AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರತ್ಯೇಕ ಘಟನೆ: ಉಡುಪಿಯಲ್ಲಿ ನೀರಿನ ಹೊಂಡಕ್ಕೆ ಬಿದ್ದು ಮೂರು ವರ್ಷದ ಬಾಲಕಿ, ಕಾರವಾರದಲ್ಲಿ ವಿದ್ಯುತ್​ ಪ್ರವಹಿಸಿ ಎಂಟು ತಿಂಗಳ​ ಮಗು ಸಾವು

ಉಡುಪಿಯಲ್ಲಿ ನೀರಿನ ಹೊಂಡಕ್ಕೆ ಬಿದ್ದು ಮೂರು ವರ್ಷದ ಬಾಲಕಿ ಸಾವನ್ನಪ್ಪಿದರೆ, ಇತ್ತ ಕಾರವಾರದಲ್ಲಿ ಮೊಬೈಲ್ ಚಾರ್ಜರ್​​ ವೈರ್​ನಿಂದ ವಿದ್ಯುತ್​ ಪ್ರವಹಿಸಿ 8 ತಿಂಗಳ ಮಗು ಸಾವನ್ನಪ್ಪಿದೆ.

ಪ್ರತ್ಯೇಕ ಘಟನೆ: ಉಡುಪಿಯಲ್ಲಿ ನೀರಿನ ಹೊಂಡಕ್ಕೆ ಬಿದ್ದು ಮೂರು ವರ್ಷದ ಬಾಲಕಿ, ಕಾರವಾರದಲ್ಲಿ ವಿದ್ಯುತ್​ ಪ್ರವಹಿಸಿ ಎಂಟು ತಿಂಗಳ​ ಮಗು ಸಾವು
ಕೃತಿಕಾ, ಸಾನಿಧ್ಯ
ಪ್ರಜ್ವಲ್ ಅಮೀನ್​, ಉಡುಪಿ
| Edited By: |

Updated on:Aug 02, 2023 | 11:24 AM

Share

ಉಡುಪಿ. ಆ.2: ನೀರಿನ ಹೊಂಡಕ್ಕೆ ಬಿದ್ದು ಮೂರು ವರ್ಷದ ಬಾಲಕಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಹೆಬ್ರಿ(Hebri)ತಾಲೂಕಿನ ನಾಲ್ಕೂರು ಗ್ರಾಮದ ಕಕ್ಕೆ ಅರಮನೆ ಜೆಡ್ಡು ಸಮೀಪ ನಡೆದಿದೆ. ಕೃತಿಕಾ(3) ಮೃತ ಬಾಲಕಿ. ನಿನ್ನೆ(ಆ.1) ರಾತ್ರಿ ಅಜ್ಜಿ ಮಂಜುಳಾ ಜೊತೆ ನಡೆದುಕೊಂಡು ಹೋಗುತ್ತಿದ್ದಾಗ ಕತ್ತಲಲ್ಲಿ ರಸ್ತೆ ಪಕ್ಕದಲ್ಲಿರುವ ಹೊಂಡಕ್ಕೆ ಬಾಲಕಿ ಬಿದ್ದು ಕೊನೆಯುಸಿರೆಳೆದಿದ್ದಾಳೆ. ಮಗಳನ್ನು ಕಳೆದುಕೊಂಡ ಪೋಷಕರ ಆಕ್ರಂಧನ ಮುಗಿಲು ಮುಟ್ಟಿದೆ. ಈ ಕುರಿತು ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೊಬೈಲ್ ಚಾರ್ಜರ್​​ ವೈರ್​ನಿಂದ ವಿದ್ಯುತ್​ ಪ್ರವಹಿಸಿ​ ಮಗು ಸಾವು

ಉತ್ತರ ಕನ್ನಡ: ಜಿಲ್ಲೆಯ ಕಾರವಾರ ತಾಲೂಕಿನ ಸಿದ್ದರ ಗ್ರಾಮದಲ್ಲಿ ಮೊಬೈಲ್ ಚಾರ್ಜರ್​​ ವೈರ್​ನಿಂದ ವಿದ್ಯುತ್​ ಪ್ರವಹಿಸಿ​ ಮಗು ಸಾವನ್ನಪ್ಪಿದೆ. ಸಂಜನಾ ದಂಪತಿಯ 8 ತಿಂಗಳ ಹೆಣ್ಣು ಮಗು ಇದಾಗಿದ್ದು, ಮೊಬೈಲ್​ ಚಾರ್ಜ್​ಗೆ ಹಾಕಿ ಪೋಷಕರು ಆಪ್​ ಮಾಡದೇ ಇಟ್ಟಿದ್ದರು. ಈ ವೇಳೆ ಆನ್​ಇದ್ದ ಚಾರ್ಜರ್​ನ್ನು​ ಮಗು ಬಾಯಲ್ಲಿಟ್ಟುಕೊಂಡಿದ್ದು ಕೂಡಲೇ ಶಾಕ್​ನಿಂದ ಕೊನೆಯುಸಿರೆಳದಿದೆ.

ಇದನ್ನೂ ಓದಿ:Muharram: ಚಿತ್ರದುರ್ಗದಲ್ಲಿ ಮೊಹರಂ ಆಚರಣೆ ವೇಳೆ ಕೊಂಡ ಹಾಯುವಾಗ ಮಗುವಿನೊಂದಿಗೆ ಬೆಂಕಿಗೆ ಬಿದ್ದ ವ್ಯಕ್ತಿ

ಸಾರ್ವಜನಿಕರ ಮುಂದೆಯೇ ಅಂಗಡಿ ಶೆಟರ್ ಮುರಿದು ಕಳ್ಳತನ

ಬೆಂಗಳೂರು: ಮಹಾನಗರದಲ್ಲಿ ಪುಂಡರ ಹಾವಳಿ ನಿಲ್ಲುತ್ತಿಲ್ಲ. ಹೌದು, ಸಾರ್ವಜನಿಕರ ಮುಂದೆಯೇ ಅಂಗಡಿ ಶೆಟರ್ ಮುರಿದು ಕಳ್ಳತನ ಮಾಡಿದ ಘಟನೆ ಮಡಿವಾಳದ ಮಾರುತಿ ನಗರದಲ್ಲಿ ನಡೆದಿದೆ. ರಾಜಾರೋಷವಾಗಿ ಅಂಗಡಿ ಬೀಗ ಮುರಿದು 2 ಸಾವಿರ ಹಣ, ಸಿಸಿಟಿವಿ ಡಿವಿಆರ್ ಕಳ್ಳತನ ಮಾಡಿದ್ದಾರೆ. ಇದನ್ನು ಪ್ರಶ್ನೆ ಮಾಡಲು ಬಂದ ಸ್ಥಳೀಯರ ಮಾತಿಗೂ ಡೊಂಟ್ ಕೇರ್ ಅಂದಿದ್ದಾರೆ. ಇನ್ನು ಕಳ್ಳರ ಕೃತ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಈ ಕುರಿತು ಮಡಿವಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:23 am, Wed, 2 August 23

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್