AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರತ್ಯೇಕ ಘಟನೆ: ಉಡುಪಿಯಲ್ಲಿ ನೀರಿನ ಹೊಂಡಕ್ಕೆ ಬಿದ್ದು ಮೂರು ವರ್ಷದ ಬಾಲಕಿ, ಕಾರವಾರದಲ್ಲಿ ವಿದ್ಯುತ್​ ಪ್ರವಹಿಸಿ ಎಂಟು ತಿಂಗಳ​ ಮಗು ಸಾವು

ಉಡುಪಿಯಲ್ಲಿ ನೀರಿನ ಹೊಂಡಕ್ಕೆ ಬಿದ್ದು ಮೂರು ವರ್ಷದ ಬಾಲಕಿ ಸಾವನ್ನಪ್ಪಿದರೆ, ಇತ್ತ ಕಾರವಾರದಲ್ಲಿ ಮೊಬೈಲ್ ಚಾರ್ಜರ್​​ ವೈರ್​ನಿಂದ ವಿದ್ಯುತ್​ ಪ್ರವಹಿಸಿ 8 ತಿಂಗಳ ಮಗು ಸಾವನ್ನಪ್ಪಿದೆ.

ಪ್ರತ್ಯೇಕ ಘಟನೆ: ಉಡುಪಿಯಲ್ಲಿ ನೀರಿನ ಹೊಂಡಕ್ಕೆ ಬಿದ್ದು ಮೂರು ವರ್ಷದ ಬಾಲಕಿ, ಕಾರವಾರದಲ್ಲಿ ವಿದ್ಯುತ್​ ಪ್ರವಹಿಸಿ ಎಂಟು ತಿಂಗಳ​ ಮಗು ಸಾವು
ಕೃತಿಕಾ, ಸಾನಿಧ್ಯ
ಪ್ರಜ್ವಲ್ ಅಮೀನ್​, ಉಡುಪಿ
| Edited By: |

Updated on:Aug 02, 2023 | 11:24 AM

Share

ಉಡುಪಿ. ಆ.2: ನೀರಿನ ಹೊಂಡಕ್ಕೆ ಬಿದ್ದು ಮೂರು ವರ್ಷದ ಬಾಲಕಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಹೆಬ್ರಿ(Hebri)ತಾಲೂಕಿನ ನಾಲ್ಕೂರು ಗ್ರಾಮದ ಕಕ್ಕೆ ಅರಮನೆ ಜೆಡ್ಡು ಸಮೀಪ ನಡೆದಿದೆ. ಕೃತಿಕಾ(3) ಮೃತ ಬಾಲಕಿ. ನಿನ್ನೆ(ಆ.1) ರಾತ್ರಿ ಅಜ್ಜಿ ಮಂಜುಳಾ ಜೊತೆ ನಡೆದುಕೊಂಡು ಹೋಗುತ್ತಿದ್ದಾಗ ಕತ್ತಲಲ್ಲಿ ರಸ್ತೆ ಪಕ್ಕದಲ್ಲಿರುವ ಹೊಂಡಕ್ಕೆ ಬಾಲಕಿ ಬಿದ್ದು ಕೊನೆಯುಸಿರೆಳೆದಿದ್ದಾಳೆ. ಮಗಳನ್ನು ಕಳೆದುಕೊಂಡ ಪೋಷಕರ ಆಕ್ರಂಧನ ಮುಗಿಲು ಮುಟ್ಟಿದೆ. ಈ ಕುರಿತು ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೊಬೈಲ್ ಚಾರ್ಜರ್​​ ವೈರ್​ನಿಂದ ವಿದ್ಯುತ್​ ಪ್ರವಹಿಸಿ​ ಮಗು ಸಾವು

