AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾಧನೆಗೆ ವಯಸ್ಸಿನ ಹಂಗಿಲ್ಲ, 60ರ ಇಳಿ ವಯಸ್ಸಿನಲ್ಲೂ ಅರಬ್ಬಿ ಸಮುದ್ರದಲ್ಲಿ ಈಜಿ ಗಿನ್ನಿಸ್ ಬುಕ್ ಆಫ್ ರೆಕಾರ್ಡ್​​ಗೆ ಸೇರ್ಪಡೆ

60 ವರ್ಷದ ವೃದ್ಧ ಗಂಗಾಧರ್, ಅರಬ್ಬಿ ಸಮುದ್ರದಲ್ಲಿ ಈಜಿ ಗಿನ್ನಿಸ್ ಬುಕ್ ಆಫ್ ರೆಕಾರ್ಡ್ ನಲ್ಲಿ ತಮ್ಮ ಹೆಸರು ಬರೆದುಕೊಂಡಿದ್ದಾರೆ. ಈ ಗಂಗಾಧರ್ ಉಡುಪಿಯ ಕಡೆಕಾರು ನಿವಾಸಿ. ನಿರಂತರ ಐದೂವರೆ ತಾಸು ಕಡಲಲ್ಲಿ ಈಜಿ ಗಿನ್ನಿಸ್ ಬುಕ್ ಆಫ್ ರೆಕಾರ್ಡ್ ಸಾಧನೆ ಮಾಡಿದ್ದಾರೆ.

ಸಾಧನೆಗೆ ವಯಸ್ಸಿನ ಹಂಗಿಲ್ಲ, 60ರ ಇಳಿ ವಯಸ್ಸಿನಲ್ಲೂ ಅರಬ್ಬಿ ಸಮುದ್ರದಲ್ಲಿ ಈಜಿ ಗಿನ್ನಿಸ್ ಬುಕ್ ಆಫ್ ರೆಕಾರ್ಡ್​​ಗೆ ಸೇರ್ಪಡೆ
ಗಂಗಾಧರ್
Follow us
TV9 Web
| Updated By: ಆಯೇಷಾ ಬಾನು

Updated on:Jan 25, 2022 | 2:13 PM

ಉಡುಪಿ: 60 ವರ್ಷದ ವೃದ್ಧ ಕೈಗಳನ್ನು ಹಿಂದಕ್ಕೆ ಕಟ್ಟಿ, ಕಾಲುಗಳಿಗೆ ಸರಪಳಿ ಬಿಗಿದು ಸಮುದ್ರಕ್ಕೆ ಜಿಗಿದು ಅರಬ್ಬಿ ಸಮುದ್ರದಲ್ಲಿ ಈಜಿ ಗಿನ್ನಿಸ್ ಬುಕ್ ಆಫ್ ರೆಕಾರ್ಡ್ನಲ್ಲಿ ದಾಖಲೆ ಸೃಷ್ಟಿಸಿದ್ದಾರೆ. ತಮ್ಮ 60 ವರ್ಷದ ಬದಿಕಿನಲ್ಲೂ ಮಾದರಿಯಾಗಿದ್ದಾರೆ.

ಕೈಗಳನ್ನು ಹಿಂದಕ್ಕೆ ಕಟ್ಟಿ, ಕಾಲುಗಳಿಗೆ ಸರಪಳಿ ಬಿಗಿದು ಸಮುದ್ರಕ್ಕೆ ಜಿಗಿಗಿದ್ದೇ ಜಿಗಿದಿದ್ದು ಭೋರ್ಗರೆದು ಬರುವ ಅಲೆಗಳಿಗೆ ಎದೆಯೊಡ್ಡಿ, ಮೀನುಗಳಂತೆ ಈಜಿ ದಡ ಸೇರಿದಾಗ ದಾಖಲೆಯ ಪುಟ ತೆರೆದಿತ್ತು. ಹೌದು.. ವಯಸ್ಕರೇ ಈಜಲು ಪರದಾಡ್ತಾರೆ. ಸ್ವಲ್ಪ ದೂರ ಹೋಗ್ತಿದ್ದಂತೆ ಕೈಕಾಲು ಸೋತು ಸುಸ್ತಾಗಿ ಬಿಡ್ತಾರೆ. ಇಂಥಾದ್ರಲ್ಲಿ 60 ವರ್ಷದ ವೃದ್ಧ ಗಂಗಾಧರ್, ಅರಬ್ಬಿ ಸಮುದ್ರದಲ್ಲಿ ಈಜಿ ಗಿನ್ನಿಸ್ ಬುಕ್ ಆಫ್ ರೆಕಾರ್ಡ್ ನಲ್ಲಿ ತಮ್ಮ ಹೆಸರು ಬರೆದುಕೊಂಡಿದ್ದಾರೆ.

