AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಡುಪಿ: ದತ್ತು ಮಗಳು ನಾಪತ್ತೆ, ಮನನೊಂದ ರಂಗಭೂಮಿ ಕಲಾವಿದ ಲೀಲಾಧರ ಶೆಟ್ಟಿ ದಂಪತಿ ಆತ್ಮಹತ್ಯೆಗೆ ಶರಣು

ಜಿಲ್ಲೆಯ ಹೆಸರಾಂತ ಸಮಾಜಸೇವಕ ನಾಟಕ ಸಂಸ್ಥೆಯ ಸಂಸ್ಥಾಪಕ ತಮ್ಮ ಪತ್ನಿಯ ಜೊತೆಗೆ ಆತ್ಮಹತ್ಯೆ ಗೆ ಶರಣಾದ ಘಟನೆ ನಡೆದಿದೆ.‌ ಕಾಪು ತಾಲೂಕಿನ ರಂಗ ತರಂಗ ನಾಟಕ ಸಂಸ್ಥೆಯ ಸ್ಥಾಪಕ ಕೆ. ಲೀಲಾದರ ಶೆಟ್ಟಿ(68) ಮತ್ತು ಅವರ ಪತ್ನಿ ವಸುಂದರ ಶೆಟ್ಟಿ(58) ಆತ್ಮಹತ್ಯೆಗೆ ಶರಣಾದವರು.

ಉಡುಪಿ: ದತ್ತು ಮಗಳು ನಾಪತ್ತೆ, ಮನನೊಂದ ರಂಗಭೂಮಿ ಕಲಾವಿದ ಲೀಲಾಧರ ಶೆಟ್ಟಿ ದಂಪತಿ ಆತ್ಮಹತ್ಯೆಗೆ ಶರಣು
ಲೀಲಾಧರ ಶೆಟ್ಟಿ, ಪತ್ನಿ ವಸುಂಧರಾ ಎಲ್ ಶೆಟ್ಟಿ
TV9 Web
| Edited By: |

Updated on: Dec 14, 2023 | 11:30 AM

Share

ಉಡುಪಿ, ಡಿ.14: ಉಡುಪಿ ಜಿಲ್ಲೆಯ ಕಾಪು ತಾಲೂಕಿನ ನಿವಾಸದಿಂದ 17 ವರ್ಷದ ದತ್ತು ಮಗಳು ನಾಪತ್ತೆಯಾದ ಕೆಲವೇ ಗಂಟೆಗಳ ನಂತರ, ಖ್ಯಾತ ರಂಗಭೂಮಿ ಕಲಾವಿದ (Theatre Artist), ರಂಗ ತರಂಗ ನಾಟಕ ಸಂಸ್ಥೆಯ ಸಂಸ್ಥಾಪಕರಾಗಿದ್ದ ಲೀಲಾಧರ ಶೆಟ್ಟಿ (68) ಮತ್ತು ಅವರ ಪತ್ನಿ ವಸುಂಧರಾ ಎಲ್ ಶೆಟ್ಟಿ (59) ಅವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೃತ ಶೆಟ್ಟಿ ದಂಪತಿಗಳು ಸುಮಾರು 16 ವರ್ಷಗಳ ಹಿಂದೆ ಓರ್ವ ಬಾಲಕಿಯನ್ನು ದತ್ತು ಪಡೆದಿದ್ದರು. ಕಾಪು ತಾಲೂಕಿನ ಮಜೂರು ಗ್ರಾಮದ ಕರಂದಾಡಿ ಗ್ರಾಮದಲ್ಲಿ ವಾಸವಿದ್ದ ದಂಪತಿ ಮಂಗಳವಾರ ಮಗಳು ನಾಪತ್ತೆಯಾಗಿದ್ದರಿಂದ ತೀವ್ರ ನೊಂದುಕೊಂಡಿದ್ದರು ಎಂದು ಸಂಬಂಧಿಕರು ತಿಳಿಸಿದ್ದಾರೆ. ಡಿಸೆಂಬರ್ 12ರ ರಾತ್ರಿ 11:20 ರಿಂದ ಡಿಸೆಂಬರ್ 13 ರ ಬೆಳಗ್ಗೆ 12:30 ರ ನಡುವೆ ದಂಪತಿ ಸೀರೆ ಬಳಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಇನ್ನು ಮತ್ತೊಂದೆಡೆ ಮೃತ ದಂಪತಿ ಮಗಳು ಕಾಣೆಯಾದ ಬಗ್ಗೆ ಮೃತ ಲೀಲಾಧರ್ ಅವರ ಸಂಬಂಧಿ ಮೋಹನ್ ಕುಮಾರ್ ಡಿ ಶೆಟ್ಟಿ ಅವರು ದೂರು ನೀಡಿದ್ದು ದೂರಿನ ಆಧಾರದ ಮೇಲೆ ಕಾಪು ಪೊಲೀಸರು ಅಪಹರಣ ಪ್ರಕರಣವನ್ನು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಕಲ್ಲು ಹೃದಯ ಹಿಂಡುವ ಪ್ರಕರಣ, ಜೋಗಿ ಸಿನಿಮಾ ರೀತಿ ಹೆತ್ತ ತಾಯಿಯ ಹೆಣದ ಮುಂದೆ ಅಬೋಧ ಕಂದಮ್ಮ ಕಿಲಕಿಲ

ಈ ಹಿಂದೆ ಕಾಪು ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ಲೀಲಾಧರ್ ಅವರು ಮಜೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಹಾಗೂ ಸದಸ್ಯರಾಗಿಯೂ ಕಾರ್ಯನಿರ್ವಹಿಸಿದ್ದರು. ಅವರ ಹೆಸರಾಂತ ನಾಟಕ ತಂಡವು ಅವರ ಜನಪ್ರಿಯತೆಗೆ ಸಾಕ್ಷಿಯಾಗಿದೆ ಮತ್ತು ಅವರು ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರೊಂದಿಗೆ ನಿಕಟ ಒಡನಾಟವನ್ನು ಹೊಂದಿದ್ದರು.

