AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾನು ಟ್ವೀಟ್‌ ಮಾಡದಿದ್ದರೆ ಪ್ರಕರಣ ಹೊರಗೆ ಬರುತ್ತಿರಲಿಲ್ಲ: ಮಹಿಳಾ ಹೋರಾಟಗಾರ್ತಿ ರಶ್ಮಿ ಸಾಮಂತ್

ಉಡುಪಿ ಖಾಸಗಿ ಕಾಲೇಜಿನಲ್ಲಿ ವಿದ್ಯಾರ್ಥಿನಿಯ ಖಾಸಗಿ ವಿಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳಾ ಹೋರಾಟಗಾರ್ತಿ ರಶ್ಮಿ ಸಾಮಂತ್​ ಟಿವಿ9 ಜೊತೆ ಮಾತನಾಡಿದ್ದು, ನಾನು ಟ್ವೀಟ್‌ ಮಾಡದಿದ್ದರೆ ಪ್ರಕರಣ ಹೊರಗೆ ಬರುತ್ತಿರಲಿಲ್ಲ ಎಂದು ಹೇಳಿದ್ದಾರೆ.

ನಾನು ಟ್ವೀಟ್‌ ಮಾಡದಿದ್ದರೆ ಪ್ರಕರಣ ಹೊರಗೆ ಬರುತ್ತಿರಲಿಲ್ಲ: ಮಹಿಳಾ ಹೋರಾಟಗಾರ್ತಿ ರಶ್ಮಿ ಸಾಮಂತ್
ರಶ್ಮಿ ಸಮಂತ್
ಪ್ರಜ್ವಲ್ ಅಮೀನ್​, ಉಡುಪಿ
| Edited By: |

Updated on:Aug 03, 2023 | 9:14 PM

Share

ಉಡುಪಿ, ಆಗಸ್ಟ್​ 03: ಉಡುಪಿ ಖಾಸಗಿ ಕಾಲೇಜಿನಲ್ಲಿ ವಿದ್ಯಾರ್ಥಿನಿಯ ಖಾಸಗಿ ವಿಡಿಯೋ ಚಿತ್ರೀಕರಣ ಪ್ರಕರಣಕದ ತನಿಖೆ ಸದ್ಯ ತೀವ್ರಗೊಂಡಿದೆ. ಆರೋಪಿತ ವಿದ್ಯಾರ್ಥಿನಿಯರ ಸ್ನೇಹಿತರ ಮೊಬೈಲ್​ಗಳನ್ನು ಕೂಡ ಸೀಜ್ ಮಾಡಲಾಗಿದೆ. ಇದರ ಮಧ್ಯೆ ಪ್ರಕರಣ ಕುರಿತಾಗಿ ಟ್ವೀಟ್​ ಮಾಡಿದ್ದ ಮಹಿಳಾ ಹೋರಾಟಗಾರ್ತಿ ರಶ್ಮಿ ಸಾಮಂತ್ (Rashmi Samant) ಪ್ರತಿಕ್ರಿಯಿಸಿದ್ದು, ನಾನು ಟ್ವೀಟ್‌ ಮಾಡದಿದ್ದರೆ ಪ್ರಕರಣ ಹೊರಗೆ ಬರುತ್ತಿರಲಿಲ್ಲ ಎಂದಿದ್ದಾರೆ.

ನಾನು ಧ್ವನಿ ಎತ್ತದಿದ್ದರೆ ಪೊಲೀಸರು ಪ್ರಕರಣ ದಾಖಲಿಸುತ್ತಿರಲಿಲ್ಲ: ರಶ್ಮಿ ಸಮಂತ್

ಉಡುಪಿಯಲ್ಲಿ ಟಿವಿ9 ಜೊತೆ ಮಾತನಾಡಿದ ಅವರು, ನಾನು ಧ್ವನಿ ಎತ್ತದಿದ್ದರೆ ಪೊಲೀಸರು ಪ್ರಕರಣ ದಾಖಲಿಸುತ್ತಿರಲಿಲ್ಲ. ಸಮಾಜದಲ್ಲಿ ತಪ್ಪು ನಡೆದಾಗ ಪ್ರತಿಭಟಸಲೇಬೇಕು. ಪೊಲೀಸರು ನಿರ್ಲಕ್ಷ್ಯಿಸಿದರೆ ನಾಗರಿಕರು ಪ್ರತಿಭಟನೆ ಮಾಡಲೇಬೇಕು. ಘಟನೆಯಿಂದ ನಾಗರಿಕ ಸಮಾಜ ತಲೆತಗ್ಗಿಸುವ ಕೆಲಸ ಆಗಿದೆ ಎಂದರು.

ಇದನ್ನೂ ಓದಿ: ಪೊರಕೆ ಹಿಡಿಯುವ ಕೈಯಲ್ಲಿ ಶಸ್ತ್ರಾಸ್ತ್ರ ಹಿಡಿಯಲು ಸಿದ್ಧರಾಗಿ; ಉಡುಪಿಯಲ್ಲಿ ಮಹಿಳೆಯರಿಗೆ ಶರಣ್ ಪಂಪ್​​​ವೆಲ್ ಕರೆ

ಉನ್ನತ ಮಟ್ಟದ ತನಿಖೆಯಾಗಬೇಕು

ಪೊಲೀಸರ ತನಿಖೆ ಚುರುಕಾಗಬೇಕಾದರೆ ಪ್ರತಿಭಟನೆ ಮಾಡಬೇಕು. ಇಲ್ಲದಿದ್ದರೆ ಸರಿಯಾದ ದಿಕ್ಕಿನಲ್ಲಿ ತನಿಖೆ ನಡೆಯುವುದಿಲ್ಲ. ಪ್ರಕರಣದ ಬಗ್ಗೆ ಧ್ವನಿ ಎತ್ತಿದವರ ಮನೆಗೆ ಪೊಲೀಸರನ್ನು ಕಳಿಸಲಾಗಿದೆ. ಈ ಸಂಬಂಧ ಉನ್ನತ ಮಟ್ಟದ ತನಿಖೆಯಾಗಬೇಕು ಎಂದು ಹೇಳಿದರು.