ಈ ಗಂಗಾಧರ್ ಉಡುಪಿಯ ಕಡೆಕಾರು ನಿವಾಸಿ. ನಿರಂತರ ಐದೂವರೆ ತಾಸು ಕಡಲಲ್ಲಿ ಈಜಿ ಗಿನ್ನಿಸ್ ಬುಕ್ ಆಫ್ ರೆಕಾರ್ಡ್ ಸಾಧನೆ ಮಾಡಿದ್ದಾರೆ. ಬೆಳಗ್ಗೆ 5.30ರ ಸುಮಾರಿಗೆ ಗಂಗಾಧರ್, ಉಡುಪಿಯ ಪಡುಕೆರೆ ಸಾಗರ ತೀರದಿಂದ ಈಜಲು ಆರಂಭಿಸಿದ್ರು. ಮಧ್ಯಾಹ್ನ 1.20ರ ಸುಮಾರಿಗೆ ಗಂಗಾಧರ್ ದಡ ಸೇರಿದ್ದು, ಮೂರೂವರೆ ಕಿಲೋ ಮೀಟರ್ ಈಜಿ ಗಂಗಾಧರ್ ದಾಖಲೆ ಮಾಡಿದ್ರು. ಸ್ಥಳದಲ್ಲೇ ಇದ್ದ ಅಧಿಕಾರಿಗಳು, ಪ್ರಾವಿಜನ್ ಸರ್ಟಿಫಿಕೇಟ್ ವಿತರಣೆ ನೀಡಿ ಗೌರವಿಸಿದ್ರು.

ಇನ್ನು, ಸಮುದ್ರದಲ್ಲಿ ಮೂರೂವರೆ ಕಿಲೋ ಮೀಟರ್ ದೂರ ಈಜುವುದು ಸುಮ್ನೆ ಅಲ್ಲ. ಕ್ಷಣ ಕ್ಷಣಕ್ಕೂ ಹವಾಮಾನ ಏರಿಳಿತವಾಗುತ್ತಿರುತ್ತೆ. ಡೇಂಜರಸ್ ಸಸ್ತನಿಗಳ ಭಯ ಕಾಡುತ್ತೆ. ವೇಗದ ಅಲೆಗಳ ಆರ್ಭಟವೂ ಭೀತಿ ಹುಟ್ಟಿಸುತ್ತೆ. ಇಷ್ಟೆಲ್ಲಾ ಚಾಲೆಂಜ್ಗಳನ್ನು ಮೆಟ್ಟಿ ನಿಂತು, ಇಳಿ ವಯಸ್ಸಿನಲ್ಲೂ ಗಂಗಾಧರ್ ಸಾಧನೆ ಮಾಡಿದ್ದು, ಸಾಧನೆಗೆ ವಯಸ್ಸಿನ ಮಿತಿ ಇಲ್ಲ ಅನ್ನೋದನ್ನ ಪ್ರೂವ್ ಮಾಡಿದ್ದಾರೆ.

ವರದಿ: ಹರೀಶ್, ಟಿವಿ9, ಉಡುಪಿ.

Udupi man creates record by swimming

ಅರಬ್ಬಿ ಸಮುದ್ರದಲ್ಲಿ ಈಜಿ ಗಿನ್ನಿಸ್ ಬುಕ್ ಆಫ್ ರೆಕಾರ್ಡ್ನಲ್ಲಿ ದಾಖಲೆ ಸೃಷ್ಟಿಸಿದ ಗಂಗಾಧರ್

Udupi man creates record by swimming

ಅರಬ್ಬಿ ಸಮುದ್ರದಲ್ಲಿ ಈಜಿ ಗಿನ್ನಿಸ್ ಬುಕ್ ಆಫ್ ರೆಕಾರ್ಡ್ನಲ್ಲಿ ದಾಖಲೆ ಸೃಷ್ಟಿಸಿದ ಗಂಗಾಧರ್

ಇದನ್ನೂ ಓದಿ: Cryptocurrency: 25 ದಿನದೊಳಗೆ 52.26 ಲಕ್ಷ ಕೋಟಿ ರೂಪಾಯಿ ಕಳೆದುಕೊಂಡ ಕ್ರಿಪ್ಟೋಕರೆನ್ಸಿ ಮಾರುಕಟ್ಟೆ ಮೌಲ್ಯ

