AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದ ಒಂದು ಮಗುವಿಗೆ ಶಂಕಿತ ಟೊಮೆಟೊ ಜ್ವರ: ಪೋಷಕರಲ್ಲಿ ಆತಂಕ, ಕೇರಳ ಗಡಿಯಲ್ಲಿ ಕಟ್ಟೆಚ್ಚರ

ಕರ್ನಾಟಕದಲ್ಲಿ ಇಂದಿನಿಂದ (ಮೇ 16) ಶಾಲೆಗಳು ಪುನರಾರಂಭವಾಗಲಿವೆ. ಇಷ್ಟು ದಿನ ಕೇರಳದಲ್ಲಿ ಕಂಡುಬರುತ್ತಿದ್ದ ಟೊಮೆಟೊ ಜ್ವರವು ಇದೀಗ ಕರ್ನಾಟಕದಲ್ಲಿಯೂ ಕಾಣಿಸಿಕೊಂಡಿದ್ದು, ಪೋಷಕರಲ್ಲಿ ಆತಂಕ ಮೂಡಿದೆ.

ಕರ್ನಾಟಕದ ಒಂದು ಮಗುವಿಗೆ ಶಂಕಿತ ಟೊಮೆಟೊ ಜ್ವರ: ಪೋಷಕರಲ್ಲಿ ಆತಂಕ, ಕೇರಳ ಗಡಿಯಲ್ಲಿ ಕಟ್ಟೆಚ್ಚರ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:May 16, 2022 | 7:11 AM

ಬೆಂಗಳೂರು: ಇದೀಗ ತಾನೆ ಕೊರೊನಾ ಹೊಡೆತದಿಂದ ಚೇತರಿಸಿಕೊಳ್ಳುತ್ತಿರುವ ಕರ್ನಾಟಕದಲ್ಲಿ ಇಂದಿನಿಂದ (ಮೇ 16) ಶಾಲೆಗಳು ಪುನರಾರಂಭವಾಗಲಿವೆ. ಇಷ್ಟು ದಿನ ಕೇರಳದಲ್ಲಿ ಕಂಡುಬರುತ್ತಿದ್ದ ಟೊಮೆಟೊ ಜ್ವರವು ಇದೀಗ ಕರ್ನಾಟಕದಲ್ಲಿಯೂ ಕಾಣಿಸಿಕೊಂಡಿದ್ದು, ಪೋಷಕರಲ್ಲಿ ಆತಂಕ ಮೂಡಿದೆ. ಕರ್ನಾಟಕದಲ್ಲಿ ಟೊಮೆಟೊ ಜ್ವರ ಕಾಣಿಸಿಕೊಂಡಿರುವ ಬಗ್ಗೆ ಆರೋಗ್ಯ ಇಲಾಖೆಯು ಈವರೆಗೆ ದೃಢಪಡಿಸಿಲ್ಲ. ಕೇರಳ ಗಡಿಭಾಗದ ಉಡುಪಿ ಜಿಲ್ಲೆಯಲ್ಲಿ 4 ವರ್ಷದ ಮಗುವಿಗೆ ಜ್ವರ ಬಂದಿದ್ದು, ಇದು ಟೊಮೆಟೊ ಜ್ವರ ಇರಬಹುದು ಎಂದು ಶಂಕಿಸಲಾಗಿದೆ. ಸೋಂಕಿತ ಮಗುವನ್ನ ತೀವ್ರ ನಿಗಾ ಘಟಕದಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಶಂಕಿತ ಪ್ರಕರಣ ಪತ್ತೆಯ ಹಿನ್ನೆಲೆಯಲ್ಲಿ ರಾಜ್ಯದ ಗಡಿ ಭಾಗದಲ್ಲಿ ತೀವ್ರ ನಿಗಾ ಘಟಕದಲ್ಲಿ ಇರಿಸಲಾಗಿದೆ. ಕೇರಳದೊಂದಿಗೆ ಗಡಿ ಹಂಚಿಕೊಂಡಿರುವ ಉಡುಪಿ, ಮಂಗಳೂರು, ಕೊಡಗು, ಚಾಮರಾಜನಗರ ಜಿಲ್ಲೆಗಳಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳು ಹದ್ದಿನ ಕಣ್ಣು ಇರಿಸಿದ್ದಾರೆ.

