AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rain: ಕಾಲು ಸಂಕ ದಾಟುವಾಗ ಕಾಲು ಜಾರಿ ನೀರಿಗೆ ಬಿದ್ದ ವಿದ್ಯಾರ್ಥಿನಿಗಾಗಿ ಮುಂದುವರೆದ ಶೋಧ ಕಾರ್ಯ

ಬೈಂದೂರು ತಾಲೂಕಿನ ಕಾಲ್ತೋಡು ಗ್ರಾಮದಲ್ಲಿ ನಿನ್ನೆ (ಅಗಸ್ಟ್ 8) ರಂದು ಕಾಲು ಸಂಕ ದಾಟುವಾಗ ಕಾಲು ಜಾರಿ ನೀರಿಗೆ ಬಿದ್ದ ಎರಡನೇ ತರಗತಿಯ ವಿದ್ಯಾರ್ಥಿನಿ ಸನ್ನಿಧಿಗಾಗಿ ( 7) ಶೋಧಕಾರ್ಯ ಮುಂದುವರಿದಿದೆ.

Karnataka Rain: ಕಾಲು ಸಂಕ ದಾಟುವಾಗ ಕಾಲು ಜಾರಿ ನೀರಿಗೆ ಬಿದ್ದ ವಿದ್ಯಾರ್ಥಿನಿಗಾಗಿ ಮುಂದುವರೆದ ಶೋಧ ಕಾರ್ಯ
ಸನ್ನಿಧಿಗಾಗಿ ಶೋಧಕಾರ್ಯ
TV9 Web
| Updated By: ವಿವೇಕ ಬಿರಾದಾರ|

Updated on:Aug 09, 2022 | 3:18 PM

Share

ಉಡುಪಿ: ಬೈಂದೂರು (Baindur) ತಾಲೂಕಿನ ಕಾಲ್ತೋಡು ಗ್ರಾಮದಲ್ಲಿ ನಿನ್ನೆ (ಅಗಸ್ಟ್ 8) ರಂದು ಕಾಲು ಸಂಕ ದಾಟುವಾಗ ಕಾಲು ಜಾರಿ ನೀರಿಗೆ ಬಿದ್ದ ಎರಡನೇ ತರಗತಿಯ ವಿದ್ಯಾರ್ಥಿನಿ (Student) ಸನ್ನಿಧಿಗಾಗಿ ( 7) ಶೋಧಕಾರ್ಯ ಮುಂದುವರಿದಿದೆ. ಅಗ್ನಿಶಾಮಕ ದಳ, ಈಜು ತಜ್ಞರಿಂದ ಶೋಧ ಕಾರ್ಯ ನಡೆಯುತ್ತಿದೆ. ಬಾಲಕಿ ಅರೆ ಶಿರೂರು ಹೊಳೆಯಲ್ಲಿ ಕೊಚ್ಚಿ ಹೋಗಿದ್ದಾಳೆ. ಸ್ಥಳಕ್ಕೆ ಜಿಲ್ಲಾಧಿಕಾರಿ ಕುರ್ಮಾ ರಾವ್ ಹಾಗೂ ಎಸಿ ರಾಜು ಭೇಟಿ ನೀಡಿದ್ದಾರೆ.

ಗ್ರಾಮಸ್ಥರು ಹಲವು ವರ್ಷಗಳಿಂದ ಸೇತುವೆಗಾಗಿ ಬೇಡಿಕೆ ಇಟ್ಟಿದ್ದಾರೆ. ಬೀಜಮಕ್ಕಿ ಪರಿಸರದಲ್ಲಿ ಹತ್ತಕ್ಕೂ ಅಧಿಕ ಕಾಲುಸಂಕಗಳು ಇವೆ. ಆದರೆ ಶಾಶ್ವತ ಸೇತುವೆಗಾಗಿ ಗ್ರಾಮಸ್ಥರು ಮನವಿ ಮಾಡಿ ಬೇಸತ್ತಿದ್ದಾರೆ.

ನಡೆದಿದ್ದೇನು?

ಉಡುಪಿ: ನಿನ್ನೆ (ಅಗಸ್ಟ್ 8) ರಂದು ಕಾಲು ಸಂಕ ದಾಟುವಾಗ ಎರಡನೇ ತರಗತಿಯ ವಿದ್ಯಾರ್ಥಿನಿ ಕಾಲು ಜಾರಿ ನೀರಿಗೆ ಬಿದ್ದ ಘಟನೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕಾಲ್ತೋಡು ಗ್ರಾಮದ ಬಿಜಮಕ್ಕಿ ಸಮೀಪ ನಡೆದಿತ್ತು. ಚಪ್ಪರಿಕೆ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಎರಡನೇ ತರಗತಿ ಓದುತ್ತಿದ್ದ 7 ವರ್ಷದ ಸನ್ನಿಧಿಗಾಗಿ ಹುಡುಕಾಟ ನಡೆಸಲಾಗುತ್ತಿದೆ.

ಸನ್ನಿಧಿ ಶಾಲೆ ಮುಗಿಸಿ ಮನೆಗೆ ವಾಪಸಾಗುತ್ತಿದ್ದಾಗ ದುರಂತ ಸಂಭವಿಸಿದೆ. ನೀರುಪಾಲಾದ ವಿದ್ಯಾರ್ಥಿನಿ ಸನ್ನಿಧಿ ಬೊಳಂಬಳ್ಳಿ ಗ್ರಾಮದ ನಿವಾಸಿಯಾಗಿದ್ದಾಳೆ. ಮಕ್ಕಿಮನೆ ಪ್ರದೀಪ್ ಪೂಜಾರಿ, ಸುಮಿತ್ರಾ ದಂಪತಿ ಪುತ್ರಿ. ಬಾಲಕಿ ನಿವಾಸಕ್ಕೆ ಶಾಸಕ ಸುಕುಮಾರ್ ಶೆಟ್ಟಿ ಭೇಟಿ ನೀಡಿ ಸಾಂತ್ವನ ಹೇಳಿದ್ದಾರೆ. ಘಟನಾ ಸ್ಥಳಕ್ಕೆ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷರಾದ ರಾಜು ಪೂಜಾರಿ, ಬೈಂದೂರು ತಹಶೀಲ್ದಾರ್‌ ಕಿರಣ್ ಗೋರಯ್ಯ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ಥಳದಲ್ಲಿ ರಕ್ಷಣಾ ಕಾರ್ಯಚರಣೆ ನಡೆಯುತ್ತಿದೆ. ಬೈಂದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಕಂಪ್ಲಿ ಸೇತುವೆ ಮುಳುಗಡೆ ಹಿನ್ನಲೆ ಬಲಗೆ ಬಿದ್ದ ಮೀನುಗಳು: ಕಂಪ್ಲಿ ಸೇತುವೆ ಮುಳುಗಡೆಯಾದ ಹಿನ್ನೆಲೆ ದೊಡ್ಡ ದೊಡ್ಡ ಮೀನುಗಳು ಬಲಗೆ ಬಿದ್ದಿವೆ. ಮೀನುಗಾರರು ಸೇತುವೆ ಪಕ್ಕದ ನೀರಿನಲ್ಲಿ ಬಲೆ ಹಾಕಿದ್ದರು.  ದೊಡ್ಡ ದೊಡ್ಡ ಮೀನು ಕಂಡು ಮೀನುಗಾರರು ಖುಷಿಯಾಗಿದ್ದಾರೆ.

Published On - 3:18 pm, Tue, 9 August 22

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