AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದು ಉಡುಪಿ ಮಠದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಸಂಭ್ರಮ; ಮಧ್ಯರಾತ್ರಿ ನಡೆಯಲಿದೆ ಅರ್ಘ್ಯ ಪ್ರಧಾನ

ಉಡುಪಿಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ ಜೋರಾಗಿದೆ. ಈ ಪ್ರಯುಕ್ತ ಉಡುಪಿಯ ಶ್ರೀಕೃಷ್ಣ ಮಠವನ್ನು ಹೂಗಳಿಂದ ಸಿಂಗರಿಸಲಾಗಿದೆ. ನಾಡಿನಲ್ಲೆಡೆಯ ಭಕ್ತರು ದೇವಸ್ಥಾನಕ್ಕೆ ಆಗಮಿಸಿ ಶ್ರೀಕೃಷ್ಣನ ದರ್ಶನ ಪಡೆದಿದ್ದಾರೆ. ಇನ್ನು ಇದೇ ವೇಳೆ ರಾಜಾಂಗಣದಲ್ಲಿ ನಡೆದ ಮುದ್ದುಕೃಷ್ಣ ವೇಷ ಸ್ಪರ್ಧೆ ಹಬ್ಬಕ್ಕೆ ರಂಗು ತುಂಬಿತು. ಈ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.

ಇಂದು ಉಡುಪಿ ಮಠದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಸಂಭ್ರಮ; ಮಧ್ಯರಾತ್ರಿ ನಡೆಯಲಿದೆ ಅರ್ಘ್ಯ ಪ್ರಧಾನ
ಉಡುಪಿ ಶ್ರೀ ಕೃಷ್ಣ ಮಠ
ಪ್ರಜ್ವಲ್ ಅಮೀನ್​, ಉಡುಪಿ
| Edited By: |

Updated on: Sep 06, 2023 | 9:08 PM

Share

ಉಡುಪಿ, ಸೆ.06: ಇಂದು ನಾಡಿನೆಲ್ಲೆಡೆ ಶ್ರೀ ಕೃಷ್ಣ ಜನ್ಮಾಷ್ಟಮಿ (Krishna Janmashtami) ಸಂಭ್ರಮ ಮನೆ ಮಾಡಿದೆ. ಅದರಂತೆ ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕೃಷ್ಣನಿಗೆ ಹಗಲಿಡಿ ಬಗೆಬಗೆಯ ಪೂಜೆ ನೆರವೇರಿದ್ದು, ಇಂದು ಮಧ್ಯರಾತ್ರಿ ಅರ್ಘ್ಯ ಪ್ರಧಾನ ನಡೆಯಲಿದೆ. ಕೃಷ್ಣನ ಆರಾಧನೆಯಲ್ಲಿ ಅರ್ಘ್ಯ ಪ್ರಧಾನಕ್ಕೆ ವಿಶೇಷ ಮಹತ್ವವಿದ್ದು, ಹಗಲಿಡಿ ಉಪವಾಸ ಇರುವ ಭಕ್ತರು, ಅರ್ಘ್ಯ ಪ್ರಧಾನ ಮಾಡಿ ಪ್ರಸಾದ ಸ್ವೀಕರಿಸುತ್ತಾರೆ. ಪರ್ಯಾಯ ಮಠಾಧೀಶರಿಂದ ಕೃಷ್ಣ ದೇವರಿಗೆ ಅರ್ಘ್ಯ ಅರ್ಪಣೆ ಆಗಲಿದೆ. ಇನ್ನು ಕೃಷ್ಣಾಪುರ ಮಠದ ಪರ್ಯಾಯ ಯತಿ ಶ್ರೀ ವಿದ್ಯಾ ಸಾಗರ ತೀರ್ಥ ಸ್ವಾಮೀಜಿಯವರು, ಹಾಲು ಮತ್ತು ನೀರನ್ನು ಬಳಸಿಕೊಂಡು ಕೃಷ್ಣ ಗುಡಿಯ ಮುಂಭಾಗದ ತುಳಸಿ ಕಟ್ಟೆಯಲ್ಲಿ ಅರ್ಘ್ಯ ಸಮರ್ಪಣೆ ಮಾಡಲಿದ್ದಾರೆ. ನಂತರ ಭಕ್ತರಿಗೂ ಅರ್ಘ್ಯ ಅರ್ಪಿಸಲು ಅವಕಾಶ ನೀಡಲಾಗಿದೆ.