ಆರೋಗ್ಯ ಇಲಾಖೆಗೆ ಹೊಸ ಟೆನ್ಷನ್

ಟೊಮೆಟೊ ಫ್ಲೂ ಸಮಸ್ಯೆಯು ಆರೋಗ್ಯ ಇಲಾಖೆಗೆ ಹೊಸ ಟೆನ್ಷನ್ ತಂದಿಟ್ಟಿದೆ. ಟೊಮೆಟೊ ಜ್ವರ ಬಂದವರನ್ನು ನಿರ್ದಿಷ್ಟವಾಗಿ ಗುರುತಿಸುವುದು ಮತ್ತು ಟೆಸ್ಟ್ ಹೇಗೆ ಮಾಡಿಸಬೇಕು ಎನ್ನುವ ಬಗ್ಗೆ ಆರೋಗ್ಯ ಇಲಾಖೆ ಇನ್ನೂ ಪ್ರಚಾರ ನಡೆಸಬೇಕಿದೆ. ಆರೋಗ್ಯ ಇಲಾಖೆಯ ಸಿಬ್ಬಂದಿಯಲ್ಲಿಯೇ ಈ ಬಗ್ಗೆ ಗೊಂದಲಗಳಿವೆ. ಕೇರಳದಲ್ಲಿ ಈವರೆಗೆ 80ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದ್ದು, ರಾಜ್ಯದಲ್ಲಿಯೂ ಈ ಜ್ವರದ ಬಗ್ಗೆ ಆತಂಕ ಹೆಚ್ಚಾಗಿದೆ.

ಕೇರಳ ರಾಜ್ಯದೊಂದಿಗೆ ಗಡಿ ಹಂಚಿಕೊಂಡಿರುವ, ಹೆಚ್ಚು ಒಡನಾಟ ಇರುವ ಚಾಮರಾಜನಗರ, ಕೊಡಗು, ದಕ್ಷಿಣ ಕನ್ನಡ, ಉಡುಪಿ, ಮೈಸೂರು ಜಿಲ್ಲೆಗಳಲ್ಲಿ ಮಕ್ಕಳ ಆರೋಗ್ಯದ ಬಗ್ಗೆ ಎಚ್ಚರದಿಂದ ಇರಬೇಕು ಎಂದು ಸೂಚಿಸಿದೆ. ಈ ನಡುವೆ ಕೊವಿಡ್ ತಾಂತ್ರಿಕ ಸಮಿತಿಯಿಂದಲೇ ಟೊಮೆಟೊ ಜ್ವರ ನಿರ್ವಹಿಸಲು ಆರೋಗ್ಯ ಇಲಾಖೆ ಮುಂದಾಗಿದೆ. ಸಮಿತಿಯೇ ಆರೋಗ್ಯ ಇಲಾಖೆಗೆ ಅಗತ್ಯ ಮಾಹಿತಿ ಒದಗಿಸುತ್ತಿದ್ದು, ರೋಗ ಹರಡುವ ತೀವ್ರತೆಯನ್ನು ಅಭ್ಯಸಿಸಲು ಆರೋಗ್ಯ ಇಲಾಖೆ ಮುಂದಾಗಿದೆ. ಮಕ್ಕಳಲ್ಲಿ ಈ ಜ್ವರ ಹೆಚ್ಚಿನ ಪ್ರಮಾಣದಲ್ಲಿ ಕಂಡು ಬಂದರೆ ಮುಂದಿನ ದಿನಗಳಲ್ಲಿ ಕೊವಿಡ್ ಐಸೊಲೇಷನ್ ವಾರ್ಡ್ ಮಾದರಿಯಲ್ಲಿಯೇ ಕ್ರಮ ಕೈಗೊಳ್ಳಲು ಚಿಂತನೆ ನಡೆಸಿದೆ.

