AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Udupi News: ಡ್ರಗ್ಸ್ ಮಾರಾಟ ದಂಧೆಯಲ್ಲಿ ತೊಡಗಿದ್ದ ಮೂವರು ಕಾನೂನು ವಿದ್ಯಾರ್ಥಿಗಳು; ಇಬ್ಬರು ಅರೆಸ್ಟ್, ಓರ್ವ ಎಸ್ಕೇಪ್​​

ಡ್ರಗ್ಸ್ ಮಾರಾಟ ದಂಧೆಯಲ್ಲಿ ತೊಡಗಿದ್ದ ಉಡುಪಿಯ ವೈಕುಂಠ ಬಾಳಿಗಾ ಕಾನೂನು ಕಾಲೇಜಿನ ಮೂವರು ವಿದ್ಯಾರ್ಥಿಗಳಲ್ಲಿ ಇಬ್ಬರನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ. ಕೇರಳ ಮೂಲದ ನಿಭೀಷ್(23), ಅಮಲ್ (22)ಬಂಧಿತ ವಿದ್ಯಾರ್ಥಿಗಳು.

Udupi News: ಡ್ರಗ್ಸ್ ಮಾರಾಟ ದಂಧೆಯಲ್ಲಿ ತೊಡಗಿದ್ದ ಮೂವರು ಕಾನೂನು ವಿದ್ಯಾರ್ಥಿಗಳು; ಇಬ್ಬರು ಅರೆಸ್ಟ್, ಓರ್ವ ಎಸ್ಕೇಪ್​​
ಮಾದಕ ವಸ್ತು ಮಾರಾಟ ಮಾಡುತ್ತಿದ್ದ ವಿದ್ಯಾರ್ಥಿಗಳು ಅರೆಸ್ಟ್​
ಕಿರಣ್ ಹನುಮಂತ್​ ಮಾದಾರ್
|

Updated on: Jun 17, 2023 | 11:44 AM

Share

ಉಡುಪಿ: ಇತ್ತೀಚೆಗೆ ಡ್ರಗ್ಸ್(Drugs)​ ಪ್ರಕರಣಗಳು ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಇದನ್ನ ತಡೆಯಲು ಎಷ್ಟೇ ಕಟ್ಟುನಿಟ್ಟಿನ ಕ್ರಮ ಕೈಗೊಂಡರು ಇದಕ್ಕೆ ಬ್ರೇಕ್​ ಬಿಳುತ್ತಿಲ್ಲ. ಅದರಂತೆ ನೂತನ ಗೃಹ ಸಚಿವ ಜಿ.ಪರಮೇಶ್ವರ್(G. Parameshwara) ಅವರು ಡ್ರಗ್ಸ್ ಮುಕ್ತ ರಾಜ್ಯ ಮಾಡಲು ಪಣ ತೊಟ್ಟಿದ್ದೇನೆ ಎಂದಿದ್ದರು. ಅದರ ಬೆನ್ನಲ್ಲೇ ಇದೀಗ ಡ್ರಗ್ಸ್ ಮಾರಾಟ ದಂಧೆಯಲ್ಲಿ ತೊಡಗಿದ್ದ ಉಡುಪಿಯ ವೈಕುಂಠ ಬಾಳಿಗಾ ಕಾನೂನು ಕಾಲೇಜಿನ ಮೂವರು ವಿದ್ಯಾರ್ಥಿಗಳಲ್ಲಿ ಇಬ್ಬರನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ. ಕೇರಳ ಮೂಲದ ನಿಭೀಷ್(23), ಅಮಲ್ (22)ಬಂಧಿತ ವಿದ್ಯಾರ್ಥಿಗಳು. ಮತ್ತೋರ್ವ ವಿದ್ಯಾರ್ಥಿ ಬಂಧನದ ವೇಳೆ ತಲೆಮರೆಸಿಕೊಂಡಿದ್ದು, ಹುಡುಕಾಟ ಆರಂಭಿಸಿದ್ದಾರೆ.

