AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲ್ಲಿದ್ದಲು ಕೊರತೆ: ಕರ್ನಾಟಕ ರಾಜ್ಯದ ಜನ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ- ಸುನಿಲ್ ಕುಮಾರ್

ಕರ್ನಾಟಕ ರಾಜ್ಯದ ಜನ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ. ಬಳ್ಳಾರಿ, ರಾಯಚೂರಿನಲ್ಲಿ ಸಣ್ಣಪುಟ್ಟ ಸಮಸ್ಯೆಗಳಾಗಿವೆ. 2 ಘಟಕಗಳಿಗೆ ಶೀಘ್ರದಲ್ಲೇ ಕಲ್ಲಿದ್ದಲು ಪೂರೈಕೆ ಮಾಡುತ್ತೇವೆ ಎಂದು ಇಂಧನ ಸಚಿವ ವಿ.ಸುನಿಲ್ ಕುಮಾರ್​ ಹೇಳಿದ್ದಾರೆ.

ಕಲ್ಲಿದ್ದಲು ಕೊರತೆ: ಕರ್ನಾಟಕ ರಾಜ್ಯದ ಜನ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ- ಸುನಿಲ್ ಕುಮಾರ್
ಸುನಿಲ್ ಕುಮಾರ್
TV9 Web
| Updated By: ganapathi bhat|

Updated on:Oct 08, 2021 | 4:21 PM

Share

ಉಡುಪಿ: ಮಳೆಗಾಲ ಆಗಿರುವುದರಿಂದ ಕಲ್ಲಿದ್ದಲು ಗಣಿಗಾರಿಕೆಯಲ್ಲಿ ವ್ಯತ್ಯಯ ಉಂಟಾಗಿದೆ. ಕಳೆದ 10- 15 ದಿನಗಳಿಂದ ಕಲ್ಲಿದ್ದಲು ಪೂರೈಕೆಯಲ್ಲಿ ಸಮಸ್ಯೆ ಉಂಟಾಗಿದೆ. ಈ ಸಂಬಂಧ, ಇಂದು ಬೆಳಗ್ಗೆ ಕೇಂದ್ರ ಸಚಿವರ ಜೊತೆ ಮಾತನಾಡಿದ್ದೇನೆ. ಮಹಾರಾಷ್ಟ್ರ, ಒಡಿಶಾದಿಂದ ಕಲ್ಲಿದ್ದಲು ಪೂರೈಕೆಯಾಗಿದೆ. ಮುಂದಿನ ನಾಲ್ಕೈದು ದಿನಗಳಲ್ಲಿ ಸಮಸ್ಯೆ ಬಗೆಹರಿಯಲಿದೆ ಎಂದು ಕಲ್ಲಿದ್ದಲು ಅವಲಂಬಿತ ಉಷ್ಣ ವಿದ್ಯುತ್​ ಸ್ಥಾವರ ಸ್ಥಗಿತ ವಿಚಾರವಾಗಿ ಉಡುಪಿಯಲ್ಲಿ ಇಂಧನ ಸಚಿವ ವಿ.ಸುನಿಲ್ ಕುಮಾರ್​ ಪ್ರತಿಕ್ರಿಯೆ ನೀಡಿದ್ದಾರೆ.

ಕರ್ನಾಟಕ ರಾಜ್ಯದ ಜನ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ. ಬಳ್ಳಾರಿ, ರಾಯಚೂರಿನಲ್ಲಿ ಸಣ್ಣಪುಟ್ಟ ಸಮಸ್ಯೆಗಳಾಗಿವೆ. 2 ಘಟಕಗಳಿಗೆ ಶೀಘ್ರದಲ್ಲೇ ಕಲ್ಲಿದ್ದಲು ಪೂರೈಕೆ ಮಾಡುತ್ತೇವೆ. ಇಂದು ರಾತ್ರಿ ಕೇಂದ್ರ ಸಚಿವರ ಜತೆ ಮತ್ತೊಮ್ಮೆ ಮಾತಾಡುವೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೆಹಲಿ ಪ್ರವಾಸದಲ್ಲಿದ್ದು ಕ್ರಮ ಕೈಗೊಳ್ತಾರೆ ಎಂದು ಸಚಿವ ವಿ. ಸುನಿಲ್ ಕುಮಾರ್​ ಹೇಳಿದ್ದಾರೆ.

