ಹೊಟ್ಟೆ ನೋವು ಎಂದು ಆಸ್ಪತ್ರೆಗೆ ಹೋಗಿದ್ದ ವಿದ್ಯಾರ್ಥಿನಿ ಸಾವು, ನಾನಾ ಕಾರಣ ಹೇಳುತ್ತಿರುವ ವೈದ್ಯರು

ವೈದ್ಯರ ನಿರ್ಲಕ್ಷದಿಂದ ಮಗಳು ಮೃತಪಟ್ಟಿದ್ದಾಳೆ ಎಂದು ಪೋಷಕರು ಆರೋಪಿಸಿದ್ದಾರೆ. ಮಗಳೇ ಇಲ್ಲದ ಮೇಲೆ ದೂರು ನೀಡುವುದು ಯಾಕೆ ಎಂದು ಪೊಲೀಸ್ ದೂರು ನೀಡಲು ಕುಟುಂಬಸ್ಥರು ಹಿಂದೇಟು ಹಾಕಿದ್ದಾರೆ. 

ಹೊಟ್ಟೆ ನೋವು ಎಂದು ಆಸ್ಪತ್ರೆಗೆ ಹೋಗಿದ್ದ ವಿದ್ಯಾರ್ಥಿನಿ ಸಾವು, ನಾನಾ ಕಾರಣ ಹೇಳುತ್ತಿರುವ ವೈದ್ಯರು
ಮೃತ ವಿದ್ಯಾರ್ಥಿ ನಿಕಿತಾ
Follow us
|

Updated on:Jun 23, 2023 | 12:16 PM

ಉಡುಪಿ: ವೈದ್ಯರ (doctors) ನಿರ್ಲಕ್ಷದಿಂದ ಮಗಳು ಮೃತಪಟ್ಟಿದ್ದಾಳೆ ಎಂದು ಪೋಷಕರು ಆರೋಪಿಸಿದ್ದಾರೆ. ಜಿಲ್ಲೆಯ ಕಾಪು ತಾಲೂಕಿನ ಪಡುಬಿದ್ರಿ ಸಮೀಪದ ಕೆಮ್ಮುಂಡೇಲು ನಿವಾಸಿ ನಿಕಿತಾ(20) ಮೃತ ವಿದ್ಯಾರ್ಥಿನಿ (Student). ಜನಾರ್ದನ-ಶೋಭಾ ದಂಪತಿಯ ಏಕೈಕ ಮಗಳು. ಹೊಟ್ಟೆ ನೋವು ಎಂಬ ಕಾರಣಕ್ಕೆ ಕಳೆದ ಬುಧವಾರ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸ್ಕ್ಯಾನಿಂಗ್ ಎಂಡೋಸ್ಕೋಪಿ ಸಿಟಿ ಸ್ಕ್ಯಾನ್ ಮಾಡಲಾಗಿತ್ತು. ಬಳಿಕ ಸರಿಯಾದ ಮಾಹಿತಿ ನೀಡದೆ ಆಪರೇಷನ್​ ಮಾಡಿದ್ದಾರೆ ಎಂದು ಪೋಷಕರು ಆರೋಪಿಸಿದ್ದಾರೆ.

ಯುವತಿಯ ಆರೋಗ್ಯದಲ್ಲಿ ಏರುಪೇರು

ಅಪೆಂಡಿಕ್ಸ್ ಆಗಿದೆ ಎಂದು ಆಪರೇಷನ್ ಮಾಡಿದ್ದು, ಶಸ್ತ್ರಚಿಕಿತ್ಸೆ ನಡೆದ ಬಳಿಕ ಲಂಗ್ಸ್​ನಲ್ಲಿ ನೀರು ತುಂಬಿದ ಪರಿಣಾಮ ಯುವತಿಯ ಆರೋಗ್ಯದಲ್ಲಿ ಏರುಪೇರಾಗಿದೆ. ಆರೋಗ್ಯ ಸ್ಥಿತಿ ಬಿಗಡಾಯಿಸಿದ್ದು ಕಂಡು ಪೋಷಕರು ಆತಂಕಗೊಂಡಿದ್ದಾರೆ. ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ವರ್ಗಾಯಿಸುವಂತೆ ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಉಡುಪಿ: ಮಲ್ಪೆ ಬೀಚ್​​ ದಡಕ್ಕೆ ತೇಲಿಬಂದ ನೂಡಲ್ ಮಾದರಿಯ ವಸ್ತು, ಹೆಚ್ಚಿನ ಅಧ್ಯಯನಕ್ಕಾಗಿ ಗೋವಾಕ್ಕೆ ರವಾನೆ