ನಿಷೇಧಿತ ಮಾದಕ ದ್ರವ್ಯ ಮೆಥಾಂಪೆಟಮೆನ್‌ ಮಾರಾಟ ಮಾಡುತ್ತಿದ್ದ ವಿದ್ಯಾರ್ಥಿಗಳು

ಹೌದು ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯ ಹೆರ್ಗಾ ಗ್ರಾಮದ ಈಶ್ಚರ ನಗರದಲ್ಲಿ ಈ ಮೂವರು ಗಾಂಜಾ ಮಾರುತ್ತಿದ್ದರು. ಈ ವೇಳೆ ದಾಳಿದ ಮಾಡಿದ ಪೊಲೀಸರು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, ಅವರಿಂದ ಬರೊಬ್ಬರಿ 35 ಸಾವಿರ ಮೌಲ್ಯದ 7.3 ಗ್ರಾಂ ಮೆಥಾಂಪೆಟಮೆನ್‌ (MDMA) ಮಾದಕ ದ್ರವ್ಯವನ್ನ ಜೊತೆಗೆ 1.25 ಲಕ್ಷ ಮೌಲ್ಯದ ಡ್ಯೂಕ್‌ ಬೈಕ್‌ ಹಾಗೂ 1 ಲಕ್ಷ ಮೌಲ್ಯದ 2 ಮೊಬೈಲ್‌ ಫೋನ್​ಗಳನ್ನ ವಶಕ್ಕೆ ಪಡೆಯಲಾಗಿದೆ. ಈ ವೇಳೆ ತಲೆಮರೆಸಿಕೊಂಡ ಮತ್ತೋರ್ವ ಆರೋಪಿ ಅಪ್ಸಿನ್ ಗಾಗಿ ಪೊಲೀಸರು ಬಲೆಬೀಸಿದ್ದಾರೆ. ಈ ಕುರಿತು ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:KP Chowdary: ಡ್ರಗ್ಸ್​ ಮಾರಾಟ ಮಾಡುತ್ತಿದ್ದ ‘ಕಬಾಲಿ’ ಸಿನಿಮಾ ನಿರ್ಮಾಪಕ ಕೆ.ಪಿ. ಚೌದರಿ ಬಂಧನ; 90 ಪಾಕೆಟ್​ ಮಾದಕ ವಸ್ತು ವಶ

ಡ್ರಗ್ಸ್​ ಮುಕ್ತ ರಾಜ್ಯ ಮಾಡಲು ಪಣತೊಟ್ಟ ಗೃಹ ಸಚಿವರು

ಇತ್ತೀಚೆಗಷ್ಟೇ ತುಮಕೂರಿನಲ್ಲಿ ಗೃಹ ಸಚಿವ ಜಿ.ಪರಮೇಶ್ವರ್​ ಅವರು ರಾಜ್ಯದಲ್ಲಿ ಡ್ರಗ್ಸ್ ವಿಚಾರವಾಗಿ ದೊಡ್ಡ ಆಂದೋಲನವನ್ನು ಆರಂಭ ಮಾಡುತ್ತದ್ದೇನೆ. ರಾಜ್ಯಾದ್ಯಂತ ಡ್ರಗ್ಸ್​ ದಂಧೆಗೆ ಕಡಿವಾಣ ಹಾಕಲು ಮಾಸ್ಟರ್ ಪ್ಲಾನ್ ಮಾಡಿದ್ದು, ತುಮಕೂರು‌ನಿಂದಲೇ ಆರಂಭ ಮಾಡಬೇಕೆಂದು ನಮ್ಮ ಜಿಲ್ಲೆಯನ್ನು ಆಯ್ಕೆ ಮಾಡಿಕೊಂಡಿದ್ದೇನೆ ಎಂದಿದ್ದರು. ಇನ್ನು ಇನ್ಸ್​ಪೆಕ್ಟರ್​ನಿಂದ ಮೇಲಿನ ಹಂತದ ಅಧಿಕಾರಿಗಳು ತಿಂಗಳಿಗೊಮ್ಮೆ ಶಾಲಾ ಕಾಲೇಜುಗಳಿಗೆ ಭೇಟಿ ಕೊಡಬೇಕು. ವಿದ್ಯಾರ್ಥಿಗಳಿಗೆ ಕಾನೂನು ಬಗ್ಗೆ ಅರಿವು ಮೂಡಿಸಲು ಕಾರ್ಯಕ್ರಮ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದ್ದರು.

ಇನ್ನಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು