AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಡುಪಿ: ಮೀನು ಹಿಡಿಯಲು ಹೋಗಿದ್ದ ಮೂವರು ಜಲಸಮಾಧಿ, ಓರ್ವ ವಿದ್ಯಾರ್ಥಿ ಬಚಾವ್

ಅವರು ಕೂಲಿ ಕಾರ್ಮಿಕರ ಮಕ್ಕಳು, ಜೀವನದಲ್ಲಿ ಬೆಟ್ಟದಷ್ಟು ಕನಸಿಟ್ಟುಕೊಂಡ ಪುಟ್ಟ ಮಕ್ಕಳು. ಆದರೆ ವಿಧಿಯಾಟ ಅವರ ಬಾಳನ್ನೇ ಇಲ್ಲವಾಗಿಸಿದೆ. ಮೀನಿಗೆ ಗಾಳ ಹಾಕಲೆಂದು ಸಮುದ್ರದಲ್ಲಿ ಇಳಿದಿದ್ದವರು ಮತ್ತೆ ಜೀವಂತವಾಗಿ ಬರಲೇ ಇಲ್ಲ. ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದಲ್ಲಿ ಸಂಭವಿಸಿದ ದುರಂತದಲ್ಲಿ ಮೂವರು ಮಕ್ಕಳು ಜಲಸಮಾಧಿಯಾಗಿದ್ದಾರೆ.

ಉಡುಪಿ: ಮೀನು ಹಿಡಿಯಲು ಹೋಗಿದ್ದ ಮೂವರು ಜಲಸಮಾಧಿ, ಓರ್ವ ವಿದ್ಯಾರ್ಥಿ ಬಚಾವ್
ಮಕ್ಕಳು ನೀರುಪಾಲಾದ ಕಿರಿಮಂಜೇಶ್ವರ ಕಡಲತೀರ
ಪ್ರಜ್ವಲ್ ಅಮೀನ್​, ಉಡುಪಿ
| Edited By: |

Updated on: Oct 15, 2025 | 7:22 AM

Share

ಉಡುಪಿ, ಅಕ್ಟೋಬರ್ 15: ಉಡುಪಿ (Udupi) ಜಿಲ್ಲೆಯ ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದಲ್ಲಿ ಮೀನು ಹಿಡಿಯಲು ಹೋಗಿದ್ದ ಮೂವರು ಮಕ್ಕಳು ನೀರುಪಾಲಾಗಿದ್ದಾರೆ. ಕೊಡೇರಿಯ ಹೊಸಹಿತ್ಲು ಕಡಲ ತೀರದಲ್ಲಿ ನಡೆದಿರುವ ಈ ದುರಂತ, ಗ್ರಾಮಸ್ಥರನ್ನು ಬೆಚ್ಚಿ ಬೀಳಿಸಿದೆ. ನೀರುಪಾಲಾದವರೆಲ್ಲರೂ ವಿದ್ಯಾಭ್ಯಾಸ ಮಾಡುತ್ತಿರುವ ಪುಟ್ಟ ಮಕ್ಕಳು. ನಾಲ್ಕು ಮಂದಿ ಮಕ್ಕಳು ಸಂಜೆ ವಾಲಿಬಾಲ್ ಆಟವಾಡಿ, ನಂತರ ಗಾಳ ಹಾಕಲೆಂದು ಕಡಲ ತೀರಕ್ಕೆ ಹೋಗಿದ್ದರು. ನೀರಿನ ಬಗ್ಗೆ ಅಂದಾಜು ಸಿಗದೆ ಮುಂದೆ ಹೋದ ಕಾರಣ, ಮುಳುಗಡೆಯಾಗಿದ್ದಾರೆ. ಈ ಪೈಕಿ ಈಜಿಕೊಂಡು ಬಚಾವಾಗಿ ಬಂದ ಬಾಲಕ ಸ್ಥಳದಲ್ಲಿ ಇದ್ದ ಮೀನುಗಾರರಿಗೆ ವಿಷಯ ತಿಳಿಸಿದ್ದಾನೆ. ತಕ್ಷಣ ಕಡಲಿಗೆ ಹಾರಿ ಮೂವರು ಮಕ್ಕಳನ್ನು ಬಚಾವ್ ಮಾಡಲು ಮೀನುಗಾರರು ಪ್ರಯತ್ನಿಸಿದ್ದಾರೆ. ಕಡಲ ಮಕ್ಕಳ ಈ ಸಾಹಸ ಫಲ ನೀಡಲಿಲ್ಲ. ಅಷ್ಟರಲ್ಲಿಯೇ ಕಡಲ ಅಲೆಗಳಲ್ಲಿ ಮೂವರು ಮಕ್ಕಳು ಉಸಿರು ಚೆಲ್ಲಿದ್ದಾರೆ. ತಕ್ಷಣವೇ ಶವಗಳನ್ನು ಮೇಲಕ್ಕೆತ್ತಲಾಗಿದೆ.

