AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿದ್ದರಾಮಯ್ಯರೊಳಗೂ ರಾಮನಿದ್ದಾನೆ: ಉಡುಪಿ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

ಆಯೋಧ್ಯೆಯಲ್ಲಿರುವುದು (Ayodhye) ಬಿಜೆಪಿ (BJP) ರಾಮ, ನಮಗೆ ಸಿದ್ದರಾಮಯ್ಯನವರೇ (Siddaramaiah) ರಾಮ (Rama) ಎಂಬ ಮಾಜಿ ಸಚಿವ ಹೆಚ್​​ ಆಂಜನೇಯ (H Anjaneya) ಹೇಳಿಕೆಗೆ ಸಂಬಂಧಿಸಿದಂತೆ ರಾಮ ಬೇರೆಯಲ್ಲ ಮತ್ತು ಕೃಷ್ಣ ಬೇರೆಯಲ್ಲ, ದೇವರು ಎಲ್ಲರೊಳಗಿದ್ದಾನೆ. ದೇವರು ಮಂದಿರದಲ್ಲಿ ಮಾತ್ರವಲ್ಲ ಎಲ್ಲರೊಳಗಿದ್ದಾನೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಳಗೂ ದೇವರು ಇದ್ದಾನೆ ಎಂದು

ಸಿದ್ದರಾಮಯ್ಯರೊಳಗೂ ರಾಮನಿದ್ದಾನೆ: ಉಡುಪಿ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ
ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on: Jan 03, 2024 | 3:06 PM

Share

ಉಡುಪಿ, ಜನವರಿ 03: ಆಯೋಧ್ಯೆಯಲ್ಲಿರುವುದು (Ayodhye) ಬಿಜೆಪಿ (BJP) ರಾಮ, ನಮಗೆ ಸಿದ್ದರಾಮಯ್ಯನವರೇ (Siddaramaiah) ರಾಮ (Rama) ಎಂಬ ಮಾಜಿ ಸಚಿವ ಹೆಚ್​​ ಆಂಜನೇಯ (H Anjaneya) ಹೇಳಿಕೆಗೆ ಸಂಬಂಧಿಸಿದಂತೆ ರಾಮ ಬೇರೆಯಲ್ಲ ಮತ್ತು ಕೃಷ್ಣ ಬೇರೆಯಲ್ಲ. ದೇವರು ಮಂದಿರದಲ್ಲಿ ಮಾತ್ರವಲ್ಲ ಎಲ್ಲರೊಳಗಿದ್ದಾನೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಳಗೂ ದೇವರು ಇದ್ದಾನೆ. ರಾಮಮಂದಿರ ಬಿಜೆಪಿ ಮಂದಿರವೆಂದು ಯಾಕೆ ಹಾಗೆ ಅಂದುಕೊಳ್ಳಬೇಕು? ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ (Vishwaprasanna Theertha Swamiji) ಹೇಳಿದರು.

ಉಡುಪಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ನಾವು ಭಾರತೀಯರು ರಾಮಮಂದಿರ ಎಲ್ಲರಿಗೂ ಸೇರಿದೆ. ಇದು ಪಕ್ಷದ ಮಂದಿರ ಅಲ್ಲ, ಬಿಜೆಪಿಯವರು ಮಾತ್ರ ದೇಣಿಗೆ ಕೊಟ್ಟಿದ್ದಾರಾ? ಪಕ್ಷ ಹಾಗೂ ಸರ್ಕಾರದ ದೇಣಿಗೆಯಿಂದ ರಾಮಮಂದಿರ ನಿರ್ಮಿಸಿಲ್ಲ. ಜಗತ್ತಿನಲ್ಲಿರುವ ರಾಮ ಭಕ್ತರ ದೇಣಿಗೆಯಿಂದ ಕಾರ್ಯಕ್ರಮ ನಡೆಯುತ್ತಿದೆ.