ಇದಲ್ಲದೇ ಕಾಪು ಬಂಟರ ಸಂಘದ ಮುಂಚೂಣಿಯಲ್ಲಿದ್ದು ಪ್ರವೀಣ ನಟ-ನಿರ್ದೇಶಕರಾಗಿ ಮನ್ನಣೆ ಗಳಿಸಿದ್ದರು. ಜಿಲ್ಲೆಯ ಹೆಸರಾಂತ ಸಮಾಜಸೇವಕ ರಂಗ ತರಂಗ ನಾಟಕ ಸಂಸ್ಥೆಯ ಸಂಸ್ಥಾಪಕರಾಗಿದ್ದರು. ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
ಖಮೇನಿ ಸಾವಿನ ಕುರಿತಾದ ಪ್ರತಿಭಟನೆಗಳನ್ನು ಖಂಡಿಸಿದ ಮುಂಬೈನ ಶಿಯಾ ನಾಯಕ
ಖಮೇನಿ ಸಾವಿನ ಕುರಿತಾದ ಪ್ರತಿಭಟನೆಗಳನ್ನು ಖಂಡಿಸಿದ ಮುಂಬೈನ ಶಿಯಾ ನಾಯಕ
‘ಭೀಮಾ ತೀರದಲ್ಲಿ’ ರೀ-ರಿಲೀಸ್: ಮಾಹಿತಿ ಹಂಚಿಕೊಂಡ ನಿರ್ಮಾಪಕ
‘ಭೀಮಾ ತೀರದಲ್ಲಿ’ ರೀ-ರಿಲೀಸ್: ಮಾಹಿತಿ ಹಂಚಿಕೊಂಡ ನಿರ್ಮಾಪಕ
ಸಂಚರಿಸುತ್ತಿದ್ದಾಗಲೇ ಬಸ್​​​​ನ ಇಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ
ಸಂಚರಿಸುತ್ತಿದ್ದಾಗಲೇ ಬಸ್​​​​ನ ಇಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ
ನಭೋಮಂಡಲದಲ್ಲಿ ಚಂದ್ರಗ್ರಹಣದ ಅದ್ಭುತ ಕ್ಷಣ
ನಭೋಮಂಡಲದಲ್ಲಿ ಚಂದ್ರಗ್ರಹಣದ ಅದ್ಭುತ ಕ್ಷಣ
ಪ್ರಧಾನಿ ಮುಂದೆ ಕಠಿಣ ಸವಾಲುಗಳು: ಮೋದಿ ಬಗ್ಗೆ ಪಂಡಿತರ ಸ್ಫೋಟಕ ಭವಿಷ್ಯ
ಪ್ರಧಾನಿ ಮುಂದೆ ಕಠಿಣ ಸವಾಲುಗಳು: ಮೋದಿ ಬಗ್ಗೆ ಪಂಡಿತರ ಸ್ಫೋಟಕ ಭವಿಷ್ಯ
ಬಂಡೆಮಹಾಕಾಳಿ ದೇವಾಲಯಕ್ಕೆ ತಟ್ಟದ ಚಂದ್ರಗ್ರಹಣ; ಕಾಳಿಯ ದರ್ಶನಕ್ಕೆ ಜನವೋ ಜನ!
ಬಂಡೆಮಹಾಕಾಳಿ ದೇವಾಲಯಕ್ಕೆ ತಟ್ಟದ ಚಂದ್ರಗ್ರಹಣ; ಕಾಳಿಯ ದರ್ಶನಕ್ಕೆ ಜನವೋ ಜನ!
ಚಂದ್ರ ಗ್ರಹಣದ ವೇಳೆ ಚಂದ್ರನು ಈ ಬಣ್ಣದಲ್ಲಿ ಗೋಚರಿಸುವುದು ಯಾಕೆ?
ಚಂದ್ರ ಗ್ರಹಣದ ವೇಳೆ ಚಂದ್ರನು ಈ ಬಣ್ಣದಲ್ಲಿ ಗೋಚರಿಸುವುದು ಯಾಕೆ?
ಕಲಬುರಗಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ: ಹೊರ ಓಡಿದ ವಕೀಲರು 
ಕಲಬುರಗಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ: ಹೊರ ಓಡಿದ ವಕೀಲರು 
ಬಜೆಟ್ ಮಧ್ಯೆ ಡಿಕೆ ಶಿವಕುಮಾರ್ ಡಿನ್ನರ್ ಪಾಲಿಟಿಕ್ಸ್: ಸಂಚಲನ ಮೂಡಿಸಿದ ನಡೆ
ಬಜೆಟ್ ಮಧ್ಯೆ ಡಿಕೆ ಶಿವಕುಮಾರ್ ಡಿನ್ನರ್ ಪಾಲಿಟಿಕ್ಸ್: ಸಂಚಲನ ಮೂಡಿಸಿದ ನಡೆ
ಮರಿಗಳ ಜೊತೆ ಕಾಫಿ ತೋಟದಲ್ಲಿ ಕಾಡಾನೆಗಳ ಜಾಲಿ ರೌಂಡ್ಸ್
ಮರಿಗಳ ಜೊತೆ ಕಾಫಿ ತೋಟದಲ್ಲಿ ಕಾಡಾನೆಗಳ ಜಾಲಿ ರೌಂಡ್ಸ್