AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಜಾಬ್​ಗಾಗಿ ಹೈಕೋರ್ಟ್ ಮೆಟ್ಟಿಲೇರಿದ ಮುಸ್ಲಿಂ ವಿದ್ಯಾರ್ಥಿ; ಹಿಜಾಬ್ ಧರಿಸುವುದು ಮೂಲಭೂತ ಹಕ್ಕೆಂದು ರಿಟ್ ಅರ್ಜಿ

ಸಂವಿಧಾನದಡಿ ಧಾರ್ಮಿಕ ಹಕ್ಕುಗಳನ್ನು ನೀಡಲಾಗಿದೆ. ಹಿಜಾಬ್ ಧರಿಸುವುದೂ ಧಾರ್ಮಿಕ ಹಕ್ಕಿನ ಭಾಗ ಆಗಿದೆ. ಆದರೆ ಹಿಜಾಬ್ ಧರಿಸಲು ಕಾಲೇಜು ಅನುಮತಿಸಿಲ್ಲ. ಹೀಗಾಗಿ ಸರ್ಕಾರಕ್ಕೆ ಸೂಕ್ತ ನಿರ್ದೇಶನ ನೀಡಲು ಮನವಿ ಮಾಡಿದ್ದಾರೆ.

ಹಿಜಾಬ್​ಗಾಗಿ ಹೈಕೋರ್ಟ್ ಮೆಟ್ಟಿಲೇರಿದ ಮುಸ್ಲಿಂ ವಿದ್ಯಾರ್ಥಿ; ಹಿಜಾಬ್ ಧರಿಸುವುದು ಮೂಲಭೂತ ಹಕ್ಕೆಂದು ರಿಟ್ ಅರ್ಜಿ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Jan 31, 2022 | 8:32 PM

Share

ಉಡುಪಿ: ಹಿಜಾಬ್​ಗಾಗಿ ಮುಸ್ಲಿಂ ವಿದ್ಯಾರ್ಥಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಹಿಜಾಬ್ ಧರಿಸುವುದು ಮೂಲಭೂತ ಹಕ್ಕೆಂದು ವಾದ ಮಾಡಿ ಹೈಕೋರ್ಟ್​ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದಾರೆ. ಉಡುಪಿಯ ಸರ್ಕಾರಿ ಪಿಯು ಕಾಲೇಜು ವಿದ್ಯಾರ್ಥಿನಿ ರಿಟ್ ಅರ್ಜಿ ಸಲ್ಲಿಸಿದ್ದಾರೆ. ಸಂವಿಧಾನದಡಿ ಧಾರ್ಮಿಕ ಹಕ್ಕುಗಳನ್ನು ನೀಡಲಾಗಿದೆ. ಹಿಜಾಬ್ ಧರಿಸುವುದೂ ಧಾರ್ಮಿಕ ಹಕ್ಕಿನ ಭಾಗ ಆಗಿದೆ. ಆದರೆ ಹಿಜಾಬ್ ಧರಿಸಲು ಕಾಲೇಜು ಅನುಮತಿಸಿಲ್ಲ. ಹೀಗಾಗಿ ಸರ್ಕಾರಕ್ಕೆ ಸೂಕ್ತ ನಿರ್ದೇಶನ ನೀಡಲು ಮನವಿ ಮಾಡಿದ್ದಾರೆ.