ಇನ್ನು ಉಡುಪಿಯ ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ಕೃಷ್ಣ ವೇಷದಾರಿಗಳೇ ತುಂಬಿ ತುಳುಕುತ್ತಿದ್ದರು. ಇಂದು ನಡೆದ ಮುದ್ದುಕೃಷ್ಣ, ಬಾಲಕೃಷ್ಣ ಹಾಗೂ ಕಿಶೋರ ಕೃಷ್ಣ ಸ್ಪರ್ಧೆಗಳು ಅಷ್ಟಮಿಯ ರಂಗನ್ನು ಹೆಚ್ಚಿಸಿದ್ದು, ಮುದ್ದು ಮಕ್ಕಳ ಕೃಷ್ಣನ ವಿವಿಧ ವೇಷಗಳು ಕಣ್ಮನ ಸೆಳೆದವು. ಮಠದ ರಾಜಾಂಗಣದಲ್ಲಿ ಮಕ್ಕಳ ಮುದ್ದು ಕೃಷ್ಣ ಸ್ಪರ್ಧೆಯಲ್ಲಿ ನೂರಕ್ಕೂ ಹೆಚ್ಚು ಚಿಣ್ಣರು ಭಾಗವಹಿಸಿದ್ದರು. ತಾಯಂದಿರು ತಮ್ಮ ಮಕ್ಕಳನ್ನು ಸ್ಪರ್ಧೆಗೆ ಅಣಿಗೊಳಿಸುವ ದೃಶ್ಯ ರಾಜಾಂಗಣದಲ್ಲಿ ಕಂಡು ಬಂದವು.

ಇದನ್ನೂ ಓದಿ:ಮಲ್ಲೇಶ್ವರಂನ ವೇಣುಗೋಪಾಲ ದೇವಸ್ಥಾನದಲ್ಲಿ ತೆಪ್ಪೋತ್ಸವ, ಅದ್ಧೂರಿ ಕೃಷ್ಣ ಜನ್ಮಾಷ್ಟಮಿ ಫೋಟೋಗಳು ಇಲ್ಲಿವೆ

ಕೃಷ್ಣ ಜನ್ಮಾಷ್ಟಮಿಯಂದು ಹುಲಿ ವೇಷಧಾರಿಗಳ ಸಂಚಾರ

ಅಷ್ಟಮಿಗೂ ಹುಲಿವೇಷಕ್ಕೂ ಅವಿನಾಭಾವ ಸಂಬಂಧ. ಹುಲಿವೇಷಧಾರಿಗಳು ಪೂಜೆ ಸಲ್ಲಿಸಿ ನಗರ ಸಂಚಾರ ನಡೆಸುವುದು ವಾಡಿಕೆ. ಹತ್ತಾರು ತಂಡಗಳು ಜಿಲ್ಲೆಯಾದ್ಯಂತ ಸಂಚರಿಸಿ ಜನರ ಕಣ್ಮನ ಸೆಳೆದರು. ಈ ಬಾರಿ ಹೆಣ್ಣುಹುಲಿಗಳು ಗಮನ ಸೆಳೆಯುತ್ತಿವೆ. ಕಾಡಬೆಟ್ಟುವಿನ ಅಶೋಕ್ ರಾಜ್ ಅವರ ಹುಲಿ ವೇಷಧಾರಿಗಳ ತಂಡ ಭರ್ಜರಿ ಪ್ರದರ್ಶನ ನಡೆಸುತ್ತಿದೆ. ಈ ಬಾರಿ ವಿಶೇಷ ಆಕರ್ಷಣೆ ಎನ್ನುವಂತೆ ಅಶೋಕ್ ರಾಜ್ ಹುಲಿ ವೇಷ ತಂಡದ ವತಿಯಿಂದ ಹೆಣ್ಣು ಹುಲಿಗಳು ಕೂಡ ಅಕಾಡಕ್ಕೆ ಇಳಿದಿವೆ. ಈ ಮೊದಲು ಅಶೋಕ್ ರಾಜ್ ಅವರ ಪುತ್ರಿ ಸುಷ್ಮಾ ರಾಜ್ ಅವರು ಹುಲಿ ವೇಷದ ಮೂಲಕ ಹುಡುಗಿಯರಲ್ಲೂ ಕೂಡ ಹುಲಿ ವೇಷದ ಕಿಚ್ಚು ಹಚ್ಚಿದರು. ನಂತರದ ವರ್ಷಗಳಲ್ಲಿ ನಿರಂತರವಾಗಿ ಉಡುಪಿಯ ಅಷ್ಟಮಿಗೆ ವಿಶೇಷ ಎನ್ನುವಂತೆ ಹೆಣ್ಣು ಹುಲಿಗಳು ಪ್ರದರ್ಶನ ನೀಡುತ್ತಾ ಬಂದಿದೆ.

