AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಳೆಯಿಂದ ಪ್ರೌಢಶಾಲೆ ಆರಂಭ ಹಿನ್ನೆಲೆ ಉಡುಪಿ ಜಿಲ್ಲೆಯಾದ್ಯಂತ ಸೆಕ್ಷನ್ 144 ಜಾರಿ

ಫೆಬ್ರವರಿ 12ರಿಂದ 19ರವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಉಡುಪಿ ಡಿಸಿ ಕೂರ್ಮರಾವ್ ಆದೇಶ ಹೊರಡಿಸಿದ್ದಾರೆ. ಶಾಲೆಯ ಸುತ್ತಮುತ್ತ ಗುಂಪು ಸೇರುವಂತಿಲ್ಲ.

ನಾಳೆಯಿಂದ ಪ್ರೌಢಶಾಲೆ ಆರಂಭ ಹಿನ್ನೆಲೆ ಉಡುಪಿ ಜಿಲ್ಲೆಯಾದ್ಯಂತ ಸೆಕ್ಷನ್ 144 ಜಾರಿ
ಕೇಸರಿ ಶಾಲು ಧರಿಸಿರುವ ವಿದ್ಯಾರ್ಥಿಗಳು, ಹಿಜಾಬ್ ಧರಿಸಿರುವ ವಿದ್ಯಾರ್ಥಿನಿಯರು
TV9 Web
| Edited By: |

Updated on: Feb 13, 2022 | 10:09 AM

Share

ಉಡುಪಿ: ಹಿಜಾಬ್(Hijab) ವಿವಾದ ಹಿನ್ನೆಲೆ ಶಾಲೆಗಳಿಗೆ ರಜೆ ನೀಡಲಾಗಿತ್ತು. ಸದ್ಯ ಈಗ ರಾಜ್ಯದಲ್ಲಿ ನಾಳೆಯಿಂದ ಪ್ರೌಢಶಾಲೆ ಪುನಾರಂಭಗೊಳ್ಳಲಿದೆ. ಮೊದಲ ಹಂತದಲ್ಲಿ 10ನೇ ತರಗತಿವರೆಗೆ ಶಾಲೆ ಆರಂಭವಾಗಲಿದೆ. ಸದ್ಯ ಮುಂಜಾಗ್ರತಾ ಕ್ರಮವಾಗಿ ಉಡುಪಿ ಜಿಲ್ಲೆಯಾದ್ಯಂತ ಸೆಕ್ಷನ್ 144 ಜಾರಿಗೊಳಿಸಲಾಗಿದೆ. ಫೆಬ್ರವರಿ 12ರಿಂದ 19ರವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಉಡುಪಿ ಡಿಸಿ ಕೂರ್ಮರಾವ್ ಆದೇಶ ಹೊರಡಿಸಿದ್ದಾರೆ. ಶಾಲೆಯ ಸುತ್ತಮುತ್ತ ಗುಂಪು ಸೇರುವಂತಿಲ್ಲ. ಪ್ರತಿಭಟನೆ, ಮೆರವಣಿಗೆಗೆ ಅವಕಾಶ ಇಲ್ಲ. ಯಾವುದೇ ವ್ಯಕ್ತಿ ಜಾತಿ ಧರ್ಮಕ್ಕೆ ನೈತಿಕತೆ ವಿರುದ್ಧ ನಡೆದುಕೊಳ್ಳುವಂತಿಲ್ಲ ಎಂದು ಆದೇಶಿಸಲಾಗಿದೆ.

ಮತ್ತೊಂದು ಕಡೆ ನಾಳೆಯಿಂದ ಫ್ರೌಡ ಶಾಲೆಗಳನ್ನ ಆರಂಭಿಸುವ ಬಗ್ಗೆ ಹುಬ್ಬಳ್ಳಿಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಮಾಹಿತಿ ನೀಡಿದ್ದಾರೆ. ಈಗಾಗಲೇ ಜಿಲ್ಲಾಧಿಕಾರಿಗಳು, ಶಾಲಾಡಳಿತ ಮಂಡಳಿಗಳಿಗೆ ಶಾಂತಿ ಸಭೆ ಮಾಡಲು ತಿಳಿಸಿದ್ದೇನೆ. ನಾಳೆ ಶಾಂತಿಯುತ ಎಲ್ಲಾ ತರಗತಿಗಳು ನಡೆಯುತ್ತವೆ. ಅದನ್ನ ನೋಡಿಕೊಂಡು ಕಾಲೇಜುಗಳ ಆರಂಭದ ಬಗ್ಗೆ ನಿರ್ಧರಿಸುತ್ತೇವೆ. ಎರಡೂ ವರ್ಷದಲ್ಲಿ ಆರ್ಥಿಕತೆ ಬಹಳ ನಷ್ಟ ಆಗಿದೆ. ಈ ಬಜೆಟ್ ನಲ್ಲಿ ಅದಕ್ಕೆ ಬೂಸ್ಟ್ ಕೊಡೋ ಪ್ರಯತ್ನ ಮಾಡುತ್ತೇವೆ. ಶಾಲಾ ಕಾಲೇಜುಗಳನ್ನ ಆರಂಭಿಸೋದು ನಮ್ಮ ಮೊದಲ ಆಧ್ಯತೆ. ಮೊದಲಿನ ಹಾಗೇ ಸೌರ್ಹದಯುತವಾಗಿ ಶಾಲಾ ಕಾಲೇಜುಗಳನ್ನ ಆರಂಭಿಸುತ್ತೇವೆ. ಯಾರು ಪ್ರಚೋದನೆ ನೀಡ್ತಾರೆ, ಸೋಷಿಯಲ್ ಮೀಡಿಯಾದಲ್ಲಿ ಸಂದೇಶವನ್ನ ಹಾಕ್ತಾರೆ ಅವೆಲ್ಲವನ್ನೂ ನಮ್ಮ ಅಧಿಕಾರಿಗಳು ಗಮನಿಸುತ್ತಾರೆ ಎಂದು ತಿಳಿಸಿದ್ದಾರೆ.