Published On - 1:46 pm, Tue, 25 January 22

ಕೋಮು ನಿಗ್ರಹ ದಳ ರಚಿಸಿರುವುದು ಹಿಂದೂಗಳನ್ನು ಟಾರ್ಗೆಟ್ ಮಾಡಲು: ವಿಜಯೇಂದ್ರ
ಕೋಮು ನಿಗ್ರಹ ದಳ ರಚಿಸಿರುವುದು ಹಿಂದೂಗಳನ್ನು ಟಾರ್ಗೆಟ್ ಮಾಡಲು: ವಿಜಯೇಂದ್ರ
ಒಕ್ಕಲಿಗರ ಕೋಟೆಯಲ್ಲಿ ಲಿಂಗಾಯತ ಸಿಎಂ ಮಾತು: ಡಿಕೆಶಿ ಆಪ್ತನಿಂದಲೇ MB ಪಾಟೀಲ್
ಒಕ್ಕಲಿಗರ ಕೋಟೆಯಲ್ಲಿ ಲಿಂಗಾಯತ ಸಿಎಂ ಮಾತು: ಡಿಕೆಶಿ ಆಪ್ತನಿಂದಲೇ MB ಪಾಟೀಲ್
ಹೋರಿಗೆ ಕೇಕ್ ತಿನ್ನಿಸಿ ತಾನೂ ತಿಂದ ಮಾಜಿ ಸಚಿವ ರೇಣುಕಾಚಾರ್ಯ
ಹೋರಿಗೆ ಕೇಕ್ ತಿನ್ನಿಸಿ ತಾನೂ ತಿಂದ ಮಾಜಿ ಸಚಿವ ರೇಣುಕಾಚಾರ್ಯ
ಚಾರ್ಮಾಡಿ ಘಾಟಿ ಡೇಂಜರ್ ಡೇಂಜರ್ ಮತ್ತಷ್ಟು ಕುಸಿಯುವ ಆತಂಕ
ಚಾರ್ಮಾಡಿ ಘಾಟಿ ಡೇಂಜರ್ ಡೇಂಜರ್ ಮತ್ತಷ್ಟು ಕುಸಿಯುವ ಆತಂಕ
ಯಾದಗಿರಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆ; ವಾಹನ ಸಂಚಾರ, ಜನಜೀವನ ಅಸ್ತವ್ಯಸ್ತ
ಯಾದಗಿರಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆ; ವಾಹನ ಸಂಚಾರ, ಜನಜೀವನ ಅಸ್ತವ್ಯಸ್ತ
ಸಚಿವರ ಬೇಜವಾಬ್ದಾರಿತನಕ್ಕೆ ಅಸಮಾಧಾನ ಹೊರಹಾಕಿದ ಸಿದ್ದರಾಮಯ್ಯ
ಸಚಿವರ ಬೇಜವಾಬ್ದಾರಿತನಕ್ಕೆ ಅಸಮಾಧಾನ ಹೊರಹಾಕಿದ ಸಿದ್ದರಾಮಯ್ಯ
ಪರಿಸರ ಮಾಲಿನ್ಯ ಹೆಚ್ಚುತ್ತಿರುವ ಬೆಂಗಳೂರಿಗೆ ಬೇಕು ಎಲೆಕ್ಟ್ರಿಕ್ ಬಸ್​ಗಳು
ಪರಿಸರ ಮಾಲಿನ್ಯ ಹೆಚ್ಚುತ್ತಿರುವ ಬೆಂಗಳೂರಿಗೆ ಬೇಕು ಎಲೆಕ್ಟ್ರಿಕ್ ಬಸ್​ಗಳು
ಕರಾವಳಿ ಪ್ರಾಂತ್ಯದ ಗಲಭೆಗಳಿಗೆ ಸಾಮಾಜಿಕ ಜಾಲತಾಣ ದೂರಿದ ಗುಂಡೂರಾವ್
ಕರಾವಳಿ ಪ್ರಾಂತ್ಯದ ಗಲಭೆಗಳಿಗೆ ಸಾಮಾಜಿಕ ಜಾಲತಾಣ ದೂರಿದ ಗುಂಡೂರಾವ್
ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆ ಮೇಲೆ ಕುಳಿತು ವ್ಯಕ್ತಿಯ ಹುಚ್ಚಾಟ
ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆ ಮೇಲೆ ಕುಳಿತು ವ್ಯಕ್ತಿಯ ಹುಚ್ಚಾಟ
‘ಸುಧಾರಾಣಿ ಕಣ್ಣಲ್ಲೇ ನಟಿಸ್ತಾರೆ’; ಬಾಯ್ತುಂಬ ಹೊಗಳಿದ ರವಿಚಂದ್ರನ್
‘ಸುಧಾರಾಣಿ ಕಣ್ಣಲ್ಲೇ ನಟಿಸ್ತಾರೆ’; ಬಾಯ್ತುಂಬ ಹೊಗಳಿದ ರವಿಚಂದ್ರನ್