AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಕ್ರಾಪ್ KSRTC ಬಸ್ ಈಗ ಸರ್ಕಾರಿ ಶಾಲೆಯ ಸ್ಮಾರ್ಟ್ ಕ್ಲಾಸ್; ಬಸ್ನಲ್ಲಿ ವಿದ್ಯಾರ್ಥಿಗಳಿಗೆ ಪಾಠ, ಉಡುಪಿಯಲ್ಲಿ ವಿನೂತನ ಪ್ರಯೋಗ

ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಬಗ್ವಾಡಿಯಲ್ಲಿ ಕೆಎಸ್ಆರ್ಟಿಸಿಯ ಸ್ಕ್ರಾಪ್ ಬಸ್ ಈಗ ಸ್ಮಾರ್ಟ್ ಕ್ಲಾಸ್ ಆಗಿ ಪರಿವರ್ತನೆಗೊಂಡಿದೆ. ರಾಜ್ಯದಲ್ಲಿ ಇದೊಂದು ವಿನೂತನ ಪ್ರಯೋಗವಾಗಿದ್ದು, ಈ ಸ್ಮಾರ್ಟ್ ಐಡಿಯಾದ ಹಿಂದೆ ಗ್ರಾಮೀಣ ಕಲಾವಿದ ಸಹೋದರರ ಸಾಹಸಗಾಥೆಯಿದೆ.

ಸ್ಕ್ರಾಪ್ KSRTC ಬಸ್ ಈಗ ಸರ್ಕಾರಿ ಶಾಲೆಯ ಸ್ಮಾರ್ಟ್ ಕ್ಲಾಸ್; ಬಸ್ನಲ್ಲಿ ವಿದ್ಯಾರ್ಥಿಗಳಿಗೆ ಪಾಠ, ಉಡುಪಿಯಲ್ಲಿ ವಿನೂತನ ಪ್ರಯೋಗ
ಸ್ಕ್ರಾಪ್ KSRTC ಬಸ್ ಈಗ ಸರ್ಕಾರಿ ಶಾಲೆಯ ಸ್ಮಾರ್ಟ್ ಕ್ಲಾಸ್; ಬಸ್ನಲ್ಲಿ ವಿದ್ಯಾರ್ಥಿಗಳಿಗೆ ಪಾಠ, ಉಡುಪಿಯಲ್ಲಿ ವಿನೂತನ ಪ್ರಯೋಗ
TV9 Web
| Updated By: ಆಯೇಷಾ ಬಾನು|

Updated on: Mar 13, 2022 | 3:08 PM

Share

ಉಡುಪಿ: ಸಹೋದರರಿಬ್ಬರು ರಾಜ್ಯದಲ್ಲಿ ವಿನೂತನ ಪ್ರಯೋಗವೊಂದನ್ನು ಮಾಡಿದ್ದು ಎರಡು ಲಕ್ಷ ರೂಪಾಯಿ ಖರ್ಚು ಮಾಡಿ ಸ್ಕ್ರಾಪ್ ಬಸನ್ನು ಸ್ಮಾರ್ಟ್ ಕ್ಲಾಸನ್ನಾಗಿ ಪರಿವರ್ತನೆ ಮಾಡಿದ್ದಾರೆ. ಮಕ್ಕಳನ್ನು ಶಾಲೆಯತ್ತ ಆಕರ್ಷಿಸಲು ವಿನೂತನ ಪ್ರಯೋಗಕ್ಕೆ ಮುಂದಾಗಿದ್ದಾರೆ. ವಿದ್ಯಾರ್ಥಿಗಳು KSRTCಬಸ್ ಅಲ್ಲೇ ಬಂದು ಪಾಠ ಕಲಿತಿದ್ದಾರೆ.

ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಬಗ್ವಾಡಿಯಲ್ಲಿ ಕೆಎಸ್ಆರ್ಟಿಸಿಯ ಸ್ಕ್ರಾಪ್ ಬಸ್ ಈಗ ಸ್ಮಾರ್ಟ್ ಕ್ಲಾಸ್ ಆಗಿ ಪರಿವರ್ತನೆಗೊಂಡಿದೆ. ರಾಜ್ಯದಲ್ಲಿ ಇದೊಂದು ವಿನೂತನ ಪ್ರಯೋಗವಾಗಿದ್ದು, ಈ ಸ್ಮಾರ್ಟ್ ಐಡಿಯಾದ ಹಿಂದೆ ಗ್ರಾಮೀಣ ಕಲಾವಿದ ಸಹೋದರರ ಸಾಹಸಗಾಥೆಯಿದೆ. ಪ್ರಶಾಂತ್ ಆಚಾರ್ ಹಾಗೂ ಪ್ರಕಾಶ್ ಆಚಾರ್ ಸಹೋದರರು ಬಿಡುವಿನ ವೇಳೆಯಲ್ಲಿ ಬಸ್ಸನ್ನು ಸ್ಮಾರ್ಟ್ ಕ್ಲಾಸ್ ಆಗಿ ನವೀಕರಿಸಿದ್ದಾರೆ. ಶತಮಾನದ ಹೊಸ್ತಿಲಲ್ಲಿರುವ ಬಗ್ವಾಡಿಯ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಸಂಖ್ಯೆ ಕ್ಷೀಣಿಸುತ್ತಿದೆ. ಹೀಗಾಗಿ ಈ ಸಹೋದರರು ಶಾಲೆಯ ಉಳಿವಿಗಾಗಿ ನಾನಾ ಪ್ರಯೋಗಗಳನ್ನು ಮಾಡುತ್ತಲೇ ಬಂದಿದ್ದಾರೆ. ಇದೀಗ ಉಚಿತವಾಗಿ ಸಿಕ್ಕ ಸ್ಕ್ರಾಪ್ ಬಸ್‌ಗೆ ಎರಡು ಲಕ್ಷ ರೂಪಾಯಿ ಖರ್ಚು ಮಾಡಿ ಹೊಸ ರೂಪ ನೀಡಿದ್ದಾರೆ. ksrtc scrap bus in to the smart class 2

