AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿದ್ದರಾಮಯ್ಯರೊಳಗೂ ರಾಮನಿದ್ದಾನೆ: ಉಡುಪಿ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

ಆಯೋಧ್ಯೆಯಲ್ಲಿರುವುದು (Ayodhye) ಬಿಜೆಪಿ (BJP) ರಾಮ, ನಮಗೆ ಸಿದ್ದರಾಮಯ್ಯನವರೇ (Siddaramaiah) ರಾಮ (Rama) ಎಂಬ ಮಾಜಿ ಸಚಿವ ಹೆಚ್​​ ಆಂಜನೇಯ (H Anjaneya) ಹೇಳಿಕೆಗೆ ಸಂಬಂಧಿಸಿದಂತೆ ರಾಮ ಬೇರೆಯಲ್ಲ ಮತ್ತು ಕೃಷ್ಣ ಬೇರೆಯಲ್ಲ, ದೇವರು ಎಲ್ಲರೊಳಗಿದ್ದಾನೆ. ದೇವರು ಮಂದಿರದಲ್ಲಿ ಮಾತ್ರವಲ್ಲ ಎಲ್ಲರೊಳಗಿದ್ದಾನೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಳಗೂ ದೇವರು ಇದ್ದಾನೆ ಎಂದು

ಸಿದ್ದರಾಮಯ್ಯರೊಳಗೂ ರಾಮನಿದ್ದಾನೆ: ಉಡುಪಿ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ
ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on: Jan 03, 2024 | 3:06 PM

Share

ಉಡುಪಿ, ಜನವರಿ 03: ಆಯೋಧ್ಯೆಯಲ್ಲಿರುವುದು (Ayodhye) ಬಿಜೆಪಿ (BJP) ರಾಮ, ನಮಗೆ ಸಿದ್ದರಾಮಯ್ಯನವರೇ (Siddaramaiah) ರಾಮ (Rama) ಎಂಬ ಮಾಜಿ ಸಚಿವ ಹೆಚ್​​ ಆಂಜನೇಯ (H Anjaneya) ಹೇಳಿಕೆಗೆ ಸಂಬಂಧಿಸಿದಂತೆ ರಾಮ ಬೇರೆಯಲ್ಲ ಮತ್ತು ಕೃಷ್ಣ ಬೇರೆಯಲ್ಲ. ದೇವರು ಮಂದಿರದಲ್ಲಿ ಮಾತ್ರವಲ್ಲ ಎಲ್ಲರೊಳಗಿದ್ದಾನೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಳಗೂ ದೇವರು ಇದ್ದಾನೆ. ರಾಮಮಂದಿರ ಬಿಜೆಪಿ ಮಂದಿರವೆಂದು ಯಾಕೆ ಹಾಗೆ ಅಂದುಕೊಳ್ಳಬೇಕು? ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ (Vishwaprasanna Theertha Swamiji) ಹೇಳಿದರು.

ಉಡುಪಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ನಾವು ಭಾರತೀಯರು ರಾಮಮಂದಿರ ಎಲ್ಲರಿಗೂ ಸೇರಿದೆ. ಇದು ಪಕ್ಷದ ಮಂದಿರ ಅಲ್ಲ, ಬಿಜೆಪಿಯವರು ಮಾತ್ರ ದೇಣಿಗೆ ಕೊಟ್ಟಿದ್ದಾರಾ? ಪಕ್ಷ ಹಾಗೂ ಸರ್ಕಾರದ ದೇಣಿಗೆಯಿಂದ ರಾಮಮಂದಿರ ನಿರ್ಮಿಸಿಲ್ಲ. ಜಗತ್ತಿನಲ್ಲಿರುವ ರಾಮ ಭಕ್ತರ ದೇಣಿಗೆಯಿಂದ ಕಾರ್ಯಕ್ರಮ ನಡೆಯುತ್ತಿದೆ.

 ನಮ್ಮ ರಾಮ ಸಿದ್ದರಾಮಯ್ಯ ಹೆಚ್​. ಆಂಜನೇಯ

ಅಯೋಧ್ಯೆಯಲ್ಲಿ ಭವ್ಯ ರಾಮಮಂದಿರ ನಿರ್ಮಾಣವಾಗುತ್ತಿದೆ. ಪ್ರಭು ಶ್ರೀರಾಮಚಂದ್ರನ ದೇವಸ್ಥಾನ ಜನವರಿ 22 ರಂದು ಉದ್ಘಾಟನೆಯಾಗಲಿದೆ. ಈ ಉದ್ಘಾಟನೆ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಆಹ್ವಾನ ಬಂದಿಲ್ಲ ಎಂದು ಸಾಕಷ್ಟು ಚರ್ಚೆಯಾಗುತ್ತಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಹೆಚ್​ ಆಂಜನೇಯ ಮಾತನಾಡಿ, ಸಿಎಂ ಸಿದ್ದರಾಮಯ್ಯ ಅವರೇ ಒಬ್ಬ ರಾಮ. ಅಯೋಧ್ಯೆಯಲ್ಲಿರುವುದು ಬಿಜೆಪಿ ರಾಮ. ನಮ್ಮ ರಾಮ ಸಿದ್ದರಾಮಯ್ಯ ಎಂದು ಹೇಳಿದ್ದರು.

ಇದನ್ನೂ ಓದಿ: 22 ರಂದು ಗೋಧ್ರಾ ರೀತಿಯ ಅಪಾಯ ಸಂಭವಿಸುವ ಮಾಹಿತಿ ಇದೆ, ಅಯೋಧ್ಯ ಯಾತ್ರಿಗಳಿಗೆ ಸರ್ಕಾರ ರಕ್ಷಣೆ ನೀಡಲಿ: ಬಿಕೆ ಹರಿಪ್ರಸಾದ್

