AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Udupi News: ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಆಟೋ ಡ್ರೈವರ್ ಆದ ಮಂಗಳಮುಖಿ

ಉಡುಪಿ ಜಿಲ್ಲೆಯ ಪೇತ್ರಿ ಪಟ್ಟಣದಲ್ಲಿ ಮಂಗಳಮುಖಿಯೊಬ್ಬರು ಸ್ವಾವಲಂಬಿ ಬದುಕು ಕಟ್ಟಿಕೊಳ್ಳುವ ನಿಟ್ಟಿನಲ್ಲಿ ಆಟೋ ಚಾಲನೆ ಮಾಡುತ್ತಿದ್ದಾರೆ.

Udupi News: ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಆಟೋ ಡ್ರೈವರ್ ಆದ ಮಂಗಳಮುಖಿ
ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಆಟೋ ಓಡಿಸುತ್ತಿರುವ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಚೇರ್ಕಾಡಿ ನಿವಾಸಿಯಾಗಿರುವ ಮಂಗಳಮುಖಿ ಕಾವೇರಿ ಮೇರಿ ಡಿಜೋಜಾ
Rakesh Nayak Manchi
|

Updated on: Jul 21, 2023 | 5:04 PM

Share

ಉಡುಪಿ, ಜುಲೈ 21: ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಚೇರ್ಕಾಡಿ ಗ್ರಾಮದ ನಿವಾಸಿಯಾಗಿರುವ ಕಾವೇರಿ ಮೇರಿ ಡಿಜೋಜಾ ಅವರು ತಾನು ಮಂಗಳಮುಖಿಯಾದರೇನು (Transgender) ತನಗೂ ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಸಾಧ್ಯ ಎಂದು ಅರಿತು ಮೇತ್ರಿ ಪಟ್ಟಣದಲ್ಲಿ ಆಟೋ (Auto Rickshaw) ಚಾಲನೆ ಮಾಡುತ್ತಿದ್ದಾರೆ. ಇದರ ಜೊತೆಗೆ ನಮ್ಮದೇ ಆದ ಸಾರ್ಥಕ ಜೀವನ ನಡೆಸಬಹುದು ಎಂಬುದನ್ನು ಸಮಾಜಕ್ಕೆ ತೋರಿಸಿಕೊಟ್ಟಿದ್ದಾರೆ.

ಎಚ್‌ಐವಿ ರೋಗಿಗಳಿಗೆ ಸಹಾಯಕಿಯಾಗಿ ಸೇವೆ ಸಲ್ಲಿಸಿದ ನಂತರ ಕಾವೇರಿ ಅವರು ಬೆಂಗಳೂರಿನಲ್ಲಿ ಗಾರ್ಮೆಂಟ್ ಉದ್ಯಮಗಳು ಮತ್ತು ಇತರ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದಾರೆ. ಈ ರೀತಿಯಾಗಿ ಮುಂದುವರಿಯಲು ಇಚ್ಚಿಸದ ಕಾವೇರಿ ವ್ಯಾಪಾರದ ಅದೃಷ್ಟದ ಪರೀಕ್ಷೆಗೆ ಇಳಿದರು. ಅದರಂತೆ, ಪೇತ್ರಿ ಪಟ್ಟಣದಲ್ಲಿ ಆಟೋ ಓಡಿಲು ನಿರ್ಧರಿಸಿದರು. ಇದಕ್ಕಾಗಿ 1.8 ಲಕ್ಷ ರೂಪಾಯಿ ಸಾಲ ಪಡೆದು ಆಟೋ ಖರೀದಿಸಿದರು.

ಇದನ್ನೂ ಓದಿ: Bangalore Bandh: ಜುಲೈ 27ರಂದು ಆಟೋ, ಟ್ಯಾಕ್ಸಿ, ಓಲಾ, ಊಬರ್ ಜತೆ ಖಾಸಗಿ ಬಸ್​ ಸೇವೆ ಸ್ಥಗಿತ

ಆಟೋ ಓಡಿಸುತ್ತಲೇ ಸಾಲದ ಕಂತು ಕಟ್ಟುತ್ತಿದ್ದ ಕಾವೇರಿ ಅವರ ನೆರವಿಗೆ ದಾವಿಸಿದ ಹ್ಯೂಮಾನಿಟಿ ಟ್ರಸ್ಟ್ ಬೆಳ್ಮನ್, 1.7 ಲಕ್ಷ ರೂ. ಪಾವತಿಸುವ ಮೂಲಕ ಬ್ಯಾಂಕ್ ಸಾಲವನ್ನು ಸಂದಿಸಿದೆ. ಈ ಬಗ್ಗೆ ಟೈಮ್ಸ್​ ಆಫ್ ಇಂಡಿಯಾ ಜೊತೆ ಮಾತನಾಡಿದ ಟ್ರಸ್ಟ್​ನ ಸಂಸ್ಥಾಪಕ ರೋಶನ್ ಬೆಳ್ಮನ್, ನಾವು ಕಾವೇರಿ ಅವರ ಮನೆ ನಿರ್ಮಾಣದ 10 ವರ್ಷಗಳ ಕನಸನ್ನು ಈಡೇರಿಸುವ ಸಹಾಯ ಮಾಡುತ್ತೇವೆ ಎಂದು ತಿಳಿಸಿದ್ದಾರೆ.

“ರಾಜ್ಯದ ಮೊದಲ ಟ್ರಾನ್ಸ್‌ಜೆಂಡರ್ ಆಟೊರಿಕ್ಷಾ ಚಾಲಕ ನಾನೇ. ಬಹಳ ಹಿಂದೆಯೇ ಆಟೋ ಓಡಿಸಲು ಕಲಿತಿದ್ದರೂ ಗುರುತಿನ ಪುರಾವೆ ಇಲ್ಲದ ಕಾರಣ ಲೈಸನ್ಸ್ ಪಡೆಯಲು ಸಾಧ್ಯವಾಗಿರಲಿಲ್ಲ. ಕಳೆದ 6 ತಿಂಗಳ ಹಿಂದೆ ಲೈಸನ್ಸ್ ಪಡೆದಿದ್ದೇನೆ. ಮಂಗಳಮುಖಿಯಾಗಿದ್ದರೂ ಸ್ವಾಭಿಮಾನದ ಜೀವನವನ್ನು ನಡೆಸುವುದು ಮತ್ತು ಮುಖ್ಯವಾಹಿನಿಯ ಸಮಾಜದ ಭಾಗವಾಗುವುದು ನನ್ನ ಗುರಿಯಾಗಿದೆ” ಕಾವೇರಿ ಹೇಳಿದ್ದಾಗಿ ವರದಿ ಮಾಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು