AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದು ಉಡುಪಿ ಮಠದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಸಂಭ್ರಮ; ಮಧ್ಯರಾತ್ರಿ ನಡೆಯಲಿದೆ ಅರ್ಘ್ಯ ಪ್ರಧಾನ

ಉಡುಪಿಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ ಜೋರಾಗಿದೆ. ಈ ಪ್ರಯುಕ್ತ ಉಡುಪಿಯ ಶ್ರೀಕೃಷ್ಣ ಮಠವನ್ನು ಹೂಗಳಿಂದ ಸಿಂಗರಿಸಲಾಗಿದೆ. ನಾಡಿನಲ್ಲೆಡೆಯ ಭಕ್ತರು ದೇವಸ್ಥಾನಕ್ಕೆ ಆಗಮಿಸಿ ಶ್ರೀಕೃಷ್ಣನ ದರ್ಶನ ಪಡೆದಿದ್ದಾರೆ. ಇನ್ನು ಇದೇ ವೇಳೆ ರಾಜಾಂಗಣದಲ್ಲಿ ನಡೆದ ಮುದ್ದುಕೃಷ್ಣ ವೇಷ ಸ್ಪರ್ಧೆ ಹಬ್ಬಕ್ಕೆ ರಂಗು ತುಂಬಿತು. ಈ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.

ಇಂದು ಉಡುಪಿ ಮಠದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಸಂಭ್ರಮ; ಮಧ್ಯರಾತ್ರಿ ನಡೆಯಲಿದೆ ಅರ್ಘ್ಯ ಪ್ರಧಾನ
ಉಡುಪಿ ಶ್ರೀ ಕೃಷ್ಣ ಮಠ
ಪ್ರಜ್ವಲ್ ಅಮೀನ್​, ಉಡುಪಿ
| Edited By: |

Updated on: Sep 06, 2023 | 9:08 PM

Share

ಉಡುಪಿ, ಸೆ.06: ಇಂದು ನಾಡಿನೆಲ್ಲೆಡೆ ಶ್ರೀ ಕೃಷ್ಣ ಜನ್ಮಾಷ್ಟಮಿ (Krishna Janmashtami) ಸಂಭ್ರಮ ಮನೆ ಮಾಡಿದೆ. ಅದರಂತೆ ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕೃಷ್ಣನಿಗೆ ಹಗಲಿಡಿ ಬಗೆಬಗೆಯ ಪೂಜೆ ನೆರವೇರಿದ್ದು, ಇಂದು ಮಧ್ಯರಾತ್ರಿ ಅರ್ಘ್ಯ ಪ್ರಧಾನ ನಡೆಯಲಿದೆ. ಕೃಷ್ಣನ ಆರಾಧನೆಯಲ್ಲಿ ಅರ್ಘ್ಯ ಪ್ರಧಾನಕ್ಕೆ ವಿಶೇಷ ಮಹತ್ವವಿದ್ದು, ಹಗಲಿಡಿ ಉಪವಾಸ ಇರುವ ಭಕ್ತರು, ಅರ್ಘ್ಯ ಪ್ರಧಾನ ಮಾಡಿ ಪ್ರಸಾದ ಸ್ವೀಕರಿಸುತ್ತಾರೆ. ಪರ್ಯಾಯ ಮಠಾಧೀಶರಿಂದ ಕೃಷ್ಣ ದೇವರಿಗೆ ಅರ್ಘ್ಯ ಅರ್ಪಣೆ ಆಗಲಿದೆ. ಇನ್ನು ಕೃಷ್ಣಾಪುರ ಮಠದ ಪರ್ಯಾಯ ಯತಿ ಶ್ರೀ ವಿದ್ಯಾ ಸಾಗರ ತೀರ್ಥ ಸ್ವಾಮೀಜಿಯವರು, ಹಾಲು ಮತ್ತು ನೀರನ್ನು ಬಳಸಿಕೊಂಡು ಕೃಷ್ಣ ಗುಡಿಯ ಮುಂಭಾಗದ ತುಳಸಿ ಕಟ್ಟೆಯಲ್ಲಿ ಅರ್ಘ್ಯ ಸಮರ್ಪಣೆ ಮಾಡಲಿದ್ದಾರೆ. ನಂತರ ಭಕ್ತರಿಗೂ ಅರ್ಘ್ಯ ಅರ್ಪಿಸಲು ಅವಕಾಶ ನೀಡಲಾಗಿದೆ.

