AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Udupi: ಉಡುಪಿಯ ಕಾರ್ಕಳದಲ್ಲಿ 14ನೇ ಶತಮಾನದ ನಾಗಭೈರವನ ಅಪರೂಪದ ಶಿಲ್ಪ ಪತ್ತೆ

ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಕೈರ್ಲ, ನಂದಳಿಕೆ ಎಂಬಲ್ಲಿ 14 ಅಥವಾ 15ನೇ ಶತಮಾನಕ್ಕೆ ಸೇರಿದ 'ನಾಗಭೈರವನ' ಶಿಲ್ಪವೊಂದು ಪತ್ತೆಯಾಗಿದೆ.

Udupi: ಉಡುಪಿಯ ಕಾರ್ಕಳದಲ್ಲಿ 14ನೇ ಶತಮಾನದ ನಾಗಭೈರವನ ಅಪರೂಪದ ಶಿಲ್ಪ ಪತ್ತೆ
ನಾಗಭೈರವ ಶಿಲ್ಪ
TV9 Web
| Edited By: |

Updated on: Oct 13, 2022 | 12:48 PM

Share

ಉಡುಪಿ: ಉಡುಪಿ (Udupi) ಜಿಲ್ಲೆಯ ಕಾರ್ಕಳ ತಾಲೂಕಿನ ಕೈರ್ಲ, ನಂದಳಿಕೆ ಎಂಬಲ್ಲಿ 14 ಅಥವಾ 15ನೇ ಶತಮಾನಕ್ಕೆ ಸೇರಿದ ನಾಗಭೈರವನ (Nagabhairava sculpture) ಅಪರೂಪದ ಶಿಲ್ಪವೊಂದು ಪತ್ತೆಯಾಗಿದೆ. ಕಾರ್ಕಳ (Karkala) ತಾಲೂಕಿನ ಕೈಯಾರ್ಲದ ಮಹಾಕಾಳಿ ದೇವಾಲಯದ ಬಳಿ ಇರುವ ನಾಗಬನದಲ್ಲಿ ಪುರಾತನ ನಾಗಭೈರವ ಶಿಲ್ಪ ಪತ್ತೆಯಾಗಿದೆ. ಶಿರ್ವದಲ್ಲಿರುವ ಎಂಎಸ್‌ಆರ್‌ಎಸ್ ಕಾಲೇಜಿನ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಭಾಗದ ಸಹ ಪ್ರಾಧ್ಯಾಪಕ ಟಿ. ಮುರುಗೇಶಿ ನೇತೃತ್ವದ ತಂಡ ಪುರಾತತ್ತ್ವ ಶಾಸ್ತ್ರದ ಪರಿಶೋಧನೆಯಲ್ಲಿದ್ದ ವೇಳೆ ಈ ಶಿಲ್ಪ ಪತ್ತೆಯಾಗಿದೆ.

ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಕೈರ್ಲ, ನಂದಳಿಕೆ ಎಂಬಲ್ಲಿ 14 ಅಥವಾ 15ನೇ ಶತಮಾನಕ್ಕೆ ಸೇರಿದ ‘ನಾಗಭೈರವನ’ ಶಿಲ್ಪವೊಂದು ಪತ್ತೆಯಾಗಿದೆ. ಆಯತಾಕಾರದ ಬಳಪದ ಶಿಲೆಯ ಕೆಳಭಾಗದಲ್ಲಿ ಕಾಲುಮಂಡಲದ 4 ಪತ್ರ ಗಂಟುಗಳನ್ನು ಒಳಗೊಂಡ 1 ನಾಗರಾಜನ ಶಿಲ್ಪವನ್ನು ರಚಿಸಲಾಗಿದೆ. ನಾಗನ ಹೆಡೆಯ ಮೇಲೆ ಚತುರ್ಭಾಹು ನಾಗಭೈರವ ನಿಂತಂತೆ ಶಿಲ್ಪವನ್ನು ಕೆತ್ತಲಾಗಿದೆ. ಹಾಗೇ, ಹಿಂದಿನ 2 ಕೈಗಳಲ್ಲೂ 2 ಹೆಡೆ ಬಿಚ್ಚಿದ ನಾಗಗಳನ್ನು ಹಿಡಿದಂತೆ ಇದನ್ನು ರಚಿಸಲಾಗಿದೆ. ಮುಂದಿನ ಕೈಗಳಲ್ಲಿ ನಾಗ ದಂಡ ಮತ್ತು ರುಂಡವಿದೆ.

ಇದನ್ನೂ ಓದಿ: ಉಡುಪಿ ಕೃಷ್ಣಮಠ ಭೇಟಿಗೂ ಮುನ್ನ ಮಾಂಸಾಹಾರ ಸೇವಿಸಿದ್ರಾ ಗೋವಾ ಸಿಎಂ?

ಈ ನಾಗಭೈರವನ ತಲೆಯ ಮೇಲೆ 5 ಹೆಡೆಯ ಸರ್ಪ ಛತ್ರಿ ತೋರಿಸಲಾಗಿದೆ. ಇದು ಶುದ್ಧ ಜನಪದ ಶೈಲಿಯಲ್ಲಿರುವ ಸುಮಾರು 14-15ನೇ ಶತಮಾನದ ಜೈನ ನಾಗಶಿಲ್ಪವಾಗಿದೆ. ಇದು ಉಡುಪಿ ಜಿಲ್ಲೆಯ ನಂದಿಕೂರು ಬಳಿಯ ನಿನ್ನಿಕಲ್‌ನಲ್ಲಿ ಕಂಡುಬರುವ ಭೈರವ ಶಿಲ್ಪದೊಂದಿಗೆ ನಿಕಟ ಹೋಲಿಕೆಯನ್ನು ಹೊಂದಿದೆ. ಇದು ಕುತ್ಯಾರ್ ಬಲ್ಲಾಳ ರಾಜರ ರಾಜಧಾನಿಯಾಗಿತ್ತು ಮತ್ತು ಶಿಲ್ಪವು 14 ಅಥವಾ 15 ನೇ ಶತಮಾನದ್ದು ಎನ್ನಲಾಗಿದೆ. ಭೈರವ ಆರಾಧನೆಯು ಜೈನ ದೇವತೆ ಪದ್ಮಾವತಿಯೊಂದಿಗೆ ನಿಕಟ ಸಂಬಂಧ ಹೊಂದಿತ್ತು. ಅವಳು ಸರ್ಪ ದೇವತೆಯೂ ಆಗಿದ್ದಳು ಎನ್ನಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