ಟೊಮೆಟೊ ಜ್ವರದ ಕೆಲವು ಪ್ರಮುಖ ಲಕ್ಷಣಗಳು

ವಿಪರೀತ ಜ್ವರ, ನಿರ್ಜಲೀಕರಣ, ದದ್ದುಗಳು, – ಚರ್ಮದ ತುರಿಕೆ, ಕೈ ಮತ್ತು ಕಾಲುಗಳ ಚರ್ಮದ ಬಣ್ಣವೂ ಬದಲು – ಗುಳ್ಳೆಗಳು, ಕಿಬ್ಬೊಟ್ಟೆಯ ಸೆಳೆತ, ವಾಕರಿಕೆ, ವಾಂತಿ – ಅತಿಸಾರ, ಸ್ರವಿಸುವ ಮೂಗು, ಕೆಮ್ಮು, ಸೀನು, – ಆಯಾಸ ಮತ್ತು ದೇಹದಲ್ಲಿ ನೋವು

ಮುನ್ನೆಚ್ಚರಿಕೆ ಮತ್ತು ಚಿಕಿತ್ಸೆ

ಟೊಮೆಟೊ ಫ್ಲೂ ಕುರಿತು ಮಾಹಿತಿ ನೀಡಿರುವ ಡಾ.ಅರುಣ, ‘ಇದು ತನ್ನಿಂತಾನೆ ಕಡಿಮೆಯಾಗುವ ಸೋಂಕು. ಯಾವುದೇ ನಿರ್ದಿಷ್ಟ ಔಷಧಿ ಇಲ್ಲ’ ಎಂದು ಹೇಳಿದ್ದಾರೆ. ‘ಇದು ವೇಗವಾಗಿ ಹರಡುವ ಸೋಂಕಾಗಿರುವ ಕಾರಣ ಟೊಮೆಟೊ ಫ್ಲೂ ಬಂದವರನ್ನು ಪ್ರತ್ಯೇಕವಾಗಿ ಇರಿಸಬೇಕಾಗುತ್ತದೆ. ಸೋಂಕಿನಿಂದ ಉಂಟಾಗುವ ದದ್ದುಗಳನ್ನು ಕೆರೆದುಕೊಳ್ಳಲು ಮಕ್ಕಳಿಗೆ ಬಿಡಬಾರದು. ಸೋಂಕಿತರ ಬಟ್ಟೆ ಮತ್ತು ಅವರು ಬಳಸುವ ಪಾತ್ರೆಗಳನ್ನು ಸರಿಯಾದ ರೀತಿ ಸ್ವಚ್ಛಗೊಳಿಸಬೇಕು. ದ್ರವಾಹಾರ ಸೇವನೆಯಿಂದ ನಿರ್ಜಲೀಕರಣದ ಸಮಸ್ಯೆ ಕಡಿಮೆಯಾಗುತ್ತದೆ. ಸೋಂಕಿನ ಲಕ್ಷಣ ಆಧರಿಸಿ ವೈದ್ಯರು ಚಿಕಿತ್ಸೆ ನಿರ್ಧರಿಸುತ್ತಾರೆ’ ಎಂದು ಹೇಳಿದ್ದಾರೆ.

ಆರೋಗ್ಯ ಸಂಬಂಧಿತ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:11 am, Mon, 16 May 22