ಉಡುಪಿಯ ಸರ್ಕಾರಿ ಮಹಿಳಾ ಕಾಲೇಜು ಹಿಜಾಬ್ ವಿವಾದಕ್ಕೆ ಸಂಬಂಧಿಸಿ ಉಡುಪಿ ಶಾಸಕ ರಘುಪತಿ ಭಟ್ ನೇತೃತ್ವದಲ್ಲಿ ಸೋಮವಾರ ಕಾಲೇಜಿನಲ್ಲಿ ಸಭೆ ನಡೆಸಲಾಗಿತ್ತು. ಬ್ಯಾರಿ ಸಾಹಿತ್ಯ ಅಕಾಡೆಮಿ ಸದಸ್ಯರು ಕಾಲೇಜಿನ ಆಡಳಿತ ಮಂಡಳಿ, ಡಿಡಿಪಿಯು ಸಭೆಯಲ್ಲಿ ಭಾಗಿ ಆಗಿದ್ದರು. ಒಂದೂವರೆ ತಿಂಗಳುಗಳ ಕಾಲ ಈ ವಿವಾದ ನಡೆಯಿತು. ಹಿಜಾಬ್ ಧರಿಸದೆ ಕಾಲೇಜಿಗೆ ಬರಲು ನಾಳೆ ಒಂದು ದಿನ ಅವಕಾಶ ಇದೆ. ಕಾಲೇಜಿಗೆ ಬರದಿದ್ದರೆ ಆನ್ಲೈನ್ ಕ್ಲಾಸ್ ಅವಕಾಶ ಮಾಡಲಾಗಿದೆ. ಇನ್ನು ವಿದ್ಯಾರ್ಥಿಗಳು ಹೆಸರಿಗಾಗಿ ಹಠ ಮಾಡುವುದು ಸರಿಯಲ್ಲ. ಹಿಜಾಬ್​ಗೆ ನಮ್ಮ ವಿರೋಧ ಇಲ್ಲ ಅದು ಇಸ್ಲಾಂನ ಪದ್ಧತಿ. ಶರಿಯತ್ ಆಧಾರಿತ ರಾಷ್ಟ್ರ ಬೇರೆ, ಪ್ರಜಾಪ್ರಭುತ್ವ ರಾಷ್ಟ್ರ ಬೇರೆ. ಭಾರತದಲ್ಲಿ ಸರ್ಕಾರದ ಆದೇಶ ಪಾಲಿಸಬೇಕು ಎಂದು ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ರಹೀಂ ಉಚ್ಚಿಲ ಹೇಳಿಕೆ ನೀಡಿದ್ದರು.

ಈ ಬಗ್ಗೆ ನಾಳೆಯ ಒಳಗೆ ತೀರ್ಮಾನಕ್ಕೆ ಬರುವುದಾಗಿ ಮೂವರು ವಿದ್ಯಾರ್ಥಿನಿಯರು ಒಪ್ಪಿಕೊಂಡಿದ್ದಾರೆ. ಓರ್ವ ವಿದ್ಯಾರ್ಥಿನಿ ಹಿಜಾಬ್​ಗೆ ಪಟ್ಟು ಹಿಡಿದು ಅಭಿಪ್ರಾಯ ಹೇಳಿದ್ದಾಳೆ ಎಂದು ಉಡುಪಿಯಲ್ಲಿ ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ರಹೀಂ ಉಚ್ಚಿಲ ತಿಳಿಸಿದ್ದರು.

ಐವರು ಹಿಜಬ್ ಹೋರಾಟಗಾರ್ತಿಯರ ಪೈಕಿ ನಾಲ್ವರು ಸಭೆಯಲ್ಲಿ ಭಾಗಿಯಾಗಿದ್ದರು. ಈ ಹಂತದಲ್ಲಿ ಹಿಜಾಬ್​ಗೆ ಅನುಮತಿ ಕೊಡಲು ಸಾಧ್ಯವಿಲ್ಲ. ಸರಕಾರ, ಸಮಿತಿ ತೀರ್ಮಾನ ಮಾಡಿದಂತೆ ಸಮವಸ್ತ್ರದಲ್ಲಿ ಕಾಲೇಜಿಗೆ ಬರಬೇಕು. ಎಲ್ಲಾ ವಿಚಾರಗಳನ್ನು ಪೋಷಕರಿಗೆ ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಲಾಗಿದೆ. ತರಗತಿಯಲ್ಲಿ ಹಿಜಾಬ್ ಧರಿಸಿ ಪಾಠ ಕೇಳುವ ಅವಕಾಶ ಇಲ್ಲ. ಮನೆಯ ಪುರುಷರ ಜೊತೆ ಮಾತನಾಡಿ ತೀರ್ಮಾನ ಎಂದು ಪೋಷಕರು ಹೇಳಿದ್ದಾರೆ. ಹಿಜಾಬ್ ತೆಗೆದು ಕ್ಲಾಸಿಗೆ ಬರುವುದಾದರೆ ನಾಳೆಯಿಂದ ಬನ್ನಿ. ನಾಳೆಯಿಂದ ಯಾವುದೇ ಕಾಲೇಜು ಆವರಣದಲ್ಲಿ ಗೊಂದಲ ನಿರ್ಮಾಣಕ್ಕೆ ಅವಕಾಶವಿಲ್ಲ. ಮಾಧ್ಯಮ, ಸಂಘಸಂಸ್ಥೆ, ಸಂಘಟನೆಗೆ ಪ್ರವೇಶ ಇಲ್ಲ ಎಂದು ತಿಳಿಸಲಾಗಿತ್ತು.