 ನಮ್ಮ ರಾಮ ಸಿದ್ದರಾಮಯ್ಯ ಹೆಚ್​. ಆಂಜನೇಯ

ಅಯೋಧ್ಯೆಯಲ್ಲಿ ಭವ್ಯ ರಾಮಮಂದಿರ ನಿರ್ಮಾಣವಾಗುತ್ತಿದೆ. ಪ್ರಭು ಶ್ರೀರಾಮಚಂದ್ರನ ದೇವಸ್ಥಾನ ಜನವರಿ 22 ರಂದು ಉದ್ಘಾಟನೆಯಾಗಲಿದೆ. ಈ ಉದ್ಘಾಟನೆ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಆಹ್ವಾನ ಬಂದಿಲ್ಲ ಎಂದು ಸಾಕಷ್ಟು ಚರ್ಚೆಯಾಗುತ್ತಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಹೆಚ್​ ಆಂಜನೇಯ ಮಾತನಾಡಿ, ಸಿಎಂ ಸಿದ್ದರಾಮಯ್ಯ ಅವರೇ ಒಬ್ಬ ರಾಮ. ಅಯೋಧ್ಯೆಯಲ್ಲಿರುವುದು ಬಿಜೆಪಿ ರಾಮ. ನಮ್ಮ ರಾಮ ಸಿದ್ದರಾಮಯ್ಯ ಎಂದು ಹೇಳಿದ್ದರು.

ಇದನ್ನೂ ಓದಿ: 22 ರಂದು ಗೋಧ್ರಾ ರೀತಿಯ ಅಪಾಯ ಸಂಭವಿಸುವ ಮಾಹಿತಿ ಇದೆ, ಅಯೋಧ್ಯ ಯಾತ್ರಿಗಳಿಗೆ ಸರ್ಕಾರ ರಕ್ಷಣೆ ನೀಡಲಿ: ಬಿಕೆ ಹರಿಪ್ರಸಾದ್

ಬಸನಗೌಡ ಪಾಟೀಲ್​​ ಯತ್ನಾಳ್​ ಟಾಂಗ್​​

ಹೆಚ್​ ಆಂಜನೇಯ ಅವರ ಹೇಳಿಕೆಗೆ ರಾಜ್ಯ ಬಿಜೆಪಿ ನಾಯಕರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಹೆಚ್​ ಆಂಜನೇಯ ಅವರ ಹೇಳಿಕೆಯನ್ನು ವಿರೋಧಿಸಿ ವಿಜಯಪುರ ಬಿಜೆಪಿ ಶಾಕಸ ಬಸನಗೌಡ ಪಾಟೀಲ್​ ಯತ್ನಾಳ್​ ಟ್ವೀಟ್​ ಮಾಡಿ ” ಇಂತಹ ಅವಿವೇಕಿಗಳು, ಸ್ವಜನಪಕ್ಷಪಾತಿಗಳು, ಹಿಂದೂ ವಿರೋಧಿಗಳು ಈ ಹಿಂದೆ ರಾಜ್ಯದ ಸಚಿವಾರಿಗಿದ್ದರು ಎಂಬುದು ರಾಜ್ಯದ ದೌರ್ಭಾಗ್ಯ. ಆಂಜನೇಯಪ್ಪನವರ ಪೂಜ್ಯ ದೇವರಾದ ಸಿದ್ದರಾಮಯ್ಯನವರಿಗೆ ಅವರ ಮನೆಯಲ್ಲಿ ಸಕಲ ರೀತಿಯಲ್ಲಿ ಪೂಜಾ ಕೈಂ-ಕಾರ್ಯಗಳು ನಡೆಯಲಿ. ಹಿಂದೂಗಳ ಆರಾಧ್ಯ ದೈವ ಶ್ರೀರಾಮ ದೇವರ ಬಗ್ಗೆ ಮಾತನಾಡುವುದನ್ನು ನಿಲ್ಲಿಸಿ ಘನತೆಯಿಂದ, ಗೌರವದಿಂದ ವರ್ತಿಸಲಿ” ಎಂದು ವಾಗ್ದಾಳಿ ಮಾಡಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ರಾಯರ ಸನ್ನಿಧಿಯಲ್ಲಿ ತಂದೆಗೆ ಗೌರವ ಡಾಕ್ಟರೇಟ್: ಯುವ ರಾಜ್​ಕುಮಾರ್ ಸಂತಸ
ರಾಯರ ಸನ್ನಿಧಿಯಲ್ಲಿ ತಂದೆಗೆ ಗೌರವ ಡಾಕ್ಟರೇಟ್: ಯುವ ರಾಜ್​ಕುಮಾರ್ ಸಂತಸ
ಜ್ಯುವೆಲರಿ ಶಾಪ್‌ ದರೋಡೆ: ಕಳ್ಳರು ಸಿಕ್ಕಿಬಿದ್ದ ರೋಚಕತೆ ಬಿಚ್ಚಿಟ್ಟ ಎಸ್ಪಿ
ಜ್ಯುವೆಲರಿ ಶಾಪ್‌ ದರೋಡೆ: ಕಳ್ಳರು ಸಿಕ್ಕಿಬಿದ್ದ ರೋಚಕತೆ ಬಿಚ್ಚಿಟ್ಟ ಎಸ್ಪಿ
ರಾಹುಲ್ ಗಾಂಧಿ ನಾಯಕನ ಸ್ಥಾನ ತ್ಯಾಗ ಮಾಡಬೇಕು; AIUDF ನಾಯಕ ಪ್ರತಿಕ್ರಿಯೆ
ರಾಹುಲ್ ಗಾಂಧಿ ನಾಯಕನ ಸ್ಥಾನ ತ್ಯಾಗ ಮಾಡಬೇಕು; AIUDF ನಾಯಕ ಪ್ರತಿಕ್ರಿಯೆ
ಬೆಂಗಳೂರಿನಲ್ಲಿ ಮತ್ತೊಂದು ಬ್ಯಾಂಕ್ ದರೋಡೆಗೆ ಯತ್ನ
ಬೆಂಗಳೂರಿನಲ್ಲಿ ಮತ್ತೊಂದು ಬ್ಯಾಂಕ್ ದರೋಡೆಗೆ ಯತ್ನ
ತಂಬಾಕು ಬೆಲೆ ಕುಸಿತ: ಬೆಂಬಲ ಬೆಲೆ ನೀಡುವ ಕುರಿತು ಮೈಸೂರಲ್ಲಿ ಮಹತ್ವದ ಸಭೆ
ತಂಬಾಕು ಬೆಲೆ ಕುಸಿತ: ಬೆಂಬಲ ಬೆಲೆ ನೀಡುವ ಕುರಿತು ಮೈಸೂರಲ್ಲಿ ಮಹತ್ವದ ಸಭೆ
ಧೋನಿ ಆಪ್ತನ ಜೊತೆ ಸುತ್ತಾಡುತ್ತಿರುವ ಪರಮ ಸುಂದರಿ ಕೃತಿ ಸನನ್
ಧೋನಿ ಆಪ್ತನ ಜೊತೆ ಸುತ್ತಾಡುತ್ತಿರುವ ಪರಮ ಸುಂದರಿ ಕೃತಿ ಸನನ್
ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ; ನೆಹರು ಮೊದಲ ಪ್ರಧಾನಿಯಲ್ಲ: ಯತ್ನಾಳ್
ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ; ನೆಹರು ಮೊದಲ ಪ್ರಧಾನಿಯಲ್ಲ: ಯತ್ನಾಳ್
ಅವಧಿ ಮೀರಿದ ಔಷಧಿ ವಿತರಣೆ ಪ್ರಶ್ನಿಸಿದ್ದಕ್ಕೆ ಬೆದರಿಕೆ ಆರೋಪ
ಅವಧಿ ಮೀರಿದ ಔಷಧಿ ವಿತರಣೆ ಪ್ರಶ್ನಿಸಿದ್ದಕ್ಕೆ ಬೆದರಿಕೆ ಆರೋಪ
ತಿನ್ನುವ ತರಕಾರಿಯಲ್ಲಿ ವಿಷ: ಸದ್ದಿಲ್ಲದೇ ಮನಷ್ಯರ ದೇಹ ಸೇರುತ್ತಿದೆ ಕೀಟನಾಶಕ
ತಿನ್ನುವ ತರಕಾರಿಯಲ್ಲಿ ವಿಷ: ಸದ್ದಿಲ್ಲದೇ ಮನಷ್ಯರ ದೇಹ ಸೇರುತ್ತಿದೆ ಕೀಟನಾಶಕ
ಮಣ್ಣು ತುಂಬಿದ ಬುಟ್ಟಿ ಹೊತ್ತ ಸಿದ್ದರಾಮಯ್ಯ, ಡಿಕೆಶಿ:ವಿಡಿಯೋ ನೋಡಿ
ಮಣ್ಣು ತುಂಬಿದ ಬುಟ್ಟಿ ಹೊತ್ತ ಸಿದ್ದರಾಮಯ್ಯ, ಡಿಕೆಶಿ:ವಿಡಿಯೋ ನೋಡಿ