AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Udupi: ಉಡುಪಿಯ ಕಾರ್ಕಳದಲ್ಲಿ 14ನೇ ಶತಮಾನದ ನಾಗಭೈರವನ ಅಪರೂಪದ ಶಿಲ್ಪ ಪತ್ತೆ

ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಕೈರ್ಲ, ನಂದಳಿಕೆ ಎಂಬಲ್ಲಿ 14 ಅಥವಾ 15ನೇ ಶತಮಾನಕ್ಕೆ ಸೇರಿದ 'ನಾಗಭೈರವನ' ಶಿಲ್ಪವೊಂದು ಪತ್ತೆಯಾಗಿದೆ.

Udupi: ಉಡುಪಿಯ ಕಾರ್ಕಳದಲ್ಲಿ 14ನೇ ಶತಮಾನದ ನಾಗಭೈರವನ ಅಪರೂಪದ ಶಿಲ್ಪ ಪತ್ತೆ
ನಾಗಭೈರವ ಶಿಲ್ಪ
TV9 Web
| Edited By: |

Updated on: Oct 13, 2022 | 12:48 PM

Share

ಉಡುಪಿ: ಉಡುಪಿ (Udupi) ಜಿಲ್ಲೆಯ ಕಾರ್ಕಳ ತಾಲೂಕಿನ ಕೈರ್ಲ, ನಂದಳಿಕೆ ಎಂಬಲ್ಲಿ 14 ಅಥವಾ 15ನೇ ಶತಮಾನಕ್ಕೆ ಸೇರಿದ ನಾಗಭೈರವನ (Nagabhairava sculpture) ಅಪರೂಪದ ಶಿಲ್ಪವೊಂದು ಪತ್ತೆಯಾಗಿದೆ. ಕಾರ್ಕಳ (Karkala) ತಾಲೂಕಿನ ಕೈಯಾರ್ಲದ ಮಹಾಕಾಳಿ ದೇವಾಲಯದ ಬಳಿ ಇರುವ ನಾಗಬನದಲ್ಲಿ ಪುರಾತನ ನಾಗಭೈರವ ಶಿಲ್ಪ ಪತ್ತೆಯಾಗಿದೆ. ಶಿರ್ವದಲ್ಲಿರುವ ಎಂಎಸ್‌ಆರ್‌ಎಸ್ ಕಾಲೇಜಿನ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಭಾಗದ ಸಹ ಪ್ರಾಧ್ಯಾಪಕ ಟಿ. ಮುರುಗೇಶಿ ನೇತೃತ್ವದ ತಂಡ ಪುರಾತತ್ತ್ವ ಶಾಸ್ತ್ರದ ಪರಿಶೋಧನೆಯಲ್ಲಿದ್ದ ವೇಳೆ ಈ ಶಿಲ್ಪ ಪತ್ತೆಯಾಗಿದೆ.

ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಕೈರ್ಲ, ನಂದಳಿಕೆ ಎಂಬಲ್ಲಿ 14 ಅಥವಾ 15ನೇ ಶತಮಾನಕ್ಕೆ ಸೇರಿದ ‘ನಾಗಭೈರವನ’ ಶಿಲ್ಪವೊಂದು ಪತ್ತೆಯಾಗಿದೆ. ಆಯತಾಕಾರದ ಬಳಪದ ಶಿಲೆಯ ಕೆಳಭಾಗದಲ್ಲಿ ಕಾಲುಮಂಡಲದ 4 ಪತ್ರ ಗಂಟುಗಳನ್ನು ಒಳಗೊಂಡ 1 ನಾಗರಾಜನ ಶಿಲ್ಪವನ್ನು ರಚಿಸಲಾಗಿದೆ. ನಾಗನ ಹೆಡೆಯ ಮೇಲೆ ಚತುರ್ಭಾಹು ನಾಗಭೈರವ ನಿಂತಂತೆ ಶಿಲ್ಪವನ್ನು ಕೆತ್ತಲಾಗಿದೆ. ಹಾಗೇ, ಹಿಂದಿನ 2 ಕೈಗಳಲ್ಲೂ 2 ಹೆಡೆ ಬಿಚ್ಚಿದ ನಾಗಗಳನ್ನು ಹಿಡಿದಂತೆ ಇದನ್ನು ರಚಿಸಲಾಗಿದೆ. ಮುಂದಿನ ಕೈಗಳಲ್ಲಿ ನಾಗ ದಂಡ ಮತ್ತು ರುಂಡವಿದೆ.

ಇದನ್ನೂ ಓದಿ: ಉಡುಪಿ ಕೃಷ್ಣಮಠ ಭೇಟಿಗೂ ಮುನ್ನ ಮಾಂಸಾಹಾರ ಸೇವಿಸಿದ್ರಾ ಗೋವಾ ಸಿಎಂ?

ಈ ನಾಗಭೈರವನ ತಲೆಯ ಮೇಲೆ 5 ಹೆಡೆಯ ಸರ್ಪ ಛತ್ರಿ ತೋರಿಸಲಾಗಿದೆ. ಇದು ಶುದ್ಧ ಜನಪದ ಶೈಲಿಯಲ್ಲಿರುವ ಸುಮಾರು 14-15ನೇ ಶತಮಾನದ ಜೈನ ನಾಗಶಿಲ್ಪವಾಗಿದೆ. ಇದು ಉಡುಪಿ ಜಿಲ್ಲೆಯ ನಂದಿಕೂರು ಬಳಿಯ ನಿನ್ನಿಕಲ್‌ನಲ್ಲಿ ಕಂಡುಬರುವ ಭೈರವ ಶಿಲ್ಪದೊಂದಿಗೆ ನಿಕಟ ಹೋಲಿಕೆಯನ್ನು ಹೊಂದಿದೆ. ಇದು ಕುತ್ಯಾರ್ ಬಲ್ಲಾಳ ರಾಜರ ರಾಜಧಾನಿಯಾಗಿತ್ತು ಮತ್ತು ಶಿಲ್ಪವು 14 ಅಥವಾ 15 ನೇ ಶತಮಾನದ್ದು ಎನ್ನಲಾಗಿದೆ. ಭೈರವ ಆರಾಧನೆಯು ಜೈನ ದೇವತೆ ಪದ್ಮಾವತಿಯೊಂದಿಗೆ ನಿಕಟ ಸಂಬಂಧ ಹೊಂದಿತ್ತು. ಅವಳು ಸರ್ಪ ದೇವತೆಯೂ ಆಗಿದ್ದಳು ಎನ್ನಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್