AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದ ಒಂದು ಮಗುವಿಗೆ ಶಂಕಿತ ಟೊಮೆಟೊ ಜ್ವರ: ಪೋಷಕರಲ್ಲಿ ಆತಂಕ, ಕೇರಳ ಗಡಿಯಲ್ಲಿ ಕಟ್ಟೆಚ್ಚರ

ಕರ್ನಾಟಕದಲ್ಲಿ ಇಂದಿನಿಂದ (ಮೇ 16) ಶಾಲೆಗಳು ಪುನರಾರಂಭವಾಗಲಿವೆ. ಇಷ್ಟು ದಿನ ಕೇರಳದಲ್ಲಿ ಕಂಡುಬರುತ್ತಿದ್ದ ಟೊಮೆಟೊ ಜ್ವರವು ಇದೀಗ ಕರ್ನಾಟಕದಲ್ಲಿಯೂ ಕಾಣಿಸಿಕೊಂಡಿದ್ದು, ಪೋಷಕರಲ್ಲಿ ಆತಂಕ ಮೂಡಿದೆ.

ಕರ್ನಾಟಕದ ಒಂದು ಮಗುವಿಗೆ ಶಂಕಿತ ಟೊಮೆಟೊ ಜ್ವರ: ಪೋಷಕರಲ್ಲಿ ಆತಂಕ, ಕೇರಳ ಗಡಿಯಲ್ಲಿ ಕಟ್ಟೆಚ್ಚರ
ಪ್ರಾತಿನಿಧಿಕ ಚಿತ್ರ
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on:May 16, 2022 | 7:11 AM

Share

ಬೆಂಗಳೂರು: ಇದೀಗ ತಾನೆ ಕೊರೊನಾ ಹೊಡೆತದಿಂದ ಚೇತರಿಸಿಕೊಳ್ಳುತ್ತಿರುವ ಕರ್ನಾಟಕದಲ್ಲಿ ಇಂದಿನಿಂದ (ಮೇ 16) ಶಾಲೆಗಳು ಪುನರಾರಂಭವಾಗಲಿವೆ. ಇಷ್ಟು ದಿನ ಕೇರಳದಲ್ಲಿ ಕಂಡುಬರುತ್ತಿದ್ದ ಟೊಮೆಟೊ ಜ್ವರವು ಇದೀಗ ಕರ್ನಾಟಕದಲ್ಲಿಯೂ ಕಾಣಿಸಿಕೊಂಡಿದ್ದು, ಪೋಷಕರಲ್ಲಿ ಆತಂಕ ಮೂಡಿದೆ. ಕರ್ನಾಟಕದಲ್ಲಿ ಟೊಮೆಟೊ ಜ್ವರ ಕಾಣಿಸಿಕೊಂಡಿರುವ ಬಗ್ಗೆ ಆರೋಗ್ಯ ಇಲಾಖೆಯು ಈವರೆಗೆ ದೃಢಪಡಿಸಿಲ್ಲ. ಕೇರಳ ಗಡಿಭಾಗದ ಉಡುಪಿ ಜಿಲ್ಲೆಯಲ್ಲಿ 4 ವರ್ಷದ ಮಗುವಿಗೆ ಜ್ವರ ಬಂದಿದ್ದು, ಇದು ಟೊಮೆಟೊ ಜ್ವರ ಇರಬಹುದು ಎಂದು ಶಂಕಿಸಲಾಗಿದೆ. ಸೋಂಕಿತ ಮಗುವನ್ನ ತೀವ್ರ ನಿಗಾ ಘಟಕದಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಶಂಕಿತ ಪ್ರಕರಣ ಪತ್ತೆಯ ಹಿನ್ನೆಲೆಯಲ್ಲಿ ರಾಜ್ಯದ ಗಡಿ ಭಾಗದಲ್ಲಿ ತೀವ್ರ ನಿಗಾ ಘಟಕದಲ್ಲಿ ಇರಿಸಲಾಗಿದೆ. ಕೇರಳದೊಂದಿಗೆ ಗಡಿ ಹಂಚಿಕೊಂಡಿರುವ ಉಡುಪಿ, ಮಂಗಳೂರು, ಕೊಡಗು, ಚಾಮರಾಜನಗರ ಜಿಲ್ಲೆಗಳಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳು ಹದ್ದಿನ ಕಣ್ಣು ಇರಿಸಿದ್ದಾರೆ.

ಆರೋಗ್ಯ ಇಲಾಖೆಗೆ ಹೊಸ ಟೆನ್ಷನ್

ಟೊಮೆಟೊ ಫ್ಲೂ ಸಮಸ್ಯೆಯು ಆರೋಗ್ಯ ಇಲಾಖೆಗೆ ಹೊಸ ಟೆನ್ಷನ್ ತಂದಿಟ್ಟಿದೆ. ಟೊಮೆಟೊ ಜ್ವರ ಬಂದವರನ್ನು ನಿರ್ದಿಷ್ಟವಾಗಿ ಗುರುತಿಸುವುದು ಮತ್ತು ಟೆಸ್ಟ್ ಹೇಗೆ ಮಾಡಿಸಬೇಕು ಎನ್ನುವ ಬಗ್ಗೆ ಆರೋಗ್ಯ ಇಲಾಖೆ ಇನ್ನೂ ಪ್ರಚಾರ ನಡೆಸಬೇಕಿದೆ. ಆರೋಗ್ಯ ಇಲಾಖೆಯ ಸಿಬ್ಬಂದಿಯಲ್ಲಿಯೇ ಈ ಬಗ್ಗೆ ಗೊಂದಲಗಳಿವೆ. ಕೇರಳದಲ್ಲಿ ಈವರೆಗೆ 80ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದ್ದು, ರಾಜ್ಯದಲ್ಲಿಯೂ ಈ ಜ್ವರದ ಬಗ್ಗೆ ಆತಂಕ ಹೆಚ್ಚಾಗಿದೆ.

ಕೇರಳ ರಾಜ್ಯದೊಂದಿಗೆ ಗಡಿ ಹಂಚಿಕೊಂಡಿರುವ, ಹೆಚ್ಚು ಒಡನಾಟ ಇರುವ ಚಾಮರಾಜನಗರ, ಕೊಡಗು, ದಕ್ಷಿಣ ಕನ್ನಡ, ಉಡುಪಿ, ಮೈಸೂರು ಜಿಲ್ಲೆಗಳಲ್ಲಿ ಮಕ್ಕಳ ಆರೋಗ್ಯದ ಬಗ್ಗೆ ಎಚ್ಚರದಿಂದ ಇರಬೇಕು ಎಂದು ಸೂಚಿಸಿದೆ. ಈ ನಡುವೆ ಕೊವಿಡ್ ತಾಂತ್ರಿಕ ಸಮಿತಿಯಿಂದಲೇ ಟೊಮೆಟೊ ಜ್ವರ ನಿರ್ವಹಿಸಲು ಆರೋಗ್ಯ ಇಲಾಖೆ ಮುಂದಾಗಿದೆ. ಸಮಿತಿಯೇ ಆರೋಗ್ಯ ಇಲಾಖೆಗೆ ಅಗತ್ಯ ಮಾಹಿತಿ ಒದಗಿಸುತ್ತಿದ್ದು, ರೋಗ ಹರಡುವ ತೀವ್ರತೆಯನ್ನು ಅಭ್ಯಸಿಸಲು ಆರೋಗ್ಯ ಇಲಾಖೆ ಮುಂದಾಗಿದೆ. ಮಕ್ಕಳಲ್ಲಿ ಈ ಜ್ವರ ಹೆಚ್ಚಿನ ಪ್ರಮಾಣದಲ್ಲಿ ಕಂಡು ಬಂದರೆ ಮುಂದಿನ ದಿನಗಳಲ್ಲಿ ಕೊವಿಡ್ ಐಸೊಲೇಷನ್ ವಾರ್ಡ್ ಮಾದರಿಯಲ್ಲಿಯೇ ಕ್ರಮ ಕೈಗೊಳ್ಳಲು ಚಿಂತನೆ ನಡೆಸಿದೆ.

ಟೊಮೆಟೊ ಜ್ವರದ ಕೆಲವು ಪ್ರಮುಖ ಲಕ್ಷಣಗಳು

ವಿಪರೀತ ಜ್ವರ, ನಿರ್ಜಲೀಕರಣ, ದದ್ದುಗಳು, – ಚರ್ಮದ ತುರಿಕೆ, ಕೈ ಮತ್ತು ಕಾಲುಗಳ ಚರ್ಮದ ಬಣ್ಣವೂ ಬದಲು – ಗುಳ್ಳೆಗಳು, ಕಿಬ್ಬೊಟ್ಟೆಯ ಸೆಳೆತ, ವಾಕರಿಕೆ, ವಾಂತಿ – ಅತಿಸಾರ, ಸ್ರವಿಸುವ ಮೂಗು, ಕೆಮ್ಮು, ಸೀನು, – ಆಯಾಸ ಮತ್ತು ದೇಹದಲ್ಲಿ ನೋವು

ಮುನ್ನೆಚ್ಚರಿಕೆ ಮತ್ತು ಚಿಕಿತ್ಸೆ

ಟೊಮೆಟೊ ಫ್ಲೂ ಕುರಿತು ಮಾಹಿತಿ ನೀಡಿರುವ ಡಾ.ಅರುಣ, ‘ಇದು ತನ್ನಿಂತಾನೆ ಕಡಿಮೆಯಾಗುವ ಸೋಂಕು. ಯಾವುದೇ ನಿರ್ದಿಷ್ಟ ಔಷಧಿ ಇಲ್ಲ’ ಎಂದು ಹೇಳಿದ್ದಾರೆ. ‘ಇದು ವೇಗವಾಗಿ ಹರಡುವ ಸೋಂಕಾಗಿರುವ ಕಾರಣ ಟೊಮೆಟೊ ಫ್ಲೂ ಬಂದವರನ್ನು ಪ್ರತ್ಯೇಕವಾಗಿ ಇರಿಸಬೇಕಾಗುತ್ತದೆ. ಸೋಂಕಿನಿಂದ ಉಂಟಾಗುವ ದದ್ದುಗಳನ್ನು ಕೆರೆದುಕೊಳ್ಳಲು ಮಕ್ಕಳಿಗೆ ಬಿಡಬಾರದು. ಸೋಂಕಿತರ ಬಟ್ಟೆ ಮತ್ತು ಅವರು ಬಳಸುವ ಪಾತ್ರೆಗಳನ್ನು ಸರಿಯಾದ ರೀತಿ ಸ್ವಚ್ಛಗೊಳಿಸಬೇಕು. ದ್ರವಾಹಾರ ಸೇವನೆಯಿಂದ ನಿರ್ಜಲೀಕರಣದ ಸಮಸ್ಯೆ ಕಡಿಮೆಯಾಗುತ್ತದೆ. ಸೋಂಕಿನ ಲಕ್ಷಣ ಆಧರಿಸಿ ವೈದ್ಯರು ಚಿಕಿತ್ಸೆ ನಿರ್ಧರಿಸುತ್ತಾರೆ’ ಎಂದು ಹೇಳಿದ್ದಾರೆ.

ಆರೋಗ್ಯ ಸಂಬಂಧಿತ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:11 am, Mon, 16 May 22

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?