ಬಸನಗೌಡ ಪಾಟೀಲ್​​ ಯತ್ನಾಳ್​ ಟಾಂಗ್​​

ಹೆಚ್​ ಆಂಜನೇಯ ಅವರ ಹೇಳಿಕೆಗೆ ರಾಜ್ಯ ಬಿಜೆಪಿ ನಾಯಕರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಹೆಚ್​ ಆಂಜನೇಯ ಅವರ ಹೇಳಿಕೆಯನ್ನು ವಿರೋಧಿಸಿ ವಿಜಯಪುರ ಬಿಜೆಪಿ ಶಾಕಸ ಬಸನಗೌಡ ಪಾಟೀಲ್​ ಯತ್ನಾಳ್​ ಟ್ವೀಟ್​ ಮಾಡಿ ” ಇಂತಹ ಅವಿವೇಕಿಗಳು, ಸ್ವಜನಪಕ್ಷಪಾತಿಗಳು, ಹಿಂದೂ ವಿರೋಧಿಗಳು ಈ ಹಿಂದೆ ರಾಜ್ಯದ ಸಚಿವಾರಿಗಿದ್ದರು ಎಂಬುದು ರಾಜ್ಯದ ದೌರ್ಭಾಗ್ಯ. ಆಂಜನೇಯಪ್ಪನವರ ಪೂಜ್ಯ ದೇವರಾದ ಸಿದ್ದರಾಮಯ್ಯನವರಿಗೆ ಅವರ ಮನೆಯಲ್ಲಿ ಸಕಲ ರೀತಿಯಲ್ಲಿ ಪೂಜಾ ಕೈಂ-ಕಾರ್ಯಗಳು ನಡೆಯಲಿ. ಹಿಂದೂಗಳ ಆರಾಧ್ಯ ದೈವ ಶ್ರೀರಾಮ ದೇವರ ಬಗ್ಗೆ ಮಾತನಾಡುವುದನ್ನು ನಿಲ್ಲಿಸಿ ಘನತೆಯಿಂದ, ಗೌರವದಿಂದ ವರ್ತಿಸಲಿ” ಎಂದು ವಾಗ್ದಾಳಿ ಮಾಡಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಕಾಂಗ್ರೆಸ್ ಬಹಿರಂಗ ಸಭೆ ವೇಳೆ ಅಝಾನ್, ಕೈ ಅಭ್ಯರ್ಥಿ ಮಾಡಿದ್ದೇನು ನೋಡಿ
ಕಾಂಗ್ರೆಸ್ ಬಹಿರಂಗ ಸಭೆ ವೇಳೆ ಅಝಾನ್, ಕೈ ಅಭ್ಯರ್ಥಿ ಮಾಡಿದ್ದೇನು ನೋಡಿ
ಕೆಡಿ ಹಾಡಿನ ವಿವಾದ: ಜನರನ್ನು ಸೆಳೆಯುವ ಪ್ರಯತ್ನದ ಬಗ್ಗೆ ಗಾಯಕ ನವೀನ್ ಸಜ್ಜು
ಕೆಡಿ ಹಾಡಿನ ವಿವಾದ: ಜನರನ್ನು ಸೆಳೆಯುವ ಪ್ರಯತ್ನದ ಬಗ್ಗೆ ಗಾಯಕ ನವೀನ್ ಸಜ್ಜು
ಚಾಕೋಲೇಟ್ ಕೊಳ್ಳಲು ಅಂಗಡಿಗೆ ಬಂದ, ಚಿನ್ನದ ಸರ ಎಳೆದುಕೊಂಡು ಓಡಿದ!
ಚಾಕೋಲೇಟ್ ಕೊಳ್ಳಲು ಅಂಗಡಿಗೆ ಬಂದ, ಚಿನ್ನದ ಸರ ಎಳೆದುಕೊಂಡು ಓಡಿದ!
‘ನಾನು ಸ್ಟಾರ್ ಅಲ್ಲ, ಕಲಾವಿದೆ; ಕಲಾವಿದರಿಗೆ ಸಾವಿಲ್ಲ’: ಶ್ರುತಿ ಹರಿಹರನ್
‘ನಾನು ಸ್ಟಾರ್ ಅಲ್ಲ, ಕಲಾವಿದೆ; ಕಲಾವಿದರಿಗೆ ಸಾವಿಲ್ಲ’: ಶ್ರುತಿ ಹರಿಹರನ್
ದಲಿತ ಎನ್ನೋ ಕಾರಣಕ್ಕೆ ಎಳೆದಾಡಿ ಸ್ವಾಮೀಜಿ ಮೇಲೆ ಹಲ್ಲೆ
ದಲಿತ ಎನ್ನೋ ಕಾರಣಕ್ಕೆ ಎಳೆದಾಡಿ ಸ್ವಾಮೀಜಿ ಮೇಲೆ ಹಲ್ಲೆ
ಉಡುಪಿಯಲ್ಲೊಂದು ಅಪರೂಪದ ಘಟನೆ: ಗ್ಯಾಸ್ OTP ವ್ಯಕ್ತಿ ಜೀವ ಉಳಿಸಿದ್ಹೇಗೆ?
ಉಡುಪಿಯಲ್ಲೊಂದು ಅಪರೂಪದ ಘಟನೆ: ಗ್ಯಾಸ್ OTP ವ್ಯಕ್ತಿ ಜೀವ ಉಳಿಸಿದ್ಹೇಗೆ?
ದಾವಣಗೆರೆ ಕಾಂಗ್ರೆಸ್ ಕಾರ್ಯಕರ್ತರಿಗೆ ಪ್ರಹ್ಲಾದ ಜೋಶಿ ಮಹತ್ವದ ಕರೆ
ದಾವಣಗೆರೆ ಕಾಂಗ್ರೆಸ್ ಕಾರ್ಯಕರ್ತರಿಗೆ ಪ್ರಹ್ಲಾದ ಜೋಶಿ ಮಹತ್ವದ ಕರೆ
ಬೆಂಕಿ ಬೌಲಿಂಗ್: ಒಂದೇ ಒಂದು ಬೌಂಡರಿ ಹೊಡೆಸಿಕೊಳ್ಳದ ಶಮಿ!
ಬೆಂಕಿ ಬೌಲಿಂಗ್: ಒಂದೇ ಒಂದು ಬೌಂಡರಿ ಹೊಡೆಸಿಕೊಳ್ಳದ ಶಮಿ!
ನೆಲವೇ ಹಾಸಿಗೆ, ಕಟ್ಟೆಯೇ ತಲೆದಿಂಬು; ಪ್ರಭುದೇವ ಎಷ್ಟು ಸಿಂಪಲ್ ನೋಡಿ 
ನೆಲವೇ ಹಾಸಿಗೆ, ಕಟ್ಟೆಯೇ ತಲೆದಿಂಬು; ಪ್ರಭುದೇವ ಎಷ್ಟು ಸಿಂಪಲ್ ನೋಡಿ 
ಕಾದು ಕುಳಿತು ರೈಲು ಬರುತ್ತಿದ್ದಂತೆ ಪ್ರಯಾಣಿಕನನ್ನು ತಳ್ಳಿದ ವ್ಯಕ್ತಿ
ಕಾದು ಕುಳಿತು ರೈಲು ಬರುತ್ತಿದ್ದಂತೆ ಪ್ರಯಾಣಿಕನನ್ನು ತಳ್ಳಿದ ವ್ಯಕ್ತಿ