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Prajwal Amin
Prajwal Amin

ಪ್ರಜ್ವಲ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪಡೆದಿರುತ್ತಾರೆ. ಉಡುಪಿ ಜಿಲ್ಲೆಯ ಸ್ಥಳೀಯ ಖಾಸಗಿ ಸುದ್ದಿವಾಹಿನಿಯ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ ಇವರು ಬಳಿಕ ಪ್ರಜಾವಾಣಿಯ ವರದಿಗಾರನಾಗಿ ಕೆಲಸ ಮಾಡಿರುತ್ತಾರೆ. ನಂತರ 6 ವರ್ಷ ಟಿ.ವಿ 5ನ ದಕ್ಷಿಣ ಕನ್ನಡ ಜಿಲ್ಲಾ ವರದಿಗಾರನಾಗಿ ನಂತರ ದಿಗ್ವಿಜಯ ನ್ಯೂಸ್ ನ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ವರದಿಗಾರನಾಗಿ ಕಾರ್ಯನಿರ್ವಾಹಸಿದ್ದಾರೆ. ಕಳೆದ ಹನ್ನೊಂದು ತಿಂಗಳಿನಿಂದ ಟಿ.ವಿ 9 ಸಂಸ್ಥೆಯಲ್ಲಿ ಉಡುಪಿ ಜಿಲ್ಲಾ ವರದಿಗಾರನಾಗಿ ಕಾರ್ಯನಿರ್ವಾಹಿಸುತ್ತಿದ್ದಾರೆ.

Read More
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ವಸ್ತುಗಳನ್ನು ಮನೆಗೆ ಕೊಡಲು ಬಂದ ಡೆಲಿವರಿ ಬಾಯ್ ಮಾಡಿದ್ದೇನು ನೋಡಿ
ವಸ್ತುಗಳನ್ನು ಮನೆಗೆ ಕೊಡಲು ಬಂದ ಡೆಲಿವರಿ ಬಾಯ್ ಮಾಡಿದ್ದೇನು ನೋಡಿ
ವನ್ಯಜೀವಿ ಛಾಯಾಗ್ರಾಹಕಿಯಾದ ಸೋನಲ್ ಮೊಂತೆರೋ
ವನ್ಯಜೀವಿ ಛಾಯಾಗ್ರಾಹಕಿಯಾದ ಸೋನಲ್ ಮೊಂತೆರೋ
ಸಂಜೆಯಾದರೆ ರಸ್ತೆಗಿಳಿಯುವ ಈ ಒಂಟಿ ಸಲಗಕ್ಕೆ ವಾಹನಗಳೇ ಟಾರ್ಗೆಟ್!
ಸಂಜೆಯಾದರೆ ರಸ್ತೆಗಿಳಿಯುವ ಈ ಒಂಟಿ ಸಲಗಕ್ಕೆ ವಾಹನಗಳೇ ಟಾರ್ಗೆಟ್!