ಕಿರಿಮಂಜೇಶ್ವರ ಶಾಲೆಯಲ್ಲಿ 9ನೇ ತರಗತಿ ಓದುತ್ತಿದ್ದ 15 ವರ್ಷ ವಯಸ್ಸಿನ ಆಶಿಶ್ ದೇವಾಡಿಗ, ಕಿರಿ ಮಂಜೇಶ್ವರ ಹೈಸ್ಕೂಲ್ನಲ್ಲಿ 10ನೇ ತರಗತಿ ಓದುತ್ತಿದ್ದ 16 ವರ್ಷ ವಯಸ್ಸಿನ ಸೂರಜ್ ಪೂಜಾರಿ ಹಾಗೂ ಬೈಂದೂರು ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ 18 ವರ್ಷ ವಯಸ್ಸಿನ ಸಂಕೇತ ದೇವಾಡಿಗ ಮೃತ ಬಾಲಕರು. ಕೂಲಿ ಮಾಡಿ ಜೀವನ ನಡೆಸುವ ಮನೆಯಿಂದ ಬಂದ ಈ ಮಕ್ಕಳ ಈ ಸಾವನ್ನು ಅರಗಿಸಿಕೊಳ್ಳಲು ಕುಟುಂಬ ಮಾತ್ರವಲ್ಲ, ಊರಿನವರಿಗೂ ಸಾಧ್ಯವಾಗುತ್ತಿಲ್ಲ. ವಿಷಯ ತಿಳಿಯುತ್ತಿದ್ದಂತೆ ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ತೆರಳಿ ಮಕ್ಕಳ ಪಾರ್ಥಿವ ಶರೀರಕ್ಕೆ ಗೌರವ ಸಲ್ಲಿಸಿದರು. ಕುಟುಂಬದವರಿಗೆ ಸಾಂತ್ವನ ಹೇಳಿದರು.

ಇದನ್ನೂ ಓದಿ: ಕಾಂಗ್ರೆಸ್ ಮಾಜಿ ಶಾಸಕ ಗೋಪಾಲ ಭಂಡಾರಿ ಪುತ್ರ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ

ಕಡಲ ತೀರಗಳಿಗೆ ಹೋಗುವ ಪ್ರವಾಸಿಗರು ಎಚ್ಚರಿಕೆಯಿಂದ ಇರಬೇಕು. ಹವಾಮಾನದ ವೈಪರೀತ್ಯಗಳನ್ನು ಅಂದಾಜಿಸಲು ಬರುವುದಿಲ್ಲ. ಸ್ಥಳೀಯರೇ ಇಲ್ಲಿ ದುರಂತದಲ್ಲಿ ಮೃತಪಟ್ಟಿರುವುದರಿಂದ ಬೇರೆ ಊರುಗಳಿಂದ ಬಂದವರು ಕಡಲಿಗಿಳಿಯುವಾಗ ಕಟ್ಟೆಚ್ಚರ ವಹಿಸುವುದು ಅಗತ್ಯವಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Prajwal Amin
Prajwal Amin

ಪ್ರಜ್ವಲ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪಡೆದಿರುತ್ತಾರೆ. ಉಡುಪಿ ಜಿಲ್ಲೆಯ ಸ್ಥಳೀಯ ಖಾಸಗಿ ಸುದ್ದಿವಾಹಿನಿಯ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ ಇವರು ಬಳಿಕ ಪ್ರಜಾವಾಣಿಯ ವರದಿಗಾರನಾಗಿ ಕೆಲಸ ಮಾಡಿರುತ್ತಾರೆ. ನಂತರ 6 ವರ್ಷ ಟಿ.ವಿ 5ನ ದಕ್ಷಿಣ ಕನ್ನಡ ಜಿಲ್ಲಾ ವರದಿಗಾರನಾಗಿ ನಂತರ ದಿಗ್ವಿಜಯ ನ್ಯೂಸ್ ನ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ವರದಿಗಾರನಾಗಿ ಕಾರ್ಯನಿರ್ವಾಹಸಿದ್ದಾರೆ. ಕಳೆದ ಹನ್ನೊಂದು ತಿಂಗಳಿನಿಂದ ಟಿ.ವಿ 9 ಸಂಸ್ಥೆಯಲ್ಲಿ ಉಡುಪಿ ಜಿಲ್ಲಾ ವರದಿಗಾರನಾಗಿ ಕಾರ್ಯನಿರ್ವಾಹಿಸುತ್ತಿದ್ದಾರೆ.