ಅಂದಹಾಗೆ ಈ ಬಸ್ ತರಗತಿಯಲ್ಲಿ 25 ವಿದ್ಯಾರ್ಥಿಗಳು ಕೂರಬಹುದಾಗಿದ್ದು, ಪ್ರೋಜೆಕ್ಟರ್ ವ್ಯವಸ್ಥೆ ಕೂಡ ಮಾಡಲಾಗಿದೆ. ಬಸ್ ಒಳಗಿನ ಮೇಲ್ಭಾಗದ ಗಾಜಿಗೆ ಸ್ವಾತಂತ್ರ್ಯ ಹೋರಾಟಗಾರರು, ಕಲಾವಿದರು, ಸಾಹಿತಿಗಳ ಚಿತ್ರ ಅಂಟಿಸಲಾಗಿದೆ. ಕೇವಲ ನಲವತ್ತು ಮಕ್ಕಳಿದ್ದ ಸರ್ಕಾರಿ ಶಾಲೆಯಲ್ಲಿ ಪ್ರಸ್ತುತ 87 ಮಕ್ಕಳು ವಿದ್ಯಾಭ್ಯಾಸ ನಡೆಸುತ್ತಿದ್ದಾರೆ. ಜೊತೆಗೆ ಮಕ್ಕಳಿಗೂ ಬಸ್ ಒಳಗಿನ ಪಾಠ ಖುಷಿ ನೀಡಿದೆ. ಇನ್ನು ಸ್ಕ್ರಾಫ್ಟ್ ಬಸ್ ಈ ಶಾಲೆಗೆ ಬಂದು ಸೇರಿರುವುದರ ಹಿಂದೆ ಒಂದು ಇಂಟರೆಸ್ಟಿಂಗ್ ಸ್ಟೋರಿ ಇದೆಯಂತೆ.

ಒಟ್ಟಾರೆ ನಾನು ನನ್ನದು ಅನ್ನೋ ಸ್ವಾರ್ಥ ಪ್ರಪಂಚದಲ್ಲಿ ನಿಸ್ವಾರ್ಥ ಮನಸ್ಸಿನಿಂದ ಊರಿಗಾಗಿ, ತಾನು ಕಲಿತ ಶಾಲೆಯ ಅಭಿವೃದ್ಧಿಗಾಗಿ ನಿತ್ಯ ಕನಸು ಕಾಣುವ ಇಂತಹ ಕಲಾವಿದರಿಗೆ ನಿಜಕ್ಕೂ ಹ್ಯಾಟ್ಸಪ್.

