AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Udupi News: ಮಳೆಗೆ ಉಡುಪಿಯಲ್ಲಿ ಮೊದಲ ಬಲಿ, ಸ್ಕೂಟರ್​ನಲ್ಲಿ ತೆರಳುತ್ತಿದ್ದ ವ್ಯಕ್ತಿ ಕೆರೆಗೆ ಬಿದ್ದು ಸಾವು

ಮಹಾಮಳೆಗೆ ಜಿಲ್ಲೆಯಲ್ಲಿ ಮೊದಲ ಬಲಿಯಾಗಿದೆ. ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ತೆಕ್ಕಟ್ಟೆ ಬಳಿ ನಿನ್ನೆ(ಜು.4) ತಡರಾತ್ರಿ ಸ್ಕೂಟರ್​ನಲ್ಲಿ ತೆರಳುತ್ತಿದ್ದ ವೇಳೆ ಮಳೆಯಿಂದಾಗಿ ಆಯತಪ್ಪಿ ಕೆರೆಗೆ ಬಿದ್ದು ವ್ಯಕ್ತಿಯೋರ್ವ ಸಾವನ್ನಪ್ಪಿದ್ದಾರೆ.

Udupi News: ಮಳೆಗೆ ಉಡುಪಿಯಲ್ಲಿ ಮೊದಲ ಬಲಿ, ಸ್ಕೂಟರ್​ನಲ್ಲಿ ತೆರಳುತ್ತಿದ್ದ ವ್ಯಕ್ತಿ  ಕೆರೆಗೆ ಬಿದ್ದು ಸಾವು
ಉಡುಪಿ
ಪ್ರಜ್ವಲ್ ಅಮೀನ್​, ಉಡುಪಿ
| Edited By: ಕಿರಣ್ ಹನುಮಂತ್​ ಮಾದಾರ್|

Updated on: Jul 05, 2023 | 11:07 AM

Share

ಉಡುಪಿ: ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಜೋರಾಗಿದೆ. ಈ ಹಿನ್ನಲೆ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಿಸಲಾಗಿದ್ದು, ಮುಂಜಾಗೃತ ಕ್ರಮವಾಗಿ ಈಗಾಗಲೇ ಶಾಲೆ ಕಾಲೇಜುಗಳಿಗೆ ನಿನ್ನೆಯಿಂದ ರಜೆ ನೀಡಲಾಗಿದೆ. ಆದರೀಗ ಮಹಾಮಳೆಗೆ ಜಿಲ್ಲೆಯಲ್ಲಿ ಮೊದಲ ಬಲಿ(Death)ಯಾಗಿದೆ. ಉಡುಪಿ ಜಿಲ್ಲೆಯ ಕುಂದಾಪುರ(Kundapura) ತಾಲೂಕಿನ ತೆಕ್ಕಟ್ಟೆ ಬಳಿ ನಿನ್ನೆ(ಜು.4) ತಡರಾತ್ರಿ ಸ್ಕೂಟರ್​ನಲ್ಲಿ ತೆರಳುತ್ತಿದ್ದ ವೇಳೆ ಮಳೆಯಿಂದಾಗಿ ಆಯತಪ್ಪಿ ಕೆರೆಗೆ ಬಿದ್ದು ವ್ಯಕ್ತಿಯೋರ್ವ ಸಾವನ್ನಪ್ಪಿದ್ದಾರೆ. ದಿವಾಕರ್ ಶೆಟ್ಟಿ ಮೃತ ರ್ದುದೈವಿ.

ಹೋಟೆಲ್ ಕೆಲಸ ಮಾಡುವ ಮೃತ ದಿವಾಕರ್​ ಅವರು ನಿನ್ನೆ ರಾತ್ರಿ ಹೋಟೆಲ್ ಕೆಲಸ ಮುಗಿಸಿ ತೆಕ್ಕಟೆಯ ಮಲ್ಯಾಡಿ ಸಮೀಪ ಸ್ಕೂಟರ್​ನಲ್ಲಿ ಮನೆಗೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ. ಅವರಿಗೆ ಕಾಲು ನೋವು ಇದ್ದ ಹಿನ್ನೆಲೆಯಲ್ಲಿ ಇಳಿಯಲಾಗದೇ ಬೈಕ್ ಜೊತೆಗೆ ಜಾರಿ ಕೆರೆಗೆ ಉರುಳಿ ಸಾವನ್ನಪ್ಪಿದ್ದರು. ತಡರಾತ್ರಿ ಘಟನಾ ಸ್ಥಳಕ್ಕೆ ಮುಳುಗುತಜ್ಞ ಈಶ್ವರಮಲ್ಪೆ ಆಗಮಿಸಿ ಕಾರ್ಯಾಚರಣೆ ನಡೆಸಿ ಶವವನ್ನ ಮೇಲಕ್ಕೆ ತಗೆದಿದ್ದಾರೆ. ಈ ಕುರಿತು ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:Karnataka Rains: ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಕೆಲವೇ ಗಂಟೆಗಳಲ್ಲಿ ಸುರಿಯಲಿದೆ ಭಾರಿ ಮಳೆ: ರೆಡ್ ಅಲರ್ಟ್​ ಘೋಷಣೆ

ಕೊಲೆಯಾದ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

ಬೆಳಗಾವಿ: ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕಬ್ಬೂರು-ಬೆಲ್ಲದ ಬಾಗೇವಾಡಿ ರಸ್ತೆಯಲ್ಲಿ ಬಳಿ ಕೊಲೆಯಾದ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಶಿರಹಟ್ಟಿಕೇಡಿ ಗ್ರಾಮದ ನಿವಾಸಿ ಭೀಮಣ್ಣ ಕಲ್ಲಪ್ಪ ಮುನ್ನೋಳಿ(51) ಮೃತ ವ್ಯಕ್ತಿ. ಆತನನ್ನ ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ. ಸ್ಥಳಕ್ಕೆ ಚಿಕ್ಕೋಡಿ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ಮಾಡುತ್ತಿದ್ದಾರೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