Udupi Ram Mandir Gift: ಸುವರ್ಣ ಅಟ್ಟೆ ಪ್ರಭಾವಳಿ: ಅಯೋಧ್ಯೆ ಬಾಲರಾಮನಿಗೆ ಕೋಟ ಕಾಶಿಮಠ ಸಂಸ್ಥಾನದಿಂದ ಮತ್ತೊಂದು ಭರ್ಜರಿ ಕೊಡುಗೆ

ಅಯೋಧ್ಯಾ ಶ್ರೀ ರಾಮನಿಗೆ ಶ್ರೀ ಕಾಶಿಮಠ ಸಂಸ್ಥಾನದಿಂದ ಕೊಡುಗೆ. ಉಡುಪಿಯ ಪ್ರಸಿದ್ಧ ಸ್ವರ್ಣ ಜ್ಯುವೆಲ್ಲರ್ಸ್ ನಲ್ಲಿ ಇದನ್ನು ನಿರ್ಮಿಸಲಾಗಿದೆ. ಪೇಜಾವರ ಶ್ರೀಗಳ ನೇತೃತ್ವದಲ್ಲಿ ನಡೆಯುತ್ತಿರುವ ಮಂಡಲೋತ್ಸವದಲ್ಲಿ ಬಾಲರಾಮನಿಗೆ ಇದನ್ನು ಅರ್ಪಿಸಲಾಗುವುದು.

ಉಡುಪಿ, ಫೆಬ್ರವರಿ 9: ಅಯೋಧ್ಯಾ (Ayodhya) ಶ್ರೀ ರಾಮನಿಗೆ (Ram Mandir) ಶ್ರೀ ಕಾಶಿಮಠ ಸಂಸ್ಥಾನದಿಂದ ಮತ್ತೊಂದು ಭರ್ಜರಿ ಕೊಡುಗೆ ನೀಡಲಾಗಿದೆ. ಸುವರ್ಣ ಅಟ್ಟೆ ಪ್ರಭಾವಳಿ ಸಮರ್ಪಣೆಗೆ ಸಿದ್ಧವಾಗಿದೆ. ದೇವರ ಉತ್ಸವ ಮೂರ್ತಿಗೆ ಅಲಂಕಾರಿಕವಾಗಿ ಈ ಅಟ್ಟೆ ಪ್ರಭಾವಳಿಯನ್ನು (Prabhavali, Aura) ಬಳಸಲಾಗುತ್ತದೆ.

ಉಡುಪಿ  (Udupi) ಜಿಲ್ಲೆ ಕೋಟ ಶ್ರೀ ಕಾಶಿ ಮಠದ ಶಾಖೆಯಿಂದ ವೈಭವದ ಮೆರವಣಿಗೆಯ ಮೂಲಕ ಅಯೋಧ್ಯೆಯತ್ತ ತೆರಳಲಿದೆ. ಸುಮಾರು ಒಂದು ಕೆಜಿ ಚಿನ್ನ ಮತ್ತು 3 ಕೆಜಿ ಬೆಳ್ಳಿಯಿಂದ ಇದನ್ನು ತಯಾರಿಸಲಾಗಿದೆ. ಈ ಅಟ್ಟೆ ಪ್ರಭಾವಳಿಗೆ ಸುಮಾರು‌70 ಲಕ್ಷ ರೂ ವೆಚ್ಚ ತಗುಲಿದೆ.

ಇದನ್ನೂ ಓದಿ: ಅಯೋಧ್ಯೆಯಲ್ಲಿ ಬಾಲರಾಮನಿಗೆ ರಜತ ಕಲಶ ಅಭಿಷೇಕ ಸೇವೆ ಮಾಡಿಸಬೇಕಾ? ಹಾಗಾದರೆ ಈ ಉದಾತ್ತ ಸಮಾಜ ಕಾರ್ಯ ನಡೆಸಿಕೊಡಿ

ಅಯೋಧ್ಯಾ ಶ್ರೀ ರಾಮನಿಗೆ ಶ್ರೀ ಕಾಶಿಮಠ ಸಂಸ್ಥಾನದಿಂದ ಕೊಡುಗೆ. ಉಡುಪಿಯ ಪ್ರಸಿದ್ಧ ಸ್ವರ್ಣ ಜ್ಯುವೆಲ್ಲರ್ಸ್ ನಲ್ಲಿ ಇದನ್ನು ನಿರ್ಮಿಸಲಾಗಿದೆ. ಪೇಜಾವರ ಶ್ರೀಗಳ ನೇತೃತ್ವದಲ್ಲಿ ನಡೆಯುತ್ತಿರುವ ಮಂಡಲೋತ್ಸವದಲ್ಲಿ ಬಾಲರಾಮನಿಗೆ ಇದನ್ನು ಅರ್ಪಿಸಲಾಗುವುದು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 12:45 pm, Sat, 10 February 24

Prajwal Amin

ಪ್ರಜ್ವಲ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪಡೆದಿರುತ್ತಾರೆ. ಉಡುಪಿ ಜಿಲ್ಲೆಯ ಸ್ಥಳೀಯ ಖಾಸಗಿ ಸುದ್ದಿವಾಹಿನಿಯ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ ಇವರು ಬಳಿಕ ಪ್ರಜಾವಾಣಿಯ ವರದಿಗಾರನಾಗಿ ಕೆಲಸ ಮಾಡಿರುತ್ತಾರೆ. ನಂತರ 6 ವರ್ಷ ಟಿ.ವಿ 5ನ ದಕ್ಷಿಣ ಕನ್ನಡ ಜಿಲ್ಲಾ ವರದಿಗಾರನಾಗಿ ನಂತರ ದಿಗ್ವಿಜಯ ನ್ಯೂಸ್ ನ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ವರದಿಗಾರನಾಗಿ ಕಾರ್ಯನಿರ್ವಾಹಸಿದ್ದಾರೆ. ಕಳೆದ ಹನ್ನೊಂದು ತಿಂಗಳಿನಿಂದ ಟಿ.ವಿ 9 ಸಂಸ್ಥೆಯಲ್ಲಿ ಉಡುಪಿ ಜಿಲ್ಲಾ ವರದಿಗಾರನಾಗಿ ಕಾರ್ಯನಿರ್ವಾಹಿಸುತ್ತಿದ್ದಾರೆ.

Read More
Follow Us