AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದ ಒಂದು ಮಗುವಿಗೆ ಶಂಕಿತ ಟೊಮೆಟೊ ಜ್ವರ: ಪೋಷಕರಲ್ಲಿ ಆತಂಕ, ಕೇರಳ ಗಡಿಯಲ್ಲಿ ಕಟ್ಟೆಚ್ಚರ

ಕರ್ನಾಟಕದಲ್ಲಿ ಇಂದಿನಿಂದ (ಮೇ 16) ಶಾಲೆಗಳು ಪುನರಾರಂಭವಾಗಲಿವೆ. ಇಷ್ಟು ದಿನ ಕೇರಳದಲ್ಲಿ ಕಂಡುಬರುತ್ತಿದ್ದ ಟೊಮೆಟೊ ಜ್ವರವು ಇದೀಗ ಕರ್ನಾಟಕದಲ್ಲಿಯೂ ಕಾಣಿಸಿಕೊಂಡಿದ್ದು, ಪೋಷಕರಲ್ಲಿ ಆತಂಕ ಮೂಡಿದೆ.

ಕರ್ನಾಟಕದ ಒಂದು ಮಗುವಿಗೆ ಶಂಕಿತ ಟೊಮೆಟೊ ಜ್ವರ: ಪೋಷಕರಲ್ಲಿ ಆತಂಕ, ಕೇರಳ ಗಡಿಯಲ್ಲಿ ಕಟ್ಟೆಚ್ಚರ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:May 16, 2022 | 7:11 AM

Share

ಬೆಂಗಳೂರು: ಇದೀಗ ತಾನೆ ಕೊರೊನಾ ಹೊಡೆತದಿಂದ ಚೇತರಿಸಿಕೊಳ್ಳುತ್ತಿರುವ ಕರ್ನಾಟಕದಲ್ಲಿ ಇಂದಿನಿಂದ (ಮೇ 16) ಶಾಲೆಗಳು ಪುನರಾರಂಭವಾಗಲಿವೆ. ಇಷ್ಟು ದಿನ ಕೇರಳದಲ್ಲಿ ಕಂಡುಬರುತ್ತಿದ್ದ ಟೊಮೆಟೊ ಜ್ವರವು ಇದೀಗ ಕರ್ನಾಟಕದಲ್ಲಿಯೂ ಕಾಣಿಸಿಕೊಂಡಿದ್ದು, ಪೋಷಕರಲ್ಲಿ ಆತಂಕ ಮೂಡಿದೆ. ಕರ್ನಾಟಕದಲ್ಲಿ ಟೊಮೆಟೊ ಜ್ವರ ಕಾಣಿಸಿಕೊಂಡಿರುವ ಬಗ್ಗೆ ಆರೋಗ್ಯ ಇಲಾಖೆಯು ಈವರೆಗೆ ದೃಢಪಡಿಸಿಲ್ಲ. ಕೇರಳ ಗಡಿಭಾಗದ ಉಡುಪಿ ಜಿಲ್ಲೆಯಲ್ಲಿ 4 ವರ್ಷದ ಮಗುವಿಗೆ ಜ್ವರ ಬಂದಿದ್ದು, ಇದು ಟೊಮೆಟೊ ಜ್ವರ ಇರಬಹುದು ಎಂದು ಶಂಕಿಸಲಾಗಿದೆ. ಸೋಂಕಿತ ಮಗುವನ್ನ ತೀವ್ರ ನಿಗಾ ಘಟಕದಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಶಂಕಿತ ಪ್ರಕರಣ ಪತ್ತೆಯ ಹಿನ್ನೆಲೆಯಲ್ಲಿ ರಾಜ್ಯದ ಗಡಿ ಭಾಗದಲ್ಲಿ ತೀವ್ರ ನಿಗಾ ಘಟಕದಲ್ಲಿ ಇರಿಸಲಾಗಿದೆ. ಕೇರಳದೊಂದಿಗೆ ಗಡಿ ಹಂಚಿಕೊಂಡಿರುವ ಉಡುಪಿ, ಮಂಗಳೂರು, ಕೊಡಗು, ಚಾಮರಾಜನಗರ ಜಿಲ್ಲೆಗಳಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳು ಹದ್ದಿನ ಕಣ್ಣು ಇರಿಸಿದ್ದಾರೆ.