ಉತ್ತರ ಕನ್ನಡ: ಜಿಲ್ಲೆಯ ಕಾರವಾರ ತಾಲೂಕಿನ ಸಿದ್ದರ ಗ್ರಾಮದಲ್ಲಿ ಮೊಬೈಲ್ ಚಾರ್ಜರ್​​ ವೈರ್​ನಿಂದ ವಿದ್ಯುತ್​ ಪ್ರವಹಿಸಿ​ ಮಗು ಸಾವನ್ನಪ್ಪಿದೆ. ಸಂಜನಾ ದಂಪತಿಯ 8 ತಿಂಗಳ ಹೆಣ್ಣು ಮಗು ಇದಾಗಿದ್ದು, ಮೊಬೈಲ್​ ಚಾರ್ಜ್​ಗೆ ಹಾಕಿ ಪೋಷಕರು ಆಪ್​ ಮಾಡದೇ ಇಟ್ಟಿದ್ದರು. ಈ ವೇಳೆ ಆನ್​ಇದ್ದ ಚಾರ್ಜರ್​ನ್ನು​ ಮಗು ಬಾಯಲ್ಲಿಟ್ಟುಕೊಂಡಿದ್ದು ಕೂಡಲೇ ಶಾಕ್​ನಿಂದ ಕೊನೆಯುಸಿರೆಳದಿದೆ.

ಇದನ್ನೂ ಓದಿ:Muharram: ಚಿತ್ರದುರ್ಗದಲ್ಲಿ ಮೊಹರಂ ಆಚರಣೆ ವೇಳೆ ಕೊಂಡ ಹಾಯುವಾಗ ಮಗುವಿನೊಂದಿಗೆ ಬೆಂಕಿಗೆ ಬಿದ್ದ ವ್ಯಕ್ತಿ

ಸಾರ್ವಜನಿಕರ ಮುಂದೆಯೇ ಅಂಗಡಿ ಶೆಟರ್ ಮುರಿದು ಕಳ್ಳತನ

ಬೆಂಗಳೂರು: ಮಹಾನಗರದಲ್ಲಿ ಪುಂಡರ ಹಾವಳಿ ನಿಲ್ಲುತ್ತಿಲ್ಲ. ಹೌದು, ಸಾರ್ವಜನಿಕರ ಮುಂದೆಯೇ ಅಂಗಡಿ ಶೆಟರ್ ಮುರಿದು ಕಳ್ಳತನ ಮಾಡಿದ ಘಟನೆ ಮಡಿವಾಳದ ಮಾರುತಿ ನಗರದಲ್ಲಿ ನಡೆದಿದೆ. ರಾಜಾರೋಷವಾಗಿ ಅಂಗಡಿ ಬೀಗ ಮುರಿದು 2 ಸಾವಿರ ಹಣ, ಸಿಸಿಟಿವಿ ಡಿವಿಆರ್ ಕಳ್ಳತನ ಮಾಡಿದ್ದಾರೆ. ಇದನ್ನು ಪ್ರಶ್ನೆ ಮಾಡಲು ಬಂದ ಸ್ಥಳೀಯರ ಮಾತಿಗೂ ಡೊಂಟ್ ಕೇರ್ ಅಂದಿದ್ದಾರೆ. ಇನ್ನು ಕಳ್ಳರ ಕೃತ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಈ ಕುರಿತು ಮಡಿವಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:23 am, Wed, 2 August 23

ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಸೋನಲ್-ತರುಣ್ ಗೃಹಪ್ರವೇಶ; ಇಲ್ಲಿದೆ ಸುಂದರ ವಿಡಿಯೋ
ಸೋನಲ್-ತರುಣ್ ಗೃಹಪ್ರವೇಶ; ಇಲ್ಲಿದೆ ಸುಂದರ ವಿಡಿಯೋ
ವೇಗವಾಗಿ ಬಂದು ಟೋಲ್ ಬೂತ್​ಗೆ ಗುದ್ದಿದ ಬಸ್, ಭೀಕರ ದೃಶ್ಯ ಸಿಸಿಟಿವಿಲಿ ಸೆರೆ
ವೇಗವಾಗಿ ಬಂದು ಟೋಲ್ ಬೂತ್​ಗೆ ಗುದ್ದಿದ ಬಸ್, ಭೀಕರ ದೃಶ್ಯ ಸಿಸಿಟಿವಿಲಿ ಸೆರೆ
ಜನಾರ್ದನ ರೆಡ್ಡಿ ಮನೆ ಮುಂದಿನ ಸಂಘರ್ಷದ ಭೀಕರತೆ ಬಿಚ್ಚಿಟ್ಟ ವಿಡಿಯೋ
ಜನಾರ್ದನ ರೆಡ್ಡಿ ಮನೆ ಮುಂದಿನ ಸಂಘರ್ಷದ ಭೀಕರತೆ ಬಿಚ್ಚಿಟ್ಟ ವಿಡಿಯೋ