ಗಂಗಾ ನದಿಯಲ್ಲಿ ಮುಳುಗುತ್ತಿದ್ದ ವ್ಯಕ್ತಿ ಅದೃಷ್ಟವಶಾತ್ ಪಾರಾದ ವಿಡಿಯೋ ನೋಡಿ
ಗಂಗಾ ನದಿಯಲ್ಲಿ ಮುಳುಗುತ್ತಿದ್ದ ವ್ಯಕ್ತಿ ಅದೃಷ್ಟವಶಾತ್ ಪಾರಾದ ವಿಡಿಯೋ ನೋಡಿ
ಒಂದೇ ದಿನ ಪ್ರೇಮಿ ಮತ್ತು ವಿಲನ್ ಆದ ಶ್ರೀನಗರ ಕಿಟ್ಟಿ; ಹೇಗಿದೆ ರೆಸ್ಪಾನ್ಸ್?
ಒಂದೇ ದಿನ ಪ್ರೇಮಿ ಮತ್ತು ವಿಲನ್ ಆದ ಶ್ರೀನಗರ ಕಿಟ್ಟಿ; ಹೇಗಿದೆ ರೆಸ್ಪಾನ್ಸ್?
ಹೊಂಡದಲ್ಲಿ ಬಿದ್ದ ತನ್ನನ್ನು ರಕ್ಷಿಸಿದವರಿಗೆ ಥ್ಯಾಂಕ್ಸ್ ಹೇಳಿದ ಆನೆ ಮರಿ
ಹೊಂಡದಲ್ಲಿ ಬಿದ್ದ ತನ್ನನ್ನು ರಕ್ಷಿಸಿದವರಿಗೆ ಥ್ಯಾಂಕ್ಸ್ ಹೇಳಿದ ಆನೆ ಮರಿ
‘ಸಂಜು ವೆಡ್ಸ್ ಗೀತಾ 2’ ಸಿನಿಮಾದಲ್ಲಿ ಅಪ್ಪು ಅಭಿಮಾನಿಗಳಿಗೆ ಸರ್ಪ್ರೈಸ್
‘ಸಂಜು ವೆಡ್ಸ್ ಗೀತಾ 2’ ಸಿನಿಮಾದಲ್ಲಿ ಅಪ್ಪು ಅಭಿಮಾನಿಗಳಿಗೆ ಸರ್ಪ್ರೈಸ್
ಜನಸಾಮಾನ್ಯರ ಹಿತದೃಷ್ಟಿ ಗಮನದಲ್ಲಿಟ್ಟುಕೊಂಡೇ ನಿರ್ಧಾರಗಳು: ಶಿವಕುಮಾರ್
ಜನಸಾಮಾನ್ಯರ ಹಿತದೃಷ್ಟಿ ಗಮನದಲ್ಲಿಟ್ಟುಕೊಂಡೇ ನಿರ್ಧಾರಗಳು: ಶಿವಕುಮಾರ್
ಕಾಲ್ತುಳಿತ ದುರ್ಘಟನೆಗೆ ನಾನು ಹೇಗೆ ಜವಾಬ್ದಾರನಾಗುತ್ತೇನೆ? ಶಿವಕುಮಾರ್
ಕಾಲ್ತುಳಿತ ದುರ್ಘಟನೆಗೆ ನಾನು ಹೇಗೆ ಜವಾಬ್ದಾರನಾಗುತ್ತೇನೆ? ಶಿವಕುಮಾರ್
ವಂದೇ ಭಾರತ್ ಎಕ್ಸ್‌ಪ್ರೆಸ್‌ನಲ್ಲಿ ಶಾಲಾ ಮಕ್ಕಳ ಜೊತೆ ಪ್ರಯಾಣಿಸಿದ ಪ್ರಧಾನಿ
ವಂದೇ ಭಾರತ್ ಎಕ್ಸ್‌ಪ್ರೆಸ್‌ನಲ್ಲಿ ಶಾಲಾ ಮಕ್ಕಳ ಜೊತೆ ಪ್ರಯಾಣಿಸಿದ ಪ್ರಧಾನಿ
‘ಸಂಜು ವೆಡ್ಸ್ ಗೀತಾ 2’ ಮೊದಲ ರಿಲೀಸ್ ಇದು: ನಾಗಶೇಖರ್
‘ಸಂಜು ವೆಡ್ಸ್ ಗೀತಾ 2’ ಮೊದಲ ರಿಲೀಸ್ ಇದು: ನಾಗಶೇಖರ್
ಪರಿಹಾರ ಮೊತ್ತ ಹೆಚ್ಚಿಸುವಂತೆ ಸರ್ಕಾರವನ್ನೂ ಆಗ್ರಹಿಸುತ್ತೇನೆ: ಹೆಬ್ಬಾಳ್ಕರ್
ಪರಿಹಾರ ಮೊತ್ತ ಹೆಚ್ಚಿಸುವಂತೆ ಸರ್ಕಾರವನ್ನೂ ಆಗ್ರಹಿಸುತ್ತೇನೆ: ಹೆಬ್ಬಾಳ್ಕರ್
ಆರ್​ಸಿಬಿ ಕೊಡುವ ₹10 ಲಕ್ಷ ಭಿಕ್ಷೆ ಬೇಕಿಲ್ಲ, ಒಂದೊಂದು ಕೋಟಿ ಕೊಡಲಿ:ಬಿವಿವೈ
ಆರ್​ಸಿಬಿ ಕೊಡುವ ₹10 ಲಕ್ಷ ಭಿಕ್ಷೆ ಬೇಕಿಲ್ಲ, ಒಂದೊಂದು ಕೋಟಿ ಕೊಡಲಿ:ಬಿವಿವೈ