AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Udupi: ಉಡುಪಿಯ ಕಾರ್ಕಳದಲ್ಲಿ 14ನೇ ಶತಮಾನದ ನಾಗಭೈರವನ ಅಪರೂಪದ ಶಿಲ್ಪ ಪತ್ತೆ

ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಕೈರ್ಲ, ನಂದಳಿಕೆ ಎಂಬಲ್ಲಿ 14 ಅಥವಾ 15ನೇ ಶತಮಾನಕ್ಕೆ ಸೇರಿದ 'ನಾಗಭೈರವನ' ಶಿಲ್ಪವೊಂದು ಪತ್ತೆಯಾಗಿದೆ.

Udupi: ಉಡುಪಿಯ ಕಾರ್ಕಳದಲ್ಲಿ 14ನೇ ಶತಮಾನದ ನಾಗಭೈರವನ ಅಪರೂಪದ ಶಿಲ್ಪ ಪತ್ತೆ
ನಾಗಭೈರವ ಶಿಲ್ಪ
TV9 Web
| Edited By: |

Updated on: Oct 13, 2022 | 12:48 PM

Share

ಉಡುಪಿ: ಉಡುಪಿ (Udupi) ಜಿಲ್ಲೆಯ ಕಾರ್ಕಳ ತಾಲೂಕಿನ ಕೈರ್ಲ, ನಂದಳಿಕೆ ಎಂಬಲ್ಲಿ 14 ಅಥವಾ 15ನೇ ಶತಮಾನಕ್ಕೆ ಸೇರಿದ ನಾಗಭೈರವನ (Nagabhairava sculpture) ಅಪರೂಪದ ಶಿಲ್ಪವೊಂದು ಪತ್ತೆಯಾಗಿದೆ. ಕಾರ್ಕಳ (Karkala) ತಾಲೂಕಿನ ಕೈಯಾರ್ಲದ ಮಹಾಕಾಳಿ ದೇವಾಲಯದ ಬಳಿ ಇರುವ ನಾಗಬನದಲ್ಲಿ ಪುರಾತನ ನಾಗಭೈರವ ಶಿಲ್ಪ ಪತ್ತೆಯಾಗಿದೆ. ಶಿರ್ವದಲ್ಲಿರುವ ಎಂಎಸ್‌ಆರ್‌ಎಸ್ ಕಾಲೇಜಿನ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಭಾಗದ ಸಹ ಪ್ರಾಧ್ಯಾಪಕ ಟಿ. ಮುರುಗೇಶಿ ನೇತೃತ್ವದ ತಂಡ ಪುರಾತತ್ತ್ವ ಶಾಸ್ತ್ರದ ಪರಿಶೋಧನೆಯಲ್ಲಿದ್ದ ವೇಳೆ ಈ ಶಿಲ್ಪ ಪತ್ತೆಯಾಗಿದೆ.

ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಕೈರ್ಲ, ನಂದಳಿಕೆ ಎಂಬಲ್ಲಿ 14 ಅಥವಾ 15ನೇ ಶತಮಾನಕ್ಕೆ ಸೇರಿದ ‘ನಾಗಭೈರವನ’ ಶಿಲ್ಪವೊಂದು ಪತ್ತೆಯಾಗಿದೆ. ಆಯತಾಕಾರದ ಬಳಪದ ಶಿಲೆಯ ಕೆಳಭಾಗದಲ್ಲಿ ಕಾಲುಮಂಡಲದ 4 ಪತ್ರ ಗಂಟುಗಳನ್ನು ಒಳಗೊಂಡ 1 ನಾಗರಾಜನ ಶಿಲ್ಪವನ್ನು ರಚಿಸಲಾಗಿದೆ. ನಾಗನ ಹೆಡೆಯ ಮೇಲೆ ಚತುರ್ಭಾಹು ನಾಗಭೈರವ ನಿಂತಂತೆ ಶಿಲ್ಪವನ್ನು ಕೆತ್ತಲಾಗಿದೆ. ಹಾಗೇ, ಹಿಂದಿನ 2 ಕೈಗಳಲ್ಲೂ 2 ಹೆಡೆ ಬಿಚ್ಚಿದ ನಾಗಗಳನ್ನು ಹಿಡಿದಂತೆ ಇದನ್ನು ರಚಿಸಲಾಗಿದೆ. ಮುಂದಿನ ಕೈಗಳಲ್ಲಿ ನಾಗ ದಂಡ ಮತ್ತು ರುಂಡವಿದೆ.

ಇದನ್ನೂ ಓದಿ: ಉಡುಪಿ ಕೃಷ್ಣಮಠ ಭೇಟಿಗೂ ಮುನ್ನ ಮಾಂಸಾಹಾರ ಸೇವಿಸಿದ್ರಾ ಗೋವಾ ಸಿಎಂ?

ಈ ನಾಗಭೈರವನ ತಲೆಯ ಮೇಲೆ 5 ಹೆಡೆಯ ಸರ್ಪ ಛತ್ರಿ ತೋರಿಸಲಾಗಿದೆ. ಇದು ಶುದ್ಧ ಜನಪದ ಶೈಲಿಯಲ್ಲಿರುವ ಸುಮಾರು 14-15ನೇ ಶತಮಾನದ ಜೈನ ನಾಗಶಿಲ್ಪವಾಗಿದೆ. ಇದು ಉಡುಪಿ ಜಿಲ್ಲೆಯ ನಂದಿಕೂರು ಬಳಿಯ ನಿನ್ನಿಕಲ್‌ನಲ್ಲಿ ಕಂಡುಬರುವ ಭೈರವ ಶಿಲ್ಪದೊಂದಿಗೆ ನಿಕಟ ಹೋಲಿಕೆಯನ್ನು ಹೊಂದಿದೆ. ಇದು ಕುತ್ಯಾರ್ ಬಲ್ಲಾಳ ರಾಜರ ರಾಜಧಾನಿಯಾಗಿತ್ತು ಮತ್ತು ಶಿಲ್ಪವು 14 ಅಥವಾ 15 ನೇ ಶತಮಾನದ್ದು ಎನ್ನಲಾಗಿದೆ. ಭೈರವ ಆರಾಧನೆಯು ಜೈನ ದೇವತೆ ಪದ್ಮಾವತಿಯೊಂದಿಗೆ ನಿಕಟ ಸಂಬಂಧ ಹೊಂದಿತ್ತು. ಅವಳು ಸರ್ಪ ದೇವತೆಯೂ ಆಗಿದ್ದಳು ಎನ್ನಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?