AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Udupi News: ಮಳೆಗೆ ಉಡುಪಿಯಲ್ಲಿ ಮೊದಲ ಬಲಿ, ಸ್ಕೂಟರ್​ನಲ್ಲಿ ತೆರಳುತ್ತಿದ್ದ ವ್ಯಕ್ತಿ ಕೆರೆಗೆ ಬಿದ್ದು ಸಾವು

ಮಹಾಮಳೆಗೆ ಜಿಲ್ಲೆಯಲ್ಲಿ ಮೊದಲ ಬಲಿಯಾಗಿದೆ. ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ತೆಕ್ಕಟ್ಟೆ ಬಳಿ ನಿನ್ನೆ(ಜು.4) ತಡರಾತ್ರಿ ಸ್ಕೂಟರ್​ನಲ್ಲಿ ತೆರಳುತ್ತಿದ್ದ ವೇಳೆ ಮಳೆಯಿಂದಾಗಿ ಆಯತಪ್ಪಿ ಕೆರೆಗೆ ಬಿದ್ದು ವ್ಯಕ್ತಿಯೋರ್ವ ಸಾವನ್ನಪ್ಪಿದ್ದಾರೆ.

Udupi News: ಮಳೆಗೆ ಉಡುಪಿಯಲ್ಲಿ ಮೊದಲ ಬಲಿ, ಸ್ಕೂಟರ್​ನಲ್ಲಿ ತೆರಳುತ್ತಿದ್ದ ವ್ಯಕ್ತಿ  ಕೆರೆಗೆ ಬಿದ್ದು ಸಾವು
ಉಡುಪಿ
ಪ್ರಜ್ವಲ್ ಅಮೀನ್​, ಉಡುಪಿ
| Edited By: |

Updated on: Jul 05, 2023 | 11:07 AM

Share

ಉಡುಪಿ: ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಜೋರಾಗಿದೆ. ಈ ಹಿನ್ನಲೆ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಿಸಲಾಗಿದ್ದು, ಮುಂಜಾಗೃತ ಕ್ರಮವಾಗಿ ಈಗಾಗಲೇ ಶಾಲೆ ಕಾಲೇಜುಗಳಿಗೆ ನಿನ್ನೆಯಿಂದ ರಜೆ ನೀಡಲಾಗಿದೆ. ಆದರೀಗ ಮಹಾಮಳೆಗೆ ಜಿಲ್ಲೆಯಲ್ಲಿ ಮೊದಲ ಬಲಿ(Death)ಯಾಗಿದೆ. ಉಡುಪಿ ಜಿಲ್ಲೆಯ ಕುಂದಾಪುರ(Kundapura) ತಾಲೂಕಿನ ತೆಕ್ಕಟ್ಟೆ ಬಳಿ ನಿನ್ನೆ(ಜು.4) ತಡರಾತ್ರಿ ಸ್ಕೂಟರ್​ನಲ್ಲಿ ತೆರಳುತ್ತಿದ್ದ ವೇಳೆ ಮಳೆಯಿಂದಾಗಿ ಆಯತಪ್ಪಿ ಕೆರೆಗೆ ಬಿದ್ದು ವ್ಯಕ್ತಿಯೋರ್ವ ಸಾವನ್ನಪ್ಪಿದ್ದಾರೆ. ದಿವಾಕರ್ ಶೆಟ್ಟಿ ಮೃತ ರ್ದುದೈವಿ.

ಹೋಟೆಲ್ ಕೆಲಸ ಮಾಡುವ ಮೃತ ದಿವಾಕರ್​ ಅವರು ನಿನ್ನೆ ರಾತ್ರಿ ಹೋಟೆಲ್ ಕೆಲಸ ಮುಗಿಸಿ ತೆಕ್ಕಟೆಯ ಮಲ್ಯಾಡಿ ಸಮೀಪ ಸ್ಕೂಟರ್​ನಲ್ಲಿ ಮನೆಗೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ. ಅವರಿಗೆ ಕಾಲು ನೋವು ಇದ್ದ ಹಿನ್ನೆಲೆಯಲ್ಲಿ ಇಳಿಯಲಾಗದೇ ಬೈಕ್ ಜೊತೆಗೆ ಜಾರಿ ಕೆರೆಗೆ ಉರುಳಿ ಸಾವನ್ನಪ್ಪಿದ್ದರು. ತಡರಾತ್ರಿ ಘಟನಾ ಸ್ಥಳಕ್ಕೆ ಮುಳುಗುತಜ್ಞ ಈಶ್ವರಮಲ್ಪೆ ಆಗಮಿಸಿ ಕಾರ್ಯಾಚರಣೆ ನಡೆಸಿ ಶವವನ್ನ ಮೇಲಕ್ಕೆ ತಗೆದಿದ್ದಾರೆ. ಈ ಕುರಿತು ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:Karnataka Rains: ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಕೆಲವೇ ಗಂಟೆಗಳಲ್ಲಿ ಸುರಿಯಲಿದೆ ಭಾರಿ ಮಳೆ: ರೆಡ್ ಅಲರ್ಟ್​ ಘೋಷಣೆ

ಕೊಲೆಯಾದ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

ಬೆಳಗಾವಿ: ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕಬ್ಬೂರು-ಬೆಲ್ಲದ ಬಾಗೇವಾಡಿ ರಸ್ತೆಯಲ್ಲಿ ಬಳಿ ಕೊಲೆಯಾದ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಶಿರಹಟ್ಟಿಕೇಡಿ ಗ್ರಾಮದ ನಿವಾಸಿ ಭೀಮಣ್ಣ ಕಲ್ಲಪ್ಪ ಮುನ್ನೋಳಿ(51) ಮೃತ ವ್ಯಕ್ತಿ. ಆತನನ್ನ ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ. ಸ್ಥಳಕ್ಕೆ ಚಿಕ್ಕೋಡಿ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ಮಾಡುತ್ತಿದ್ದಾರೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?