ಕೇಂದ್ರ ಸರ್ಕಾರದಿಂದ ಮಹತ್ವದ ಆದೇಶ ಜಾಗತಿಕ ಮಟ್ಟದಲ್ಲೇ ಕಲ್ಲಿದ್ದಲು ಕೊರತೆ ಉಂಟಾಗಿರುವುದರಿಂದ ಬೇಡಿಕೆ ವಿಪರೀತ ಹೆಚ್ಚಾಗಿದೆ. ಇದರಿಂದ ಭಾರತ ಕೂಡ ಹೊರತಾಗಿಲ್ಲ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದಿಂದ ಮಹತ್ವವಾದ ಆದೇಶವೊಂದನ್ನು ನೀಡಲಾಗಿದೆ. ಇಲ್ಲಿಯ ತನಕ ಸ್ವಂತ ಬಳಕೆಗಾಗಿ (ಇವುಗಳನ್ನು Captive Mines ಎನ್ನಲಾಗುತ್ತದೆ) ಕಲ್ಲಿದ್ದಲು ಬಳಸುತ್ತಿದ್ದ ಅವುಗಳು ಇನ್ನು ಮುಂದೆ ವಾರ್ಷಿಕ ಉತ್ಪಾದನೆಯಲ್ಲಿ ಶೇಕಡಾ 50ರಷ್ಟನ್ನು ಮುಕ್ತ ಮಾರುಕಟ್ಟೆಯಲ್ಲಿ ಮಾರಾಟ ಮಾಡುವುದಕ್ಕೆ ಅವಕಾಶ ಮಾಡಿಕೊಡಲಾಗಿದೆ ಎಂದು ಕಲ್ಲಿದ್ದಲು ಸಚಿವಾಲಯದಿಂದ ಅಕ್ಟೋಬರ್ 5ನೇ ತಾರೀಕಿನ ಮಂಗಳವಾರದಂದು ಘೋಷಣೆ ಮಾಡಲಾಗಿದೆ. ಅಂದ ಹಾಗೆ, ಭಾರತದಲ್ಲಿ ಈ ಹಿನ್ನೆಲೆಯಲ್ಲಿ ವಿವಿಧ ಸಿಮೆಂಟ್​ ಕಂಪೆನಿಗಳು ಬೆಲೆ ಹೆಚ್ಚಳ ಮಾಡಿದ್ದು, ಶೇ 20ಕ್ಕೂ ಹೆಚ್ಚು ದರ ಮೇಲೇರಿದೆ. ಇದೇ ವೇಳೆ ಕಟ್ಟಡ ನಿರ್ಮಾಣ ಸೇರಿದಂತೆ ಇತರ ಉದ್ದೇಶಗಳಿಗೆ ಬಳಸುವ ಉಕ್ಕಿನ ದರ ಕೂಡ ಹೆಚ್ಚಳವಾಗಿದೆ.

ಕಲ್ಲಿದ್ದಲು ಸಚಿವಾಲಯವು ಹೇಳಿಕೆಯನ್ನು ನೀಡಿ, ಕಲ್ಲಿದ್ದಲು ಅಥವಾ ಲಿಗ್ನೈಟ್ ಮಾರಾಟದ ದೃಷ್ಟಿಯಿಂದ ಖನಿಜ ವಿನಾಯಿತಿ ನಿಯಮಾವಳಿ, 1960 ಇದಕ್ಕೆ ತಿದ್ದುಪಡಿ ತರಲಾಗಿದೆ. ಭೋಗ್ಯಕ್ಕೆ ಪಡೆದವರು ಕ್ಯಾಪ್ಟಿವ್ ಗಣಿಗಳಿಗೆ ಹೆಚ್ಚುವರಿಯಾಗಿ ಮೊತ್ತವನ್ನು ಪಾವತಿ ಮಾಡಿ, ಒಂದು ಹಣಕಾಸು ವರ್ಷದಲ್ಲಿ ಉತ್ಪಾದನೆ ಮಾಡಿದ ಶೇ 50ರ ತನಕದ ಒಟ್ಟಾರೆ ಕಲ್ಲಿದ್ದಲು ಅಥವಾ ಲಿಗ್ನೈಟ್, ಅದು ಕೂಡ ಆ ಗಣಿಗೆ ಜೋಡಣೆಯಾದ ಘಟಕ ಸಂಪೂರ್ಣ ಬಳಕೆ ಅಗತ್ಯಗಳು ಪೂರೈಸಿದ ಮೇಲೆ ಮಾರಾಟ ಮಾಡಬಹುದು ಎಂದು ತಿಳಿಸಲಾಗಿದೆ.

ಇದನ್ನೂ ಓದಿ: Coal shortage in RTPS: ಆರ್​ಟಿ​ಪಿಎಸ್ ಘಟಕಗಳಲ್ಲಿ ಕಲ್ಲಿದ್ದಲು ಕೊರತೆ; ಕತ್ತಲಲ್ಲಿ ಮುಳುಗಲಿದೆ ಅರ್ಧ ರಾಜ್ಯ

ಇದನ್ನೂ ಓದಿ: Coal Shortage Crisis: ಕಲ್ಲಿದ್ದಲು ಕೊರತೆ ನಿವಾರಿಸಲು ‘ಕ್ಯಾಪ್ಟಿವ್ ಮೈನ್ಸ್​’ಗಳಿಗೆ ಮುಕ್ತ ಮಾರುಕಟ್ಟೆಯಲ್ಲಿ ಮಾರಾಟಕ್ಕೆ ಅವಕಾಶ

Published On - 4:04 pm, Fri, 8 October 21

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