ಎರಡು ತಿಂಗಳಲ್ಲಿ ಪರೀಕ್ಷೆಗಳು ಆರಂಭವಾಗಲಿದೆ. ಕಾಲೇಜಿನ ಬೇರೆ ಮಕ್ಕಳಿಂದ ಪೋಷಕರಿಂದ ದೂರುಗಳು ಬಂದಿವೆ. ಮನವಿ ಕೊಡುವುದಿದ್ದರೆ ಡಿಸಿಗೆ ಕೊಡಿ ಕಾಲೇಜಿಗೆ ಯಾರೂ ಬರುವಂತಿಲ್ಲ. ಶಿಸ್ತು ಪಾಲಿಸುವವರು ಕಾಲೇಜಿಗೆ ಬರಬಹುದು ಇನ್ನು. ಗೊಂದಲಕ್ಕೆ ಅವಕಾಶ ಇಲ್ಲ ಎಂದು ಉಡುಪಿ ಶಾಸಕ ರಘುಪತಿ ಭಟ್ ಭಟ್ ಹೇಳಿಕೆ ನೀಡಿದ್ದರು.

ಇದನ್ನೂ ಓದಿ: ಹಿಜಾಬ್ ತೆಗೆದು ಕ್ಲಾಸಿಗೆ ಬರುವುದಾದರೆ ಬನ್ನಿ; ಹಿಜಾಬ್ ಧರಿಸಿ ಪಾಠ ಕೇಳುವ ಅವಕಾಶ ಇಲ್ಲ: ಸಭೆಯಲ್ಲಿ ತೀರ್ಮಾನ

ಇದನ್ನೂ ಓದಿ: ಶಾಲೆಗಳಲ್ಲಿ ಹಿಜಾಬ್: ತ್ರಿವಳಿ ತಲಾಕ್ ನಿಷೇಧ ಮಾಡಿದಂತೆ ರಾಜ್ಯ ದೇಶದಲ್ಲಿ ಬುರ್ಖಾ ನಿಷೇಧಿಸಬೇಕು ಎಂದ ರಿಷಿ ಕುಮಾರ ಸ್ವಾಮೀಜಿ

Follow Us
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ಹುಲಿ ಕಾರ್ತಿಕ್​​ಗೆ ಚಾಲೆಂಜ್ ಮಾಡಿದ ಅನುಶ್ರೀ; ಗೆದ್ದಿದ್ದು ಯಾರು?
ಹುಲಿ ಕಾರ್ತಿಕ್​​ಗೆ ಚಾಲೆಂಜ್ ಮಾಡಿದ ಅನುಶ್ರೀ; ಗೆದ್ದಿದ್ದು ಯಾರು?
ಪೆನ್ ಕ್ಯಾಪ್ ನುಂಗಿದ ಬಾಲಕನ ಜೀವ ಉಳಿಸಿದ ವೈದ್ಯರು
ಪೆನ್ ಕ್ಯಾಪ್ ನುಂಗಿದ ಬಾಲಕನ ಜೀವ ಉಳಿಸಿದ ವೈದ್ಯರು