ಯಾವುದೇ ಗಂಭೀರ ಸಮಸ್ಯೆ ಇಲ್ಲ ನಾವೇ ಚಿಕಿತ್ಸೆ ನೀಡುತ್ತೇವೆ ಎಂದು ವೈದ್ಯರು ಹೇಳಿದ್ದಾರೆ. ಇದ್ದಕ್ಕಿದ್ದಂತೆ ಶ್ವಾಸದಲ್ಲಿ ಏರುಪೇರು ಕಂಡುಬಂದು ಭಾನುವಾರ ಮುಂಜಾನೆ ಯುವತಿ ಸಾವನ್ನಪ್ಪಿದ್ದಾಳೆ. ಸಾವಿಗೆ ಹೃದಯಘಾತ ಕಾರಣ ಎಂದು ವೈದ್ಯರು ಹೇಳಿದ್ದಾರೆ.

ಮಗಳೇ ಇಲ್ಲದ ಮೇಲೆ ದೂರು ಯಾಕೆ ಎಂದ ಪೋಷಕರು 

ಮಣಿಪಾಲಗೆ ಶಿಫ್ಟ್ ಮಾಡಲು ಒಪ್ಪದ ಕಾರಣ ಸಾವು ಸಂಭವಿಸಿದೆ ಎಂದು ಪೋಷಕರು ಆರೋಪಿಸಿದ್ದು, ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ನಿಕಿತಾಗೆ ನ್ಯಾಯ ಒದಗಿಸಿಕೊಡುವಂತೆ ಒತ್ತಾಯಿಸಲಾಗುತ್ತಿದೆ. ಮಗಳೇ ಇಲ್ಲದ ಮೇಲೆ ದೂರು ನೀಡುವುದು ಯಾಕೆ ಎಂದು ಪೊಲೀಸ್ ದೂರು ನೀಡಲು ಕುಟುಂಬಸ್ಥರು ಹಿಂದೇಟು ಹಾಕಿದ್ದಾರೆ.

ಇದನ್ನೂ ಓದಿ: Shakthi Scheme: ಉಚಿತ ಬಸ್‌ ಪ್ರಯಾಣಕ್ಕೆ 12 ದಿನ -ದಕ್ಷಿಣ ಕನ್ನಡದಲ್ಲಿ 2,000 ಕ್ಕೂ ಹೆಚ್ಚು ಖಾಸಗಿ ಬಸ್‌ ಲಾಸ್​, ಮೂರ್ನಾಲ್ಕು ಬೇಡಿಕೆ ಮುಂದಿಟ್ಟ ಮಾಲೀಕರು!

ಮಂಗಳೂರಿನ ಕೆಪಿಟಿಯಲ್ಲಿ ನಿಕಿತಾ ಡಿಪ್ಲೋಮೋ ಮಾಡುತ್ತಿದ್ದರು. ಸಾವಿನ ನೋವಿನಲ್ಲಿ ಮರಣೋತ್ತರ ಪರೀಕ್ಷೆಗೂ ಕುಟುಂಬ ಒಪ್ಪಿಲ್ಲ. ಮರಣೋತ್ತರ ಪರೀಕ್ಷೆ ಆಗಿಲ್ಲದೆ, ಪೊಲೀಸ್ ದೂರು ಕೂಡ ದಾಖಲಾಗಿಲ್ಲ.  ಸದ್ಯ ವೈದ್ಯರ ನಿರ್ಲಕ್ಷದಿಂದ ವಿದ್ಯಾರ್ಥಿನಿ ಮೃತಪಟ್ಟಿರುವುದು ಮೇಲ್ನೋಟಕ್ಕೆ ತಿಳಿದುಬಂದಿದ್ದು, ಸಾವಿನ ಬಗ್ಗೆ ಸ್ಪಷ್ಟತೆ ಇಲ್ಲ. ಆದರೆ ಸಾಮಾಜಿಕ ಜಾಲತಾಣಗಳಲ್ಲಿ ಈ ಕುರಿತಾಗಿ ಅಭಿಯಾನ ಮಾಡಲಾಗುತ್ತಿದ್ದು, ಸೂಕ್ತ ಕ್ರಮಕ್ಕೆ ಒತ್ತಾಯ ಹೆಚ್ಚಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 12:15 pm, Fri, 23 June 23

‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