AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಟ್ಟೆ ನೋವು ಎಂದು ಆಸ್ಪತ್ರೆಗೆ ಹೋಗಿದ್ದ ವಿದ್ಯಾರ್ಥಿನಿ ಸಾವು, ನಾನಾ ಕಾರಣ ಹೇಳುತ್ತಿರುವ ವೈದ್ಯರು

ವೈದ್ಯರ ನಿರ್ಲಕ್ಷದಿಂದ ಮಗಳು ಮೃತಪಟ್ಟಿದ್ದಾಳೆ ಎಂದು ಪೋಷಕರು ಆರೋಪಿಸಿದ್ದಾರೆ. ಮಗಳೇ ಇಲ್ಲದ ಮೇಲೆ ದೂರು ನೀಡುವುದು ಯಾಕೆ ಎಂದು ಪೊಲೀಸ್ ದೂರು ನೀಡಲು ಕುಟುಂಬಸ್ಥರು ಹಿಂದೇಟು ಹಾಕಿದ್ದಾರೆ. 

ಹೊಟ್ಟೆ ನೋವು ಎಂದು ಆಸ್ಪತ್ರೆಗೆ ಹೋಗಿದ್ದ ವಿದ್ಯಾರ್ಥಿನಿ ಸಾವು, ನಾನಾ ಕಾರಣ ಹೇಳುತ್ತಿರುವ ವೈದ್ಯರು
ಮೃತ ವಿದ್ಯಾರ್ಥಿ ನಿಕಿತಾ
ಗಂಗಾಧರ​ ಬ. ಸಾಬೋಜಿ
|

Updated on:Jun 23, 2023 | 12:16 PM

Share

ಉಡುಪಿ: ವೈದ್ಯರ (doctors) ನಿರ್ಲಕ್ಷದಿಂದ ಮಗಳು ಮೃತಪಟ್ಟಿದ್ದಾಳೆ ಎಂದು ಪೋಷಕರು ಆರೋಪಿಸಿದ್ದಾರೆ. ಜಿಲ್ಲೆಯ ಕಾಪು ತಾಲೂಕಿನ ಪಡುಬಿದ್ರಿ ಸಮೀಪದ ಕೆಮ್ಮುಂಡೇಲು ನಿವಾಸಿ ನಿಕಿತಾ(20) ಮೃತ ವಿದ್ಯಾರ್ಥಿನಿ (Student). ಜನಾರ್ದನ-ಶೋಭಾ ದಂಪತಿಯ ಏಕೈಕ ಮಗಳು. ಹೊಟ್ಟೆ ನೋವು ಎಂಬ ಕಾರಣಕ್ಕೆ ಕಳೆದ ಬುಧವಾರ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸ್ಕ್ಯಾನಿಂಗ್ ಎಂಡೋಸ್ಕೋಪಿ ಸಿಟಿ ಸ್ಕ್ಯಾನ್ ಮಾಡಲಾಗಿತ್ತು. ಬಳಿಕ ಸರಿಯಾದ ಮಾಹಿತಿ ನೀಡದೆ ಆಪರೇಷನ್​ ಮಾಡಿದ್ದಾರೆ ಎಂದು ಪೋಷಕರು ಆರೋಪಿಸಿದ್ದಾರೆ.

ಯುವತಿಯ ಆರೋಗ್ಯದಲ್ಲಿ ಏರುಪೇರು

ಅಪೆಂಡಿಕ್ಸ್ ಆಗಿದೆ ಎಂದು ಆಪರೇಷನ್ ಮಾಡಿದ್ದು, ಶಸ್ತ್ರಚಿಕಿತ್ಸೆ ನಡೆದ ಬಳಿಕ ಲಂಗ್ಸ್​ನಲ್ಲಿ ನೀರು ತುಂಬಿದ ಪರಿಣಾಮ ಯುವತಿಯ ಆರೋಗ್ಯದಲ್ಲಿ ಏರುಪೇರಾಗಿದೆ. ಆರೋಗ್ಯ ಸ್ಥಿತಿ ಬಿಗಡಾಯಿಸಿದ್ದು ಕಂಡು ಪೋಷಕರು ಆತಂಕಗೊಂಡಿದ್ದಾರೆ. ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ವರ್ಗಾಯಿಸುವಂತೆ ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಉಡುಪಿ: ಮಲ್ಪೆ ಬೀಚ್​​ ದಡಕ್ಕೆ ತೇಲಿಬಂದ ನೂಡಲ್ ಮಾದರಿಯ ವಸ್ತು, ಹೆಚ್ಚಿನ ಅಧ್ಯಯನಕ್ಕಾಗಿ ಗೋವಾಕ್ಕೆ ರವಾನೆ

ಯಾವುದೇ ಗಂಭೀರ ಸಮಸ್ಯೆ ಇಲ್ಲ ನಾವೇ ಚಿಕಿತ್ಸೆ ನೀಡುತ್ತೇವೆ ಎಂದು ವೈದ್ಯರು ಹೇಳಿದ್ದಾರೆ. ಇದ್ದಕ್ಕಿದ್ದಂತೆ ಶ್ವಾಸದಲ್ಲಿ ಏರುಪೇರು ಕಂಡುಬಂದು ಭಾನುವಾರ ಮುಂಜಾನೆ ಯುವತಿ ಸಾವನ್ನಪ್ಪಿದ್ದಾಳೆ. ಸಾವಿಗೆ ಹೃದಯಘಾತ ಕಾರಣ ಎಂದು ವೈದ್ಯರು ಹೇಳಿದ್ದಾರೆ.

ಮಗಳೇ ಇಲ್ಲದ ಮೇಲೆ ದೂರು ಯಾಕೆ ಎಂದ ಪೋಷಕರು 

ಮಣಿಪಾಲಗೆ ಶಿಫ್ಟ್ ಮಾಡಲು ಒಪ್ಪದ ಕಾರಣ ಸಾವು ಸಂಭವಿಸಿದೆ ಎಂದು ಪೋಷಕರು ಆರೋಪಿಸಿದ್ದು, ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ನಿಕಿತಾಗೆ ನ್ಯಾಯ ಒದಗಿಸಿಕೊಡುವಂತೆ ಒತ್ತಾಯಿಸಲಾಗುತ್ತಿದೆ. ಮಗಳೇ ಇಲ್ಲದ ಮೇಲೆ ದೂರು ನೀಡುವುದು ಯಾಕೆ ಎಂದು ಪೊಲೀಸ್ ದೂರು ನೀಡಲು ಕುಟುಂಬಸ್ಥರು ಹಿಂದೇಟು ಹಾಕಿದ್ದಾರೆ.

ಇದನ್ನೂ ಓದಿ: Shakthi Scheme: ಉಚಿತ ಬಸ್‌ ಪ್ರಯಾಣಕ್ಕೆ 12 ದಿನ -ದಕ್ಷಿಣ ಕನ್ನಡದಲ್ಲಿ 2,000 ಕ್ಕೂ ಹೆಚ್ಚು ಖಾಸಗಿ ಬಸ್‌ ಲಾಸ್​, ಮೂರ್ನಾಲ್ಕು ಬೇಡಿಕೆ ಮುಂದಿಟ್ಟ ಮಾಲೀಕರು!

ಮಂಗಳೂರಿನ ಕೆಪಿಟಿಯಲ್ಲಿ ನಿಕಿತಾ ಡಿಪ್ಲೋಮೋ ಮಾಡುತ್ತಿದ್ದರು. ಸಾವಿನ ನೋವಿನಲ್ಲಿ ಮರಣೋತ್ತರ ಪರೀಕ್ಷೆಗೂ ಕುಟುಂಬ ಒಪ್ಪಿಲ್ಲ. ಮರಣೋತ್ತರ ಪರೀಕ್ಷೆ ಆಗಿಲ್ಲದೆ, ಪೊಲೀಸ್ ದೂರು ಕೂಡ ದಾಖಲಾಗಿಲ್ಲ.  ಸದ್ಯ ವೈದ್ಯರ ನಿರ್ಲಕ್ಷದಿಂದ ವಿದ್ಯಾರ್ಥಿನಿ ಮೃತಪಟ್ಟಿರುವುದು ಮೇಲ್ನೋಟಕ್ಕೆ ತಿಳಿದುಬಂದಿದ್ದು, ಸಾವಿನ ಬಗ್ಗೆ ಸ್ಪಷ್ಟತೆ ಇಲ್ಲ. ಆದರೆ ಸಾಮಾಜಿಕ ಜಾಲತಾಣಗಳಲ್ಲಿ ಈ ಕುರಿತಾಗಿ ಅಭಿಯಾನ ಮಾಡಲಾಗುತ್ತಿದ್ದು, ಸೂಕ್ತ ಕ್ರಮಕ್ಕೆ ಒತ್ತಾಯ ಹೆಚ್ಚಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 12:15 pm, Fri, 23 June 23

Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