂದು ಬೆಳಗ್ಗೆ ಸಾವನ್ನಪ್ಪಿದವರು
ಆಟೋ ಚಾಲಕ 37-ವರ್ಷ ವಯಸ್ಸಿನ ಗೋವಿಂದ ಇಂದು ಬೆಳಗ್ಗೆ ಸಾವನ್ನಪ್ಪಿದವರು
ಹಿರಿತೆರೆ-ಕಿರುತೆರೆನ ಹೇಗೆ ಬ್ಯಾಲೆನ್ಸ್ ಮಾಡ್ತಾರೆ ನಿಶಾ ರವಿಕೃಷ್ಣನ್?
ಹಿರಿತೆರೆ-ಕಿರುತೆರೆನ ಹೇಗೆ ಬ್ಯಾಲೆನ್ಸ್ ಮಾಡ್ತಾರೆ ನಿಶಾ ರವಿಕೃಷ್ಣನ್?
ಮೋದಿ ನೇತೃತ್ವದ ಭಾರತದಲ್ಲಿ ಎಲ್ಲರೂ ಸಮಾನರು, ಸುರಕ್ಷಿತರು: ಕೇಂದ್ರ ಸಚಿವೆ
ಮೋದಿ ನೇತೃತ್ವದ ಭಾರತದಲ್ಲಿ ಎಲ್ಲರೂ ಸಮಾನರು, ಸುರಕ್ಷಿತರು: ಕೇಂದ್ರ ಸಚಿವೆ
VIDEO: 5 ವರ್ಷದ ಪೋರನ ಸ್ಫೋಟಕ ಬ್ಯಾಟಿಂಗ್ ನೀವು ನೋಡಲೇಬೇಕು
VIDEO: 5 ವರ್ಷದ ಪೋರನ ಸ್ಫೋಟಕ ಬ್ಯಾಟಿಂಗ್ ನೀವು ನೋಡಲೇಬೇಕು