ಇನ್ನು ಉಡುಪಿಯ ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ಕೃಷ್ಣ ವೇಷದಾರಿಗಳೇ ತುಂಬಿ ತುಳುಕುತ್ತಿದ್ದರು. ಇಂದು ನಡೆದ ಮುದ್ದುಕೃಷ್ಣ, ಬಾಲಕೃಷ್ಣ ಹಾಗೂ ಕಿಶೋರ ಕೃಷ್ಣ ಸ್ಪರ್ಧೆಗಳು ಅಷ್ಟಮಿಯ ರಂಗನ್ನು ಹೆಚ್ಚಿಸಿದ್ದು, ಮುದ್ದು ಮಕ್ಕಳ ಕೃಷ್ಣನ ವಿವಿಧ ವೇಷಗಳು ಕಣ್ಮನ ಸೆಳೆದವು. ಮಠದ ರಾಜಾಂಗಣದಲ್ಲಿ ಮಕ್ಕಳ ಮುದ್ದು ಕೃಷ್ಣ ಸ್ಪರ್ಧೆಯಲ್ಲಿ ನೂರಕ್ಕೂ ಹೆಚ್ಚು ಚಿಣ್ಣರು ಭಾಗವಹಿಸಿದ್ದರು. ತಾಯಂದಿರು ತಮ್ಮ ಮಕ್ಕಳನ್ನು ಸ್ಪರ್ಧೆಗೆ ಅಣಿಗೊಳಿಸುವ ದೃಶ್ಯ ರಾಜಾಂಗಣದಲ್ಲಿ ಕಂಡು ಬಂದವು.

ಇದನ್ನೂ ಓದಿ:ಮಲ್ಲೇಶ್ವರಂನ ವೇಣುಗೋಪಾಲ ದೇವಸ್ಥಾನದಲ್ಲಿ ತೆಪ್ಪೋತ್ಸವ, ಅದ್ಧೂರಿ ಕೃಷ್ಣ ಜನ್ಮಾಷ್ಟಮಿ ಫೋಟೋಗಳು ಇಲ್ಲಿವೆ

ಕೃಷ್ಣ ಜನ್ಮಾಷ್ಟಮಿಯಂದು ಹುಲಿ ವೇಷಧಾರಿಗಳ ಸಂಚಾರ

ಅಷ್ಟಮಿಗೂ ಹುಲಿವೇಷಕ್ಕೂ ಅವಿನಾಭಾವ ಸಂಬಂಧ. ಹುಲಿವೇಷಧಾರಿಗಳು ಪೂಜೆ ಸಲ್ಲಿಸಿ ನಗರ ಸಂಚಾರ ನಡೆಸುವುದು ವಾಡಿಕೆ. ಹತ್ತಾರು ತಂಡಗಳು ಜಿಲ್ಲೆಯಾದ್ಯಂತ ಸಂಚರಿಸಿ ಜನರ ಕಣ್ಮನ ಸೆಳೆದರು. ಈ ಬಾರಿ ಹೆಣ್ಣುಹುಲಿಗಳು ಗಮನ ಸೆಳೆಯುತ್ತಿವೆ. ಕಾಡಬೆಟ್ಟುವಿನ ಅಶೋಕ್ ರಾಜ್ ಅವರ ಹುಲಿ ವೇಷಧಾರಿಗಳ ತಂಡ ಭರ್ಜರಿ ಪ್ರದರ್ಶನ ನಡೆಸುತ್ತಿದೆ. ಈ ಬಾರಿ ವಿಶೇಷ ಆಕರ್ಷಣೆ ಎನ್ನುವಂತೆ ಅಶೋಕ್ ರಾಜ್ ಹುಲಿ ವೇಷ ತಂಡದ ವತಿಯಿಂದ ಹೆಣ್ಣು ಹುಲಿಗಳು ಕೂಡ ಅಕಾಡಕ್ಕೆ ಇಳಿದಿವೆ. ಈ ಮೊದಲು ಅಶೋಕ್ ರಾಜ್ ಅವರ ಪುತ್ರಿ ಸುಷ್ಮಾ ರಾಜ್ ಅವರು ಹುಲಿ ವೇಷದ ಮೂಲಕ ಹುಡುಗಿಯರಲ್ಲೂ ಕೂಡ ಹುಲಿ ವೇಷದ ಕಿಚ್ಚು ಹಚ್ಚಿದರು. ನಂತರದ ವರ್ಷಗಳಲ್ಲಿ ನಿರಂತರವಾಗಿ ಉಡುಪಿಯ ಅಷ್ಟಮಿಗೆ ವಿಶೇಷ ಎನ್ನುವಂತೆ ಹೆಣ್ಣು ಹುಲಿಗಳು ಪ್ರದರ್ಶನ ನೀಡುತ್ತಾ ಬಂದಿದೆ.

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್