AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತ್ ಜೋಡೋ ಯಾತ್ರೆಯಲ್ಲಿ ರಾಹುಲ್​ ಗಾಂಧಿಯ ಫಿಟ್ನೆಸ್​ ಪ್ರದರ್ಶನವಾಗುತ್ತಿದೆ: ಶೋಭಾ ಕರಂದ್ಲಾಜೆ

ಭಾರತ್ ಜೋಡೋ ಯಾತ್ರೆಯಲ್ಲಿ ರಾಹುಲ್​ ಗಾಂಧಿಯ ಫಿಟ್ನೆಸ್​ ಪ್ರದರ್ಶನವಾಗುತ್ತಿದೆ ಎಂದು ಉಡುಪಿಯಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಲೇವಡಿ​ ಮಾಡಿದ್ದಾರೆ.

ಭಾರತ್ ಜೋಡೋ ಯಾತ್ರೆಯಲ್ಲಿ ರಾಹುಲ್​ ಗಾಂಧಿಯ ಫಿಟ್ನೆಸ್​ ಪ್ರದರ್ಶನವಾಗುತ್ತಿದೆ: ಶೋಭಾ ಕರಂದ್ಲಾಜೆ
ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ
TV9 Web
| Edited By: |

Updated on:Oct 14, 2022 | 6:40 PM

Share

ಉಡುಪಿ: ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ (Rahul Gandhi) ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆಯಲ್ಲಿ (Bharat jodo yatra) ರಾಹುಲ್​ ಗಾಂಧಿಯ ಫಿಟ್ನೆಸ್​ ಪ್ರದರ್ಶನವಾಗುತ್ತಿದೆ ಎಂದು ಉಡುಪಿಯಲ್ಲಿ (Udupi) ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ (Shobha Karandlaje) ಲೇವಡಿ​ ಮಾಡಿದ್ದಾರೆ. ದೇಶದ ನಾಯಕತ್ವ ವಹಿಸಲು ರಾಹುಲ್​ಗೆ ಸಾಧ್ಯನಾ? ಪಕ್ಷದ ನೇತೃತ್ವ ವಹಿಸದವ ದೇಶದ ನೇತೃತ್ವ ವಹಿಸಲು ಅಸಾಧ್ಯ. ಮೋದಿಗೆ ಸರಿಸಾಟಿಯಾಗುವ ರಾಹುಲ್ ಕನಸು ನನಸಾಗಲ್ಲ. ಬಾಡಿ ಫಿಟ್ನೆಸ್ ಇದೆ, ಮೆಂಟಲ್ ಫಿಟ್ನೆಸ್ ಇದ್ದಾರಾ? ದೇಶವನ್ನು ಆಳಲು ಮೆಂಟಲಿ ​​ಫಿಟ್ನೆಸ್​ ಇದ್ದಾರೋ ಇಲ್ವೋ ಎಂದು ದೇಶದ ಜನ ತೀರ್ಮಾನ ಮಾಡುತ್ತಾರೆ ಎಂದು ಕಾಲೆಳೆದಿದ್ದಾರೆ.

ಮುಸ್ಲಿಂ ಮಹಿಳೆಗೆ ಸ್ವಾತಂತ್ರ್ಯ ಸಿಗಬೇಕಾದರೆ ಹಿಜಾಬ್​ಗೆ ಅವಕಾಶ ಕೊಡಬಾರದು

ಹಿಜಾಬ್ ಪ್ರಕರಣ ಸಂವಿಧಾನಿಕ ಪೀಠಕ್ಕೆ ವರ್ಗಾವಣೆ ಆಗಬಹುದು. ಇಬ್ಬರು ನ್ಯಾಯಮೂರ್ತಿಗಳು ಒಮ್ಮತಕ್ಕೆ ಬರಲು ಸಾಧ್ಯವಾಗಿಲ್ಲ. ಸಂವಿಧಾನಿಕ ಪೀಠದಲ್ಲಿ ಹಿಜಾಬ್ ದೇಶಕ್ಕೆ ಬೇಕೋ ಬೇಡವೋ ಎಂದು ತೀರ್ಮಾನವಾಗುತ್ತದೆ. ಎಲ್ಲಾ ಮಹಿಳೆಯರು ಸ್ವಾತಂತ್ರ್ಯವಾಗಿ ಬದುಕಲು ನ್ಯಾಯಾಲಯ ಅವಕಾಶ ಮಾಡಿಕೊಡಬಹುದು. ಮುಸ್ಲಿಂ ಹೆಣ್ಣು ಮಕ್ಕಳು ಈ ಬಗ್ಗೆ ಗಂಭೀರವಾಗಿ ಆಲೋಚನೆ ಮಾಡಬೇಕು ಎಂದು ಸೂಚಿಸಿದರು.

ಮುಸ್ಲಿಂ ಮಹಿಳೆಯರಿಗೆ ಅವರ ಮನೆಯವರು, ಗಂಡಸರು  ಹಿಜಾಬ್​ಗೆ ಒತ್ತಾಯ ಮಾಡುತ್ತಿದ್ದಾರೆ. ಮುಸ್ಲಿಂ ಮಹಿಳೆಗೆ ಸ್ವಾತಂತ್ರ್ಯ ಸಿಗಬೇಕಾದರೆ ಹಿಜಾಬ್​ಗೆ ಅವಕಾಶ ಕೊಡಬಾರದು. ನಮ್ಮ ಮುಸ್ಲಿಂ ಹೆಣ್ಣು ಮಕ್ಕಳಿಗೆ ಶಿಕ್ಷಣ ಉದ್ಯೋಗ ಸಿಗುವುದು ಮುಖ್ಯ. ಗಂಡಸರು ಹಾಕುವ ತಾಳಕ್ಕೆ ಕುಣಿದು ಇಚ್ಛೆಗೆ ವಿರುದ್ಧವಾಗಿ ನಡೆದುಕೊಳ್ಳಬೇಡಿ. ಪ್ರಗತಿಶೀಲ ದೇಶಗಳು ಧರ್ಮಗಳಲ್ಲಿ ಇರುವ ತಪ್ಪುಗಳನ್ನು ಗುರುತಿಸಿ ಸರಿ ಮಾಡಬೇಕು. ಇರಾನ್ ನ ಮುಸ್ಲಿಂ ಮಹಿಳೆಯರು ಭಾರತಕ್ಕೆ ಮಾರ್ಗದರ್ಶಕ ಆಗಬೇಕು ಎಂದು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:31 pm, Fri, 14 October 22

Follow Us
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​