ಉಡುಪಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ, ಯಾರು ಕಡಲಿಗೆ ಇಳಿಯದಂತೆ ಜಿಲ್ಲಾಡಳಿತ ಸೂಚನೆ

ನಿರಂತರ ಮಳೆ ಹಿನ್ನೆಲೆ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ. ಸಮುದ್ರ ತೀರ, ನದಿ ಭಾಗದ ಜನ ಎಚ್ಚರಿಕೆಯಿಂದಿರಲು ಜಿಲ್ಲಾಧಿಕಾರಿ ಕೂರ್ಮಾರಾವ್ ​ರಿಂದ ಆದೇಶ ನೀಡಿದ್ದಾರೆ.

ಉಡುಪಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ, ಯಾರು ಕಡಲಿಗೆ ಇಳಿಯದಂತೆ ಜಿಲ್ಲಾಡಳಿತ ಸೂಚನೆ
Edited By:

Updated on: Aug 06, 2022 | 1:52 PM

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಕಳೆದ 2 ದಿನಗಳಿಂದ ನಿರಂತರ ಮಳೆ ಹಿನ್ನೆಲೆ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ. ಸಮುದ್ರ ತೀರ, ನದಿ ಭಾಗದ ಜನ ಎಚ್ಚರಿಕೆಯಿಂದಿರಲು ಜಿಲ್ಲಾಧಿಕಾರಿ ಕೂರ್ಮಾರಾವ್ ​ರಿಂದ ಆದೇಶ ನೀಡಿದ್ದಾರೆ. ಜಿಲ್ಲೆಯಲ್ಲಿಂದು 200 ಮಿ‌.ಮೀಟರ್​ಗೂ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ಉಡುಪಿ ಜಿಲ್ಲೆಯಲ್ಲಿ ಆಗಸ್ಟ್ 10ರವರೆಗೆ ಮೀನುಗಾರಿಕೆಗೆ ತಡೆ ನೀಡಲಾಗಿದೆ. ಯಾರು ಕಡಲಿಗೆ ಇಳಿಯಬಾರದು ಎಂದು ಜಿಲ್ಲಾಡಳಿತ ಸೂಚನೆ ನೀಡಿದೆ. ಆಳಸಮದ್ರ ಮೀನುಗಾರಿಕೆ ಹತ್ತು ದಿನ ವಿಳಂಬವಾಗಿದೆ. ಈಗಾಗಲೇ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡಿ ಮೀನುಗಾರರು ಕಾಯುತ್ತಿದ್ದಾರೆ.

Loading...
Unable to load recommendations.
Follow Us