Read More
ಗಿಡ ನೆಟ್ಟು ವಿಶ್ವ ಪರಿಸರ ದಿನ ಆಚರಿಸಿದ ಪ್ರಧಾನಿ ಮೋದಿ
ಗಿಡ ನೆಟ್ಟು ವಿಶ್ವ ಪರಿಸರ ದಿನ ಆಚರಿಸಿದ ಪ್ರಧಾನಿ ಮೋದಿ
ಮತ್ತೆ ಬರುತ್ತಿದೆ ‘ಅಗ್ನಿಸಾಕ್ಷಿ’ ಧಾರಾವಾಹಿ: ಶಮಂತ್ ಗೌಡ ಹೇಳಿದ್ದೇನು?
ಮತ್ತೆ ಬರುತ್ತಿದೆ ‘ಅಗ್ನಿಸಾಕ್ಷಿ’ ಧಾರಾವಾಹಿ: ಶಮಂತ್ ಗೌಡ ಹೇಳಿದ್ದೇನು?
ಬಿಜೆಪಿಗೆ ರಾಜೀನಾಮೆ ನೀಡಿ ಬಂದ ಅಣ್ಣಾಮಲೈಗೆ ಭರ್ಜರಿ ಸ್ವಾಗತ
ಬಿಜೆಪಿಗೆ ರಾಜೀನಾಮೆ ನೀಡಿ ಬಂದ ಅಣ್ಣಾಮಲೈಗೆ ಭರ್ಜರಿ ಸ್ವಾಗತ
ಅಧಿಕಾರ ಕಳೆದುಕೊಂಡ ನಂತರ ಒಬ್ಬಂಟಿಯಾದ ಸಿದ್ದರಾಮಯ್ಯ
ಅಧಿಕಾರ ಕಳೆದುಕೊಂಡ ನಂತರ ಒಬ್ಬಂಟಿಯಾದ ಸಿದ್ದರಾಮಯ್ಯ
ಪ್ರತಿಷ್ಠಿತ ಅರ್ಥ್ ಪ್ರಶಸ್ತಿ ಗೆದ್ದ ಭಾರತೀಯ ವಿದ್ಯಾರ್ಥಿಗಳು
ಪ್ರತಿಷ್ಠಿತ ಅರ್ಥ್ ಪ್ರಶಸ್ತಿ ಗೆದ್ದ ಭಾರತೀಯ ವಿದ್ಯಾರ್ಥಿಗಳು
ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಹುಟ್ಟುಹಬ್ಬ
ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಹುಟ್ಟುಹಬ್ಬ
ಮಹರಾಜ ಲೀಗ್​​ನಲ್ಲಿ ಅನ್​​ಸೋಲ್ಡ್ ಆದ ಕೆಎಲ್ ರಾಹುಲ್; ಕಾರಣ ಇಲ್ಲಿದೆ
ಮಹರಾಜ ಲೀಗ್​​ನಲ್ಲಿ ಅನ್​​ಸೋಲ್ಡ್ ಆದ ಕೆಎಲ್ ರಾಹುಲ್; ಕಾರಣ ಇಲ್ಲಿದೆ
ನಾನು ಸಚಿವನಾಗಿ ಚಾರ್ಜ್ ತಗೊಳ್ಳಲ್ಲ: ಕಾಂಗ್ರೆಸ್‌ಗೆ ಸಚಿವ ಮುನಿಯಪ್ಪ ಶಾಕ್
ನಾನು ಸಚಿವನಾಗಿ ಚಾರ್ಜ್ ತಗೊಳ್ಳಲ್ಲ: ಕಾಂಗ್ರೆಸ್‌ಗೆ ಸಚಿವ ಮುನಿಯಪ್ಪ ಶಾಕ್
ಬೆಂಗಳೂರಿನಲ್ಲಿ ರಾಮಲಿಂಗಾ ರೆಡ್ಡಿ ಬೆಂಬಲಿಗರಿಂದ ಭಾರಿ ಪ್ರತಿಭಟನೆ
ಬೆಂಗಳೂರಿನಲ್ಲಿ ರಾಮಲಿಂಗಾ ರೆಡ್ಡಿ ಬೆಂಬಲಿಗರಿಂದ ಭಾರಿ ಪ್ರತಿಭಟನೆ
ರಾಮಲಿಂಗಾರೆಡ್ಡಿ ನನಗೆ ತುಂಬಾ ಆತ್ಮೀಯರು, ಸಮಸ್ಯೆ ಬಗೆಹರಿಸುತ್ತೇನೆ: ಸಿಎಂ
ರಾಮಲಿಂಗಾರೆಡ್ಡಿ ನನಗೆ ತುಂಬಾ ಆತ್ಮೀಯರು, ಸಮಸ್ಯೆ ಬಗೆಹರಿಸುತ್ತೇನೆ: ಸಿಎಂ