ಹಿಜಾಬ್ ವಿವಾದ ಪೂರ್ವನಿಯೋಜಿತ ಇನ್ನು ಗೋವಾದಲ್ಲಿ ಬಿಜೆಪಿ ನಾಯಕ ಸಿ.ಟಿ.ರವಿ ಹಿಜಾಬ್ ಸಂಬಂಧ ಮಾತನಾಡಿದ್ದು ರಾಜ್ಯದಲ್ಲಿ ಹಿಜಾಬ್ ವಿವಾದ ಒಂದು ಷಡ್ಯಂತ್ರವಾಗಿದೆ ಎಂದು ಆರೋಪಿಸಿದ್ದಾರೆ. ಕೇರಳ, ಮಹಾರಾಷ್ಟ್ರದಲ್ಲಿ ಹಿಜಾಬ್ ವಿಚಾರ ತಲೆಎತ್ತಿತ್ತು. ಆದರೆ ಆ 2 ರಾಜ್ಯಗಳಲ್ಲಿ ಹಿಜಾಬ್ ವಿವಾದ ಆಗಲಿಲ್ಲ. ರಾಜ್ಯದಲ್ಲಿ ಏಕೆ ವಿವಾದ ಮಾಡುತ್ತಿದ್ದೀರೆಂದು ಗೋವಾದಲ್ಲಿ ಬಿಜೆಪಿ ನಾಯಕ ಸಿ.ಟಿ.ರವಿ ಪ್ರಶ್ನೆ ಮಾಡಿದ್ದಾರೆ. ಹಿಂದೆ CAA, ರೈತರನ್ನಿಟ್ಟುಕೊಂಡು ವಿವಾದ ಮಾಡಿದ್ದರು. ಈಗ ಹಿಜಾಬ್ ವಿವಾದ ಮಾಡಲಾಗುತ್ತಿದೆ. ಹಿಜಾಬ್ ವಿವಾದ ಪೂರ್ವನಿಯೋಜಿತ ಅನ್ನಿಸುತ್ತಿದೆ. ಉಡುಪಿ ವಿದ್ಯಾರ್ಥಿನಿಯರ ಹಿಂದೆ CFI ಸಂಘಟನೆ ಇದೆ.

ಕಾಂಗ್ರೆಸ್ ತನ್ನ ಮತೀಯ ವೋಟ್ ಬ್ಯಾಂಕ್ಗಾಗಿ ವಿವಾದ ಮಾಡುತ್ತಿದೆ. ವಿಭಜನೆಯ ವಿಷ ಬೀಜದಿಂದ ಭಾರತ ವಿಭಜನೆ ಮಾಡಲಾಗುತ್ತಿದೆ. ಆಗ ಪಿತೂರಿ ಅರ್ಥ ಮಾಡಿಕೊಂಡಿದ್ರೆ ವಿಭಜನೆ ಆಗ್ತಿತ್ತಾ. ಮಕ್ಕಳಲ್ಲಿ ನಾನು, ನೀನು ಬೇರೆ ಎಂಬ ವಿಷ ಬೀಜ ಬಿತ್ತಲಾಗುತ್ತಿದೆ. ಹೀಗೇ ಇರಬೇಕು ಎನ್ನುವುದು ಮತಾಂಧತೆ ಪ್ರತೀಕ ಎಂದು ಸಿ.ಟಿ.ರವಿ ಹೇಳಿದ್ರು.

ಇದನ್ನೂ ಓದಿ: Gehraiyaan: ‘ಗೆಹರಾಯಿಯಾ’, ‘ಖಿಲಾಡಿ’ಗೂ ಪೈರಸಿ ಕಾಟ; ತೆರೆ ಕಂಡ ಒಂದೇ ದಿನಕ್ಕೆ ಲೀಕ್ ಆಯ್ತು ಚಿತ್ರಗಳು

ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?