ವರದಿ: ಹರೀಶ್, ಟಿವಿ9 ಉಡುಪಿ

ksrtc scrap bus in to the smart class 1

ಸ್ಕ್ರಾಪ್ KSRTC ಬಸ್ ಈಗ ಸರ್ಕಾರಿ ಶಾಲೆಯ ಸ್ಮಾರ್ಟ್ ಕ್ಲಾಸ್ ಮಾಡಿದ ಹಳೇ ವಿದ್ಯಾರ್ಥಿ

ಇದನ್ನೂ ಓದಿ: Rohit Sharma: ರೋಹಿತ್ ಶರ್ಮಾ ಸಿಕ್ಸ್​ಗೆ ಆಸ್ಪತ್ರೆ ಸೇರಿದ ಅಭಿಮಾನಿ

Beauty Tips: ಬೇಸಿಗೆಯಲ್ಲಿ ಕಾಡುವ ಒಣ ತ್ವಚೆಯ ರಕ್ಷಣೆಗೆ ಹೀಗೆ ಮಾಡಿ

ಐಶ್ವರ್ಯ ರೈ ಹೇಗೆ ಸಹಿಸ್ಕೊಳ್ತಾಳೋ? ಟ್ರೋಲ್ ಆದ ಜಯಾ ಬಚ್ಚನ್
ಐಶ್ವರ್ಯ ರೈ ಹೇಗೆ ಸಹಿಸ್ಕೊಳ್ತಾಳೋ? ಟ್ರೋಲ್ ಆದ ಜಯಾ ಬಚ್ಚನ್
ನಾನು ದರ್ಶನ್ ಪರ, ಪ್ರಥಮ್​ದು ತುಸು ಹೆಚ್ಚಾಯ್ತು: ಧ್ರುವ ಸರ್ಜಾ
ನಾನು ದರ್ಶನ್ ಪರ, ಪ್ರಥಮ್​ದು ತುಸು ಹೆಚ್ಚಾಯ್ತು: ಧ್ರುವ ಸರ್ಜಾ
ನನಗೂ ಕಹಿ ಅನುಭವ ಆಗಿತ್ತು: ಅಭಿಮಾನಿಗಳ ಅತಿರೇಕದ ಬಗ್ಗೆ ಯೋಗಿ ಮಾತು
ನನಗೂ ಕಹಿ ಅನುಭವ ಆಗಿತ್ತು: ಅಭಿಮಾನಿಗಳ ಅತಿರೇಕದ ಬಗ್ಗೆ ಯೋಗಿ ಮಾತು
ಮತಗಳ್ಳತನ ಬಗ್ಗೆ ರಾಹುಲ್ ಗಾಂಧಿ ಬಳಿ ಎಲ್ಲಾ ದಾಖಲೆಗಳಿವೆ: ಸಿದ್ದರಾಮಯ್ಯ
ಮತಗಳ್ಳತನ ಬಗ್ಗೆ ರಾಹುಲ್ ಗಾಂಧಿ ಬಳಿ ಎಲ್ಲಾ ದಾಖಲೆಗಳಿವೆ: ಸಿದ್ದರಾಮಯ್ಯ
ದೊಡ್ಡಬಳ್ಳಾಪುರ: ಕಾರು ಚಾಲಕನ ಮೇಲೆ ಟೋಲ್​ ಸಿಬ್ಬಂದಿ ಮಾರಣಾಂತಿಕ ಹಲ್ಲೆ
ದೊಡ್ಡಬಳ್ಳಾಪುರ: ಕಾರು ಚಾಲಕನ ಮೇಲೆ ಟೋಲ್​ ಸಿಬ್ಬಂದಿ ಮಾರಣಾಂತಿಕ ಹಲ್ಲೆ
W,W,W,W,W,W: ಇಂಗ್ಲೆಂಡ್​ನಲ್ಲಿ ಯುಜ್ವೇಂದ್ರ ಚಹಲ್ ಸ್ಪಿನ್ ಮೋಡಿ
W,W,W,W,W,W: ಇಂಗ್ಲೆಂಡ್​ನಲ್ಲಿ ಯುಜ್ವೇಂದ್ರ ಚಹಲ್ ಸ್ಪಿನ್ ಮೋಡಿ
ಆಗಸ್ಟ್ ಕೊನೆಯಲ್ಲಿ ಮತ್ತೆ ಟೋಯಿಂಗ್ ಶುರು: ಗೃಹ ಸಚಿವ ಪರಮೇಶ್ವರ್ ಘೋಷಣೆ
ಆಗಸ್ಟ್ ಕೊನೆಯಲ್ಲಿ ಮತ್ತೆ ಟೋಯಿಂಗ್ ಶುರು: ಗೃಹ ಸಚಿವ ಪರಮೇಶ್ವರ್ ಘೋಷಣೆ
‘ಅದೃಷ್ಟ ದೇವತೆ ಬಟ್ಟೆ ಬಿಚ್ಚಿಸುವವರು ದೇವರಿಗೆ ವಂದಿಸುತ್ತಾರೆ’; ಪ್ರಥಮ್
‘ಅದೃಷ್ಟ ದೇವತೆ ಬಟ್ಟೆ ಬಿಚ್ಚಿಸುವವರು ದೇವರಿಗೆ ವಂದಿಸುತ್ತಾರೆ’; ಪ್ರಥಮ್
ಜನರ ಸಮಸ್ಯೆ ಪರಿಹಾರಕ್ಕೆ ಆ್ಯಪ್​: ವಿನೂತನ ಪ್ರಯತ್ನಕ್ಕೆ ಕೈಹಾಕಿದ ಶಾಸಕ
ಜನರ ಸಮಸ್ಯೆ ಪರಿಹಾರಕ್ಕೆ ಆ್ಯಪ್​: ವಿನೂತನ ಪ್ರಯತ್ನಕ್ಕೆ ಕೈಹಾಕಿದ ಶಾಸಕ
ಭೀಮಾ ನದಿಯಲ್ಲಿ ಭಾರೀ ಪ್ರವಾಹ: 2 ದೇಗುಲಗಳು ಸಂಪೂರ್ಣ‌ ಮುಳುಗಡೆ
ಭೀಮಾ ನದಿಯಲ್ಲಿ ಭಾರೀ ಪ್ರವಾಹ: 2 ದೇಗುಲಗಳು ಸಂಪೂರ್ಣ‌ ಮುಳುಗಡೆ