ಇದನ್ನೂ ಓದಿ: ಉಡುಪಿ ಕಾಲೇಜಿನ ವಿಡಿಯೋ ಚಿತ್ರೀಕರಣ ಕೇಸ್​: ತನಿಖಾಧಿಕಾರಿ ಬದಲಾಗುತ್ತಿದ್ದಂತೆಯೇ ತನಿಖೆ ಚುರುಕು, ಆರೋಪಿಗಳ ಫ್ರೆಂಡ್ಸ್​ ಫೋನ್ ವಶಕ್ಕೆ

ಸದ್ಯ ಪ್ರಕರಣ ರಾಜ್ಯ, ದೇಶದಾದ್ಯಂತ ಸಂಚಲನವನ್ನೇ ಸೃಷ್ಟಿಸಿದೆ. ಪ್ರತಿಪಕ್ಷ ಬಿಜೆಪಿ ಕಾರ್ಯಕರ್ತರು ಈಗಾಗಲೇ ಪ್ರತಿಭಟನೆಗಳ ಮೇಲೆ ಪ್ರತಿಭಟನೆ ಮಾಡುತ್ತಾ, ಸರ್ಕಾರದ ಮೇಲೆ ಸಮಗ್ರ ತನಿಖೆಗಾಗಿ ಒತ್ತಡ ಹೇರಿತ್ತು. ಪ್ರಕರಣದ ಸಂಬಂಧ ಈಗಾಗಲೇ ತನಿಖಾ ತಂಡ ರಚಿಸಿರುವ ಪೊಲೀಸ್​, ತನಿಖೆಯನ್ನು ತೀವ್ರಗೊಳಿಸಿದೆ. ಆರೋಪಿತ ವಿದ್ಯಾರ್ಥಿಗಳನ್ನು ಈಗಾಗಲೇ ವಿಚಾರಣೆಗೆ ಒಳಪಿಡಿಸಲಾಗಿದ್ದು, ಅವರ ಮೊಬೈಲ್​ಗಳನ್ನ ಸೀಜ್ ಮಾಡಿ ಎಫ್​ಎಸ್​ಎಲ್​ಗೆ ರವಾನಿಸಿತ್ತು.

ರಜೆ ಮುಂದೂಡಿಕೆ

ಆರೋಪಿತ ವಿದ್ಯಾರ್ಥಿನಿಯರು ಸ್ನೇಹಿತರಿಗೆ ಖಾಸಗಿ ವಿಡಿಯೋಗಳನ್ನು ಕಳುಹಿಸಿದ್ದಾರೆ ಎಂಬ ಆರೋಪ ಇರುವ ಹಿನ್ನೆಲೆ, ಸ್ನೇಹಿತರ ಮೊಬೈಲ್​ನ್ನು ಸೀಜ್ ಮಾಡಲಾಗಿದೆ. ಈ ನಡುವೆ ವಿವಾದ ಕೇಂದ್ರ ಬಿಂದುವಾಗಿರುವ ಖಾಸಗಿ ಶಾಲೆಗಳಿಗೆ ಅನಿರ್ದಿಷ್ಟ ಅವಧಿಗೆ ರಜೆ ಮುಂದೂಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:06 pm, Thu, 3 August 23

Follow Us
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ಹಾಳಾದ ಲಿಫ್ಟ್​​ನಲ್ಲಿ ಸಿಲುಕಿದ ವ್ಯಕ್ತಿಯ ಶಾಕಿಂಗ್ ವಿಡಿಯೋ ಇಲ್ಲಿದೆ
ಹಾಳಾದ ಲಿಫ್ಟ್​​ನಲ್ಲಿ ಸಿಲುಕಿದ ವ್ಯಕ್ತಿಯ ಶಾಕಿಂಗ್ ವಿಡಿಯೋ ಇಲ್ಲಿದೆ
ಕ್ಲಾಸ್ ರೂಂನಲ್ಲೇ ಶಿಕ್ಷಕನಿಗೆ ಹೊಡೆದ 10ನೇ ತರಗತಿ ವಿದ್ಯಾರ್ಥಿ!
ಕ್ಲಾಸ್ ರೂಂನಲ್ಲೇ ಶಿಕ್ಷಕನಿಗೆ ಹೊಡೆದ 10ನೇ ತರಗತಿ ವಿದ್ಯಾರ್ಥಿ!
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ
ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ
ದಂಪತಿ ಜಗಳ ಶಾಲೆ ತನಕ:ಶಿಕ್ಷಕನಿಗಾಗಿ ಗಲಾಟೆ ಮಾಡಿದ ಪತ್ನಿ ಹೇಳಿದ್ದೇನು?
ದಂಪತಿ ಜಗಳ ಶಾಲೆ ತನಕ:ಶಿಕ್ಷಕನಿಗಾಗಿ ಗಲಾಟೆ ಮಾಡಿದ ಪತ್ನಿ ಹೇಳಿದ್ದೇನು?