AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಡುಪಿ: ದತ್ತು ಮಗಳು ನಾಪತ್ತೆ, ಮನನೊಂದ ರಂಗಭೂಮಿ ಕಲಾವಿದ ಲೀಲಾಧರ ಶೆಟ್ಟಿ ದಂಪತಿ ಆತ್ಮಹತ್ಯೆಗೆ ಶರಣು

ಜಿಲ್ಲೆಯ ಹೆಸರಾಂತ ಸಮಾಜಸೇವಕ ನಾಟಕ ಸಂಸ್ಥೆಯ ಸಂಸ್ಥಾಪಕ ತಮ್ಮ ಪತ್ನಿಯ ಜೊತೆಗೆ ಆತ್ಮಹತ್ಯೆ ಗೆ ಶರಣಾದ ಘಟನೆ ನಡೆದಿದೆ.‌ ಕಾಪು ತಾಲೂಕಿನ ರಂಗ ತರಂಗ ನಾಟಕ ಸಂಸ್ಥೆಯ ಸ್ಥಾಪಕ ಕೆ. ಲೀಲಾದರ ಶೆಟ್ಟಿ(68) ಮತ್ತು ಅವರ ಪತ್ನಿ ವಸುಂದರ ಶೆಟ್ಟಿ(58) ಆತ್ಮಹತ್ಯೆಗೆ ಶರಣಾದವರು.

ಉಡುಪಿ: ದತ್ತು ಮಗಳು ನಾಪತ್ತೆ, ಮನನೊಂದ ರಂಗಭೂಮಿ ಕಲಾವಿದ ಲೀಲಾಧರ ಶೆಟ್ಟಿ ದಂಪತಿ ಆತ್ಮಹತ್ಯೆಗೆ ಶರಣು
ಲೀಲಾಧರ ಶೆಟ್ಟಿ, ಪತ್ನಿ ವಸುಂಧರಾ ಎಲ್ ಶೆಟ್ಟಿ
TV9 Web
| Edited By: |

Updated on: Dec 14, 2023 | 11:30 AM

Share

ಉಡುಪಿ, ಡಿ.14: ಉಡುಪಿ ಜಿಲ್ಲೆಯ ಕಾಪು ತಾಲೂಕಿನ ನಿವಾಸದಿಂದ 17 ವರ್ಷದ ದತ್ತು ಮಗಳು ನಾಪತ್ತೆಯಾದ ಕೆಲವೇ ಗಂಟೆಗಳ ನಂತರ, ಖ್ಯಾತ ರಂಗಭೂಮಿ ಕಲಾವಿದ (Theatre Artist), ರಂಗ ತರಂಗ ನಾಟಕ ಸಂಸ್ಥೆಯ ಸಂಸ್ಥಾಪಕರಾಗಿದ್ದ ಲೀಲಾಧರ ಶೆಟ್ಟಿ (68) ಮತ್ತು ಅವರ ಪತ್ನಿ ವಸುಂಧರಾ ಎಲ್ ಶೆಟ್ಟಿ (59) ಅವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೃತ ಶೆಟ್ಟಿ ದಂಪತಿಗಳು ಸುಮಾರು 16 ವರ್ಷಗಳ ಹಿಂದೆ ಓರ್ವ ಬಾಲಕಿಯನ್ನು ದತ್ತು ಪಡೆದಿದ್ದರು. ಕಾಪು ತಾಲೂಕಿನ ಮಜೂರು ಗ್ರಾಮದ ಕರಂದಾಡಿ ಗ್ರಾಮದಲ್ಲಿ ವಾಸವಿದ್ದ ದಂಪತಿ ಮಂಗಳವಾರ ಮಗಳು ನಾಪತ್ತೆಯಾಗಿದ್ದರಿಂದ ತೀವ್ರ ನೊಂದುಕೊಂಡಿದ್ದರು ಎಂದು ಸಂಬಂಧಿಕರು ತಿಳಿಸಿದ್ದಾರೆ. ಡಿಸೆಂಬರ್ 12ರ ರಾತ್ರಿ 11:20 ರಿಂದ ಡಿಸೆಂಬರ್ 13 ರ ಬೆಳಗ್ಗೆ 12:30 ರ ನಡುವೆ ದಂಪತಿ ಸೀರೆ ಬಳಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಇನ್ನು ಮತ್ತೊಂದೆಡೆ ಮೃತ ದಂಪತಿ ಮಗಳು ಕಾಣೆಯಾದ ಬಗ್ಗೆ ಮೃತ ಲೀಲಾಧರ್ ಅವರ ಸಂಬಂಧಿ ಮೋಹನ್ ಕುಮಾರ್ ಡಿ ಶೆಟ್ಟಿ ಅವರು ದೂರು ನೀಡಿದ್ದು ದೂರಿನ ಆಧಾರದ ಮೇಲೆ ಕಾಪು ಪೊಲೀಸರು ಅಪಹರಣ ಪ್ರಕರಣವನ್ನು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಕಲ್ಲು ಹೃದಯ ಹಿಂಡುವ ಪ್ರಕರಣ, ಜೋಗಿ ಸಿನಿಮಾ ರೀತಿ ಹೆತ್ತ ತಾಯಿಯ ಹೆಣದ ಮುಂದೆ ಅಬೋಧ ಕಂದಮ್ಮ ಕಿಲಕಿಲ

ಈ ಹಿಂದೆ ಕಾಪು ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ಲೀಲಾಧರ್ ಅವರು ಮಜೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಹಾಗೂ ಸದಸ್ಯರಾಗಿಯೂ ಕಾರ್ಯನಿರ್ವಹಿಸಿದ್ದರು. ಅವರ ಹೆಸರಾಂತ ನಾಟಕ ತಂಡವು ಅವರ ಜನಪ್ರಿಯತೆಗೆ ಸಾಕ್ಷಿಯಾಗಿದೆ ಮತ್ತು ಅವರು ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರೊಂದಿಗೆ ನಿಕಟ ಒಡನಾಟವನ್ನು ಹೊಂದಿದ್ದರು.

ಇದಲ್ಲದೇ ಕಾಪು ಬಂಟರ ಸಂಘದ ಮುಂಚೂಣಿಯಲ್ಲಿದ್ದು ಪ್ರವೀಣ ನಟ-ನಿರ್ದೇಶಕರಾಗಿ ಮನ್ನಣೆ ಗಳಿಸಿದ್ದರು. ಜಿಲ್ಲೆಯ ಹೆಸರಾಂತ ಸಮಾಜಸೇವಕ ರಂಗ ತರಂಗ ನಾಟಕ ಸಂಸ್ಥೆಯ ಸಂಸ್ಥಾಪಕರಾಗಿದ್ದರು. ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