ಆರೋಗ್ಯ ಇಲಾಖೆಗೆ ಹೊಸ ಟೆನ್ಷನ್

ಟೊಮೆಟೊ ಫ್ಲೂ ಸಮಸ್ಯೆಯು ಆರೋಗ್ಯ ಇಲಾಖೆಗೆ ಹೊಸ ಟೆನ್ಷನ್ ತಂದಿಟ್ಟಿದೆ. ಟೊಮೆಟೊ ಜ್ವರ ಬಂದವರನ್ನು ನಿರ್ದಿಷ್ಟವಾಗಿ ಗುರುತಿಸುವುದು ಮತ್ತು ಟೆಸ್ಟ್ ಹೇಗೆ ಮಾಡಿಸಬೇಕು ಎನ್ನುವ ಬಗ್ಗೆ ಆರೋಗ್ಯ ಇಲಾಖೆ ಇನ್ನೂ ಪ್ರಚಾರ ನಡೆಸಬೇಕಿದೆ. ಆರೋಗ್ಯ ಇಲಾಖೆಯ ಸಿಬ್ಬಂದಿಯಲ್ಲಿಯೇ ಈ ಬಗ್ಗೆ ಗೊಂದಲಗಳಿವೆ. ಕೇರಳದಲ್ಲಿ ಈವರೆಗೆ 80ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದ್ದು, ರಾಜ್ಯದಲ್ಲಿಯೂ ಈ ಜ್ವರದ ಬಗ್ಗೆ ಆತಂಕ ಹೆಚ್ಚಾಗಿದೆ.

ಕೇರಳ ರಾಜ್ಯದೊಂದಿಗೆ ಗಡಿ ಹಂಚಿಕೊಂಡಿರುವ, ಹೆಚ್ಚು ಒಡನಾಟ ಇರುವ ಚಾಮರಾಜನಗರ, ಕೊಡಗು, ದಕ್ಷಿಣ ಕನ್ನಡ, ಉಡುಪಿ, ಮೈಸೂರು ಜಿಲ್ಲೆಗಳಲ್ಲಿ ಮಕ್ಕಳ ಆರೋಗ್ಯದ ಬಗ್ಗೆ ಎಚ್ಚರದಿಂದ ಇರಬೇಕು ಎಂದು ಸೂಚಿಸಿದೆ. ಈ ನಡುವೆ ಕೊವಿಡ್ ತಾಂತ್ರಿಕ ಸಮಿತಿಯಿಂದಲೇ ಟೊಮೆಟೊ ಜ್ವರ ನಿರ್ವಹಿಸಲು ಆರೋಗ್ಯ ಇಲಾಖೆ ಮುಂದಾಗಿದೆ. ಸಮಿತಿಯೇ ಆರೋಗ್ಯ ಇಲಾಖೆಗೆ ಅಗತ್ಯ ಮಾಹಿತಿ ಒದಗಿಸುತ್ತಿದ್ದು, ರೋಗ ಹರಡುವ ತೀವ್ರತೆಯನ್ನು ಅಭ್ಯಸಿಸಲು ಆರೋಗ್ಯ ಇಲಾಖೆ ಮುಂದಾಗಿದೆ. ಮಕ್ಕಳಲ್ಲಿ ಈ ಜ್ವರ ಹೆಚ್ಚಿನ ಪ್ರಮಾಣದಲ್ಲಿ ಕಂಡು ಬಂದರೆ ಮುಂದಿನ ದಿನಗಳಲ್ಲಿ ಕೊವಿಡ್ ಐಸೊಲೇಷನ್ ವಾರ್ಡ್ ಮಾದರಿಯಲ್ಲಿಯೇ ಕ್ರಮ ಕೈಗೊಳ್ಳಲು ಚಿಂತನೆ ನಡೆಸಿದೆ.

ಟೊಮೆಟೊ ಜ್ವರದ ಕೆಲವು ಪ್ರಮುಖ ಲಕ್ಷಣಗಳು

ವಿಪರೀತ ಜ್ವರ, ನಿರ್ಜಲೀಕರಣ, ದದ್ದುಗಳು, – ಚರ್ಮದ ತುರಿಕೆ, ಕೈ ಮತ್ತು ಕಾಲುಗಳ ಚರ್ಮದ ಬಣ್ಣವೂ ಬದಲು – ಗುಳ್ಳೆಗಳು, ಕಿಬ್ಬೊಟ್ಟೆಯ ಸೆಳೆತ, ವಾಕರಿಕೆ, ವಾಂತಿ – ಅತಿಸಾರ, ಸ್ರವಿಸುವ ಮೂಗು, ಕೆಮ್ಮು, ಸೀನು, – ಆಯಾಸ ಮತ್ತು ದೇಹದಲ್ಲಿ ನೋವು

ಮುನ್ನೆಚ್ಚರಿಕೆ ಮತ್ತು ಚಿಕಿತ್ಸೆ

ಟೊಮೆಟೊ ಫ್ಲೂ ಕುರಿತು ಮಾಹಿತಿ ನೀಡಿರುವ ಡಾ.ಅರುಣ, ‘ಇದು ತನ್ನಿಂತಾನೆ ಕಡಿಮೆಯಾಗುವ ಸೋಂಕು. ಯಾವುದೇ ನಿರ್ದಿಷ್ಟ ಔಷಧಿ ಇಲ್ಲ’ ಎಂದು ಹೇಳಿದ್ದಾರೆ. ‘ಇದು ವೇಗವಾಗಿ ಹರಡುವ ಸೋಂಕಾಗಿರುವ ಕಾರಣ ಟೊಮೆಟೊ ಫ್ಲೂ ಬಂದವರನ್ನು ಪ್ರತ್ಯೇಕವಾಗಿ ಇರಿಸಬೇಕಾಗುತ್ತದೆ. ಸೋಂಕಿನಿಂದ ಉಂಟಾಗುವ ದದ್ದುಗಳನ್ನು ಕೆರೆದುಕೊಳ್ಳಲು ಮಕ್ಕಳಿಗೆ ಬಿಡಬಾರದು. ಸೋಂಕಿತರ ಬಟ್ಟೆ ಮತ್ತು ಅವರು ಬಳಸುವ ಪಾತ್ರೆಗಳನ್ನು ಸರಿಯಾದ ರೀತಿ ಸ್ವಚ್ಛಗೊಳಿಸಬೇಕು. ದ್ರವಾಹಾರ ಸೇವನೆಯಿಂದ ನಿರ್ಜಲೀಕರಣದ ಸಮಸ್ಯೆ ಕಡಿಮೆಯಾಗುತ್ತದೆ. ಸೋಂಕಿನ ಲಕ್ಷಣ ಆಧರಿಸಿ ವೈದ್ಯರು ಚಿಕಿತ್ಸೆ ನಿರ್ಧರಿಸುತ್ತಾರೆ’ ಎಂದು ಹೇಳಿದ್ದಾರೆ.

ಆರೋಗ್ಯ ಸಂಬಂಧಿತ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:11 am, Mon, 16 May 22

Follow Us
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಜೈಲಿನಲ್ಲಿ ಪವಿತ್ರಾ ಗೌಡಗೆ ವಿಪರೀತ ಜ್ವರ; ವಿಚಾರಣೆಗೆ ಗೈರು
ಜೈಲಿನಲ್ಲಿ ಪವಿತ್ರಾ ಗೌಡಗೆ ವಿಪರೀತ ಜ್ವರ; ವಿಚಾರಣೆಗೆ ಗೈರು